Connect with us

    LATEST NEWS

    ಕಾರ್ಮಿಕರೊಂದಿಗೆ ಶಾಸಕರ ಸಂಧಾನ: ಒಳಚರಂಡಿ ವ್ಯವಸ್ಥೆ ಪುನರ್ ಪ್ರಾರಂಭಿಸಲು ಯಶಸ್ವಿಯಾದ ವೇದವ್ಯಾಸ್‌ ಕಾಮತ್‌

    Published

    on

    ಮಂಗಳೂರು: ನಗರದಲ್ಲಿ ಒಳಚರಂಡಿ ನಿರ್ವಹಣೆ ಕಾರ್ಮಿಕರ ಧರಣಿ ನಿರತ ಅಳಕೆ ಪ್ರದೇಶಕ್ಕೆ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಶುಕ್ರವಾರ ಭೇಟಿ ನೀಡಿ, ಕಾರ್ಮಿಕರ ಜತೆ ಸಂಧಾನ ಮಾತುಕತೆ ನಡೆಸಿದರು.

    ಶಾಸಕರು ನೀಡಿದ ಭರವಸೆ ಹಿನ್ನೆಲೆ ಒಳಚರಂಡಿ ವ್ಯವಸ್ಥೆಯನ್ನು ಪುನರ್ ಆರಂಭಿಸಲು ಕಾರ್ಮಿಕರು ನಿರ್ಧರಿಸಿದರು. ಇದರಿಂದ ನಗರದಲ್ಲಿ ಕಳೆದ ಕೆಲವು ದಿನಗಳಿಂದ ಬಿಗಡಾಯಿಸಿದ ಒಳಚರಂಡಿ ನಿರ್ವಹಣೆ ಸಮಸ್ಯೆಗೆ ಪರಿಹಾರ ಸಿಕ್ಕಂತಾಗಿದೆ.
    ಮಾ.13ರಿಂದ ಆರಂಭವಾದ ಹೊರಗುತ್ತಿಗೆ ನೌಕರರ ನೇರ ನೇಮಕಾತಿ/ ನೇರ ಪಾವತಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಧರಣಿ ಆರಂಭವಾಗಿದ್ದು, ರಾಜ್ಯದ ಪ್ರಮುಖ ನಗರ ಸೇರಿದಂತೆ ಮಂಗಳೂರು ಭಾಗದಲ್ಲೂ ಒಳಚರಂಡಿ ನಿರ್ವಹಣೆಯ ಕಾರ್ಮಿಕರು ಕಳೆದ 5 ದಿನಗಳಿಂದ ಪ್ರತಿಭಟನೆ ನಿರತರಾಗಿದ್ದರು. ಇದರಿಂದ ಮಂಗಳೂರು ನಗರದಲ್ಲಿ ಒಳಚರಂಡಿ ಸಮಸ್ಯೆ ಶುಕ್ರವಾರದ ವೇಳೆಗೆ ಬಿಗಡಾಯಿಸಿತ್ತು. ಈ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಮೇಯರ್, ಕಮಿಷನರ್ ಜತೆಗೂಡಿ ಕಾರ್ಮಿಕರೊಂದಿಗೆ ಸಭೆ ನಡೆಸಿದರು.
    ಸಭೆಯ ಬಳಿಕ ಶಾಸಕ ವೇದವ್ಯಾಸ್ ಕಾಮತ್ ಮಾತನಾಡಿ, ರಾಜ್ಯಾದ್ಯಂತ ಕಳೆದ 5 ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದು, ಕಾರ್ಮಿಕರು ನ್ಯಾಯಯುತವಾಗಿಯೇ ಹೋರಾಟ ಮಾಡುತ್ತಿದ್ದಾರೆ. ಅರ್ಹವಾಗಿಯೇ ಅವರಿಗೆ ಸವಲತ್ತುಗಳು ಸಿಗಬೇಕಾಗಿದೆ.

    ಆದರೆ ಇದರಿಂದ ಮಂಗಳೂರು ಜನರು ಭಾರೀ ತೊಂದರೆ ಅನುಭವಿಸುತ್ತಿರುವ ಬಗ್ಗೆ ಕಾರ್ಮಿಕರಿಗೆ ಮನವರಿಕೆ ಮಾಡಲಾಗಿದೆ. ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಭರವಸೆ ನೀಡಲಾಗಿದೆ.

    ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಕೂಡಲೇ ಕೊನೆಗೊಳಿಸಿ ಒಳಚರಂಡಿ ವ್ಯವಸ್ಥೆಯನ್ನು ಆರಂಭಿಸುವುದಾಗಿ ಕಾರ್ಮಿಕರು ಭರವಸೆ ನೀಡಿದ್ದಾರೆ ಎಂದರು.
    ಮಂಗಳೂರು ನಗರ ಆಯುಕ್ತರ ಚನ್ನಬಸಪ್ಪ ಮಾತನಾಡಿ, ಒಳಚರಂಡಿ ಕಾರ್ಮಿಕರ ಪ್ರತಿಭಟನೆಗೆ ನಮ್ಮ ಆಕ್ಷೇಪವಿಲ್ಲ. ಆದರೆ ಇದರಿಂದ ಸಾರ್ವಜನಿಕರ ಮೂಲ ಸೌಕರ್ಯಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಸಹಕಾರ ನೀಡಬೇಕು ಎಂದು ಆಗ್ರಹ ವ್ಯಕ್ತಪಡಿಸಿದರು.
    ಸಭೆಯಲ್ಲಿ ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ, ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಕಿಶೋರ್ ಕೊಟ್ಟಾರಿ, ಶಕೀಲಾ ಕಾವ, ಮಾಜಿ ಮೇಯರ್ ದಿವಾಕರ್, ಕಾರ್ಪೊರೇಟರ್‌ಗಳಾದ ಸುಧೀರ್ ಶೆಟ್ಟಿ ಕಣ್ಣೂರು, ಜಯಶ್ರೀ ಕುಡ್ವ ಮತ್ತಿತರರು ಉಪಸ್ಥಿತರಿದ್ದರು.
    ಕಾರ್ಮಿಕರಿಂದ ಸೂಕ್ತ ಸ್ಪಂದನೆ: ಸಭೆಯ ಬಳಿಕ ಧರಣಿ ಕುಳಿತ ಕಾರ್ಮಿಕರು ಮಾತನಾಡಿ, ಶಾಸಕ ವೇದವ್ಯಾಸ್ ಕಾಮತ್ ಅವರು ನಮ್ಮ ಸಮಸ್ಯೆಗಳನ್ನು ಆಲಿಸಿ, ಪ್ರಾಮಾಣಿಕವಾಗಿ ಸ್ಪಂದಿಸುವ ಭರವಸೆ ನೀಡಿದ್ದಾರೆ. ಪ್ರಮುಖವಾಗಿ ಮೂರು ಆಶ್ವಾಸನೆಗಳನ್ನು ನೀಡಿದ್ದು,

    ಈ ಹಿನ್ನಲೆಯಲ್ಲಿ ಒಳಚರಂಡಿ ನಿರ್ವಹಣಾ ಕಾಮಗಾರಿಯನ್ನು ಆರಂಭಿಸಲು ನಿರ್ಧರಿಸಿದ್ದೇವೆ. ರಾಜ್ಯಮಟ್ಟದಲ್ಲಿ ನಡೆಯುವ ಹೋರಾಟಕ್ಕೆ ನ್ಯಾಯಸಿಗುವತನಕ ನಮ್ಮ ಬೆಂಬಲ ಮುಂದುವರಿಯಲಿದೆ ಎಂದರು.

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    Trending