ಪಾದರಾಯನಪುರ ಗೂಂಡಾ ಪ್ರಕರಣ ಕುರಿತು ಸರ್ಕಾರಕ್ಕೆ ಶಾಸಕ ಖಾದರ್ ಸವಾಲ್.!
ಪಾದರಾಯನಪುರ ಗೂಂಡಾ ಪ್ರಕರಣ ಕುರಿತು ಸರ್ಕಾರಕ್ಕೆ ಶಾಸಕ ಖಾದರ್ ಸವಾಲ್.!
ಮಂಗಳೂರು: ಬೆಂಗಳೂರಿನ ಪಾದರಾಯನಪುರದ ಸಾದೀಕ್ ನಗರದಲ್ಲಿ ಹಲ್ಲೆ ನಡೆದಾಗ ಸರಕಾರ ಸೂಕ್ತ ಕ್ರಮ ಕೈಗೊಂಡಿದ್ದರೆ ಮತ್ತೊಮ್ಮೆ ಇಂತಹ ಘಟನೆ ಮರುಕಳಿಸುತ್ತಿರಲಿಲ್ಲ. ಕಿಡಿಗೇಡಿಗಳು ಮಾಡಿದ ಕೃತ್ಯಕ್ಕೆ ಇಡೀ ಸಮುದಾಯವನ್ನು ದೋಷಿಸುವುದು ತಪ್ಪು.
ಯಾವ ಸಮುದಾಯದವರು ಇಂತಹ ನೀಚ ಕೃತ್ಯವನ್ನು ಬೆಂಬಲಿಸಲು ಸಾಧ್ಯವಿಲ್ಲ ಎಂದು ಶಾಸಕ ಯು.ಟಿ.ಖಾದರ್ ಕಿಡಿಕಾರಿದ್ದಾರೆ.
ಪಾದರಾಯನಪುರದಲ್ಲಿ ಗೂಂಡಾಗಿರಿ ಮಾಡಿದವರ ವಿರುದ್ಧ ಕಿಡಿಕಾರಿದ ಶಾಸಕ, ‘ಗೂಂಡಾಗಳಿಗೆ ಸರಕಾರ ಸೂಕ್ತವಾದ ಕ್ರಮ ತೆಗೆದುಕೊಳ್ಳಲಿ.
ಗೂಂಡಾಗಳಿಗೆ ಬೆಂಬಲಿಸುವ ಕೆಲಸ ಸರಕಾರದಿಂದ ಮಾಡಬಾರದು. ಸಮಾಜದ ಸ್ವಾಸ್ಥ ಕೆಡಿಸುವ ಕೆಲಸ ನಡೆಯಬಾರದು.
ಪರಿಸ್ಥಿತಿ ಸುಧಾರಿಸಲು ಪ್ರಯತ್ನಿಸೋಣ. ಸರಕಾರ ಈ ಬಗ್ಗೆ ಎಚ್ಚೆತ್ತುಕೊಳ್ಳಲೇಬೇಕು. ಈ ರೀತಿಯ ಘಟನೆ ನಮ್ಮೆಲ್ಲರಿಗೂ ಕಪ್ಪು ಚುಕ್ಕೆ ಇದ್ದಂತೆ.
ಕಾರಣ ಏನೇ ಇರಲಿ, ಆದ್ರೆ ಗೂಂಡಾಗಿರಿಗೆ ನಮ್ಮ ಬೆಂಬಲವಿಲ್ಲ. ತಂದೆ ತಾಯಿಯ ಮಾತೆ ಕೇಳದವರು ನಾಯಕರ ಮಾತು ಕೇಳುತ್ತಾರಾ.?.
ಪದೇ ಪದೇ ಇಂತಹ ಕೃತ್ಯ ನಡೆಯದಂತೆ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಯಾವುದೇ ಸಮುದಾಯ ದಂಗೆ ಎಬ್ಬಿಸಿ ದಾಂಧಲೆ ಮಾಡಿ ಎಂದು ಹೇಳುವುದಿಲ್ಲ.
ಎಲ್ಲವನ್ನು ಸಮುದಾಯ ನಿರ್ವಹಿಸುದಾದರೆ ಸರಕಾರ ಏಕೆ.?. 70 ವರ್ಷದ ವೃದ್ಧರಿಗೆ ಲಾಟಿ ಬೀಸುವ ಪೊಲೀಸರು ಈ ಗೂಂಡಾಗಳ ಮೇಲೆ ಯಾಕೆ ಚಾರ್ಜ್ ಮಾಡುವುದಿಲ್ಲ.? ಎಂದು ಸರಕಾರ ಹಾಗೂ ಪೊಲೀಸ್ ಇಲಾಖೆಗೆ ಖಾದರ್ ಖಡಕ್ ಪ್ರಶ್ನೆ ಮಾಡಿದ್ದಾರೆ.
ಇತ್ತ ಮಾಧ್ಯಮ ಕೂಡ ಸಮುದಾಯಕ್ಕೆ ಪ್ರಶ್ನೆ ಹಾಕುವ ಬದಲು, ಸರಕಾರವನ್ನು ಪ್ರಶ್ನಿಸಲಿ. ರಾಜ್ಯದ ಆರೂವರೆ ಕೋಟಿ ಜನರಿಗೆ ಇರುವುದು ಒಂದೇ ಕಾನೂನು.
ಸರಕಾರ ಕಾನೂನು ರೀತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ಯಾರೋ ಕೆಲವರು ಮಾಡಿದ ಅಮಾನವೀಯ ಕೆಲಸಕ್ಕೆ ಇಡೀ ಸಮುದಾಯದವರನ್ನು ದೂಷಿಸುವುದು ತಪ್ಪು. ಸರಕಾರದ ಭಯ ಜನರಿಗಿಲ್ಲ ಎಂದು ಖಾದರ್ ಆತಂಕ ವ್ಯಕ್ತಪಡಿಸಿದ್ದಾರೆ.
ಇನ್ನು ಶ್ರೀರಾಮಲು ಕೊಟ್ಟ ಹೇಳಿಕೆಗೆ ತಿರುಗೇಟು ನೀಡಿದ ಖಾದರ್, ಶ್ರೀರಾಮುಲು ಹೇಳಿದಂತೆ ರಾತ್ರಿ ಹೋಗಲು ಇದೇನೂ ಕಾರ್ಯಕ್ರಮವಲ್ಲ. ವೈರಸ್ ಹರಡದಂತೆ ತಕ್ಷಣ ಕ್ರಮ ಕೈಗೊಳ್ಳಬೇಕು.ಇಂತಹ ಹೇಳಿಕೆ ಸಮಂಜಸವಲ್ಲ ಎಂದಿದ್ದಾರೆ.
ಇತ್ತ ಯಾವುದೇ ರೀತಿಯ ಮುಂದಾಲೋಚನೆ ಇಲ್ಲದೆ ಲಾಕ್ ಡೌನ್ ತಂದು ಜನ ಹೊಟ್ಟೆ ಬಟ್ಟೆಗಿಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
25 ದಿನ ಸಹಿಸಿಕೊಂಡ ಜನರಿಗೆ ಇನ್ನು ಕೂಡ ಮುಂದೇನೂ ಎಂಬ ಪ್ರಶ್ನೆ ಕಾಡುತ್ತಿದೆ. ಸರಕಾರದ ಬಳಿ ಯಾವುದಕ್ಕೂ ಉತ್ತರವಿಲ್ಲ.
ಕೊರೊನಾ ಯಾವ ಹಂತಕ್ಕೆ ಮುಟ್ಟಿದೆ ಮುಂದಿನ ಕ್ರಮವೇನು ಎಂದು ಸರಕಾರಕ್ಕೆ ತಿಳಿದಿಲ್ಲ. ಆಸ್ಪತ್ರೆಯಲ್ಲಿ ಯಾವ ವ್ಯವಸ್ಥೆ ಇದೆ.
ವೈದ್ಯರಿಗೆ ಸುರಕ್ಷತಾ ಕವಚ ಸರಕಾರದಿಂದ ಲಭ್ಯವಿದೆಯಾ. ? ಸರಕಾರಕ್ಕೆ ಸಹಕಾರ ನೀಡಿದರೂ ಲೀಡರ್ ಶೀಪ್ ಮಾಡುವಲ್ಲಿ ಬಿಜೆಪಿ ಸಂಪೂರ್ಣ ವಿಫಲವಾಗಿದೆ.
ಯಾವುದೇ ಒಂದು ಸಚಿವ ಸ್ಥಾನಕ್ಕೆ ಸೂಕ್ತ ಅಭ್ಯರ್ಥಿ ನೇಮಿಸದೆ ಸರಕಾರ ಇಂದು ಈ ಹಂತಕ್ಕೆ ತಲುಪಿದ್ದು, ಸಮಾಜದ ಸ್ವಾಸ್ಥದ ಜೊತೆಗೆ ಆರೋಗ್ಯ ಕಾಪಾಡುವಲ್ಲಿ ಕೂಡ ಸಂಪೂರ್ಣ ವಿಫಲವಾಗಿದೆ ಎಂದು ಖಾದರ್ ಸರ್ಕಾರದ ವಿರುದ್ಧ ಗುಡುಗಿದ್ದಾರೆ.
ಇನ್ನು ದೆಹಲಿ ತಬ್ಲಿಘಿ ಸಮಾವೇಶದ ಬಗ್ಗೆ ಮಾತನಾಡಿದ ಖಾದರ್, ನಿಜಾಮುದ್ದೀನ್ ತಬ್ಲಿಘಿ ಜಮಾತ್ ಕಾರ್ಯಕ್ರಮಕ್ಕೆ ದೆಹಲಿ ಸರಕಾರ ಅನುಮತಿ ನೀಡಿದ್ದಲ್ಲದೇ, ಕೊರೊನಾ ಪೀಡಿತ ದೇಶಗಳ ಜನರಿಗೆ ವೀಸಾ ನೀಡಿ ಭಾರತಕ್ಕೆ ಬರಲು ಕೇಂದ್ರ ಸರಕಾರ ಅನುಮತಿ ನೀಡಿತ್ತು.
ಆದರೂ ನಿಜಾಮುದ್ದೀನ್ ತಬ್ಲಿಘಿ ಜಮಾತ್ ಮಾಡಿದ ಕೆಲಸ ತಪ್ಪು ಎಂದೆ ನಾವು ಹೇಳುತ್ತೇವೆ. ಇಂತಹವರಿಗೆ ನಮ್ಮ ಬೆಂಬಲವಿಲ್ಲ. ಆದರೆ ಸರಕಾರ ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದೆ ನಿದ್ರಾವಸ್ಥೆಗೆ ಜಾರಿದೆ ಎಂದು ಸರ್ಕಾರವನ್ನು ತರಾಟೆಗೆ ತಗೆದುಕೊಂಡಿದೆ.
ಇತ್ತ ರೇಷನ್ ಕಾರ್ಡ್ ಬಗ್ಗೆಯೂ ಫೈರ್ ಮಾಡಿದ ಖಾದರ್, ರೇಷನ್ ಕಾರ್ಡ್ ಇಲ್ಲದವರಿಗೆ ಅಕ್ಕಿ ಇಲ್ಲ. ಹಾಗಾದರೆ ರೇಷನ್ ಕಾರ್ಡ್ ಇಲ್ಲದವರಿಗೆ ಹಸಿವೆ ಆಗಲ್ವಾ.?.
ಸಿದ್ಧರಾಮಯ್ಯ ಸರಕಾರವಿದ್ದಾಗ ಐದು ನಿಮಿಷಗಳಲ್ಲಿ ರೇಷನ್ ಕಾರ್ಡ್ ನೀಡುವ ವ್ಯವಸ್ಥೆ ಆಗಿತ್ತು. ಇಂತಹ ಕ್ರಮ ಈ ಪರಿಸ್ಥಿತಿಯಲ್ಲಿ ಸರಕಾರ ಕೈಗೊಳ್ಳಬೇಕು.
ಜೊತೆಗೆ ಆಶಾಕಾರ್ಯಕರ್ತರಿಗೆ ಟೆಸ್ಟಿಂಗ್ ಕಿಟ್ ನೀಡಿ ಮನೆ ಮನೆಗೆ ತೆರಳಿ ಪರೀಕ್ಷೆ ನಡೆಸಲು ಸರಕಾರ ಆದೇಶದ ಜೊತೆ ವ್ಯವಸ್ಥೆ ಮಾಡಬೇಕು.
ಒಟ್ಟಾರೆಯಾಗಿ ಸರಕಾರವೆ ಗೊಂದಲದಲ್ಲಿದ್ದು ಕೊರೊನಾ ತಡೆಗಟ್ಟಲು ದಿನಕ್ಕೊಂದು ಮಂತ್ರಿಗಳನ್ನು ನೇಮಕ ಮಾಡುತ್ತಿದೆ. ಇನ್ನು ಜನರು ಯಾರ ಮೇಲೆ ವಿಶ್ವಾಸವಿಡಬಹುದು. ಎಂದು ಯುಟಿ ಖಾದರ್ ಮಾರ್ಮಿಕವಾಗಿ ನುಡಿದಿದ್ದಾರೆ.
DAKSHINA KANNADA
ಹಳ್ಳ ಹಿಡಿದ ಸ್ಮಾರ್ಟ್ ಸಿಟಿಯ ಕಾಮಗಾರಿ; ಕುಂಟುತ್ತಾ ಸಾಗಿದ ಮಹಾಕಾಳಿ ಪಡ್ಪು ಅಂಡರ್ ಪಾಸ್
ಮಂಗಳೂರು: ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕೈಗೆತ್ತಿಕೊಂಡಿರುವ ಮಹಾಕಾಳಿ ಪಡ್ಪುವಿನ ರೈಲ್ವೇ ಅಂಡರ್ ಪಾಸ್ ಕಾಮಗಾರಿ ಸದ್ಯಕ್ಕಂತು ಮುಗಿಯುವ ಲಕ್ಷಣ ಕಾಣಿಸುತ್ತಿಲ್ಲ. ಈ ಕಾಮಗಾರಿ ಕೈಗೆತ್ತಿಕೊಂಡು ವರ್ಷಗಳೇ ಕಳೆದರೂ ಕಾಮಗಾರಿ ಮುಗಿಸಬೇಕು ಅನ್ನೋ ಇಚ್ಚೆ ಸ್ಮಾರ್ಟ್ ಸಿಟಿ ಯೋಜನೆಯವರಿಗೂ ಇದ್ದಂತಿಲ್ಲ.
ಕೆಲ ತಿಂಗಳ ಹಿಂದೆ ಕಳಪೆ ಕಾಮಗಾರಿಯಿಂದಾಗಿ ಇಲ್ಲಿ ಕಾಮಗಾರಿ ಕುಸಿತ ಕೂಡಾ ಉಂಟಾಗಿತ್ತು. ಇದೀಗ ಕೆಲ ದಿನಗಳಿಂದ ಯಾವುದೇ ಕಾಮಗಾರಿ ನಡೆಸದೆ ಕಾರ್ಮಿಕರು ಕೂಡಾ ಕೆಲಸ ಇಲ್ಲದೆ ಸುಮ್ಮನೆ ಕುಳಿತಿರುವ ದೃಶ್ಯ ಇಲ್ಲಿ ಮಾಮೂಲಾಗಿದೆ. ಮಾರ್ಗನ್ ಗೇಟ್ ಮೂಲಕವಾಗಿ ಜೆಪ್ಪಿನ ಮೊಗೆರು ಹೈವೆ ಸಂಪರ್ಕಿಸುವ ಈ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳು ಓಡಾಡುತ್ತಿದೆ. ಸದ್ಯ ಈ ಕಾಮಗಾರಿ ಆರಂಭವಾದ ಬಳಿಕ ಇಲ್ಲಿ ದ್ವಿಚಕ್ರ ವಾಹನಕ್ಕಷ್ಟೇ ಓಡಾಡಲು ವ್ಯವಸ್ಥೆ ಮಾಡಲಾಗಿದೆ.
ಉಪ್ಪಳದಲ್ಲಿ 3.5 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶ; ಓರ್ವ ಬಂಧನ
ಹೀಗಾಗಿ ಈ ರಸ್ತೆಯ ಮೂಲಕ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಕಾಮಗಾರಿ ಯಾವಾಗ ಮುಗಿಸ್ತೀರಿ ಅಂತ ಪ್ರಶ್ನೆ ಮಾಡುತ್ತಿದ್ದಾರೆ. ಆದರೆ ಇಲ್ಲಿ ನಡಿಯುತ್ತಿರುವ ಕಾಮಗಾರಿಯ ವೇಗ ನೋಡಿದರೆ ಇದು 2024 ರಲ್ಲಿ ಪೂರ್ಣಗೊಳ್ಳುವ ಯಾವುದೇ ಲಕ್ಷಣ ಇಲ್ಲ ಅನ್ನೋದು ಸ್ಪಷ್ಟವಾಗುತ್ತಿದೆ. ಹೀಗಾಗಿ ತಕ್ಷಣ ಅಂಡರ್ ಪಾಸ್ ಕೆಲಸ ಮಗಿಸಿ ಅಂತ ಜನ ಒತ್ತಾಯಿಸಿದ್ದಾರೆ.
LATEST NEWS
11 ವರ್ಷದ ಬಾಲಕ ಹೃದಯಘಾ*ತಕ್ಕೆ ಬ*ಲಿ
ಹಾಸನ : ಹೃದಯಾಘಾ*ತ ಎಂಬುದು ಇತ್ತೀಚೆಗೆ ಸಾಮಾನ್ಯವಾಗಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದವರೂ ಹೃದಯಾ*ಘಾತಕ್ಕೆ ಒಳಗಾಗುತ್ತಿದ್ದಾರೆ. ರಾಜ್ಯದಲ್ಲಿ ಮತ್ತೊಂದು ಕಳವಳಕಾರಿ ಘಟನೆ ನಡೆದಿದ್ದು, 11 ವರ್ಷದ ಬಾಲಕ ಹೃದಯಾ*ಘಾತಕ್ಕೆ ಬ*ಲಿಯಾಗಿದ್ದಾನೆ. ಈ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಸಚಿನ್ ಮೃ*ತ ಬಾಲಕ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ಸಚಿನ್, ಮನೆಯಲ್ಲಿ ಟಿವಿ ನೋಡುತ್ತಿದ್ದ ವೇಳೆ ಹೃದಯಾ*ಘಾತವಾಗಿದೆ.
ಇದನ್ನೂ ಓದಿ : ಮನೆಯಲ್ಲಿ ಹಲ್ಲಿ ಕಾಟವೇ? ಈ ಸಿಂಪಲ್ ಮನೆಮದ್ದು ಟ್ರೈ ಮಾಡಿ
ಟಿವಿ ನೋಡುತ್ತಲೇ ಕುಸಿ*ದು ಬಿದ್ದ ಮಗನನ್ನು ಮಾತನಾಡಿಸಲು ಮನೆಯವರು ಪ್ರಯತ್ನಿಸಿದ್ದು, ಏನು ಮಾತನಾಡದೆ ಇರೋದನ್ನು ಗಮನಿಸಿ ಪೋಷಕರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಆಲೂಕು ಸರ್ಕಾರಿ ಆಸ್ಪತ್ರೆಗೆ ಕರೆತರುವ ಮುನ್ನವೇ ಬಾಲಕ ಸಾ*ವನ್ನಪ್ಪಿದ್ದ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.
FILM
ಕನ್ನಡದ ಸೀರಿಯಲ್ನಲ್ಲಿ ಮಿಂಚುತ್ತಿರುವ ಉಡುಪಿಯ ಬೆಡಗಿ
ಬೆಂಗಳೂರು/ಮಂಗಳೂರು: ಸಿನೆಮಾದಲ್ಲಿ ನಟಿಸಬೇಕು ಅನ್ನೋದು ಎಲ್ಲರ ಕನಸು. ಆದರೆ ಇಲ್ಲೊಬ್ಬಾಕೆ ನಟಿಗೆ ಸೀರಿಯಲ್ನಲ್ಲಿ ನಟಿಸಬೇಕು ಎಂಬ ಆಸೆ. ಆದರೆ ಆಕೆಗೆ ಮಾತ್ರ ಮೊದಲು ಒಲಿದು ಬಂದಿದ್ದು ಸಿನೆಮಾದಲ್ಲಿ ನಟಿಸುವ ಅವಕಾಶ. ಇದೀಗ ಆ ನಟಿ ಸುರ್ವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅವನು ಮತ್ತು ಶ್ರಾವಣಿ’ ಧಾರವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೌದು, ಈ ಧಾರಾವಾಹಿಯಲ್ಲಿ ಶ್ರಾವಣಿಯಾಗಿ ಕಾಣಿಸಿಕೊಂಡಿರುವ ಇಶಿಕಾ ಶೆಟ್ಟಿಗಾರ್ ಮೂಲತಃ ಉಡುಪಿಯವರಾಗಿದ್ದಾರೆ.
ಶ್ರಾವಣಿ ಪಾತ್ರದ ಇಶಿಕಾ ಶೆಟ್ಟಿಗಾರ್ ಮೂಲತಃ ಉಡುಪಿಯವರಾಗಿದ್ದು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಈಕೆ 9 ನೇ ತರಗತಿಯಲ್ಲಿದ್ದಅಗಲೇ ಸಿನೆಮಾ ನಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಊರ್ವಿ, ಗರುಡ, ಮನದ ಮರೆಯಲಿ ಸೇರಿದಂತೆ ನಾಳ್ಕೈದು ಸಿನೆಮಾಗಳಲ್ಲಿ ನಟಿಸಿದ್ದಾರೆ. ಬಳಿಕ ಕಾನೂನು ಪದವಿ ಮುಗಿಸಿರುವ ಇವರು ಸೀರಿಯಲ್ ನಲ್ಲಿ ಆಭಿನಯಿಸುವತ್ತ ಒಲವು ಮಾಡಿದ್ದಾರೆ. ಹೀಗಾಗಿ ಲುಕ್ ಟೆಸ್ಟ್ ಕೂಡಾ ಕೊಟ್ಟಿದ್ದಾರೆ.
ಜಾನಿ ಮಾಸ್ಟರ್ ಪತ್ನಿಗೂ ಬಂತು ಕಂಟಕ..! ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್..!!
ಇದೇ ವೇಳೆ ‘ಅವನು ಮತ್ತು ಶ್ರಾವಣಿ’ ಧಾರಾವಾಹಿಗೆ ರಿಪ್ಲೇಸ್ಮೆಂಟ್ ಪಾತ್ರಕ್ಕೆ ಕರೆ ಬರುತ್ತದೆ. ರಿಪ್ಲೇಸ್ಮೆಂಟ್ ಪಾತ್ರ ಆಗಿದ್ದರಿಂದ ಜನರಿಗೆ ಇಷ್ಟ ಆಗ್ಬೋದಾ ಅನ್ನುವ ಮೈಂಡ್ ಸೆಟ್ ನಲ್ಲಿ ಇವರು ಕೊನೆಗೂ ಪಾತ್ರಕ್ಕೆ ಸೈ ಎಂದು ಹೇಳಿದ್ದಾರೆ. ಇದೀಗ ಧಾರಾವಾಹಿ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ. ಈ ಧಾರಾವಾಹಿಯಲ್ಲಿ ನಟನೆ ಆರಂಭಿಸಿದ ಮೇಲೆ ಆಫರ್ಗಳು ಬರುತ್ತಿದೆ ಎಂದು ಇಶಿಕಾ ಶೆಟ್ಟಿಗಾರ್ ಹೇಳಿದ್ದಾರೆ.