Thursday, March 23, 2023

ಮಂಗಳೂರಿನ ಕುದ್ರೋಳಿ ಗಂಗಾಂಜನೇಯ ದೇಗುಲದ ಪರಿಸರದಲ್ಲಿ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಕಾಮತ್

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಕುದ್ರೋಳಿ ಬೆಂಗ್ರೆಯ ಶ್ರೀ ಗಂಗಾಂಜನೇಯ ದೇವಸ್ಥಾನದ ಬಳಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕುದ್ರೋಳಿ ಬೆಂಗ್ರೆಯ ಪರಿಸರದ ನಂಬಿಕೆಯ ಭಾಗವಾಗಿರುವ ಶ್ರೀ ಗಂಗಾಂಜನೇಯ ದೇವಸ್ಥಾನದ ಬಳಿ ಅಭಿವೃದ್ಧಿ ಕಾಮಗಾರಿ ನಡೆಸಲು ಅನುದಾನ ಬಿಡುಗಡೆಗೊಳಿಸಿದ್ದು‌ ಶೀಘ್ರದಲ್ಲಿ ಕಾಮಗಾರಿ ಪ್ರಾರಂಭವಾಗುತ್ತದೆ ಎಂದು ಹೇಳಿದರು.


ಹಿಂದೂ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ನಮ್ಮ ಸರಕಾರ ಆಡಳಿತಕ್ಕೆ ಬಂದ ಬಳಿಕ ದಾಖಲೆ ಪ್ರಮಾಣದ ಅನುದಾನ ಬಿಡುಗಡೆ ಮಾಡಲಾಗಿದೆ. ಧಾರ್ಮಿಕ ದತ್ತಿ ಇಲಾಖೆಯ ಮೂಲಕ ಅನೇಕ ಕ್ಷೇತ್ರಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಉಪಮೇಯರ್ ಪೂರ್ಣಿಮಾ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಸ್ಥಳೀಯ ಕಾರ್ಪೋರೇಟರ್ ಸುನಿತಾ, ಮುಖಂಡರಾದ ಅರವಿಂದ್ ಬೆಂಗ್ರೆ, ವರದರಾಜ್, ಮಿಲನ್, ಯತೀಶ್, ಅಶ್ವತ್ಥಾಮ, ಪ್ರಸಾದ್, ಅಜಯ್, ನವೀನ್, ಭರತ್, ಪ್ರವೀಣ್, ಸುಧಾಕರ್, ವಸಂತ್ ಜೆ ಪೂಜಾರಿ, ಪ್ರಕಾಶ್, ಭಾಸ್ಕರ್, ಶ್ರೀಧರ್, ಭಾಗೀರಥಿ,

ಸುನಂದಾ, ಸೂರ್ಯಕಾಂತ್, ಪ್ರಜ್ವಲ್, ಸುಧೀರ್, ಸೂರಜ್, ದಾಕ್ಷಾಯಿಣಿ, ಶ್ರೀನಿವಾಸ್, ವಿನಯ್, ನವೀನ್ ಪುತ್ರನ್, ಸೀಮಾ, ಚಂಪಾ, ಶಶಿಕಲಾ, ಲೀಲಾವತಿ, ಮನೋಜ್, ಅನಿಲ್ ಕಾಂಚನ್, ಅನಿಲ್ ಕರ್ಕೇರ, ದಯಾನಂದ್, ಕಿರಣ್, ಮುತ್ತಮ್ಮ, ವಿಶಾಲಾಕ್ಷಿ, ಜನಾರ್ದನ್, ವಿಶಾಲ್, ಶೇಖರ್, ಸುರೇಖಾ, ರಮ್ಯಾ, ಪಾರ್ವತಿ, ಶ್ರೀಕಾಂತ್, ಚಂದ್ರ ಶೇಖರ್, ರಾಜೇಶ್ ಮತ್ತಿತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Hot Topics

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದಿದ್ದ ಕುಮಟಾದ ಯುವತಿ ಡಿಡೀರ್ ನಾಪತ್ತೆ..! 

ಕುಟುಂಬಸ್ಥರ ಜೊತೆ ಉತ್ತರ ಕನ್ನಡದಿಂದ ದಕ್ಷಿಣ ಕನ್ನಡದ ಶ್ರೀ ಕ್ಷೇತ್ರಗಳನ್ನು ಸಂದರ್ಶಿಸಲು ಬಂದಿದ್ದ ಹದಿ ಹರೆಯದ ಯುವತಿ ನಾಪತ್ತೆಯಾಗಿದ್ದಾಳೆ.ಬೆಳ್ತಂಗಡಿ : ಕುಟುಂಬಸ್ಥರ ಜೊತೆ ಉತ್ತರ ಕನ್ನಡದಿಂದ ದಕ್ಷಿಣ ಕನ್ನಡದ ಶ್ರೀ ಕ್ಷೇತ್ರಗಳನ್ನು...

40 ವರ್ಷಗಳಿಂದ ಅದೇ ಪೊಳ್ಳು ಭರವಸೆ : ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಸುಳ್ಯ ಅರಮನೆಗಾಯದ ಜನತೆ..!

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಈ ಗ್ರಾಮದ ಜನ ಕಳೆದ 40 ವರ್ಷಗಳಿಂದ ಬಿದಿರಿನ ತೂಗು ಸೇತುವೆಯ ಮುಖಾಂತರ ಜೀವ ಭಯದಲ್ಲಿ ಜೀವನ ನಡೆಸುತಿದ್ದಾರೆ.ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ...

ಓಮನ್‌ನಲ್ಲಿ ಹೃದಯಾಘಾತದಿಂದ ಅನಿವಾಸಿ ಭಾರತೀಯ ಮಹಿಳೆ ಮೃತ್ಯು..!

ಓಮನ್‌ ನಲ್ಲಿ ಭಾರತೀಯ ಮೂಲದ ಮಹಿಳೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕೇರಳ ಕೊಟ್ಟಾಯಂನ ಮಹಿಳೆ ಸೈಮಾ ಬಾಲಕೃಷ್ಣ ಮೃತ ಮಹಿಳೆಯಾಗಿದ್ದಾಳೆ.ಓಮನ್ : ಓಮನ್‌ ನಲ್ಲಿ ಭಾರತೀಯ ಮೂಲದ ಮಹಿಳೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕೇರಳ ಕೊಟ್ಟಾಯಂನ...