ಕೊರೊನಾ ವೈರಸ್ ತಡೆಗಟ್ಟಲು ಸ್ಪೆಷಲ್ ಪಡೆಯೊಂದಿಗೆ ಶಾಸಕ ಹರೀಶ್ ಪೂಂಜಾ ಸಜ್ಜು
Published
5 years agoon
By
Adminಕೊರೊನಾ ವೈರಸ್ ತಡೆಗಟ್ಟಲು ಸ್ಪೆಷಲ್ ಪಡೆಯೊಂದಿಗೆ ಶಾಸಕ ಹರೀಶ್ ಪೂಂಜಾ ಸಜ್ಜು
ಬೆಳ್ತಂಗಡಿ: ವಿಶ್ವದಾದ್ಯಂತ ಕೊರೊನಾ ವೈರಸ್ ವ್ಯಾಪಕವಾಗಿ ಹಬ್ಬಿದೆ. ಜಗತ್ತಿನಾದ್ಯಂತ ಮರಣ ಮೃದಂಗ ಬಾರಿಸುತ್ತಲೇ ಇದೆ.
ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತಿರುವ ಕೊರೊನಾ ವೈರಸ್ ಅನ್ನು ಹೇಗಾದರೂ ತಡೆಗಟ್ಟಬೇಕೆಂಬ ಹಿನ್ನಲೆಯಲ್ಲಿ ಎಪ್ರಿಲ್ 14ರ ವರೆಗೆ ಮನೆಯಿಂದ ಯಾರೂ ಹೊರ ಬರಬೇಡಿ ಅಂತ ಮನವಿ ಮಾಡಿರುವ ಪ್ರಧಾನಿ ಮೋದಿ ಎಲ್ಲರನ್ನೂ ಲಾಕ್ ಡೌನ್ ಮಾಡಿದ್ದಾರೆ.
ರಾಜ್ಯದಾದ್ಯಂತ ಕೊರೊನಾ ವೈರಸ್ ಬಗ್ಗೆ ಕಟ್ಟೆಚ್ಚರ ವಹಿಸಲಾಗಿದೆ.
ಇದೀಗ ಬೆಳ್ತಂಗಡಿ ತಾಲೂಕಿನಲ್ಲೂ ಕೊರೊನಾ ವೈರಸ್ ತಟೆಗಟ್ಟುವ ನಿಟ್ಟಿನಲ್ಲಿ ವಿಶೇಷ ಕ್ರಮ ಕೈಗೊಳ್ಳಲಾಗಿದ್ದು, ತಾಲೂಕಿನ ಮಿನಿ ವಿಧಾನಸೌಧದಲ್ಲಿ ‘ವಾರ್ ರೂಮ್’ ಎಂಬ ವಿಶೇಷ ಸಹಾಯವಾಣಿ ಕೊಠಡಿಯನ್ನು ತೆರೆಯಲಾಗಿದೆ.
ಇದಕ್ಕಾಗಿ ಶಾಸಕ ಹರೀಶ್ ಪೂಂಜಾ ಅವರು ಒಂದು ವಿಶೇಷ ಪಡೆಯನ್ನೇ ರಚಿಸಿದ್ದಾರೆ.
ಇದರಲ್ಲಿ ಶಾಸಕರ ಕಛೇರಿಯ ಸಿಬ್ಬಂದಿ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ, ಕಂದಾಯ ಇಲಾಖೆ ಹೀಗೆ ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿರುತ್ತಾರೆ.
ವಾರ್ ರೂಮ್:
ಈಗಾಗಲೇ ರಾಜ್ಯದಲ್ಲಿ ವಾರ್ ರೂಮ್ ಕಾರ್ಯನಿರ್ವಹಿಸುತ್ತಿದೆ. ಇದೀಗ ಬೆಳ್ತಂಗಡಿ ತಾಲೂಕಿನಲ್ಲಿ ವಾರ್ ರೂಮ್ ತೆರೆದಿರುವುದು ವಿಶೇಷವಾಗಿದೆ.
ತಾಲೂಕಿನ ತಹಶೀಲ್ದಾರ್ ಹಾಗೂ ವಿವಿಧ ಅಧಿಕಾರಿಗಳೊಂದಿಗೆ ಇಂದು (ಮಾರ್ಚ್ 25) ಬೆಳ್ತಂಗಡಿ ‘ಐಬಿ’ಯಲ್ಲಿ ಚರ್ಚೆ ನಡೆಸಿದ ಶಾಸಕ ಪೂಂಜಾ ಈ ಮಹತ್ವದ ಯೋಜನೆ ಹಾಕಿಕೊಂಡಿದ್ದಾರೆ.
ತಾಲೂಕು ಸಾರ್ವಜನಿಕ ಆಸ್ಪತ್ರೆ ಕೊರೊನಾಗೆ ಮೀಸಲು:
ಇನ್ನು ಮತ್ತೊಂದು ವಿಶೇಷವೇಂದರೆ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೊರೊನಾ ರೋಗಿಗಳು ಹಾಗೂ ಶಂಕಿತರಿಗಾಗಿ ಮೀಸಲಿಡಲಾಗಿದೆ.
ಇದು ಯಂಗ್ ಅಂಡ್ ಎನರ್ಜಿಟಿಕ್ ಶಾಸಕರ ದಿಟ್ಟ ನಿರ್ಧಾರಕ್ಕೆ ಮತ್ತೊಂದು ಉದಾಹರಣೆಯಾಗಿದೆ.
ಈಗಾಗಲೇ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದ ಇನ್ನಿತರೇ ಕಾಯಿಲೆಯ ರೋಗಿಗಳನ್ನು ತಾಲೂಕಿನ ಆರು ಖಾಸಗಿ ಆಸ್ಪತ್ರೆಗಳಿಗೆ ಶಿಫ್ಟ್ ಮಾಡಲಾಗಿದೆ. ಅಲ್ಲಿ ಅವರಿಗೆ ಉಚಿತ ಚಿಕಿತ್ಸೆ ನೀಡಲಾಗುವುದು.
ತಾಲೂಕಿನಲ್ಲಿ ಶಂಕಿತರು ಅಥವಾ ಹೊರ ಜಿಲ್ಲೆ, ಹೊರದೇಶದಿಂದ ಬಂದವರು ನಿಮಗೆ ಕಂಡುಬಂದಲ್ಲಿ ಅಥವಾ ಮಾಹಿತಿ ಸಿಕ್ಕಿದಲ್ಲಿ ಕೊರೊನಾ ವಾರ್ ರೂಮ್ ಸಹಾಯವಾಣಿ ಸಂಖ್ಯೆ: 08256-232047 ಹಾಗೂ 9901212207 ಗೆ ಕರೆ ಮಾಡಿ ಮಾಹಿತಿ ಹಂಚಿಕೊಳ್ಳಬೇಕಾಗಿ ಶಾಸಕರು ಕಳಕಳಿಯ ಮನವಿ ಮಾಡಿದ್ದಾರೆ.
ತೀವ್ರ ನಿಗಾದಲ್ಲಿ 205 ಮಂದಿ:
ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ಕೊರೊನಾ ಭೀತಿ ಎದುರಾದ ಹಿನ್ನಲೆ ವಿದೇಶದಿಂದ ಊರಿಗೆ ಬಂದಿಳಿದಿರುವ ಒಟ್ಟು 205 ಮಂದಿಯ ಮೇಲೆ ತೀವ್ರ ನಿಗಾ ಇರಿಸಲಾಗಿದೆ.
ಈಗಾಗಲೇ ಎಲ್ಲರನ್ನೂ ತಪಾಸಣೆಗೊಳಪಡಿಸಲಾಗಿದ್ದು, ಇದರಲ್ಲಿ ಮೂರು ಮಂದಿ ಮಾತ್ರ ವಿಶೇಷ ನಿಗಾದಲ್ಲಿದ್ದಾರೆ.
ಈ 205 ಜನರ ಮನೆ ಗೋಡೆ ಮೇಲೆ ಭಿತ್ತಿಪತ್ರ ಅಂಟಿಸಲಾಗಿದೆ. ಇವರು ಮನೆಯಿಂದ ಹೊರಬರದಂತೆ ಅವರಿಗೆ ಕಟ್ಟುನಿಟ್ಟಿನ ಆದೇಶ ಮಾಡಲಾಗಿದೆ.
ಇವರ ಮನೆಗೆ ಆಶಾ ಕಾರ್ಯಕರ್ತೆಯರು ಹಾಗೂ ಪೊಲೀಸರು ಭೇಟಿ ನೀಡುತ್ತಿದ್ದಾರೆ. ಒಂದು ವೇಳೆ ಆದೇಶ ಉಲ್ಲಂಘಿಸಿದಲ್ಲಿ ಅವರ ವಿರುದ್ಧ 188 ಸೆಕ್ಷನ್ ಅಡಿ ಕೇಸು ದಾಖಲಿಸಿಕೊಳ್ಳಲಾಗುವುದು ಎಂದು ಶಾಸಕರು ಖಡಕ್ಕಾಗಿ ತಿಳಿಸಿದ್ದಾರೆ.
ಇಲ್ಲಿಯವರೆಗೆ ತಾಲೂಕಿನಲ್ಲಿ ಯಾವುದೇ ಕೊರೊನಾ ಸೋಂಕಿತರು ಪತ್ತೆಯಾಗಿಲ್ಲ.
ಅಂಗಡಿಗಳ ಎದುರು ಮಾರ್ಕಿಂಗ್:
ತಾಲೂಕಿನ ದಿನಸಿ ಅಂಗಡಿ, ಮೆಡಿಕಲ್, ಹಾಗೂ ತುರ್ತು ಸಾಮಾಗ್ರಿಗಳ ಮಳಿಗೆಗಳ ಮುಂದೆ ನಾಲ್ಕು ಅಡಿ ಅಂತರದಲ್ಲಿ ಜನ ಸರತಿ ಸಾಲಿನಲ್ಲಿ ನಿಲ್ಲುವಂತೆ ರೌಂಡಪ್ ಮಾರ್ಕ್ ಮಾಡುವ ವ್ಯವಸ್ಥೆ ಮಾಡಲಾಗಿದೆ.
ಜನರು ಕೂಡ ಇದನ್ನು ಪಾಲಿಸಲು ಆದೇಶಿಸಲಾಗಿದೆ.
You may like
International news
ಸುಪ್ರೀಂ ಕೋರ್ಟ್ನ ಇಬ್ಬರು ನ್ಯಾಯಮೂರ್ತಿಗಳ ಗುಂಡಿಕ್ಕಿ ಹ*ತ್ಯೆ
Published
10 hours agoon
18/01/2025By
NEWS DESK3ಮಂಗಳೂರು/ಟೆಹ್ರಾನ್ : ಸುಪ್ರೀಂ ಕೋರ್ಟ್ನ ಇಬ್ಬರು ನ್ಯಾಯಮೂರ್ತಿಗಳನ್ನು ಗುಂಡಿಕ್ಕಿ ಹ*ತ್ಯೆ ಮಾಡಿರುವ ಘಟನೆ ಟೆಹ್ರಾನ್ನಲ್ಲಿ ಇಂದು (ಶನಿವಾರ) ನಡೆದಿದೆ.
ಈ ಘಟನೆಯಲ್ಲಿ ಮತ್ತೋರ್ವ ನ್ಯಾಯಮೂರ್ತಿ ಗಾಯಗೊಂಡಿದ್ದಾರೆ ಎಂದು ನ್ಯಾಯಾಂಗದ ‘ಮಿಜಾನ್’ ಸುದ್ದಿ ವೆಬ್ಸೈಟ್ ವರದಿ ಮಾಡಿದೆ. ಆಯತುಲ್ಲಾ ಮೊಹಮ್ಮದ್ ಮೊಘಿಶೆ ಹಾಗೂ ಅಲಿ ರಝನಿ ಹ*ತ್ಯೆಗೀಡಾದ ನ್ಯಾಯಮೂರ್ತಿಗಳು.
ಸುಪ್ರೀಂ ಕೋರ್ಟ್ನ ಹೊರಗೆ ನ್ಯಾಯಮೂರ್ತಿಗಳ ಮೇಲೆ ಗುಂಡಿನ ದಾಳಿ ನಡೆಸಿದ ದಾಳಿಕೋರ ಬಳಿಕ ಆತ್ಮ*ಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ಘಟನೆಯಲ್ಲಿ ನ್ಯಾಯಮೂರ್ತಿಯೊಬ್ಬರ ಅಂಗರಕ್ಷಕ ಕೂಡ ಗಾಯಗೊಂಡಿದ್ದಾರೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಹ*ತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಇದನ್ನೂ ಓದಿ: ಅಮೆರಿಕ ಗಡಗಡ… ಒಳಾಂಗಣದಲ್ಲಿ ಟ್ರಂಪ್ ಪ್ರಮಾಣವಚನ
ನ್ಯಾಯಾಧೀಶರನ್ನು ಗುರಿಯಾಗಿಸಿಕೊಂಡು ದಾಳಿಗಳು ಅಪರೂಪವಾಗಿದ್ದರೂ, ಕಳೆದ ವರ್ಷ ಇರಾನ್ನ ಶ್ರೀಮಂತ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಹಲವಾರು ಗುಂಡಿನ ದಾಳಿಗಳು ನಡೆದಿವೆ.
ಏಪ್ರೀಲ್ 2023ರಲ್ಲಿ, ಅಬ್ಬಾಸ್ಅಲಿ ಸೊಲೈಮನಿ ಎಂದು ಗುರುತಿಸಲಾದ ಪ್ರಬಲ ಧರ್ಮಗುರುವನ್ನು ಕೂಡ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.
ಕಳೆದ ಅಕ್ಟೋಬರ್ನಲ್ಲಿ, ಕಜೆರೌನ್ನಲ್ಲಿ ಶುಕ್ರವಾರದ ಪ್ರಾರ್ಥನೆಯ ನೇತೃತ್ವ ವಹಿಸಿದ ಶಿಯಾ ಮುಸ್ಲಿಂ ಬೋಧಕನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದರು.
LATEST NEWS
ಆರ್.ಜಿ.ಕರ್ ವಿದ್ಯಾರ್ಥಿನಿಯ ಅತ್ಯಾ*ಚಾರ, ಕೊ*ಲೆ ಪ್ರಕರಣ; ನ್ಯಾಯಾಲಯದಿಂದ ಮಹತ್ವದ ತೀರ್ಪು
Published
10 hours agoon
18/01/2025By
NEWS DESK4ಮಂಗಳೂರು/ಕೊಲ್ಕತ್ತಾ : ಆರ್.ಜಿ.ಕರ್ ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾ*ಚಾರ ಹಾಗೂ ಕೊ*ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂಜಯ್ ರಾಯ್ ತಪ್ಪಿತಸ್ಥ ಎಂದು ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಸಿಯಾಲ್ದಾ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಅನಿರ್ಬನ್ ದಾಸ್ ಶನಿವಾರ(ಜ.18)ತೀರ್ಪು ನೀಡಿದ್ದು, ಶಿಕ್ಷೆಯ ಪ್ರಮಾಣವನ್ನು ಸೋಮವಾರ(ಜ.20) ಪ್ರಕಟಿಸಲಿದ್ದಾರೆ.
2024ರ ಆಗಸ್ಟ್ 9 ರಂದು ಆರ್.ಜಿ.ಕರ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಮೇಲೆ ಅತ್ಯಾ*ಚಾರ ನಡೆಸಿ, ಹ*ತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಇಡೀ ದೇಶದಾದ್ಯಂತ ಭಾರಿ ಆಕ್ರೋಶ ಕೇಳಿ ಬಂದಿತ್ತು. ದೇಶದ ಬಹುತೇಕ ಭಾಗಗಳಲ್ಲಿ ವೈದ್ಯರು ಮುಷ್ಕರ ನಡೆಸಿದ್ದರು. ಆಗಸ್ಟ್ 10 ರಂದು ಸಂಜಯ್ ರಾಯ್ನನ್ನು ಬಂಧಿಸಲಾಯಿತು.
ಇದನ್ನೂ ಓದಿ : WATCH : ಆ ಒಂದು ರೀಲ್ಸ್ನಿಂದ ಗಿನ್ನಿಸ್ ದಾಖಲೆ ಬರೆದ ಕೇರಳದ ಯುವಕ
ಕೊಲ್ಕತ್ತಾ ಹೈಕೋರ್ಟ್ ಈ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿತ್ತು. ಆರೋಪಿಗೆ ಗ*ಲ್ಲು ಶಿಕ್ಷೆ ಆಗಬೇಕು ಎಂದು ಸಿಬಿಐ ವಾದಿಸಿದೆ. ಪ್ರಕರಣದ ವಿಚಾರಣೆ ನವೆಂಬರ್ 12 ರಂದು ಆರಂಭವಾಗಿತ್ತು. ಒಟ್ಟು 50 ಸಾಕ್ಷಿಗಳ ಹೇಳಿಕೆಗಳನ್ನು ಪಡೆಯಲಾಗಿದೆ. ಆರೋಪಿಯ ವಿಚಾರಣೆ ಜ.9ರಂದು ಕೊನೆಗೊಂಡಿತ್ತು.
LATEST NEWS
ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಭಾರತ ತಂಡ ಪ್ರಕಟ
Published
11 hours agoon
18/01/2025By
NEWS DESK3ಮಂಗಳೂರು/ಮುಂಬೈ : ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಲಿರುವ ಭಾರತದ 15 ಸದಸ್ಯರ ಕ್ರಿಕೆಟ್ ತಂಡವನ್ನು ಬಿಸಿಸಿಐ ಶನಿವಾರ ಪ್ರಕಟಿಸಿದೆ.
ಚಾಂಪಿಯನ್ಸ್ ಟ್ರೋಫಿ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ, 15 ಸದಸ್ಯರ ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು, ಉಪನಾಯಕರಾಗಿ ಶುಭ್ಮನ್ ಗಿಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಆಸ್ಟ್ರೇಲಿಯಾ ವಿರುದ್ದದ ಕೊನೆಯ ಟೆಸ್ಟ್ ಪಂದ್ಯದ ವೇಳೆ ಫಿಟ್ನೆಸ್ ಸಮಸ್ಯಗೆ ಒಳಗಾಗಿದ್ದ ಜಸ್ಪ್ರೀತ್ ಬುಮ್ರಾ ಅವರನ್ನು ಚಾಂಪಿಯನ್ಸ್ ಟ್ರೋಫಿಗಾಗಿ ಆಯ್ಕೆ ಮಾಡಲಾಗಿದೆ.
ಇದನ್ನೂ ಓದಿ: ಖ್ಯಾತ ಡಾಲಿ ಚಾಯ್ವಾಲ ಮಂಗಳೂರಿಗೆ ಆಗಮನ
ಚಾಂಪಿಯನ್ಸ್ ಟ್ರೋಫಿಯು ಫೆ. 19ರಿಂದ ಆರಂಭವಾಗಲಿದ್ದು, ಪಾಕಿಸ್ತಾನವು ಆತಿಥ್ಯ ವಹಿಸಿದೆ. ಫೈನಲ್ ಮಾರ್ಚ್ 9ಕ್ಕೆ ನಡೆಯಲಿದೆ. ಭಾರತವು ತನ್ನ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ.
ಚಾಂಪಿಯನ್ಸ್ ಟ್ರೋಫಿಗೆ ಭಾರತದ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಬ್ ಪಂತ್, ರವೀಂದ್ರ ಜಡೇಜಾ.
LATEST NEWS
ತುಳುಚಲನಚಿತ್ರ ನಿರ್ಮಾಪಕರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ
ಭಾರತೀಯರಿಗೆ ಬಿಗ್ ಶಾ*ಕ್; ಸೌದಿ ಅರೇಬಿಯಾದಲ್ಲಿ ಹೊಸ ವೀಸಾ ನಿಯಮಗಳು ಜಾರಿ
ಅಮೆರಿಕ ಗಡಗಡ… ಒಳಾಂಗಣದಲ್ಲಿ ಟ್ರಂಪ್ ಪ್ರಮಾಣವಚನ
ಸುಖ ದಾಂಪತ್ಯ ಜೀವನಕ್ಕೆ ಸರಳ ಸೂತ್ರಗಳು ಇಲ್ಲಿದೆ
WATCH : ಆ ಒಂದು ರೀಲ್ಸ್ನಿಂದ ಗಿನ್ನಿಸ್ ದಾಖಲೆ ಬರೆದ ಕೇರಳದ ಯುವಕ
ಈ ವಾರ ಮನೆಯಿಂದ ಹೊರ ಬರುವ ಕಂಟೆಸ್ಟೆಂಟ್ಸ್ಗಳು ಇವರೇ ?
Trending
- BIG BOSS6 days ago
ಕಣ್ಣೀರು ಒರೆಸಿದ ಸುದೀಪ್.. ಕಿಚ್ಚನ ಈ ದೊಡ್ಡ ಗುಣಕ್ಕೆ ಸೆಲ್ಯೂಟ್ ಹೊಡೆದ ಫ್ಯಾನ್ಸ್..!
- BIG BOSS4 days ago
ಮಿಡ್ ವೀಕ್ ಎಲಿಮಿನೇಷನ್ ನಿಂದ ಬಚಾವ್ ಆಗುವವರು ಯಾರು ?
- BIG BOSS4 days ago
ಚೈತ್ರಾ ಕುಂದಾಪುರ ಪ್ರಕಾರ ಈ ಸಲ ಬಿಗ್ ಬಾಸ್ ವಿನ್ನರ್ ಇವರೇ ?
- BIG BOSS5 days ago
ಬಿಗ್ ಬಾಸ್ ನಿಂದ ಹೊರ ಬಂದ ಚೈತ್ರಾ ಕುಂದಾಪುರ ಪಡೆದ ಸಂಭಾವನೆ ಎಷ್ಟು ಗೊತ್ತೇ?