ಮಂಗಳೂರಿನ ಜನರ ಜೀವಕ್ಕೆ ಬೆಲೆ ಇಲ್ವಾ.?: ಜಿಲ್ಲಾಡಳಿತಕ್ಕೆ ಶಾಸಕ ಖಾದರ್ ಖಡಕ್ ಪ್ರಶ್ನೆ…
ಮಂಗಳೂರಿನ ಜನರ ಜೀವಕ್ಕೆ ಬೆಲೆ ಇಲ್ವಾ.?: ಜಿಲ್ಲಾಡಳಿತಕ್ಕೆ ಶಾಸಕ ಖಾದರ್ ಖಡಕ್ ಪ್ರಶ್ನೆ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇದಿನೇ ಹೆಚ್ಚುತ್ತಿರುವ ಕೊರೊನಾ ಹಾವಳಿ ಹಿನ್ನಲೆ ಮಾಜಿ ಸಚಿವ, ಶಾಸಕ ಯುಟಿ ಖಾದರ್ ಗರಂ ಆಗಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕೊರೊನಾದಿಂದ ದ.ಕ ಜಿಲ್ಲೆಯಲ್ಲಿ 5 ಸಾವು ಆಗಿದೆ. ಜಿಲ್ಲಾಡಳಿತ, ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು.
ಪಾಸಿಟಿವ್ ಆದ ಮೂರೇ ದಿನದಲ್ಲಿ ಸಾಯುತ್ತಿದ್ದಾರೆ. ಮಂಗಳೂರಿನಲ್ಲಿ ಜನರ ಜೀವಕ್ಕೆ ಬೆಲೆ ಇಲ್ವಾ.
ಜಿಲ್ಲಾಡಳಿತ ಇದನ್ನು ತಮಾಷೆಯಾಗಿ ತೆಗೆದುಕೊಳ್ಳಬಾರದು. ಜನರು ಸಾವುಗೀಡಾಗಿರೋದಕ್ಕೆ ಕಾರಣ ಏನು?. ಇದನ್ನು ಆರೋಗ್ಯ ಇಲಾಖೆ ತನಿಖೆ ಮಾಡಲಿ ಎಂದವರು ಆಗ್ರಹಿಸಿದ್ದಾರೆ.
ಒಬ್ಬ ಸೋಂಕಿತ ಸತ್ರೆ 150 ಜನರಿಗೆ ಸೋಂಕು ತಗಲುತ್ತದೆ. ಇದು ವೈದ್ಯಕೀಯ ಅಧ್ಯಯನದಿಂದ ಧೃಡಪಟ್ಟಿದೆ.
ಹೀಗಿರುವಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮೂಲವನ್ನೇ ಪತ್ತೆ ಹಚ್ಚಲು ಆಗಿಲ್ಲ. ಅಷ್ಟೇ ಅಲ್ಲದೇ ಯಾವುದೇ ವಿಚಾರದಲ್ಲೂ ಜಿಲ್ಲಾಡಳಿತದಲ್ಲಿ ಸ್ಪಷ್ಟತೆ ಇಲ್ಲ ಎಂದು ಜಿಲ್ಲಾಡಳಿತದ ಬಗ್ಗೆ ಕಿಡಿಕಾರಿದ್ದಾರೆ.
ಬಳಿಕ ಮಾತು ಮುಂದುವರಿಸಿದ ಅವರು ಜನರಿಗೆ ಕಿಟ್ ಕೊಟ್ರೆ ವೈರಸ್ ಹೋಗೋದಿಲ್ಲ. ವೈರಸ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಕ್ರಮ ಕೈಗೊಂಡಿಲ್ಲ ಎಂದು ದ.ಕ ಜಿಲ್ಲಾಡಳಿತ ದ ವಿರುದ್ಧ ಮಾಜಿ ಸಚಿವ ಯುಟಿ ಖಾದರ್ ಆರೋಪ ಹೊರಿಸಿದ್ದಾರೆ.
ಬಳಿಕ ಕೇಂದ್ರ ಸರ್ಕಾರದ 20 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ವಿಚಾರದ ಬಗ್ಗೆ ಮಾತನಾಡಿದ ಖಾದರ್, ಎಲ್ಲಾ ದೇಶಗಳಂತೆ ಭಾರತದಲ್ಲೂ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.
ಇದ್ರಲ್ಲಿ ರೈತನಿಗೆ ಸಾಲ ಜಾಸ್ತಿ ಯೇ ಹೊರತು ಬಡ್ಡಿ ಮನ್ನ ಮಾಡಲಿಲ್ಲ. ಆವತ್ತು ಪ್ರತಿಯೋರ್ವರ ಅಕೌಂಟ್ ಗೆ 15 ಲಕ್ಷ ಹಾಕೋದಾಗಿ ಹೇಳಿದ್ರಿ.
ಈವಾಗ ಪ್ರತಿಯೋರ್ವರ ಅಕೌಂಟ್ ಗೆ 15 ಸಾವಿರ ರೂಪಾಯಿ ಹಾಕಿ. ಆವಾಗ ಎರಡೂ ಮಾತು ಉಳಿಸಿಕೊಂಡ ರೀತಿ ಆಗುತ್ತದೆ.
ಆದ್ರೆ ರಾಜ್ಯ ಸರ್ಕಾರ ಹೊಸ ಯೋಜನೆ ಘೋಷಣೆ ಮಾಡಿಲ್ಲ. ಮೀನುಗಾರಿಕೆ ಮತ್ತು ನೇಕಾರರಿಗೆ ಹಳೆಯ ಯೋಜನೆಯನ್ನೇ ಮತ್ತೊಮ್ಮೆ ಪ್ರಕಟಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಳಿಕ ‘ವಂದೆ ಮಾತರಂ’ ವಿಮಾನದ ಬಗ್ಗೆ ಪ್ರಸ್ತಾಪ ಮಾಡಿದ ಅವರು, ‘ವಂದೇ ಭಾರತ್ ಮಿಷನ್’ ನಲ್ಲಿ ಮಂಗಳೂರು ವಿಮಾನ ನಿಲ್ದಾಣ ನಿರ್ಲಕ್ಷ್ಯವಾಗಿದೆ.
ಡಿವಿ ಸದಾನಂದ ಗೌಡರ ಮುತುವರ್ಜಿಯಿಂದ ಕೇವಲ ಒಂದು ವಿಮಾನ ಬಂದಿದೆ. ಆದ್ರೆ ಕೇರಳದ ಕಣ್ಣೂರು ವಿಮಾನ ನಿಲ್ದಾಣ ಹತ್ತಾರು ವಿಮಾನ ಬರುತ್ತಿದೆ.
ಮಂಗಳೂರಿಗೆ ಯಾವುದೇ ರಾಷ್ಟ್ರದಿಂದ ವಿಮಾನ ಬರುತ್ತಿಲ್ಲ. ಇದನ್ನೆಲ್ಲಾ ದ.ಕ ಸಂಸದ ರಿಗೆ ಕೂತಲ್ಲಿಯೇ ಕೆಲಸ ಮಾಡಬಹುದು.
ಆದ್ರೆ ಸಂಸದ ನಳಿನ್ ಕುಮಾರ್ ಕಟೀಲ್ ಕಿಟ್ ಕೊಡೋದ್ರಲ್ಲೇ ಬ್ಯುಸಿ ಇದ್ದಾರೆ. ಕಾರ್ಪೋರೆಟರ್ ಮಾಡುವ ಕೆಲಸವನ್ನು ಸಂಸದರು ಮಾಡುತ್ತಿದ್ದಾರೆ.
ಮಂಗಳೂರಿಗೆ ವಿಮಾನ ಕಡಿಮೆ ಸಂಖ್ಯೆಯಲ್ಲಿ ಬಂದರೆ ಅದಕ್ಕೆ ಸಂಸದರ ನಿರ್ಲಕ್ಷ್ಯವೇ ಕಾರಣ ಎಂದು ಮಂಗಳೂರಿನಲ್ಲಿ ಮಾಜಿ ಸಚಿವ ಯುಟಿ ಖಾದರ್ ಆಕ್ರೋಶ ಹೊರಹಾಕಿದ್ದಾರೆ.
LATEST NEWS
ಅಣ್ಣನ ಪ್ರೀತಿಗೆ ತಮ್ಮ ಬ*ಲಿ; ತಾಯಿಯ ಮುಂದೆಯೇ ಮಗನ ಕೊ*ಲೆ
ಮಂಗಳೂರು/ಕಲಬುರಗಿ: ಯುವ ಸಮಾಜದ ಪ್ರೀತಿಗೆ ಮನೆಯಲ್ಲಿ ವಿರೋಧ ಬರುವುದು ಸಹಜ. ಅದರಲ್ಲೂ ಹುಡುಗಿಯ ವಿಚಾರದಲ್ಲಿ ಇದು ಹೆಚ್ಚಾಗಿಯೇ ಕಾಣಬಹುದು. ವಿಪರ್ಯಾಸವೆಂದರೆ ಅಣ್ಣನ ಪ್ರೇಮದ ವಿಚಾರದಲ್ಲಿ ತಮ್ಮ ಬಲಿ*ಯಾದ ಘಟನೆ ನಡೆದಿದೆ.
ಕಲಬುರಗಿ ನಗರದ ಹೊರವಲಯದಲ್ಲಿರುವ ನಾಗನಹಳ್ಳಿ ಗ್ರಾಮದಲ್ಲಿ ಸುಮಿತ್ ಮಲ್ಲಾಬಾದ್ ಎಂಬ 19 ವರ್ಷದ ಯುವಕನನ್ನು ಭೀಕ*ರವಾಗಿ ಕೊ*ಲೆ ಮಾಡಲಾಗಿದೆ. ತಂದೆ-ತಾಯಿಯೊಂದಿಗೆ ಮುಂಬೈನಲ್ಲಿ ವಾಸವಾಗಿದ್ದ ಸುಮಿತ್, ಮುಂಬೈನಲ್ಲಿ ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದ. ಕಳೆದ ವಾರವಷ್ಟೇ ತಾಯಿಯೊಂದಿಗೆ ಕಲಬುರಗಿಗೆ ಆಗಮಿಸಿದ್ದ. ಊರಲ್ಲಿ ಸುಮಿತ್ ಸಹೋದರ ಸಚಿನ್ ಮನೆಯಲ್ಲಿ ವಾಸವಾಗಿದ್ದ. ಸಚಿನ್ ನಾಗನಹಳ್ಳಿ ಗ್ರಾಮದ ತನ್ನದೆ ಏರಿಯಾದ ಯುವತಿಯನ್ನು ಪ್ರೀತಿಸುತ್ತಿದ್ದನಂತೆ. ಈ ವಿಚಾರ ಯುವತಿಯ ಮನೆಯವರಿಗೆ ಗೊತ್ತಾಗಿ ಸಾಕಷ್ಟು ಭಾರಿ ನ್ಯಾಯ ಪಂಚಾಯಿತಿ ಮಾಡಿದ್ದರಂತೆ. ಆದರೆ ಅದು ಬಗೆಹರೆದಿರಲಿಲ್ಲ. ನಿನ್ನೆ ಸಂಜೆ (ಸೆ.21) ಸಚಿನ್ ಮನೆಗೆ ಯುವತಿಯ ಸಹೋದರ ಮತ್ತು ಆತನ ಕೆಲ ಸ್ನೇಹಿತರು ಬಂದಿದ್ದಾಗ ಸಚಿನ್ ಮನೆಯಲ್ಲಿರದ ಕಾರಣ ಆತನ ತಾಯಿ ಮತ್ತು ಸಹೋದರನ ಜೊತೆ ಗಲಾಟೆ ತೆಗೆದಿದ್ದಾರೆ. ಬಳಿಕ ಗಲಾಟೆ ವಿಕೋಪಕ್ಕೆ ತೆರಳಿ ಸುಮಿತ್ನನ್ನ ಚಾ*ಕುವಿನಿಂದ ಚು*ಚ್ಚಿ ಎಸ್ಕೇಪ್ ಆಗಿದ್ದಾರೆ.
ಇತ್ತ ಸುಮಿತ್ಗೆ ಚಾ*ಕು ಚುಚ್ಚಿ*ದ್ದನ್ನು ಕಂಡ ತಾಯಿ, ಮಗನನ್ನ ಉಳಿಸಿಕೊಳ್ಳಲು ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹನ್ನೆರೆಡು ಗಂಟೆಗಳ ಕಾಲ ನಡೆದ ಚಿಕಿತ್ಸೆ ಫಲಕಾರಿಯಾಗಿದೆ ಇಂದು ಬೆಳಗ್ಗೆ (ಸೆ.22) ಸಾವನ್ನ*ಪ್ಪಿದ್ದಾನೆ.
ಈ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಅದೇನೆ ಆಗಲಿ ಯುವತಿಯ ವಿಚಾರದಲ್ಲಿ ಏನು ಮಾಡದ ಅಮಾಯಕ ಯುವಕ ಬಲಿಯಾಗಿರೋದು ನಿಜಕ್ಕೂ ದುರಂತವೆ ಸರಿ.
LATEST NEWS
ತಿರುಪತಿಯಿಂದ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ತುಪ್ಪ ಸಾಗಿಸುವ ಟ್ಯಾಂಕರ್ಗಳಿಗೆ ಜಿಪಿಎಸ್ ಅಳವಡಿಕೆ
ಆಂಧ್ರಪ್ರದೇಶ/ಮಂಗಳೂರು: ತಿರುಪತಿ ತಿರುಮಲದಲ್ಲಿ ಲಡ್ಡು ವಿವಾದ ಉಂಟಾದ ಬಳಿಕ ಸರಕಾರ ನಂದಿನಿ ತುಪ್ಪಕ್ಕೆ ಬೇಡಿಕೆ ಇಟ್ಟಿದೆ. ಒಂದು ತಿಂಗಳ ಹಿಂದೆ ಟಿಟಿಡಿ ಕೆಎಂಎಫ್ಗೆ ಟೆಂಡರ್ ನೀಡಿದ ನಂತರ ನಂದಿನಿ ತುಪ್ಪ ಪೂರೈಕೆಯನ್ನು ಪುನಃ ಆರಂಭಿಸಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ ಕೆ ಜಗದೀಶ್ ಹೇಳಿದ್ದಾರೆ.
ತಿರುಪತಿ ಲಡ್ಡು ವಿವಾದದ ಬಳಿಕ ಕೆಎಮ್ಎಫ್ ಹೈ ಅಲರ್ಟ್:
“ನಾವು ಒಂದು ತಿಂಗಳ ಹಿಂದೆ ತುಪ್ಪವನ್ನು(ಟಿಟಿಡಿಗೆ) ಸರಬರಾಜು ಮಾಡುತ್ತಿದ್ದೇವೆ. ನಾವು ವಾಹನಗಳಿಗೆ ಜಿಪಿಎಸ್ ಸಿಸ್ಟಮ್ ಮತ್ತು ಜಿಯೋ ಲೊಕೇಶನ್ ಸಾಧನಗಳನ್ನು ಅಳವಡಿಸಿದ್ದೇವೆ. ಇದರಿಂದ ವಾಹನ ಎಲ್ಲಿ ನಿಲ್ಲುತ್ತವೆ ಎಂಬುದನ್ನು ನಾವು ಕಂಡುಹಿಡಿಯಬಹುದು. ಇದು ಎಲ್ಲಿಯೂ ಕಲಬೆರಕೆ ಮಾಡದಂತೆ ನೋಡಿಕೊಳ್ಳಲು ಸಹಾಯಕವಾಗುತ್ತದೆ” ಎಂದು ಜಗದೀಶ್ ತಿಳಿಸಿದ್ದಾರೆ.
ಕೆಎಂಎಫ್, ಟಿಟಿಡಿಗೆ 350 ಟನ್ ತುಪ್ಪ ಪೂರೈಸುವ ಗುತ್ತಿಗೆ ಪಡೆದುಕೊಂಡಿದೆ. ಅಗತ್ಯ ಬಿದ್ದಾಗ ತುಪ್ಪ ಪೂರೈಕೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ. ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಮುಖ್ಯಮಂತ್ರಿ ಆರೋಪ ಮಾಡಿದ್ದರು. ಅಲ್ಲದೆ ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.
LATEST NEWS
ಪಂಚೆ ಉಟ್ಟು ದೇಸೀ ಸ್ಟೈಲ್ ಅಡುಗೆ ಮಾಡಿದ ಬ್ರಿಟಿಷ್ ಬಾಣಸಿಗ..! ಫಿದಾ ಆದ ನೆಟ್ಟಿಗರು
ಹೆಲ್ಸ್ ಕಿಚನ್ ಹಾಗೂ ಮಾಸ್ಟರ್ ಚೆಫ್ ನಂತಹ ಜನಪ್ರಿಯ ಕಾರ್ಯಕ್ರಮಗಳ ನಿರೂಪಕ ಗಾರ್ಡನ್ ರಾಮ್ಸೆ ಇದೀಗ ತನ್ನ ವೇಷಭೂಷಣದ ಮೂಲಕ ಗಮನ ಸೆಳೆದಿದ್ದಾರೆ. ಬ್ರಿಟಿಷ್ ಸೆಲೆಬ್ರಿಟಿ ಬಾಣಸಿಗ ಗಾರ್ಡನ್ ಜೇಮ್ಸ್ ರಾಮ್ಸೆ ಅವರು ತಮ್ಮ ಡಿಫರೆಂಟ್ ಶೈಲಿಯ ಕುಕಿಂಗ್ ಗಳಿಗೆ ಹೆಸರುವಾಸಿಯಾಗಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹೊಸ ಹೊಸ ಅವತಾರದಲ್ಲಿ ಅಡುಗೆ ಮಾಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಸ್ಟೈಲ್ಆಗಿ ಪಂಚೆ ತೊಟ್ಟು ದಕ್ಷಿಣ ಕನ್ನಡ ಭಾರತೀಯ ಶೈಲಿಯ ಅಡುಗೆಗಳನ್ನು ಮಾಡಿದ್ದು ಈ ಕುರಿತ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಕಾಶ್ಮೀರದಿಂದ ಕರ್ನಾಟಕಕ್ಕೆ ಬರುತ್ತಿದ್ದ ಸೇನೆಯ ರೈಲನ್ನು ಸ್ಫೋಟಿಸಲು ಯತ್ನ
ಈ ಕುರಿತ ವಿಡಿಯೋವನ್ನು historyinmemes(ಹಿಸ್ಟೋರಿ ಇನ್ ಮೀಮ್ಸ್) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಸ್ಥಳೀಯ ಭಾರತೀಯ ಉಡುಗೆ ತೊಟ್ಟು ಅಡುಗೆ ಮಾಡಿದ ಗಾರ್ಡನ್ ರಾಮ್ಸೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ಸೆ.20ರದು ಹಂಚಿಕೊಂಡಿದ್ದ ವೀಡಿಯೋ 12 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದೆ.