Connect with us

    DAKSHINA KANNADA

    MANGALURU : ಮೋದಿ ರೋಡ್ ಶೋ : ವಾಹನ ಸಂಚಾರಕ್ಕೆ ಬದಲಿ ಮಾರ್ಗ; ಇಲ್ಲಿದೆ ಡಿಟೇಲ್ಸ್

    Published

    on

    ಮಂಗಳೂರು : ಎಪ್ರಿಲ್ 14 ರ ಸಂಜೆ ಪ್ರಧಾನಿ ಮೋದಿ ಮಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ನಗರದ ನಾರಾಯಣಗುರು ವೃತ್ತದಿಂದ ನವ ಭಾರತ್ ವೃತ್ತದ ವರೆಗೆ ರೋಡ್ ಶೋ ನಡೆಯಲಿದೆ. ಪ್ರಧಾನಿ ರೋಡ್ ಶೋ ಹಿನ್ನೆಲೆಯಲ್ಲಿ ಈಗಾಗಲೇ ಭರದ ಸಿದ್ಧತೆ ನಡೆಸಲಾಗಿದೆ. ಭದ್ರತಾ ದೃಷ್ಟಿಯಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿದೆ.

    ಇನ್ನು ಪ್ರಧಾನಿ ಮೋದಿ ಆಗಮಿಸುವ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ಹಾಗೂ ವಾಹನ ಪಾರ್ಕಿಂಗ್ ವಿಚಾರದಲ್ಲಿ ಬದಲಾವಣೆ ಮಾಡಲಾಗಿದೆ‌. ಈ ಬದಲಾವಣೆ ಈ ಕೆಳಗಿನಂತಿದೆ. 14-04-2024 ರಂದು ಮಧ್ಯಾಹ್ನ 02-00 ಗಂಟೆಯಿಂದ ಪ್ರಧಾನ ಮಂತ್ರಿಗಳ ಕಾರ್ಯಕ್ರಮ ಮುಗಿಯುವವರೆಗೆ ಮಂಗಳೂರು ನಗರದಲ್ಲಿ ವಾಹನಗಳ ಸಂಚಾರಕ್ಕಾಗಿ ಪರ್ಯಾಯ ವ್ಯವಸ್ಥೆಯನ್ನು ಮಾಡಲಾಗಿದೆ. ವಾಹನಗಳ ಸಂಚಾರದ/ನಿಲುಗಡೆಯ ನಿಷೇಧಿತ ಸ್ಥಳ ಹಾಗೂ ವಾಹನಗಳ ಪಾರ್ಕಿಂಗ್ ಸ್ಥಳಗಳ ವಿವರ ಹೀಗಿದೆ.

    ವಾಹನ ಸಂಚಾರ ನಿಷೇಧಿತ ಮಾರ್ಗಗಳು

    1. ಪ್ರಧಾನಮಂತ್ರಿಗಳ ರೋಡ್ ಶೋ ನಡೆಯುವ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತ – ಲಾಲ್‌ಬಾಗ್ – ಬಲ್ಲಾಳ್‌ಬಾಗ್ – ಕೊಡಿಯಾಲ್ ಗುತ್ತು – ಬಿ.ಜಿ ಸ್ಕೂಲ್ ಜಂಕ್ಷನ್ – ಪಿ.ವಿ.ಎಸ್ – ನವಭಾರತ ವೃತ್ತ – ಹಂಪನಕಟ್ಟೆ ವರೆಗೆ ಮಧ್ಯಾಹ್ನದಿಂದ ಪ್ರಧಾನ ಮಂತ್ರಿಗಳ ಕಾರ್ಯಕ್ರಮ ಮುಗಿಯುವ ವರೆಗೆ ಎಲ್ಲಾ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
    2. ಕಾರ್ ಸ್ಟ್ರೀಟ್ – ಕುದ್ರೋಳಿ – ಕೂಳೂರು ಫೆರ್ರಿ ರಸ್ತೆ ಕಡೆಯಿಂದ ಅಡ್ಡ ರಸ್ತೆ ಮೂಲಕ ಎಂ.ಜಿ ರಸ್ತೆ ಪ್ರವೇಶಿಸುವ ಎಲ್ಲಾ ವಾಹನಗಳ ಸಂಚಾರವನ್ನು ನಿಷೇದಿಸಿದೆ.
    3. ಕೆ.ಎಸ್.ಅರ್.ಟಿ.ಸಿ, ಶ್ರೀದೇವಿ ಕಾಲೇಜು ರಸ್ತೆ, ಕೊಡಿಯಾಲ್ ಗುತ್ತು ರಸ್ತೆ, ಜೈಲು ರಸ್ತೆ ಹಾಗೂ ಬಿಜೈ ಚರ್ಚ್ ರಸ್ತೆ ಮೂಲಕ ಎಂ.ಜಿ ರಸ್ತೆಗೆ ಬರುವ ಅಡ್ಡ ರಸ್ತೆ ಹಾಗೂ ಬಂಟ್ಸ್ ಹಾಸ್ಟೆಲ್ ಮೂಲಕ ಪಿ.ವಿ.ಎಸ್ ಕಡೆಗೆ ಎಲ್ಲಾ ವಾಹನಗಳ ಸಂಚಾರವನ್ನು ನಿಷೇದಿಸಿದೆ.
    4. ಕೊಟ್ಟಾರ ಚೌಕಿ, ಉರ್ವಾ ಸ್ಟೋರ್, ಕೋಟೆಕಣಿ ಕ್ರಾಸ್‌ನಿಂದ (ಲೇಡಿಹಿಲ್) ನಾರಾಯಣಗುರು ವೃತ್ತದ ಕಡೆಗೆ ಬರುವ ಎಲ್ಲಾ ತರಹದ ವಾಹನ ಸಂಚಾರವನ್ನು ನಿಷೇಧಿಸಿದೆ.
    5. ಮಣ್ಣಗುಡ್ಡ ಜಂಕ್ಷನ್ ನಿಂದ ನಾರಾಯಣ ಗುರು ವೃತ್ತ (ಲೇಡಿಹಿಲ್) ದ ಕಡೆಗೆ ಎಲ್ಲಾ ತರಹದ ವಾಹನ ಸಂಚಾರವನ್ನು ನಿಷೇದಿಸಿದೆ.
    6. ಉರ್ವಾ ಮಾರ್ಕೆಟ್ ಕಡೆಯಿಂದ ನಾರಾಯಣ ಗುರು ವೃತ್ತ (ಲೇಡಿಹಿಲ್) ದ ಕಡೆಗೆ ಎಲ್ಲಾ ತರಹದ ವಾಹನ ಸಂಚಾರವನ್ನು ನಿಷೇದಿಸಿದೆ.
    7. ಕೆ.ಎಸ್.ಆರ್.ಟಿ.ಸಿ ಯಿಂದ ಲಾಲ್‌ಬಾಗ್ ಮುಖಾಂತರ ನಾರಾಯಣ ಗುರು ವೃತ್ತ (ಲೇಡಿಹಿಲ್)/ ಪಿವಿಎಸ್ ಕಡೆಗೆ ಎಲ್ಲಾ ತರಹದ ವಾಹನ ಸಂಚಾರವನ್ನು ನಿಷೇದಿಸಿದೆ.
    8. ಬಂಟ್ಸ್ ಹಾಸ್ಟೆಲ್, ಕರಂಗಲ್ಪಾಡಿ, ಕೋರ್ಟ್ ಕ್ರಾಸ್ ರಸ್ತೆಯಿಂದ ಪಿವಿಎಸ್, ಎಂ.ಜಿ. ರೋಡ್ ಗೆ ಬರುವ ಎಲ್ಲಾ ವಾಹನದ ಸಂಚಾರ ನಿಷೇಧಿಸಿದೆ.
    9. ಕೆ.ಎಸ್.ರಾವ್ ರೋಡ್, ಡೊಂಗರಕೇರಿ ರಸ್ತೆ, ಗದ್ದೆಕೇರಿ ರೋಡ್, ವಿ.ಟಿ. ರೋಡ್, ಶಾರದಾ ವಿದ್ಯಾಲಯ ರಸ್ತೆ ಯಿಂದ ನವಭಾರತ್ ಸರ್ಕಲ್ ಕಡೆಗೆ ಬರುವ ಎಲ್ಲಾ ವಾಹನದ ಸಂಚಾರ ನಿಷೇಧಿಸಿದೆ.
    10. ಎಂ.ಜಿ ರಸ್ತೆಯಿಂದ ಜೈಲ್ ರೋಡ್ ಮುಖಾಂತರ ಬಿಜೈ ಚರ್ಚ್ ರೋಡ್ ಕಡೆಗೆ ಬರುವ ಎಲ್ಲಾ ವಾಹನದ ಸಂಚಾರ ನಿಷೇಧಿಸಿದೆ.

     

    ವಾಹನ ಪಾರ್ಕಿಂಗ್ ನಿಷೇಧಿತ ಸ್ಥಳಗಳು

    1. ಬಜಪೆ ವಿಮಾನ ನಿಲ್ದಾಣದಿಂದ ಕೆಂಜಾರು – ಮರವೂರು- ಕಾವೂರು- ಬೊಂದೇಲ್- ಮೇರಿಹಿಲ್ – ಕೆ.ಪಿ.ಟಿ – ಕೊಟ್ಟಾರ ಚೌಕಿ – ಉರ್ವ ಸ್ಟೋರ್ – ಶ್ರೀ ನಾರಾಯಣ ಗುರು ವೃತ್ತ (ಲೇಡಿಹಿಲ್) ವರೆಗೆ ರಸ್ತೆಯ ಎರಡು ಬದಿಯಲ್ಲಿ .
    2. ರೋಡ್ ಶೋ ನಡೆಯುವ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತ – ಲಾಲ್‌ಬಾಗ್ – ಬಲ್ಲಾಳ್‌ಬಾಗ್ – ಕೊಡಿಯಾಲ್ ಗುತ್ತು – ಬಿ.ಜಿ ಸ್ಕೂಲ್ ಜಂಕ್ಷನ್ – ಪಿ.ವಿ.ಎಸ್ – ನವಭಾರತ ವೃತ್ತ – ಸಿಟಿ ಸೆಂಟರ್ – ಹಂಪನಕಟ್ಟೆ ವರೆಗೆ.
    3. ಹಂಪನಕಟ್ಟ – ಎಲ್.ಹೆಚ್.ಹೆಚ್ – ಬಾವುಟಗುಡ್ಡ – ಡಾ.ಅಂಬೇಡ್ಕರ್ ವೃತ್ತ – ಬಂಟ್ಸ್ ಹಾಸ್ಟೆಲ್ – ಭಾರತ್ ಬೀಡಿ – ಕದ್ರಿ ಕಂಬಳ – ಭಟ್ಟಗುಡ್ಡೆ ರಸ್ತೆಯ ಎರಡು ಬದಿ.
    4. ಕಾವೂರು – ಪಂಜಿಮೊಗೆರು – ಕೂಳೂರು – ೪ ನೇ ಮೈಲು – ಕೊಟ್ಟಾರಚೌಕಿ ರವರೆಗೆ ರಸ್ತೆಯ ಎರಡು ಬದಿ
    5. ಹಂಪನಕಟ್ಟ – ಎಲ್.ಹೆಚ್.ಹೆಚ್ – ಬಲ್ಮಠ ರೋಡ್ – ರೂಪಾ ಹೋಟೆಲ್ ರಸ್ತೆ – ಡಾ.ಅಂಬೇಡ್ಕರ್ ವೃತ್ತ – ಕಲೆಕ್ಟರ್ಸ್ ಗೇಟ್ ವೃತ್ತ – ಹಾರ್ಟಿಕಲ್ಚರ್ ಜಂಕ್ಷನ್ – ಸೈಂಟ್ ಆಗ್ನೇಸ್ – ಶಿವಭಾಗ್ – ನಂತೂರು ವೃತ್ತ – ಪದುವಾ – ಕೆ.ಪಿ.ಟಿ ವರೆಗೆ ಎರಡು ಬದಿ.
    6. ಬಿ.ಜಿ. ಜಂಕ್ಷನ್ – ಜೈಲ್ ರೋಡ್ – ಬಿಜೈ ಚರ್ಚ್ ರೋಡ್ ರವರೆಗೆ ಎರಡು ಬದಿ.

    ವಾಹನ ಸಂಚಾರದ ಪರ್ಯಾಯ ವ್ಯವಸ್ಥೆಯ ವಿವರ

    1. ಉಡುಪಿ ಕಡೆಯಿಂದ ಮಂಗಳೂರು ನಗರಕ್ಕೆ ಬರುವ ಎಲ್ಲಾ ಬಸ್ಸು ಹಾಗೂ ಎಲ್ಲಾ ರೀತಿಯ ವಾಹನಗಳು ಕೊಟ್ಟಾರ ಚೌಕಿ ಜಂಕ್ಷನ್ – ಕೆಪಿಟಿ ಜಂಕ್ಷನ್ – ನಂತೂರು ಜಂಕ್ಷನ್ – ಶಿವಭಾಗ್ ಜಂಕ್ಷನ್ – ಸೆಂಟ್ ಆಗ್ನೇಸ್ – ಹಾರ್ಟಿಕಲ್ಚರ್ ಜಂಕ್ಷನ್ – ಲೋವರ್ ಬೆಂದೂರು – ಕರಾವಳಿ ಜಂಕ್ಷನ್ – ಕಂಕನಾಡಿ ಜಂಕ್ಷನ್ – ಅವೇರಿ ಜಂಕ್ಷನ್ – ಮಿಲಾಗ್ರಿಸ್ ಜಂಕ್ಷನ್ – ಹಂಪನಕಟ್ಟ ಜಂಕ್ಷನ್ – ಕ್ಲಾಕ್ ಟವರ್ ಮೂಲಕ ಚಲಿಸುವುದು ಹಾಗೂ ಮಂಗಳೂರು ನಗರ ಸ್ಟೇಟ್‌ಬ್ಯಾಂಕ್ ಕಡೆಯಿಂದ ಉಡುಪಿ ಕಡೆಗೆ ಹೋಗುವ ವಾಹನಗಳು ಲೇಡಿ ಗೋಷನ್ – ಕ್ಲಾಕ್ ಟವರ್ – ರೈಲ್ವೇ ಸ್ಟೇಷನ್ ಜಂಕ್ಷನ್ – ನಂದಿಗುಡ್ಡ ರೋಡ್ – ಕೋಟಿಚೆನ್ನಯ್ಯ ಸರ್ಕಲ್ – ಕಂಕನಾಡಿ ಜಂಕ್ಷನ್ ಮೂಲಕ ಮುಂದೆ ಸಂಚರಿಸುವುದು.
    2. ಪಂಪುವೆಲ್ ಕಡೆಯಿಂದ ಮಂಗಳೂರು ನಗರಕ್ಕೆ ಬರುವ ಬಸ್ಸು ಹಾಗೂ ಎಲ್ಲಾ ರೀತಿಯ ವಾಹನಗಳು ಕರಾವಳಿ ಜಂಕ್ಷನ್ – ಕಂಕನಾಡಿ ಜಂಕ್ಷನ್ – ಅವೇರಿ ಜಂಕ್ಷನ್ – ಮಿಲಾಗ್ರಿಸ್ ಜಂಕ್ಷನ್ – ಹಂಪನಕಟ್ಟ ಜಂಕ್ಷನ್ – ಕ್ಲಾಕ್ ಟವರ್ ಮೂಲಕ ಚಲಿಸುವುದು ಹಾಗೂ ಮಂಗಳೂರು ನಗರ ಸ್ಟೇಟ್‌ಬ್ಯಾಂಕ್ ಕಡೆಯಿಂದ ಪಂಪ್‌ವಲ್ ಕಡೆಗೆ ಹೋಗುವ ವಾಹನಗಳು ಲೇಡಿ ಗೋಷನ್ – ಕ್ಲಾಕ್ ಟವರ್ – ರೈಲ್ವೇ ಸ್ಟೇಷನ್ ಜಂಕ್ಷನ್ – ನಂದಿಗುಡ್ಡ ರೋಡ್ – ಕೋಟಿಚೆನ್ನಯ್ಯ ಸರ್ಕಲ್ – ಕಂಕನಾಡಿ ಜಂಕ್ಷನ್ ಮೂಲಕ ಮುಂದೆ ಸಂಚರಿಸುವುದು.
    3. ಕಾರ್‌ಸ್ಟ್ರೀಟ್ – ಕುದ್ರೋಳಿ ಕಡೆಯಿಂದ ಬರುವ ಎಲ್ಲಾ ವಾಹನಗಳನ್ನು ಮಣ್ಣಗುಡ್ಡೆ, ಉರ್ವಾ ಮಾರ್ಕೆಟ್ ಮುಖಾಂತರ ಅಶೋಕನಗರ ಕೋಡಿಕಲ್ ಕ್ರಾಸ್ ಮೂಲಕ ಸಂಚರಿಸುವುದು.
    4. ಬಿಜೈ ಚರ್ಚ್ ಕಡೆಯಿಂದ ಬರುವ ವಾಹನಗಳು ಕೆ.ಎಸ್.ಆರ್.ಟಿ.ಸಿ. ಜಂಕ್ಷನ್ ಮುಖಾಂತರ ಕೊಟ್ಟಾರ ಕ್ರಾಸ್/ ಕುಂಟಿಕಾನದ ಕಡೆಗೆ ಸಂಚರಿಸುವುದು.
    5. ಕುಂಟಿಕಾನ ಕೊಟ್ಟಾರ ಕ್ರಾಸ್ ಕಡೆಯಿಂದ ಬರುವ ವಾಹನಗಳನ್ನು ಕೆ.ಎಸ್.ಆರ್.ಟಿ.ಸಿ. ಜಂಕ್ಷನ್ ನ ಮುಖಾಂತರ ಬಿಜೈ ಚರ್ಚ್ ಕಡೆಗೆ ಸಂಚರಿಸುವುದು.

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending