ಪಂಪ್ ವೆಲ್ ಫ್ಲೈಓವರ್ ಗೆ ಹೊಸ ನಾಮಕರಣ: ಕಿಡಿಗೇಡಿಗಳನ್ನು ಜೈಲಿಗಟ್ಟಿ ಎಂದ ಶಾಸಕ ಯುಟಿ ಖಾದರ್..!
ಮಂಗಳೂರು: ಮಂಗಳೂರಿನ ಪಂಪ್ ವೆಲ್ ಫ್ಲೈಓವರ್ನಲ್ಲಿ ಸಾವರ್ಕರ್ ಹೆಸರಲ್ಲಿ ಫ್ಲೆಕ್ಸ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಯು.ಟಿ. ಖಾದರ್,
ಪಂಪ್ ವೆಲ್ ಸರ್ಕಲ್ ಗೆ ಮಹಾವೀರ ವೃತ್ತ ಎಂದು ಹೆಸರು ಇಡಲಾಗಿದೆ. ಈಗ ಮತ್ತೆ ಸಾವರ್ಕರ್ ಹೆಸರು ಯಾಕೆ ಎಂದು ಮಾಜಿ ಸಚಿವ, ಕಿಡಿಕಾರಿದ್ದಾರೆ.
ಮಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಅವರು, ಪಂಪ್ ವೆಲ್ ಫ್ಲೈಓವರ್ ನಲ್ಲಿ ಸಾವರ್ಕರ್ ಹೆಸರಲ್ಲಿ ಫ್ಲೆಕ್ಸ್ ಹಾಕಿದವರು ಯಾರು ಎನ್ನುವುದರ ಬಗ್ಗೆ ತನಿಖೆಯಾಗಲಿ.
ಫ್ಲೆಕ್ಸ್ ಹಾಕಿದವರ ವಿರುದ್ಧ ಸರ್ಕಾರ ಹಾಗೂ ಜಿಲ್ಲಾಡಳಿತ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಫ್ಲೆಕ್ಸ್ ಹಾಕಿದವರನ್ನು ಪತ್ತೆಹಚ್ಚದಿದ್ದರೆ ಪೊಲೀಸರ ವೈಫಲ್ಯ ಆಗುತ್ತದೆ ಎಂದಿದ್ದಾರೆ.
ಅಲ್ಲದೇ ಫ್ಲೆಕ್ಸ್ ಹಾಕಿದವರನ್ನು ಪತ್ತೆ ಹಚ್ಚದಿದ್ರೆ ಸಂಸದರ, ಶಾಸಕರು ಕಿಡಿಗೇಡಿಗಳಿಗೆ ಬೆಂಬಲ ಕೊಟ್ಟಂತೆ ಆಗುತ್ತಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಕಿಡಿಗೇಡಿಗಳನ್ನು ಪತ್ತೆಹಚ್ಚುವ ಕಾರ್ಯ ಸರ್ಕಾರ, ಜಿಲ್ಲಾಡಳಿತಕ್ಕೆ ಬಿಡುತ್ತಿದ್ದೇನೆ, ಜನರು ಈ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ ಎಂದವರು ಭರವಸೆ ನೀಡಿದ್ದಾರೆ.
ಇನ್ನು ಬಡವರಿಗೆ ಚಿಕಿತ್ಸೆ ಬಗ್ಗೆ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಗೆ ಈಗ ಸರ್ಕಾರಿ ಆಸ್ಪತ್ರೆಯಿಲ್ಲ.
ಕೊರೊನಾಕ್ಕಾಗಿ ವೆನ್ಲಾಕ್ ಆಸ್ಪತ್ರೆ ಖಾಲಿ ಮಾಡಿದ್ದಾರೆ. ವೆನ್ಲಾಕ್ ಆಸ್ಪತ್ರೆ ಖಾಲಿ ಮಾಡುವಾಗ ಹೇಳಿಲ್ಲ.
ಈಗ ಬಡವರ್ಗದ ಜನ ಸಂಕಷ್ಟ ಪಡುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಬಡವರಿಗೆ ಹಣ ಕಟ್ಟಲು ಆಗಲ್ಲ.
ಬೆಂಗಳೂರಿನ ರೀತಿ ಮಂಗಳೂರು ಅಲ್ಲ, ಬೆಂಗಳೂರಿನಲ್ಲಿ 10 ಸರ್ಕಾರಿ ಆಸ್ಪತ್ರೆ ಇದೆ, ಮಂಗಳೂರಿನಲ್ಲಿ ಇರುವುದು ಒಂದೇ ಸರ್ಕಾರಿ ಆಸ್ಪತ್ರೆ.
ವೆನ್ಲಾಕ್ ತಕ್ಷಣ ಒಪಿಡಿ ಆರಂಭ ಮಾಡಬೇಕು, ಜಿಲ್ಲಾಡಳಿತ ಬಡವರ ಕಷ್ಟವನ್ನು ಅರಿಯಬೇಕು ಎಂದು ಖಾದರ್ ಇದೇ ಸಂದರ್ಭದಲ್ಲಿ ಆಗ್ರಹಿಸಿದರು.