LATEST NEWS
ನಂತೂರಿನಲ್ಲಿ ಯೂ ಟರ್ನ್ ಮುಚ್ಚಿರುವುದನ್ನು ತೆರವುಗೊಳಿಸುವಂತೆ ಶಾಸಕರಿಂದ ಮನವಿ
ಮಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ನಂತೂರು – ಪಂಪ್ವೆಲ್ ಮಧ್ಯೆ ಇರುವ ಮಂಗಳ ಜ್ಯೋತಿ ಶಾಂತಿ ಕಿರಣ ಕಟ್ಟದ ಮುಂಭಾಗದ ಯೂ ಟರ್ನ್ ಮುಚ್ಚಿರುವುದನ್ನು ತೆರವುಗೊಳಿಸುವ ಕುರಿತು ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ್ ಕಾಮತ್ ಅವರು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಕುಲದೀಪ್ ಜೈನ್ ಅವರೊಂದಿಗೆ ಸಭೆ ನಡೆಸಿ ಮನವಿ ನೀಡಿದರು.
ಪಂಪ್ವೆಲ್ ಭಾಗದಿಂದ ಮರೋಳಿ, ಅಳಪೆ, ಕುಲಶೇಖರ ಭಾಗಕ್ಕೆ ತೆರಳುವ ವಾಹನ ಸವಾರರು, ನಂತೂರು – ಪಂಪ್ವೆಲ್ ರಾಷ್ಟ್ರೀಯ ಹೆದ್ದಾರಿಯ ಶಾಂತಿ ಕಿರಣದ ಬಳಿಯಿರುವ ಯೂಟರ್ನ್ ಮೂಲಕ ಸಂಚರಿಸುತಿದ್ದು, ಅಪಘಾತ ತಡೆಗಟ್ಟುವ ದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಕೆಲವು ದಿನಗಳಿಂದ ಯೂ ಟರ್ನ್ ಮುಚ್ಚಿದೆ.
ಇದರಿಂದಾಗಿ ಪಂಪ್ವೆಲ್ ಭಾಗದಿಂದ ಮರೋಳಿ, ಕುಲಶೇಖರ ತೆರಳುವ ವಾಹನಗಳು ನಂತೂರು ಜಂಕ್ಷನಿಗೆ ಬಂದು ಯೂ ಟರ್ನ್ ಮಾಡಬೇಕಾದ ಅನಿವಾರ್ಯತೆ ಉಂಟಾಗಿದೆ. ನಂತೂರು ಜಂಕ್ಷನ್ ನಲ್ಲಿ ವಾಹನ ದಟ್ಟಣೆಯಿಂದ ಸಾರ್ವಜನಿಕರಿಗೆ ಉಂಟಾಗುವ ಸಮಸ್ಯೆಯನ್ನು ಸ್ಥಳೀಯರು ಶಾಸಕರ ಗಮನಕ್ಕೆ ತಂದಿದ್ದು, ಶಾಸಕ ಕಾಮತ್ ಅವರು ಆಯುಕ್ತರೊಂದಿಗೆ ಸುಧೀರ್ಘ ಚರ್ಚೆ ನಡೆಸಿ ಸಮಸ್ಯೆಯ ಬಗ್ಗೆ ಮಾಹಿತಿ ನೀಡಿದರು.
ಪೊಲೀಸ್ ಆಯುಕ್ತರು ಶಾಸಕರ ಮನವಿಯಂತೆ ಬೆಳಗಿನ ಹಾಗೂ ಸಂಜೆಯ ಸಮಯ ಯೂ ಟರ್ನ್ ತೆಗೆದು ವಾಹನ ಸಂಚಾರಕ್ಕೆ ಅನುವು ಮಾಡಿಕೊಡುವ ಕುರಿತು ಒಪ್ಪಿಕೊಂಡಿದ್ದಾರೆ. ಮರೋಳಿ ಮಾರಿಕಾಂಬ ದೇವಸ್ಥಾನದ ಭಾಗದಿಂದ ನಂತೂರು ಭಾಗಕ್ಕೆ ತೆರಳುವವರು ಪಂಪ್ವೆಲ್ ಮೂಲಕವೇ ಯೂ ಟರ್ನ್ ತೆಗೆದು ಬರಬೇಕು.
ಆಡುಮರೋಳಿ ರಸ್ತೆಯಿಂದ ನಂತೂರು ಭಾಗಕ್ಕೆ ವಿರುದ್ಧ ದಿಕ್ಕಿನಲ್ಲಿ ಸಾಗುವುದರಿಂದ ಅಪಘಾತಗಳು ನಡೆಯುತ್ತಿದ್ದು, ಇಂತಹ ಪ್ರಕರಣಗಳಲ್ಲಿ ಅಪಘಾತಕ್ಕೊಳಗಾದವರಿಗೆ ಯಾವುದೇ ವಿಮೆ ಸೌಲಭ್ಯ, ಪರಿಹಾರ ನೀಡಲು ಸಾಧ್ಯವಾಗದಿರುವ ಘಟನೆಗಳು ನಡೆದಿವೆ. ಹಾಗಾಗಿ ಯೂ ಟರ್ನ್ ಮುಚ್ಚುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆಯುಕ್ತರು ಶಾಸಕರಿಗೆ ತಿಳಿಸಿದ್ದಾರೆ.
ಆಡುಮರೋಳಿ ಪರಿಸರದಿಂದ ನಂತೂರಿಗೆ ತೆರಳುವ ವಾಹನ ಸವಾರರು ವಿರುದ್ಧ ದಿಕ್ಕಿನಲ್ಲಿ ಸಾಗದಂತೆ ತಡೆಯಲು ಯೂ ಟರ್ನ್ ಇರುವ ಸ್ಥಳದ ಬಳಿ ಪೊಲೀಸ್ ಸಿಬ್ಬಂದಿ ನೇಮಿಸಬೇಕು ಎಂದು ಶಾಸಕರ ಸಲಹೆಯಂತೆ ಬೆಳಗಿನ ಹಾಗೂ ಸಂಜೆಯ ವೇಳೆ ಸಿಬ್ಬಂದಿ ನೇಮಿಸಿ ಸಂಚಾರಕ್ಕೆ ಅನುವು ಮಾಡಿಕೊಡಲು ಆಯುಕ್ತರು ಒಪ್ಪಿಗೆ ನೀಡಿದ್ದಾರೆ.
ಈ ಕುರಿತು ಸಾರ್ವಕರಲ್ಲಿ ಮನವಿ ಮಾಡಿಕೊಂಡಿರುವ ಶಾಸಕರು, ಸಂಚಾರಿ ನಿಯಮಗಳನ್ನು ಪಾಲಿಸಬೇಕು ಹಾಗೂ ವಿರುದ್ಧ ದಿಕ್ಕಿನಲ್ಲಿ ವಾಹನ ಚಲಾಯಿಸದಿರಲು ಕೇಳಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ಅನಿರುದ್ಧ್ ಕಾಮತ್, ಪಾಲಿಕೆ ಸದಸ್ಯರಾದ ಸುಧೀರ್ ಶೆಟ್ಟಿ ಕಣ್ಣೂರು, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.
DAKSHINA KANNADA
ಮಂಗಳೂರು : ‘ಮಹೇಶ್’ ಬಸ್ ಮಾಲೀಕ ಆತ್ಮಹತ್ಯೆ..!
ಮಂಗಳೂರು: ಮಂಗಳೂರಿನ ಖಾಸಗಿ ಬಸ್ ನ ಮಾಲೀಕರೊಬ್ಬರು ತಾವು ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತರನ್ನು ಮಹೇಶ್ ಬಸ್ ಮಾಲೀಕ ಪ್ರಕಾಶ್ ಶೇಖ ಎಂದು ಗುರುತಿಸಲಾಗಿದೆ. ಅವರು ಕದ್ರಿ ಕಂಬಳ ಸಮೀಪ ಇರುವ ಅಪಾರ್ಟ್ ಮೆಂಟ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಹೇಶ್ ಹೆಸರಿನಲ್ಲಿ ಹಲವಾರು ಸಿಟಿ ಬಸ್ ಗಳು ದಿನನಿತ್ಯ ಸಂಚರಿಸುತ್ತಿದ್ದು, ಜನಮನ್ನಣೆ ಪಡೆದಿದೆ.
ಬಸ್ ಉದ್ಯಮದ ಬಗ್ಗೆ ಭಾರೀ ಪ್ರೀತಿ ಇಟ್ಟುಕೊಂಡಿದ್ದ ಪ್ರಕಾಶ್ ಯಾಕಾಗಿ ಸಾವಿಗೆ ಶರಣಾಗಿದ್ದಾರೆ ಎನ್ನುವುದು ಆಪ್ತ ಬಳಗಕ್ಕೆ ಶಾಕ್ ನೀಡಿದೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
ಬೈಕ್ ಅಪಘಾತ: ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಲೆ ಹರಿದ ಲಾರಿ- ಮೂವರು ಸ್ಥಳದಲ್ಲೇ ಸಾವು..!
ಶಿವಮೊಗ್ಗ: ಬೈಕ್ ಗಳ ಮದ್ಯೆ ನಡೆದ ಅಪಘಾತದಿಂದ ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಳೆ ಲಾರಿ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಹತೊಳಲು ಗ್ರಾಮದಲ್ಲಿ ನಡೆದಿದೆ.
ಹಳೆ ಜಂಬರಗಟ್ಟ ನಿವಾಸಿ ವಿಕಾಸ್ (18), ಯಶ್ವಂತ್ (17), ಹಾಗೂ ಶಶಾಂಕ್ (17) ಮೃತ ದುರ್ದೈವಿಗಳು.
ಎರಡು ಬೈಕ್ ಗಳ ಮಧ್ಯೆ ನಡೆದ ಅಪಘಾತದಲ್ಲಿ ಸವಾರರ ರಸ್ತೆ ಮೇಲೆ ಬಿದ್ದಿದ್ದಾರೆ.
ಇದೇ ವೇಳೆ ರಭಸವಾಗಿ ಬಂದ ಲಾರಿ ಆ ವ್ಯಕ್ತಿಗಳ ಮೇಲೆ ಹರಿದಿದೆ.
ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಒಬ್ಬನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
FILM
ಮೋದಿಗೆ ರಕ್ತದಲ್ಲಿ ಪತ್ರ ಬರೆದ ಚಿತ್ರ ನಟ ಪ್ರೇಮ್..!
ಚಿಕ್ಕಮಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಯಬಿಡುವುದನ್ನು ಖಂಡಿಸಿದ ಕನ್ನಡ ಚಿತ್ರನಟ ಪ್ರೇಮ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದ್ದು, ಚಿತ್ರನಟ ನೆನಪಿರಲಿ ಪ್ರೇಮ್ ಸಾಥ್ ನೀಡಿದ್ದಾರೆ.
‘ಕಾವೇರಿ ನಮ್ಮದು’ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ಕಾವೇರಿ ನೀರಿನಿಂದ ರಾಜ್ಯಕ್ಕೆ ನ್ಯಾಯ ನೀಡಬೇಕೆಂದು ಪತ್ರದ ಮೂಲಕ ಪ್ರೇಮ್ ಅವರು ಮನವಿ ಮಾಡಿದ್ದಾರೆ.
ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
- DAKSHINA KANNADA7 days ago
2ನೇ ಮದುವೆಯಾದ ಕಿರುತೆರೆ ನಟಿ ಜ್ಯೋತಿ ರೈ …!
- LATEST NEWS7 days ago
ವಾರವಿಡೀ ಕಾಡಿನಲ್ಲಿ ಸಿಲುಕಿದ್ದ ಯುವಕ- ಮನೆಗೆ ವಾಪಸ್ ಆಗುವಂತೆ ರಕ್ಷಣೆ ಮಾಡಿದ ಸಾಕುನಾಯಿ..!
- DAKSHINA KANNADA7 days ago
Puttur: ಕಾಲೇಜು ವಿದ್ಯಾರ್ಥಿನಿ ಜಿವಾಂತ್ಯ..!
- DAKSHINA KANNADA7 days ago
Ullala: ರೈಲಿನಡಿಗೆ ತಲೆಯಿಟ್ಟು ಅವಿವಾಹಿತ ವ್ಯಕ್ತಿ ಜೀವಾಂತ್ಯ..!