ಶಾಸಕ ವೇದವ್ಯಾಸ ಕಾಮತ್ ಆಟಾಟೋಪಗಳಿಗೆ ಕಡಿವಾಣ ಹಾಕಬೇಕಿದೆ: ಮುನೀರ್ ಕಾಟಿಪಳ್ಳ ಫೈರ್
ಶಾಸಕ ವೇದವ್ಯಾಸ ಕಾಮತ್ ಆಟಾಟೋಪಗಳಿಗೆ ಕಡಿವಾಣ ಹಾಕಬೇಕಿದೆ: ಮುನೀರ್ ಕಾಟಿಪಳ್ಳ ಫೈರ್
ಮಂಗಳೂರು: ಕೊರೊನಾ ಸೋಂಕು ಹರಡದಂತೆ ತಡೆಯಲು ಶ್ರಮಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಆಡಳಿತ ಪಕ್ಷದ ಜನಪ್ರತಿನಿಧಿಗಳೇ ವಿಘ್ನಗಳನ್ನು ಒಡ್ಡುತ್ತಿದ್ದಾರೆ.
ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಜಿಲ್ಲಾಡಳಿತದ ಎಲ್ಲಾ ಕೆಲಸಗಳಿಗೆ ಅನಗತ್ಯ ಮೂಗು ತೂರಿಸುತ್ತಿದ್ದಾರೆ.
ಆರೋಗ್ಯ ಕಾರ್ಯಕರ್ತರು, ಜಿಲ್ಲಾಡಳಿತ ನೇಮಿಸಿರುವ ಸರಕಾರಿ ನೌಕರರಿಗೆ ಮಾತ್ರ ಪ್ರವೇಶ ಇರುವ ನಗರದ ಸೀಲ್ ಡೌನ್ ಆದ ಪ್ರದೇಶಗಳಿಗೆ ಶಾಸಕ ವೇದವ್ಯಾಸ್ ಕಾಮತ್ ತನ್ನ ಕಾರ್ಯಕರ್ತರ ದಂಡು ಕಟ್ಟಿಕೊಂಡು ಭೇಟಿ ನೀಡಿದ್ದಾರೆ.
ಇದು ಲಾಕ್ ಡೌನ್ ನಿಯಮ ಮಾತ್ರ ಅಲ್ಲ ಕೊರೊನಾ ತಡೆ ಮಾರ್ಗದರ್ಶಿ ಸೂತ್ರದ ಗಂಭೀರ ಉಲ್ಲಂಘನೆಯಾಗಿದ್ದು,
ಶಾಸಕ ವೇದವ್ಯಾಸ್ ಕಾಮತ್ ಹಾಗೂ ಅವರೊಂದಿಗೆ ಸೀಲ್ ಡೌನ್ ಪ್ರದೇಶಗಳಿಗೆ ಭೇಟಿ ನೀಡಿದ ಬಿಜೆಪಿ ಕಾರ್ಯಕರ್ತರನ್ನು ತಕ್ಷಣವೇ ಕ್ವಾರಂಟೈನ್ ಮಾಡಬೇಕು.
ಹಾಗೂ ಮುಖ್ಯಮಂತ್ರಿಗಳು ಜಿಲ್ಲಾಡಳಿತದ ಕೆಲಸಗಳಲ್ಲಿ ಅನಗತ್ಯ ಮಧ್ಯ ಪ್ರವೇಶಿಸದಂತೆ ತನ್ನ ಪಕ್ಷದ ಜನಪ್ರತಿನಿಧಿಗಳಿಗೆ ಎಚ್ಚರಿಕೆ ನೀಡಬೇಕು ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಒತ್ತಾಯಿಸಿದ್ದಾರೆ.
ಆರಂಭದ ದಿನಗಳಲ್ಲೆ ಜಿಲ್ಲಾಡಳಿತದ ಕೈಕಟ್ಟಿ ಹಾಕುವ ಕೆಲಸಗಳನ್ನು ವೇದವ್ಯಾಸ ಕಾಮತ್ ಹಾಗೂ ಬಿಜೆಪಿಯ ಜನಪ್ರತಿನಿಧಿಗಳು ಮಾಡುತ್ತಾ ಬಂದಿದ್ದಾರೆ.
ಮೂರು ದಿನಗಳ ಸತತ ಕರ್ಫ್ಯೂ, ಪಾಸ್ ಗಳ ಬೇಕಾಬಿಟ್ಟಿ ವಿತರಣೆ, ಕೊರೊನಾ ಪೀಡಿತರ ಶವ ಸಂಸ್ಕಾರಕ್ಕೆ ಅಡ್ಡಿ ಮುಂತಾದ ವೈಫಲ್ಯಕ್ಕೆ ಈ ಮೂಗು ತೂರಿಸುವಿಕೆಯೇ ಕಾರಣ.
ಈ ರೀತಿ ಜಿಲ್ಲಾಡಳಿತದ ಕೈಕಟ್ಟಿ ಹಾಕುವ ರಾಜಕೀಯ ಆಟಗಳಿಂದ ಜಿಲ್ಲೆಯಲ್ಲಿ ಪರಿಹಾರ ಕ್ರಮ, ಕೊರೊನಾ ವೈರಸ್ ಹರಡುವಿಕೆ ತಡೆಯುವಲ್ಲಿ ವೈಫಲ್ಯಗಳು ಎದ್ದು ಕಾಣುತ್ತಿವೆ.
ಈಗ ಜಿಲ್ಲೆಯನ್ನು ಕಂಗೆಡಿಸಿರುವ ಬಂಟ್ವಾಳ ಕೊರೊನಾ ಪಾಸಿಟಿವ್ ಪ್ರಕರಣದ ಮೂಲ ಹಾಗೂ ಟ್ರಾಕ್ ಪತ್ತೆ ಹಚ್ಚಲು ಜಿಲ್ಲಾಡಳಿತಕ್ಕೆ ಇನ್ನೂ ಸಾಧ್ಯವಾಗಿಲ್ಲ.
ಇದರಿಂದ ಕೊರೊನಾ ವ್ಯಾಪಕಗೊಳ್ಳುವ ಭೀತಿ ಜಿಲ್ಲೆಯನ್ನು ಆವರಿಸಿದೆ. ಜನತೆ ಭಯದಿಂದ ಬದುಕುವಂತಾಗಿದೆ.
ಇಂತಹ ಗಂಭೀರ ಸನ್ನಿವೇಶದಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾದ ಪ್ರದೇಶಗಳನ್ನು ಸೀಲ್ ಡೌನ್ ಮಾಡಿ ರಾಷ್ಟ್ರೀಯ ನೀತಿಯಂತೆ,
ಅಂತಹ ಪ್ರದೇಶಗಳಿಗೆ ಹೊರಗಡೆಯ ಸಂಪರ್ಕವನ್ನು ಪೂರ್ಣವಾಗಿ ನಿಷೇಧಿಸಿ ವೈರಸ್ ಹರಡುವುದನ್ನು ತಡೆಯಲು ಜಿಲ್ಲಾಡಳಿತ ಹರಸಾಹಸ ಪಡುತ್ತಿದೆ.
ಸೀಲ್ ಡೌನ್ ಅಂದರೆ ಇಡೀ ಪ್ರದೇಶವೇ ಕ್ವಾರಂಟೈನ್ ಒಳಗಾದಂತೆ. ಅಲ್ಲಿನ ಜನರಿಗೆ ನೆರೆಹೊರೆಯ ಮನೆಗಳ ಸಂಪರ್ಕವೂ ಇರುವಂತಿಲ್ಲ.
ಮನೆಗಳಿಂದ ಹೊರ ಬರುವಂತಿಲ್ಲ. ಆರೋಗ್ಯ ಕಾರ್ಯಕರ್ತರು, ಜಿಲ್ಲಾಡಳಿತ ನೇಮಿಸಿರುವ ನೌಕರರು ಹೊರತುಪಡಿಸಿ ಮತ್ಯಾರೂ ಆ ಪ್ರದೇಶಕ್ಕೆ ಭೇಟಿ ನೀಡುವಂತಿಲ್ಲ.
ಕೊರೊನಾ ವೈರಸ್ ಹರಡುವ ಸಾಧ್ಯತೆ ಅತಿ ಹೆಚ್ಚಿರುವ ಅಂತಹ ಪ್ರದೇಶಗಳಿಗೆ ಭೇಟಿ ನೀಡುವುದು ದಂಡನಾರ್ಹ ಅಪರಾಧ.
ಇಷ್ಟೆಲ್ಲಾ ಅಪಾಯ ಇರುವ ಸಂದರ್ಭದಲ್ಲಿ ಶಾಸಕ ವೇದವ್ಯಾಸ ಕಾಮತ್ ಕಾರ್ಯಕರ್ತರ ದಂಡು ಕಟ್ಟಿ ಅಂತಹ ಪ್ರದೇಶಗಳಿಗೆ ಭೇಟಿ ನೀಡುತ್ತಿರುವುದು ಜಿಲ್ಲಾಡಳಿತದ ಪ್ರಯತ್ನವನ್ನು ವ್ಯರ್ಥಗೊಳಿಸುತ್ತದೆ.
ಶಾಸಕರ ಈ ಬೇಜವಾಬ್ದಾರಿತನ ಖಂಡನಾರ್ಹ. ಅಪಾಯಕಾರಿ ಸೀಲ್ ಡೌನ್ ಪ್ರದೇಶಗಳಲ್ಲಿ ಅಡ್ಡಾಡಿ, ಜನರೊಂದಿಗೆ ಬೆರೆತಿರುವ ವೇದವ್ಯಾಸ್ ಕಾಮತ್ ಮತ್ತವರ ತಂಡ ಕೊರೋನ ವೈರಸ್ ಅಪಾಯಕ್ಕೆ ತನ್ನನ್ನು ತಾನು ಒಡ್ಡಿಕೊಂಡಿದೆ.
ನಿಯಮದಂತೆ ಶಾಸಕರು ಹಾಗೂ ಅವರೊಂದಿಗೆ ಭೇಟಿ ನೀಡಿದ ತಂಡದಲ್ಲಿದ್ದ ಕಾರ್ಯಕರ್ತರನ್ನು ಕಡ್ಡಾಯ ಲಾಕ್ ಡೌನ್ ಗೆ ಒಳಪಡಿಸಬೇಕು
ಹಾಗೂ ಶಾಸಕರ ಆಟಾಟೋಪಗಳಿಗೆ ತಕ್ಷಣ ಕಡಿವಾಣ ಹಾಕಬೇಕು ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ರಾಜ್ಯ ಸರಕಾರವನ್ನು ಅಗ್ರಹಿಸಿದ್ದಾರೆ.
LATEST NEWS
ಅಣ್ಣನ ಪ್ರೀತಿಗೆ ತಮ್ಮ ಬ*ಲಿ; ತಾಯಿಯ ಮುಂದೆಯೇ ಮಗನ ಕೊ*ಲೆ
ಮಂಗಳೂರು/ಕಲಬುರಗಿ: ಯುವ ಸಮಾಜದ ಪ್ರೀತಿಗೆ ಮನೆಯಲ್ಲಿ ವಿರೋಧ ಬರುವುದು ಸಹಜ. ಅದರಲ್ಲೂ ಹುಡುಗಿಯ ವಿಚಾರದಲ್ಲಿ ಇದು ಹೆಚ್ಚಾಗಿಯೇ ಕಾಣಬಹುದು. ವಿಪರ್ಯಾಸವೆಂದರೆ ಅಣ್ಣನ ಪ್ರೇಮದ ವಿಚಾರದಲ್ಲಿ ತಮ್ಮ ಬಲಿ*ಯಾದ ಘಟನೆ ನಡೆದಿದೆ.
ಕಲಬುರಗಿ ನಗರದ ಹೊರವಲಯದಲ್ಲಿರುವ ನಾಗನಹಳ್ಳಿ ಗ್ರಾಮದಲ್ಲಿ ಸುಮಿತ್ ಮಲ್ಲಾಬಾದ್ ಎಂಬ 19 ವರ್ಷದ ಯುವಕನನ್ನು ಭೀಕ*ರವಾಗಿ ಕೊ*ಲೆ ಮಾಡಲಾಗಿದೆ. ತಂದೆ-ತಾಯಿಯೊಂದಿಗೆ ಮುಂಬೈನಲ್ಲಿ ವಾಸವಾಗಿದ್ದ ಸುಮಿತ್, ಮುಂಬೈನಲ್ಲಿ ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದ. ಕಳೆದ ವಾರವಷ್ಟೇ ತಾಯಿಯೊಂದಿಗೆ ಕಲಬುರಗಿಗೆ ಆಗಮಿಸಿದ್ದ. ಊರಲ್ಲಿ ಸುಮಿತ್ ಸಹೋದರ ಸಚಿನ್ ಮನೆಯಲ್ಲಿ ವಾಸವಾಗಿದ್ದ. ಸಚಿನ್ ನಾಗನಹಳ್ಳಿ ಗ್ರಾಮದ ತನ್ನದೆ ಏರಿಯಾದ ಯುವತಿಯನ್ನು ಪ್ರೀತಿಸುತ್ತಿದ್ದನಂತೆ. ಈ ವಿಚಾರ ಯುವತಿಯ ಮನೆಯವರಿಗೆ ಗೊತ್ತಾಗಿ ಸಾಕಷ್ಟು ಭಾರಿ ನ್ಯಾಯ ಪಂಚಾಯಿತಿ ಮಾಡಿದ್ದರಂತೆ. ಆದರೆ ಅದು ಬಗೆಹರೆದಿರಲಿಲ್ಲ. ನಿನ್ನೆ ಸಂಜೆ (ಸೆ.21) ಸಚಿನ್ ಮನೆಗೆ ಯುವತಿಯ ಸಹೋದರ ಮತ್ತು ಆತನ ಕೆಲ ಸ್ನೇಹಿತರು ಬಂದಿದ್ದಾಗ ಸಚಿನ್ ಮನೆಯಲ್ಲಿರದ ಕಾರಣ ಆತನ ತಾಯಿ ಮತ್ತು ಸಹೋದರನ ಜೊತೆ ಗಲಾಟೆ ತೆಗೆದಿದ್ದಾರೆ. ಬಳಿಕ ಗಲಾಟೆ ವಿಕೋಪಕ್ಕೆ ತೆರಳಿ ಸುಮಿತ್ನನ್ನ ಚಾ*ಕುವಿನಿಂದ ಚು*ಚ್ಚಿ ಎಸ್ಕೇಪ್ ಆಗಿದ್ದಾರೆ.
ಇತ್ತ ಸುಮಿತ್ಗೆ ಚಾ*ಕು ಚುಚ್ಚಿ*ದ್ದನ್ನು ಕಂಡ ತಾಯಿ, ಮಗನನ್ನ ಉಳಿಸಿಕೊಳ್ಳಲು ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹನ್ನೆರೆಡು ಗಂಟೆಗಳ ಕಾಲ ನಡೆದ ಚಿಕಿತ್ಸೆ ಫಲಕಾರಿಯಾಗಿದೆ ಇಂದು ಬೆಳಗ್ಗೆ (ಸೆ.22) ಸಾವನ್ನ*ಪ್ಪಿದ್ದಾನೆ.
ಈ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಅದೇನೆ ಆಗಲಿ ಯುವತಿಯ ವಿಚಾರದಲ್ಲಿ ಏನು ಮಾಡದ ಅಮಾಯಕ ಯುವಕ ಬಲಿಯಾಗಿರೋದು ನಿಜಕ್ಕೂ ದುರಂತವೆ ಸರಿ.
LATEST NEWS
ತಿರುಪತಿಯಿಂದ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ತುಪ್ಪ ಸಾಗಿಸುವ ಟ್ಯಾಂಕರ್ಗಳಿಗೆ ಜಿಪಿಎಸ್ ಅಳವಡಿಕೆ
ಆಂಧ್ರಪ್ರದೇಶ/ಮಂಗಳೂರು: ತಿರುಪತಿ ತಿರುಮಲದಲ್ಲಿ ಲಡ್ಡು ವಿವಾದ ಉಂಟಾದ ಬಳಿಕ ಸರಕಾರ ನಂದಿನಿ ತುಪ್ಪಕ್ಕೆ ಬೇಡಿಕೆ ಇಟ್ಟಿದೆ. ಒಂದು ತಿಂಗಳ ಹಿಂದೆ ಟಿಟಿಡಿ ಕೆಎಂಎಫ್ಗೆ ಟೆಂಡರ್ ನೀಡಿದ ನಂತರ ನಂದಿನಿ ತುಪ್ಪ ಪೂರೈಕೆಯನ್ನು ಪುನಃ ಆರಂಭಿಸಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ ಕೆ ಜಗದೀಶ್ ಹೇಳಿದ್ದಾರೆ.
ತಿರುಪತಿ ಲಡ್ಡು ವಿವಾದದ ಬಳಿಕ ಕೆಎಮ್ಎಫ್ ಹೈ ಅಲರ್ಟ್:
“ನಾವು ಒಂದು ತಿಂಗಳ ಹಿಂದೆ ತುಪ್ಪವನ್ನು(ಟಿಟಿಡಿಗೆ) ಸರಬರಾಜು ಮಾಡುತ್ತಿದ್ದೇವೆ. ನಾವು ವಾಹನಗಳಿಗೆ ಜಿಪಿಎಸ್ ಸಿಸ್ಟಮ್ ಮತ್ತು ಜಿಯೋ ಲೊಕೇಶನ್ ಸಾಧನಗಳನ್ನು ಅಳವಡಿಸಿದ್ದೇವೆ. ಇದರಿಂದ ವಾಹನ ಎಲ್ಲಿ ನಿಲ್ಲುತ್ತವೆ ಎಂಬುದನ್ನು ನಾವು ಕಂಡುಹಿಡಿಯಬಹುದು. ಇದು ಎಲ್ಲಿಯೂ ಕಲಬೆರಕೆ ಮಾಡದಂತೆ ನೋಡಿಕೊಳ್ಳಲು ಸಹಾಯಕವಾಗುತ್ತದೆ” ಎಂದು ಜಗದೀಶ್ ತಿಳಿಸಿದ್ದಾರೆ.
ಕೆಎಂಎಫ್, ಟಿಟಿಡಿಗೆ 350 ಟನ್ ತುಪ್ಪ ಪೂರೈಸುವ ಗುತ್ತಿಗೆ ಪಡೆದುಕೊಂಡಿದೆ. ಅಗತ್ಯ ಬಿದ್ದಾಗ ತುಪ್ಪ ಪೂರೈಕೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ. ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಮುಖ್ಯಮಂತ್ರಿ ಆರೋಪ ಮಾಡಿದ್ದರು. ಅಲ್ಲದೆ ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.
LATEST NEWS
ಪಂಚೆ ಉಟ್ಟು ದೇಸೀ ಸ್ಟೈಲ್ ಅಡುಗೆ ಮಾಡಿದ ಬ್ರಿಟಿಷ್ ಬಾಣಸಿಗ..! ಫಿದಾ ಆದ ನೆಟ್ಟಿಗರು
ಹೆಲ್ಸ್ ಕಿಚನ್ ಹಾಗೂ ಮಾಸ್ಟರ್ ಚೆಫ್ ನಂತಹ ಜನಪ್ರಿಯ ಕಾರ್ಯಕ್ರಮಗಳ ನಿರೂಪಕ ಗಾರ್ಡನ್ ರಾಮ್ಸೆ ಇದೀಗ ತನ್ನ ವೇಷಭೂಷಣದ ಮೂಲಕ ಗಮನ ಸೆಳೆದಿದ್ದಾರೆ. ಬ್ರಿಟಿಷ್ ಸೆಲೆಬ್ರಿಟಿ ಬಾಣಸಿಗ ಗಾರ್ಡನ್ ಜೇಮ್ಸ್ ರಾಮ್ಸೆ ಅವರು ತಮ್ಮ ಡಿಫರೆಂಟ್ ಶೈಲಿಯ ಕುಕಿಂಗ್ ಗಳಿಗೆ ಹೆಸರುವಾಸಿಯಾಗಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹೊಸ ಹೊಸ ಅವತಾರದಲ್ಲಿ ಅಡುಗೆ ಮಾಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಸ್ಟೈಲ್ಆಗಿ ಪಂಚೆ ತೊಟ್ಟು ದಕ್ಷಿಣ ಕನ್ನಡ ಭಾರತೀಯ ಶೈಲಿಯ ಅಡುಗೆಗಳನ್ನು ಮಾಡಿದ್ದು ಈ ಕುರಿತ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಕಾಶ್ಮೀರದಿಂದ ಕರ್ನಾಟಕಕ್ಕೆ ಬರುತ್ತಿದ್ದ ಸೇನೆಯ ರೈಲನ್ನು ಸ್ಫೋಟಿಸಲು ಯತ್ನ
ಈ ಕುರಿತ ವಿಡಿಯೋವನ್ನು historyinmemes(ಹಿಸ್ಟೋರಿ ಇನ್ ಮೀಮ್ಸ್) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಸ್ಥಳೀಯ ಭಾರತೀಯ ಉಡುಗೆ ತೊಟ್ಟು ಅಡುಗೆ ಮಾಡಿದ ಗಾರ್ಡನ್ ರಾಮ್ಸೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ಸೆ.20ರದು ಹಂಚಿಕೊಂಡಿದ್ದ ವೀಡಿಯೋ 12 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದೆ.