ಬಡಗ ಎಡಪದವು ಗ್ರಾಮದಲ್ಲಿ ಘನ ಸಂಪನ್ಮೂಲ ಸಂಗ್ರಹ ವಾಹನಕ್ಕೆ ಹಸಿರು ನಿಶಾನೆ….
ಮಂಗಳೂರು: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಡಗ ಎಡಪದವು ಗ್ರಾಮದಲ್ಲಿ ಘನ ಸಂಪನ್ಮೂಲ ಘಟಕವನ್ನು ಶಾಸಕ ಡಾ.ವೈ ಭರತ್ ಶೆಟ್ಟಿಯವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾಹಿತಿ ಪತ್ರ ಬಿಡುಗಡೆಗಳಿಸಿ ಮಾತನಾಡಿದ ಶಾಸಕ ಡಾ. ಭರತ್ ಶೆಟ್ಟಿಯವರು ಬಡಗ ಎಡಪದವು ಗ್ರಾಮ ಪಂಚಾಯತ್ ನ,
ಘನ ಸಂಪನ್ಮೂಲ ಘಟಕವನ್ನು ಮಾದರಿ ಘಟಕವನ್ನಾಗಿ ಮಾಡುವ ಹೊಣೆ ಗ್ರಾಮಸ್ಥರು ಮತ್ತು ಪಂಚಾಯತ್ ನದ್ದಾಗಿದೆ ಎಂದು ಹೇಳಿದರು.
ಶಾಸಕರು ಎಂಟು ಜನ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿ ಶುಭ ಹಾರೈಸಿದರು.ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ,
ಸ್ವಚ್ಚ ಭಾರತ್ ಮಿಶನ್ ಗ್ರಾಮೀಣ ಯೋಜನಾ ಅನುದಾನದಡಿಯಲ್ಲಿ ನೂತನವಾಗಿ ಖರೀದಿಸಲಾದ ಘನ ಸಂಪನ್ಮೂಲ ಸಂಗ್ರಹ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಶಾಸಕ ಡಾ.ಭರತ್ ಶೆಟ್ಟಿ ಅವರು ಚಾಲನೆ ನೀಡಿದರು.
ಬಳಿಕ ಶಾಸಕರು ಹಾಗೂ ಉಪಸ್ಥಿತರಿದ್ದ ಗಣ್ಯರು ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಿದರು.
ಬಳಿಕ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಕೊರೊನಾ ವಾರಿಯರ್ಸ್ ಗಳಾಗಿರುವ ಆಶಾ ಕಾರ್ಯಕರ್ತೆಯರನ್ನು ಹಾಗೂ ಗ್ರಾಮದ ಕಿರಿಯ ಆರೋಗ್ಯ ಸಹಾಯಕಿಯರ ಸೇವೆಯನ್ನು ಶ್ಲಾಘಿಸಿದ ಶಾಸಕರಾದ ಡಾ.ಭರತ್ ಶೆಟ್ಟಿಯವರು,
ಮನೆಮನೆ ಭೇಟಿಯ ಮೂಲಕ ಜಾಗೃತಿ ಮೂಡಿಸುವುದು, ಆರೋಗ್ಯ ತಪಾಸಣೆ ನಡೆಸುವುದು, ಕ್ವಾರಂಟೈನ್ ನಲ್ಲಿದ್ದವರ ಬಗ್ಗೆ ನಿಗಾ ವಹಿಸುವುದರ ಮೂಲಕ,
ನೈಜ ಅರ್ಥದಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮ ಕಿರಿಯ ಆರೋಗ್ಯ ಸಹಾಯಕಿಯರು ಉತ್ತಮ ಕಾರ್ಯ ನಿರ್ವಹಿಸಿದ್ದಾರೆ ಎಂದರು.
ಆಶಾ ಕಾರ್ಯಕರ್ತೆಯರಿಗೆ, ಗ್ರಾಮ ಕಿರಿಯ ಆರೋಗ್ಯ ಸಹಾಯಕಿಯರಿಗೆ ಆಹಾರದ ಕಿಟ್, ಗೌರವ ಧನದ ಚೆಕ್, ಸ್ಯಾನಿಟೈಸರ್, ಸೋಪು, ಮಾಸ್ಕ್, ಗ್ಲೌಸ್ ಇರುವ ಹೆಲ್ತ್ ಕಿಟ್, ಹಣ್ಣು-ಹಂಪಲು, ಸಿಹಿತಿಂಡಿಯನ್ನು ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಜಿ.ಪಂ. ಸದಸ್ಯರಾದ ಜನಾರ್ದನ ಗೌಡ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಲಲಿತಾ ಶೆಟ್ಟಿಗಾರ್, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಸದಾನಂದ ಜಿ,
ಉಪತಹಶೀಲ್ದಾರ್ ಶಿವಪ್ರಸಾದ್ ಕಾರ್ಕಳ, ಕಂದಾಯ ನಿರೀಕ್ಷಕರಾದ ಅಸೀಫ್ ಇಕ್ಬಾಲ್, ಗ್ರಾಮ ಪಂಚಾಯತ್ ಕಾರ್ಯದರ್ಶಿ ಲಕ್ಷ್ಮಣ ಸಫಳಿಗ,
ಗ್ರಾಮ ಕರಣಿಕರಾದ ಶ್ರೀಮತಿ ಪವಿತ್ರಾ ಉಪಸ್ಥಿತರಿದ್ದರು.ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರತಿಭಾ ಕುಡ್ತಡ್ಕ ಸ್ವಾಗತಿಸಿ, ಪ್ರಸ್ತಾವನೆಗೈದರು.
ಉಪಾಧ್ಯಕ್ಷರಾದ ಹರೀಶ್ ಕೆವಿ ವಂದಿಸಿದರು. ಗ್ರಾಮ ಪಂಚಾಯತ್ ಸರ್ವ ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.