ಮಂಗಳೂರು ನಗರ ದಕ್ಷಿಣದ ಟ್ಯಾಕ್ಸಿ ಚಾಲಕರಿಗೆ ಫುಡ್ ಕಿಟ್ ವಿತರಿಸಿದ ಶಾಸಕ ವೇದವ್ಯಾಸ್ ಕಾಮತ್
ಮಂಗಳೂರು ನಗರ ದಕ್ಷಿಣದ ಟ್ಯಾಕ್ಸಿ ಚಾಲಕರಿಗೆ ಫುಡ್ ಕಿಟ್ ವಿತರಿಸಿದ ಶಾಸಕ ವೇದವ್ಯಾಸ್ ಕಾಮತ್
ಮಂಗಳೂರು: ಮಂಗಳೂರು ನಗರ ದಕ್ಷಿಣ ವಿಧಾನಸಭಾ ವ್ಯಾಪ್ತಿಯ ಟ್ಯಾಕ್ಸಿ ಚಾಲಕರಿಗೆ ಇಂದು (ಎಪ್ರಿಲ್ 28) ಶಾಸಕರ ಅಸೋಸಿಯೇಷನ್ ಮೂಲಕ ಶಾಸಕ ವೇದವ್ಯಾಸ್ ಕಾಮತ್ ಆಹಾರದ ಕಿಟ್ ಗಳನ್ನು ವಿತರಿಸಿದರು.
ಮಂಗಳೂರು ನಗರ ದಕ್ಷಿಣ ವಿಧಾನಸಭಾ ವ್ಯಾಪ್ತಿಯಲ್ಲಿ ನೂರಾರು ಟ್ಯಾಕ್ಸಿ ಚಾಲಕರು ಕಾರ್ಯ ನಿರ್ವಹಿಸುತ್ತಿದ್ದಾರೆ.
ಲಾಕ್ ಡೌನ್ ಹಿನ್ನೆಲೆಯಲ್ಲಿ ದುಡಿಮೆ ಇಲ್ಲದೆ ಮನೆಯಲ್ಲೇ ಇರಬೇಕಾದಂತಹ ಪರಿಸ್ಥಿತಿಯಲ್ಲಿ, ಟ್ಯಾಕ್ಸಿ ಚಾಲಕರ ಅಸೋಸಿಯೇಷನ್ ಇದರ ಪ್ರಮುಖರೂ ನಮ್ಮ ಪಕ್ಷದ ಹಿರಿಯರೂ ಆಗಿರುವ ಮೋನಪ್ಪ ಭಂಡಾರಿ ಅವರ ಮೂಲಕ ನನ್ನಲ್ಲಿ ಮನವಿ ಮಾಡಿಕೊಂಡಿದ್ದರು.
ಆ ಪ್ರಕಾರ ನಮ್ಮ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ಸಹಕಾರದೊಂದಿಗೆ ಇಂದು ಟ್ಯಾಕ್ಸಿ ಚಾಲಕರಿಗೆ ಇಂದು ಕಿಟ್ ವಿತರಿಸಲಾಯಿತು ಎಂದವರು ತಿಳಿಸಿದ್ದಾರೆ.
ಮಂಗಳೂರು ನಗರ ಪ್ರದೇಶ ಸಂಪೂರ್ಣ ಸ್ಥಬ್ದವಾಗಿದೆ. ಇಂದು ಎಲ್ಲರ ಸ್ಥಿತಿಯೂ ಒಂದೇ ತೆರನಾಗಿದೆ.
ಹಾಗಾಗಿ ಯಾರಿಗೆ ಆಹಾರ ಸಾಮಾಗ್ರಿಗಳ ಕಿಟ್ ಹೆಚ್ಚು ಅವಶ್ಯಕವಾಗಿದೆಯೋ ಅಂತಹವರನ್ನು ಗುರುತಿಸಿ ಕಿಟ್ ವಿತರಿಸಲಾಗುತ್ತದೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಈ ಸಂಧರ್ಭದಲ್ಲಿ ಬಿಜೆಪಿ ಮುಖಂಡರಾದ ಮೋನಪ್ಪ ಭಂಡಾರಿ,ವಿಜಯ್ ಕುಮಾರ್ ಶೆಟ್ಟಿ, ರೂಪಾ ಡಿ ಬಂಗೇರ,
ಜೆ ಸುರೇಂದ್ರ, ಭಾಸ್ಕರ್ ಚಂದ್ರ ಶೆಟ್ಟಿ, ರಮೇಶ್ ಕಂಡೆಟ್ಟು,ಟ್ಯಾಕ್ಸಿ ಚಾಲಕರ ಅಸೋಸಿಯೇಷನ್ ಇದರ ಪ್ರಮುಖರು ಉಪಸ್ಥಿತರಿದ್ದರು.
LATEST NEWS
ದೇವಳಗಳನ್ನು ಸರ್ಕಾರದಿಂದ ಮುಕ್ತಿಗೊಳಿಸಿ-ಪೇಜಾವರ ಶ್ರೀ
ಉಡುಪಿ: ಧಾರ್ಮಿಕ ಶ್ರದ್ದಾ ಕೇಂದ್ರಗಳು ಸರ್ಕಾರದ ಕೈಯಲ್ಲಿ ಇರಬಾರದು. ಅದು ಹಿಂದೂ ಸಂಸ್ಥೆಗಳ ಕೈಯಲ್ಲಿರಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದು ತಿರುಪತಿ ಲಡ್ಡು ಪ್ರಸಾದ ಘಟನೆಯಿಂದ ಸತ್ಯವಾಗಿ ನಮಗೆ ಕಾಣುತ್ತದೆ. ಹೀಗಾಗಿ ದೇವಸ್ಥಾನವನ್ನು ಶೀಘ್ರವಾಗಿ ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಬೇಕು ಎಂದು ಪೇಜಾವರ ವಿಶ್ವಪ್ರಸನ್ನ ಶ್ರೀಗಳು ಹೇಳಿದರು.
ತಿರುಪತಿ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅವರು, ಲಡ್ಡು ಪ್ರಸಾದಕ್ಕೆ ದನದ ತುಪ್ಪದ ಬದಲು ಪ್ರಾಣಿ ಜನ್ಯ ಕೊಬ್ಬಿನ ಮಿಶ್ರಣ ಬಳಕೆ ಮಾಡಿರುವ ವಿಚಾರ ಕೇಳಿ ಖೇದವಾಗಿದೆ. ಮೀನಿನ ಎಣ್ಣೆ, ಹಂದಿ ಹಸುವಿನ ಕೊಬ್ಬ ಬಳಸಿ ಪ್ರಸಾದ ತಯಾರಿಸಿರುವುದು ಸಮಾಜಕ್ಕೆ ಭಗವಂತನಿಗೆ ಬಗೆದಿರುವ ಅಪಚಾರ. ಇಂತಹ ಕೆಲಸಕ್ಕೆ ಸರ್ಕಾರ ಮುಂದಾಗಿದ್ದು ಖಂಡನೀಯ ಎಂದರು.
ತಿಮ್ಮಪ್ಪನ ಪ್ರಸಾದದಲ್ಲಿ ಪ್ರಾಣಿ ಕೊಬ್ಬಿನ ಕಲಬೆರಕೆ; ಪ್ರಾಯಶ್ಚಿತ ದೀಕ್ಷೆ ಕೈಗೊಂಡ ಪವನ್ ಕಲ್ಯಾಣ್..!!
ತಿರುಪತಿ ಶ್ರೀನಿವಾಸನನ್ನು ಗೋರಕ್ಷಕ ಎಂದು ಕಾಣುತ್ತೇವೆ. ಅಂತಹ ಶ್ರೀನಿವಾಸ ದೇವರಿಗೆ ಹಸು ಕೊಬ್ಬು ಬಳಸಿದ ಪ್ರಸಾದ ನೀಡಿರುವುದು ಅಪರಾಧ. ಹಿಂದೂಗಳ ಧಾರ್ಮಿಕ ಶ್ರದ್ಧೆಗೆ ಮಾಡಿರುವ ಹಲ್ಲೆ ಇದು. ಹಿಂದೂಗಳು ಉಪಯೋಗ ಅನರ್ಹವಾಗಿರುವ ವಸ್ತುಗಳನ್ನು ತಯಾರಿಸುವ ಅಡ್ಡೆಗಳನ್ನು ಕಂಡುಹಿಡಿದು ಶಿಕ್ಷಿಸಿ ಸಮಾಜದಲ್ಲಿ ಶಾಂತಿ ನೆಲೆಸುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಪೇಜಾವರ ಶ್ರೀಗಳು ಹೇಳಿದರು.
LATEST NEWS
ಹುಡುಗಿಗಾಗಿ ನಡೀತು ಜಗಳ; ಕಲ್ಲು ಎತ್ತಿ ಹಾಕಿ ಸ್ನೇಹಿತನನ್ನೇ ಕೊಂದ ಯುವಕ
ಮಂಗಳೂರು/ಬೆಂಗಳೂರು : ಇತ್ತೀಚೆಗೆ ಕೊ*ಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೀಗ ಮತ್ತೊಂದು ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅದೂ ಹುಡುಗಿಯ ವಿಚಾರಕ್ಕೆ.
ಉಡುಪಿ ಮೂಲದ ವರುಣ್ ಕೋಟ್ಯಾನ್ ಕೊ*ಲೆಯಾದವನು. ದಿವೇಶ್ ಕೊ*ಲೆಗೈದ ಆರೋಪಿ. ಸಂಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇಬ್ಬರು ಒಂದೇ ಹುಡುಗಿಯನ್ನು ಪ್ರೀತಿಸುತ್ತಿದ್ದುದೇ ಈ ಹ*ತ್ಯೆಗೆ ಕಾರಣ ಎಂದು ತಿಳಿದು ಬಂದಿದೆ. ಅವರಿಬ್ಬರು ರೂಮ್ ಮೇಟ್ಸ್ ಆಗಿದ್ದು, ಇಬ್ಬರ ನಡುವೆ ಪ್ರೀತಿ ವಿಚಾರಕ್ಕೆ ಗಲಾಟೆ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿದೆ. ಈ ವೇಳೆ ದಿವೇಶ್, ವರುಣ್ಗೆ ಚಾ*ಕುವಿನಿಂದ ಇರಿದು ಕೊ*ಲೆ ಮಾಡಿದ್ದಾನೆ.
ಇದನ್ನೂ ಓದಿ : ಮೂಡುಬಿದಿರೆ : ಚಿನ್ನದ ಸರ ಕಸಿದು ಪರಾರಿಯಾಗಿದ್ದ ಇಬ್ಬರು ಖತರ್ನಾಕ್ ಕಳ್ಳರ ಬಂಧನ
ಹುಡುಗಾಗಿ ನಡೆಯಿತು ಜಗಳ:
ವರುಣ್ ಹಾಗೂ ದಿವೇಶ್ ಇಬ್ಬರು ಸ್ನೇಹಿತರು. ಸಂಜಯ್ ನಗರದ ಗೆದ್ದಲಹಳ್ಳಿ ಬಾಡಿಗೆ ಮನೆಯಲ್ಲಿ ಕಳೆದ ಒಂದು ವರ್ಷದಿಂದ ವಾಸವಿದ್ದರು. ಯುವತಿ ಮೊದಲು ದಿವೇಶ್ನನ್ನ ಪ್ರೀತಿ ಮಾಡುತ್ತಿದ್ದಳು. ಬಳಿಕ ಅದೇ ಯುವತಿ ವರುಣ್ನ ಪ್ರೀತಿಸಲು ಶುರು ಮಾಡಿದ್ದಳಂತೆ. ಈ ವಿಚಾರಕ್ಕೆ ನಿನ್ನೆ ಶುಕ್ರವಾರ(ಸೆ.20) ರಾತ್ರಿ ಯುವಕರ ನಡುವೆ ಜಗಳವಾಗಿದೆ. ಶನಿವಾರ ಬೆಳಗ್ಗೆಯೂ ಜಗಳವಾಡಿಕೊಂಡು ಇಬ್ಬರು ಹೊರ ಬಂದಿದ್ದಾರೆ. ಈ ವೇಳೆ ಆರೋಪಿ ದಿವೇಶ್, ವರುಣ್ ನನ್ನು ಕಲ್ಲು ಎತ್ತಿ ಹಾಕಿ ಕೊ*ಲೆ ಮಾಡಿದ್ದಾನೆ. ದಿವೇಶ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ನಡೆಯುತ್ತಿದೆ.
LATEST NEWS
ತಿಮ್ಮಪ್ಪನ ಪ್ರಸಾದದಲ್ಲಿ ಪ್ರಾಣಿ ಕೊಬ್ಬಿನ ಕಲಬೆರಕೆ; ಪ್ರಾಯಶ್ಚಿತ ದೀಕ್ಷೆ ಕೈಗೊಂಡ ಪವನ್ ಕಲ್ಯಾಣ್..!!
ಆಂಧ್ರಪ್ರದೇಶ/ಮಂಗಳೂರು: ತಿರುಪತಿ ಲಡ್ಡು ವಿಚಾರದಲ್ಲಿ ಇಡೀ ದೇಶದಲ್ಲೇ ಭಾರೀ ಕೋಲಾಹಲ ಸೃಷ್ಟಿಯಾಗಿದೆ. ತಿರುಪತಿ ತಿರುಮಲಕ್ಕೆ ಬರುವ ಭಕ್ತರಿಗೆ ಪ್ರಸಾದ ರೂಪದಲ್ಲಿ ಕೊಡುವ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬಿನ ಅಂಶವನ್ನು ಕಲಬೆರಕೆ ಮಾಡಲಾಗುತ್ತಿತ್ತು ಅನ್ನುವುದು ತಡವಾಗಿ ಬೆಳಕಿಗೆ ಬಂದಿದೆ. ಇದೀಗ ತಿರುಪತಿ ಲಡ್ಡು ಅಪವಿತ್ರ ಆಗಿದೆ ಎಂದು ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಪ್ರಾಯಶ್ಚಿತ್ತ ದೀಕ್ಷಾ ಕೈಗೊಂಡಿದ್ದಾರೆ.
ತಿರುಪತಿ ತಿಮ್ಮಪ್ಪನ ಲಡ್ಡುವಿನಲ್ಲಿ ತುಪ್ಪದ ಜೊತೆಗೆ ಪ್ರಾಣಿಯ ಕೊಬ್ಬು, ಮೀನಿನ ಎಣ್ಣೆ ಬಳಕೆ ಮಾಡಿರೋದು ಲ್ಯಾಬ್ ಟೆಸ್ಟ್ನಲ್ಲಿ ಕನ್ಫರ್ಮ್ ಆಗಿದೆ. ಇನ್ನು ಈ ಬಗ್ಗೆ ತನಿಖೆಗಾಗಿ ವಿಶೇಷ ತಂಡ ರಚಿಸುವುದಾಗಿ ಪವನ್ ಕಲ್ಯಾಣ್ ಹೇಳಿದ್ದಾರೆ. ಅಲ್ಲದೇ ತಿಮ್ಮಪ್ಪನ ಸನ್ನಿಧಿಯಲ್ಲಿ ನಡೆದಿರುವ ಅಪವಿತ್ರದ ಪರಿಹಾರಕ್ಕಾಗಿ ಪವನ್ ಕಲ್ಯಾಣ್ರವರು ವ್ರತಕೈಗೊಂಡಿದ್ದಾರೆ.
11 ದಿನಗಳ ಕಾಲ ಡಿಸಿಎಂ ಪವನ್ ಕಲ್ಯಾಣ್ ಪ್ರಾಯಶ್ಚಿತ್ತ ದೀಕ್ಷಾ ಕೈಗೊಳ್ಳಲು ನಿರ್ಧರಿಸಿದ್ದಾರೆ. ಏಡುಕುಂಡಲವಾಡ ಕ್ಷಮಿಸು ಅಂತ ಪವನ್ ಪ್ರಾಯಶ್ಚಿತ್ತ ದೀಕ್ಷಾ ಕೈಗೊಳ್ಳಲಿದ್ದಾರೆ. ಇಂದು ಗುಂಟೂರಿನ ವೆಂಕ ದೇವಾಲಯದಲ್ಲಿ ಆಂಧ್ರ ಉಪಮುಖ್ಯಮಂತ್ರಿ ದೀಕ್ಷೆಯನ್ನು ಆರಂಭಿಸಲಿದ್ದಾರೆ. 11 ದಿನದ ಬಳಿಕ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಪವನ್ ಭೇಟಿ ನೀಡಿ ವ್ರತವನ್ನು ಕೈಬಿಡಲಿದ್ದಾರೆ. ಲಡ್ಡುವಿನಲ್ಲಿ ಪ್ರಾಣಿ ಕೊಬ್ಬು ಬಳಕೆ ವಿಚಾರ ರಾಜಕೀಯ ಜಟಾಪಟಿಗೂ ಕಾರಣವಾಗಿದೆ. ಇದೇ ವಿಚಾರಕ್ಕೆ ಟ್ವೀಟ್ ಮಾಡಿರೋ ಡಿಸಿಎಂ ಪವನ್ ಕಲ್ಯಾಣ್, ಸನಾತನ ಧರ್ಮ ರಕ್ಷಣಾ ಮಂಡಳಿ ರಚನೆ ಮಾಡಬೇಕು ಅಂತ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು..! ವೈಎಸ್ಆರ್ ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
ಇನ್ಮುಂದೆ ದೇಶಾದ್ಯಂತ ಇರುವ ದೇವಾಲಯಗಳಲ್ಲಿ ಇಂತಹ ಕೃತ್ಯಗಳು ನಡೆಯದಂತೆ ತಡೆಯಲು ಪ್ರತ್ಯೇಕ ಸಮಿತಿ ರಚಿಸಬೇಕು. ಸನಾತನ ಧರ್ಮ ರಕ್ಷಣಾ ಮಂಡಳಿಯನ್ನ ತಕ್ಷಣವೇ ಆರಂಭಿಸಬೇಕು. ಸನಾತನ ಧರ್ಮವನ್ನು ಅವಮಾನಿಸುವ ವಿಷಯಗಳನ್ನು ಕೊನೆಗಾಣಿಸಲು ಒಗ್ಗಟ್ಟಾಗಿ ಹೋರಾಡಬೇಕು ಎಂದು ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಹೇಳಿದ್ದಾರೆ.
ತಿರುಪತಿ ಲಡ್ಡು ಪ್ರಕರಣ: ಕರ್ನಾಟಕದ ಎಲ್ಲ ಮುಜರಾಯಿ ದೇಗುಲಗಳ ಪ್ರಸಾದ ಪರೀಕ್ಷೆಗೆ ಸೂಚನೆ
ಪವನ್ ಕಲ್ಯಾಣ್ ಟ್ವೀಟ್ಗೆ ನಟ ಪ್ರಕಾಶ್ ರಾಜ್ ಗೇಲಿ ಮಾಡಿದ್ದಾರೆ. ಸನಾತನ ಮಂಡಳಿ ಮಾಡೋದು ಬಿಟ್ಟು ಈ ಕೃತ್ಯ ಎಸಗಿದವರಿಗೆ ಮೊದಲು ಶಿಕ್ಷೆ ಕೊಡಿಸಿ ಅಂತ ಟೀಕೆ ಮಾಡಿದ್ದಾರೆ. “ಮಾನ್ಯ ಉಪ ಮುಖ್ಯಮಂತ್ರಿಗಳೇ.. ಈ ಘಟನೆ ನಿಮ್ಮ ಆಡಳಿತಾವಧಿಯಲ್ಲಿಯೇ ನಡೆದಿದೆ. ಈಗಾಗಲೇ ದೇಶದಲ್ಲಿ ಹಲವು ಸಮಸ್ಯೆಗಳಿವೆ. ಮತ್ತೆ ನೀವು ಹೊಸ ಸಮಸ್ಯೆಗಳನ್ನು ಇಲ್ಲಿಗೆ ತರುವುದು ಬೇಡ. ಮೊದಲು ಈ ಕೃತ್ಯ ಎಸಗಿದವರನ್ನು ಪತ್ತೆ ಹಚ್ಚಿ ಅವರಿಗೆ ಶಿಕ್ಷೆ ಕೊಡಿಸುವ ಕಡೆ ನಿಮ್ಮ ಗಮನವಿರಲಿ” ಎಂದು ನಟ ಪ್ರಕಾಶ್ ರಾಜ್ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.