ಪಾಲಿಕೆಯಲ್ಲಿ ಟಿ.ಡಿ.ಆರ್ ಸೆಲ್ ತೆರೆಯಲು ಶಾಸಕ ವೇದವ್ಯಾಸ್ ಕಾಮತ್ ಸೂಚನೆ….
ಪಾಲಿಕೆಯಲ್ಲಿ ಟಿ.ಡಿ.ಆರ್ ಸೆಲ್ ತೆರೆಯಲು ಶಾಸಕ ವೇದವ್ಯಾಸ್ ಕಾಮತ್ ಸೂಚನೆ….
ಮಂಗಳೂರು: ಅಪೂರ್ಣಗೊಂಡಿರುವ ಎಲ್ಲಾ ರಸ್ತೆ ಅಗಲೀಕರಣ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸುವ ಕುರಿತು,
ಸ್ಮಾರ್ಟ್ ಸಿಟಿ ಅಧಿಕಾರಿಗಳು, ಕಾರ್ಯಅಭಿಯಂತರ, ಸಹಾಯಕ ಅಭಿಯಂತರರು, ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಸಭೆ ನಡೆಸಿದರು.
ಸಭೆಯ ಬಳಿಕ ಮಾತನಾಡಿದ ಶಾಸಕ ಕಾಮತ್, ಮಂಗಳೂರು ನಗರದ ಭವಂತಿ ಸ್ಟ್ರೀಟ್, ಎಸ್.ಎಲ್ ಮಥಾಯಿಸ್ ರಸ್ತೆ, ಅಶೋಕ ನಗರ ಹಾಸೆಟ್ಟಿ ಸರ್ಕಲ್,
ಕದ್ರಿ ಕಂಬಳ, ಸ್ಟೇಟ್ ಬ್ಯಾಂಕ್ ನೆಲ್ಲಿಕಾಯಿ ರಸ್ತೆ, ಕ್ಲಾಕ್ ಟವರ್ ಜಂಕ್ಷನ್, ಬಿಜೈ ಕೆ.ಎಸ್.ಆರ್.ಟಿ.ಸಿ ರಸ್ತೆ, ಪಳ್ಳಿ ರಸ್ತೆ ಅಭಿವೃದ್ಧಿ,
ಲಾಲ್ ಭಾಗ್- ಕೆಪಿಟಿ ರಸ್ತೆ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಲು ಪ್ರತ್ಯೇಕ ಸಮಿತಿ ನೇಮಕ ಮಾಡಲಾವುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಈಗಾಗಲೇ ರಸ್ತೆ ಅಗಲೀಕರಣಕ್ಕೆ ಗುರುತಿಸಿರುವ ರಸ್ತೆಗಳಿಗೆ ಬೇಕಾದ ಜಾಗಗಳನ್ನು ಜಾಗದ ಮಾಲಿಕರ ಮನವೊಲಿಸಿ ಪಡೆಯಬೇಕು.
ಜಾಗ ನೀಡಿದ ದಾನಿಗಳಿಗೆ ಟಿ.ಡಿ.ಆರ್ ನೀಡಲು ಕ್ರಮ ಕೈಗೊಳ್ಳಲಾಗುವುದು.
ಹಾಗೂ ಸಾರ್ವಜನಿಕರ ಆಕ್ಷೇಪಣೆ ಇರುವ ಕಡೆಗಳಲ್ಲಿ ಈ ವಾರವೇ ಸಾರ್ವಜನಿಕರ ಹಾಗೂ ಜಾಗದ ಮಾಲಿಕರ ಮನವೊಲಿಸಲು ಸ್ವತಃ ನಾನು ಹಾಗೂ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿ ಸಾರ್ವಜನಿಕರ ಮನವೊಲಿಸಲಾಗುವುದು ಎಂದಿದ್ದಾರೆ.
ಟಿ.ಡಿ.ಆರ್ ಸಂಬಂಧಪಟ್ಟಂತೆ, ಟಿಡಿಆರ್ ನೀಡಲು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಪ್ರತ್ಯೇಕ ಟಿಡಿಆರ್ ಸೆಲ್ ತೆರೆಯಲು ನಿರ್ಧರಿಸಲಾಗಿದೆ.
ಅದರ ಪ್ರಕ್ರಿಯೆಗಳು ಶೀಘ್ರವೇ ಪ್ರಾರಂಭವಾಗುವುದು ಎಂದಿದ್ದಾರೆ.
ಸಭೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಶಾನಾಡಿ ಅಜಿತ್ ಹೆಗ್ಡೆ, ಸ್ಮಾರ್ಟ್ ಸಿಟಿ ಅಧಿಕಾರಿ ಮಹಮ್ಮದ್ ನಜೀರ್, ಮನಪಾ ಸ್ಥಾಯಿ ಸಮಿತಿ ಅದ್ಯಕ್ಷ ಪ್ರೇಮಾನಂದ ಶೆಟ್ಟಿ,
ನಗರ ಯೋಜನಾಧಿಕಾರಿ ಬಾಲಕೃಷ್ಣ ಗೌಡ, ಧರ್ಮರಾಜ್, ಸಾರ್ವಜನಿಕ ಹಿತರಕ್ಷಣಾ ವೇದಿಕೆಯ ಹನುಮಂತ್ ಕಾಮತ್,
ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು, ಸ್ಮಾರ್ಟ್ ಸಿಟಿ ಅಧಿಕಾರಿಗಳು, ನಗರ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.
LATEST NEWS
ದಸರಾ ಆನೆಗಳ ಮುಂದೆ ಸೆಲ್ಫೀ, ರೀಲ್ಸ್, ಫೋಟೋಶೂಟ್’ಗೆ ಇಲ್ಲ ಅವಕಾಶ
ಬೆಂಗಳೂರು : ಈಗೀಗ ಮೊಬೈಲ್ ಕ್ರೇಝ್ ಹೆಚ್ಚಾಗಿದೆ. ಹಾಗಾಗಿ ಸಿಕ್ಕ ಸಿಕ್ಕಲ್ಲಿ ರೀಲ್ಸ್, ಸೆಲ್ಫಿಗಳದೇ ಕಾರುಬಾರು. ಅಲ್ಲದೇ, ಕ್ಯಾಮೆರಾ ಹಿಡಿದು ಫೋಟೋಕ್ಕೆ ಫೋಸು ಕೊಡುವವರೇ ಹೆಚ್ಚು. ಆದರೆ, ಈ ಬಾರಿ ನೀವು ಮೈಸೂರು ದಸರಾ ಉತ್ಸವದ ಮೆರವಣಿಗೆಗೆ ಹೋಗಿ ಫೋಟೋ ತೆಗೆಯೋಣ, ಸೆಲ್ಫಿ ತೆಗೆಯೋಣ ಅಂದ್ಕೊಂಡ್ರೆ ಅವಕಾಶವಿಲ್ಲ.
ಈ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಖಡಕ್ ಸೂಚನೆ ನೀಡಿದ್ದಾರೆ. ಮೈಸೂರು ದಸರಾ ಉತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಬಂದಿರುವ ಸಾಕು ಆನೆಗಳ ಬಳಿ ಫೋಟೋ ಶೂಟ್, ಸೆಲ್ಫೀ, ರೀಲ್ಸ್ಗಳಿಗೆ ಅವಕಾಶ ನೀಡಬಾರದು ಎಂದಿದ್ದಾರೆ.
ಶುಕ್ರವಾರ(ಸೆ.20) ಮೈಸೂರಿನಲ್ಲಿ ದಸರಾ ಆನೆಗಳ ನಡುವಿನ ಕಾದಾಟ ನಡೆದಿತ್ತು. ಆ ಬಳಿಕ ಸಚಿವ ಈಶ್ವರ್ ಖಂಡ್ರೆ ಈ ಆದೇಶ ಹೊರಡಿದ್ದಾರೆ. ಯಾವುದೇ ಕಾರಣಕ್ಕೂ ಸಾರ್ವಜನಿಕರು ಆನೆಗಳ ಬಳಿ ದಂತ ಹಿಡಿದುಕೊಂಡು ಫೋಟೋ ಶೂಟ್ ಮಾಡಿಸುವುದು, ವೀಡಿಯೋ ಮಾಡುವುದು, ಸೆಲ್ಫೀ ಕ್ಲಿಕ್ಕಿಸುವುದು ಹಾಗೂ ರೀಲ್ಸ್ಗೆ ಮುಂದಾಗುವಂತಹ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಬಾರದು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇದನ್ನೂ ಓದಿ : ಬಿಗ್ ಬಾಸ್ ಆರಂಭಕ್ಕೂ ಮೊದಲೇ ಸ್ಪರ್ಧಿಗಳ ಹೆಸರು ಘೋಷಣೆ- ಯಾರದು?
ಮೈಸೂರು ದಸರಾ ಮಹೋತ್ಸವದ ಪ್ರಮುಖ ಸಾಕಾನೆಗಳ ಬಳಿ ಫೋಟೋಶೂಟ್ ಮತ್ತು ರೀಲ್ಸ್ ಮಾಡಲು ಅಧಿಕಾರಿಗಳೇ ಅವಕಾಶ ನೀಡಿದ್ದು, ಇದರಿಂದ ಆನೆಗಳು ವಿಚಲಿತವಾಗಿ ಅನುಚಿತವಾಗಿ ವರ್ತಿಸುತ್ತಿವೆ. ಕಳೆದ ಕೆಲವು ದಿನಗಳ ಹಿಂದೆ ಕಾಂಜನ್ ಮತ್ತು ಧನಂಜಯ ಆನೆಗಳ ನಡುವೆ ಕಾದಾಟ ನಡೆದಿತ್ತು.
LATEST NEWS
ಫರಂಗಿಪೇಟೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ, ಮೂವರಿಗೆ ಗಾಯ
ವಿಟ್ಲದಿಂದ ಮಂಗಳೂರು ವಿಮಾನ ನಿಲ್ದಾಣದ ಕಡೆಗೆ ಸಾಗುತ್ತಿದ್ದ ಕಾರೊಂದು ಮಾರ್ಗ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಮೂವರು ಗಾಯಗೊಂಡ ಘಟನೆ ಇಂದು ಬೆಳಗ್ಗೆ ಬಂಟ್ವಾಳ ತಾಲೂಕಿನ ಫರಂಗಿಪೇಟೆಯಲ್ಲಿ ಸಂಭವಿಸಿದೆ.
ಬೆಳಗ್ಗೆ 6.15 ರ ವೇಳೆಗೆ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಈ ಮೂವರು ಪ್ರಯಾಣಿರಿಗೆ ತುರ್ತಾಗಿ ವಿಮಾನ ನಿಲ್ದಾಣಕ್ಕೆ ಹೋಗಬೇಕಾಗಿದ್ದರಿಂದ ಅವರನ್ನು ಆಟೋ ರಿಕ್ಷಾದಲ್ಲಿ ವಿಮಾನ ನಿಲ್ದಾಣಕ್ಕೆ ಕಳುಹಿಸಿ ಕೊಡಲಾಯಿತು.
ವೇಗವಾಗಿ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಢಿಕ್ಕಿ ಹೊಡೆದು ಬಳಿಕ ಮನೆಯೊಂದರ ಅಂಗಳದಲ್ಲಿ ಮಗುಚಿ ಬಿದ್ದಿದೆ. ಬೆಳಗ್ಗಿನ ವೇಳೆ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು, ಇದರಿಂದಾಗಿ ಚಾಲಕನ ನಿಯಂತ್ರಣ ಕಳೆದುಕೊಂಡಿರ ಬೇಕೆಂದು ಶಂಕಿಸಲಾಗಿದೆ.
LATEST NEWS
ಮೆಟ್ರೋ ನಿಲ್ದಾಣದಲ್ಲಿಅನಾಹುತ; ಹಳಿಗೆ ಹಾರಿ ವ್ಯಕ್ತಿ ಆತ್ಮಹ*ತ್ಯೆ
ದೆಹಲಿ/ಮಂಗಳೂರು: ದೆಹಲಿಯ ಲೋಕ ಕಲ್ಯಾಣ್ ಮಾರ್ಗದ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಹಳಿಗೆ ಹಾರಿ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ನಡೆದಿದೆ. 28 ವರ್ಷದ ದೇವೇಂದ್ರಕುಮಾರ್ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.
ರಾಜಸ್ಥಾನ್ ಅಲ್ವಾರ್ ನಿವಾಸಿಯಾಗಿರುವ ದೇವೆಂದ್ರ ಕುಮಾರ್ ಲೋಕಕಲ್ಯಾಣ್ ಮಾರ್ಗ ಮೆಟ್ರೋ ನಿಲ್ದಾಣದ ಪ್ಲಾಟ್ ಫಾರ್ಮ್ ಸಂಖ್ಯೆ 2ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಪ್ರಕರಣದ ಕುರಿತು ತನಿಖೆ ನಡೆಯುತ್ತಿದ್ದು, ಶವವನ್ನು ಆರ್ಎಂಎಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.