DAKSHINA KANNADA
ವೆನ್ಲಾಕ್ ಆಸ್ಪತ್ರೆಯಲ್ಲಿ ಹೆಲ್ಪ್ ಡೆಸ್ಕ್ ಸ್ಥಾಪಿಸುವ ಬಗ್ಗೆ ಶಾಸಕರ ಚರ್ಚೆ..!
ಮಂಗಳೂರು: ಕೋವಿಡ್ 19 ಸೋಂಕು ಎಲ್ಲೆಡೆ ತೀವ್ರವಾಗಿ ಹಬ್ಬುತ್ತಿರುವುದರಿಂದ ಮಂಗಳೂರು ಹೊರವಲಯದ ಉತ್ತರ ಶಾಸಕ ಡಾ।ಭರತ್ ಶೆಟ್ಟಿ ವೈ ಮತ್ತು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮಂಗಳೂರಿನ ಸರ್ಕಾರಿ ಕೋವಿಡ್ ಆಸ್ಪತ್ರೆ ಯಲ್ಲಿ ಹೆಲ್ಪ್ ಡೆಸ್ಕ್ ಸ್ಥಾಪಿಸುವ ಬಗ್ಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಚರ್ಚೆ ನಡೆಸಿದರು. ಈ ವೇಳೆ ಆಸ್ಪತ್ರೆಯ ಶುಶ್ರೂಷೆ ವಿಭಾಗಕ್ಕೆ ಭೇಟಿ ನೀಡಿದರು. ಕೌನ್ಸಿಲರ್ ಜತೆ ಮಾತುಕತೆ ನಡೆಸಿದರು. ರೋಗಿಗಳ ಸಂಬಂಧಿಗಳು ಗೊಂದಲಕ್ಕೆ ಒಳಗಾಗದಂತೆ ಸೂಕ್ತ ಮಾಹಿತಿ ನೀಡುವಂತೆ ಸೂಚಿಸಿದರು ಪರಿಣಿತ ಮಾಹಿತಿ ಸಂವಹನಕಾರರನ್ನು ನೇಮಿಸಲು ಸಲಹೆ ನೀಡಿದರು. ಮಂಗಳೂರಿನ ವೆನ್ ಲಾಕ್ ನಲ್ಲಿ ಯಾವುದೇ ಮಾಹಿತಿ ಸಿಗದೆ ರೋಗಿಗಳು,ಅವರ ಕುಟುಂಬಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.
ಇದರ ನಡುವೆ ಇಲ್ಲಿನ ಸಿಬ್ಬಂದಿಗಳ ಅತಿರೇಕದ ವರ್ತನೆಯಿಂದ ಜನ ವೆನ್ ಲಾಕ್ ಬಗ್ಗೆ ಭೀತಿ ಇಟ್ಟುಕೊಂಡಿದ್ದು ಜನರ ಮನಸ್ಸಿನಲ್ಲಿ ಹೇಸಿಗೆ ಹುಟ್ಟುವ ಪರಿಸ್ಥಿತಿ ಬರುತ್ತಿದೆ.ಇದನ್ನು ಹೋಗಲಾಡಿಸಲು ಜನಸಂಪರ್ಕ ( ಹೆಲ್ಪ್ ಡೆಸ್ಕ್) ಕೂಡಲೇ ರಚಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಸೂಚಿಸಿದ್ದಾರೆ.
ಜನರಿಗೆ ಮೊದಲೇ ವೆನ್ ಲಾಕ್ ಬಗ್ಗೆ ತಪ್ಪು ಕಲ್ಪನೆಯಿದೆ.ಇಲ್ಲಿನ ಸಿಬಂದಿಗಳ ಅತಿರೇಕದ ,ಉಡಾಫೆಯ ವರ್ತನೆ ಮತ್ತಷ್ಟು ತಪ್ಪು ಕಲ್ಪನೆಗೆ ಕಾರಣವಾಗುತ್ತದೆ.
ಡಾಕ್ಟರ್ ಮತ್ತು ನರ್ಸ್ ಗಳು ,ಇಲ್ಲಿನ ವಾರ್ಡನ್ ಗಳು ಸರಿಯಾಗಿ ರೋಗಿಗಳ ಸಂಬಂದಿಗಳೊಂದಿಗೆ ತಾಳ್ಮೆ ಯಿಂದ ವರ್ತಿಸಿ ದಾಗ ಒಂದಿಷ್ಟು ಭರವಸೆ ಮೂಡಿಸುವ ಕೆಲಸವಾಗುತ್ತದೆ.
ವೆನ್ ಲಾಕ್ ನಲ್ಲಿ ಇಡೀ ದಿನ ಅಲೆದಾಡಿಸುವುದನ್ನು ಕೈ ಬಿಡಿ ಸರಿಯಾದ ಮಾಹಿತಿ ನೀಡಿ ಅವರಿಗೆ ಬೇಕಾದ ಸೌಲಭ್ಯ,ಬೇಕಾದ ಕೆಲಸ ಆಗುವ ಹಾಗೆ ಮಾಡಿ.ಇದಕ್ಕಿಂತ ಹೆಚ್ಚಾಗಿ ಅವರು ಏನೂ ಕೇಳುವುದಿಲ್ಲ.
1. ರೋಗಿಗಳು ಬಂದಾಗ ಮಾಹಿತಿ ಪಡೆದು ಅವರಿಗೆ ಬೇಕಾದ ಸ್ಥಳಕ್ಕೆ ತಲುಪಿಸುವ ಯೋಜನೆ ರೂಪಿಸಿ.
2.ಕಡ್ಡಾಯವಾಗಿ ಹೆಲ್ಪ್ ಲೈನ್ ಡೆಸ್ಕ್ ಸ್ಥಾಪಿಸಿ ,ಕೌನ್ಸಿಲಿಂಗ್ ಮಾಡಿ
3.ರೋಗಿ ಸಂಬಂಧಿಗಳು ತೀರಾ ಕೆಟ್ಟದಾಗಿ ವರ್ತಿಸಿದರೂ ಸರಕಾರದ ಭಾಗವಾಗಿರುವ ವೈದ್ಯರು ಒತ್ತಡದಲ್ಲಿದ್ದರೂ ತಾಳ್ಮೆಕಳೆದುಕೊಳ್ಳುವುದು ಸರಿಯಲ್ಲ.
ಕನಿಷ್ಟ ರೋಗಿಯ ಆರೋಗ್ಯದ ಬಗ್ಗೆ ಮಾಹಿತಿ ಕೊಡುತ್ತಾ ಇದ್ದಾಗ ಅವರಿಗೂ ನೆಮ್ಮದಿ ಸಿಗುತ್ತದೆ.
4.ಅನಾವಶ್ಯಕ ವಾಗಿ ರೋಗಿಗಳಿಗೆ ಹೆದರಿಸುವ ,ರೋಗಿಗಳ ಬಗ್ಗೆ ಅನಾವಶ್ಯಕ ಮಾಹಿತಿ ನೀಡಬೇಡಿ.
5.ವೈದ್ಯರನ್ನು ರೋಗಿಗಳು ಪೂರ್ಣವಾಗಿ ನಂಬಿರುವುದರಿಂದ ಸ್ವಲ್ಪ ದಕ್ಕೆಯಾದರೂ ರೋಗಿಗಳ ಕಡೆಯವರು ಆಕ್ರೋಶಕ್ಕೆ ಒಳಗಾಗುವುದು ಸಾಮಾನ್ಯ.ಇದನ್ನು ಗಮನದಲ್ಲಿಟ್ಟು ,ತಾಳ್ಮೆ ಕಳೆದುಕೊಳ್ಳದಿರಿ ಎಂದು ಮನವಿ ಮಾಡಿದ್ದಲ್ಲದೆ ಇದನ್ನೆಲ್ಲ ನಿರ್ವಹಿಸಲು ಹೆಲ್ಪ್ ಡೆಸ್ಕ್ ಸ್ಥಾಪನೆ ಅತ್ಯಾವಶ್ಯಕ ಎಂದು ಹೇಳಿದರು.
ಚರ್ಚಾಕೂಟದಲ್ಲಿ ಡಿಎಚ್ ಒ ಡಾ. ಕಿಶೋರ್ ಕುಮಾರ್, ಡಿಎಂಒ ಡಾ.ಸದಾಶಿವ ಉಪಸ್ಥಿತರಿದ್ದರು.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
DAKSHINA KANNADA
ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು
ಮಂಗಳೂರು: ಗುಜರಾತ್ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.
ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್ ಗಾರ್ಡ್ ತಂಡ ಹೆಲಿಕಾಪ್ಟರ್ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.
ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್ ಗಾರ್ಡ್ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್ ಗಾರ್ಡ್ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.
DAKSHINA KANNADA
ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!
ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.
ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.
ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.
ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.
ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.
- LATEST NEWS4 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ