DAKSHINA KANNADA
ಶ್ರೀ ವಾಗೀಶ್ವರೀ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮೋಹನ ಬಂಗೇರ ಅವರಿಗೆ ಸಂಮಾನ
ಮಂಗಳೂರು: ‘ಈ ಶತಮಾನದ ಚಾರಿತ್ರಿಕ ಕಾರ್ಯಕ್ರಮದಲ್ಲಿ ಸಂಮಾನಿತರಾಗುವ ಯಕ್ಷಗಾನ ಕಲಾವಿದರು ಧನ್ಯರು’ ಎಂದು ಮಂಗಳೂರಿನ ಮಹಾಮಾಯಾ ದೇವಸ್ಥಾನದ ಅರ್ಚಕ ವಾಸುದೇವ ಭಟ್ ಹೇಳಿದರು.
ಅವರು ಶ್ರೀ ವಾಗೀಶ್ವರೀ ಶತಮಾನೋತ್ಸವ ಸಂಮಾನ- 3 ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿದ ಹಿರಿಯ ಕಲಾವಿದ ಮೋಹನ ಬಂಗೇರ ಅವರನ್ನು ಅಭಿನಂದಿಸಿ ಮಾತನಾಡಿದರು.
ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸಹಭಾಗಿತ್ವದಲ್ಲಿ 50 ಭಾನುವಾರ ನಿರಂತರ “ಸಂಮಾನ ,ಸಂಸ್ಮರಣೆ ಮತ್ತು ತಾಳಮದ್ದಳೆ “ಯು ಮಹಾಮಾಯಾ ದೇವಸ್ಥಾನದ ಅಂಗಣದಲ್ಲಿ ನಡೆಯುತ್ತಿದೆ.
ಕಳೆದ ಐದು ದಶಕಗಳಿಂದ ಮಂಗಳೂರು ಪರಿಸರದ ಬಿಕ್ಕರ್ನಕಟ್ಟೆ ಕೈಕಂಬದ ಶ್ರೀ ಸುಬ್ರಮ್ಮಣ್ಯೇಶ್ವರ ಸಂಘ, ಪಾಂಡೇಶ್ವರದ ಶ್ರೀ ಮಹಾಲಿಂಗೇಶ್ವರ ಸಂಘ ಹಾಗೂ ಪರಿಸರದ ಹವ್ಯಾಸಿ ಸಂಘಟನೆಗಳಲ್ಲಿ ಪ್ರಧಾನ ವೇಷಧಾರಿ, ಅರ್ಥಧಾರಿಯಾಗಿ, ಹಾಗೂ ನಿರ್ದೇಶಕನಾಗಿ, ಸಂಘಟಕರಾಗಿ ಕಲಾಸೇವೆ ಗೈದ 70 ವರ್ಷದ ಹಿರಿಯ ಹವ್ಯಾಸಿ ಕಲಾವಿದ ರಂಗನಟ, ಸಂಘಟಕ ಮೋಹನ ಬಂಗೇರ ಅವರನ್ನು ಸಂಮಾನಿಸಲಾಯಿತು.
ಬಂಗೇರ ಅವರು ಮಹಿಷಾಸುರ ,ಕೋಟಿ ,ಭಸ್ಮಾಸುರ ಮೊದಲಾದ ಪಾತ್ರಗಳಲ್ಲಿ ವೇಷಧಾರಿಯಾಗಿ , ತಾಳಮದ್ದಳೆಗಳಲ್ಲಿ ಸ್ರೀ ಪಾತ್ರಗಳ ನಿರ್ವಹಣೆಯಲ್ಲಿ ಸಿದ್ದಿ ಪ್ರಸಿದ್ದಿ ಪಡೆದಿದ್ದರು. ನಿವೃತ್ತ ಉಪನ್ಯಾಸಕ ಜಿ.ಕೆ.ಭಟ್ ಸೇರಾಜೆ ಅಂಭಿನಂದಿಸಿದರು.
ಸೋಮಪ್ಪ ಸನಿಲ್ ಸಂಸ್ಮರಣೆ
ವಾಗೀಶ್ವರೀ ಯಕ್ಷಗಾನ ಕಲಾವರ್ಧಕ ಸಂಘದ ಹಿರಿಯ ಅರ್ಥಧಾರಿಗಳಾಗಿ ಪರಿಸರದ ಹಲವು ಸಂಘಗಳಲ್ಲಿ ಸುಮಾರು ಏಳು ದಶಕಗಳ ಕಾಲ ಅರ್ಥಧಾರಿಯಾಗಿ ,ವೇಷಧಾರಿಯಾಗಿ ” ಪುರಾಣ ಸೋಂಪಣ್ಣ” ಎಂಬ ಖ್ಯಾತಿ ಪಡೆದಿದ್ದ ಸೋಮಪ್ಪ ಸನಿಲ್ ಅವರ ಸಂಸ್ಮರಣೆ ಮಾಡಲಾಯಿತು. ಸೋಮಪ್ಪನವರು 25 ವರ್ಷ ನಿರಂತರವಾಗಿ ಪ್ರತೀ ಭಾನುವಾರ ಕೊಲ್ಲೂರು ಮೂಕಾಂಬಿಕೆಯ ದರ್ಶನಮಾಡಿ ಸಂಜೆ ಸಂಘದ ತಾಳಮದ್ದಳೆಯಲ್ಲಿ ಅರ್ಥ ಹೇಳುತ್ತಿದ್ದರು.
ಉದ್ಯಮಿ ಶ್ರೀನಾಥ್ ಪ್ರಭು ಕದ್ರಿ ಅಧ್ಯಕ್ಷತೆ ವಹಿಸಿದ್ದರು.
ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ , ಅಧ್ಯಕ್ಷ ಸಿ.ಎಸ್.ಭಂಢಾರಿ , ಉದ್ಯಮಿ ಶಿವಪ್ರಸಾದ್ ಪ್ರಭು , ಸಂಜಯ ಕುಮಾರ್ ರಾವ್ ,ಸದಾನಂದ ಸೊಮಪ್ಪ ಅಂಚನ್,ಅಶೋಕ ಬೋಳೂರು ಉಪಸ್ಥಿತರಿದ್ದರು. ಪ್ರಧಾನ ಸಂಚಾಲಕ ಕದ್ರಿ ನವನೀತ ಶೆಟ್ಟಿ ನಿರೂಪಿಸಿದರು.
ಸಂಘದ ಕಲಾವಿದರಿಂದ ಶ್ರೀರಾಮ ಚರಿತಾಮೃತ ಸರಣಿ ಯ ” ತಾಟಕಿ ಸಂಹಾರ ” ತಾಳಮದ್ದಳೆ ನಡೆಯಿತು.
DAKSHINA KANNADA
ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…
ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.
DAKSHINA KANNADA
ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!
ನ್ಯೂಯಾರ್ಕ್ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಕಾರು ಪ್ರಯಾಣಿಸುತ್ತಿದ್ದು, ಎಲ್ಲಾ ಲೇನ್ಗಳನ್ನು ದಾಟಿ, ಹಂಪ್ ಮೇಲೆ ವೇಗವಾಗಿ ಏರಿತ್ತು. ಈ ಕಾರಣದಿಂದ ಕನಿಷ್ಟ 20 ಅಡಿಗಳಷ್ಟು ಮೇಲಕ್ಕೆ ಹಾರಿ ಸೇತುವೆಯ ಮುಂದೆ ಇದ್ದ ಮರಗಳಿಗೆ ಕಾರು ಅಪ್ಪಳಿಸಿದೆ. ಗುಜಾರಾತ್ ಮೂಲದ ಮೂವರು ಮಹಿಳೆಯರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಜರಾತ್ನ ಆನಂದ್ ಜಿಲ್ಲೆಯ ರೇಖಾಬೆನ್ ಪಟೇಲ್ , ಸಂಗೀತಾಬೆನ್ ಪಟೇಲ್ ಹಾಗೂ ಮನೀಶಾಬೆನ್ ಪಟೇಲ್ ಅವರು ಇಹಲೋಕ ತ್ಯಜಿಸಿದವರಾಗಿದ್ದಾರೆ.
ಕಾರು ನಿಗದಿಪಡಿಸಿದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿತ್ತು ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಪಘಾತದ ಪ್ರಮಾಣ ಎಷ್ಟಿತ್ತು ಮತ್ತು ಕಾರು ಎಷ್ಟು ಎತ್ತರಕ್ಕೆ ಹಾರಿತ್ತು ಅನ್ನೋದಿಕ್ಕೆ ಮರದ ಮೇಲಿರುವ ಕಾರಿನ ಅವಶೇಷಗಳು ಸಾಕ್ಷಿ ಎಂದು ಅವರು ಹೇಳಿದ್ದಾರೆ. ಮರದ ಮೇಲೆ ಬಿದ್ದ ಕಾರು ಛಿದ್ರಗೊಂಡು ಕಾರಿನ ಅವಶೇಷಗಳು ಚೆಲ್ಲಾಪಿಲ್ಲಿಯಾಗಿತ್ತು.
ದಕ್ಷಿಣ ಕೆರೊಲಿನಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ರಕ್ಷಣಾ ತಂಡಗಳು, ಪೊಲೀಸರು ಆಗಮಿಸಿದ್ದಾರೆ. ಅಪಘಾತದಲ್ಲಿ ಓರ್ವ ಬದುಕಿ ಉಳಿದಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು ಈಗಲೇ ಏನೂ ಹೇಳಲು ಆಗದ ಪರಿಸ್ಥಿತಿಯಲ್ಲಿದ್ದಾನೆ. ವಾಹನ ಅಪಘಾತವಾದ ತಕ್ಷಣ ಅದರಲ್ಲಿದ್ದ ತಾಂತ್ರಿಕ ವ್ಯವಸ್ಥೆಯ ಕಾರಣ ತಕ್ಷಣ ಕುಟುಂಬ ಸದಸ್ಯರಿಗೆ ಅಲರ್ಟ್ ಮೆಸೆಜ್ ರವಾನೆಯಾಗಿತ್ತು. ಹೀಗಾಗಿ ತಕ್ಷಣ ಕುಟುಂಬಸ್ಥರು ಕೂಡಾ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.
DAKSHINA KANNADA
ದೆಹಲಿಯ ರಾಣಾ ಪ್ರತಾಪ್ ನಗರದ ಜಿನ ಬಸದಿ 24ತೀರ್ಥಂಕರ ಪಂಚ ಕಲ್ಯಾಣ; ಮೂಡುಬಿದಿರೆ ಸ್ವಾಮೀಜಿ ಭಾಗಿ
ನವದೆಹಲಿ : ದೆಹಲಿಯ ರಾಣಾ ಪ್ರತಾಪ್ ನಗರ ದ ಜಿನ ಬಸದಿ 24ತೀರ್ಥಂಕರ ಪಂಚ ಕಲ್ಯಾಣವು ರಾಷ್ಟ್ರ ಸಂತ 108 ಉಪಾಧ್ಯಾಯ ಗುಪ್ತಿ ಸಾಗರ ಮುನಿ ರಾಜ್ ಮಾರ್ಗದರ್ಶನ ಪಾವನ ಸಾನ್ನಿಧ್ಯ ಸ್ವಸ್ತಿಶ್ರೀ ಡಾ. ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯ ವರ್ಯ ಮಹಾ ಸ್ವಾಮೀಜಿ ಗೌರವ ಉಪಸ್ಥಿತಿಯಲ್ಲಿ ಧಾರ್ಮಿಕ ವಿಧಿವಿಧಾನಗಳು ಜರುಗಿತು.
3 ಅಡಿ ಎತ್ತರ ದ ಪಂಚಲೋಹದ ಇಪ್ಪತ್ತನಾಲ್ಕು ತೀರ್ಥಂಕರ ಹಾಗೂ ವಿವಿಧ ಜಿನ ಬಿಂಬಗಳ ಸ್ಥಾಪನೆ ಬೆಳಿಗ್ಗೆ 7.30 ರಿಂದ 9.00ರ ವರೆಗೆ ಮೋಕ್ಷ ಕಲ್ಯಾಣ ಪೂಜೆ, ದೆಹಲಿ ವಿಶ್ವವಿದ್ಯಾಲಯ ಸ್ಪೋರ್ಟ್ಸ್ ಕ್ಲಬ್ ಸಭಾಂಗಣ ಹಾಗೂ ಮೆರವಣಿಗೆ ಮೂಲಕ ಮೂರ್ತಿ 3 ಕಿ.ಮೀ ದೂರದ ಬಸದಿಗೆ ತೆರಳಿ ಬೆಳಿಗ್ಗೆ 11.00ರಿಂದ ಮಧ್ಯಾಹ್ನ 1 ಗಂಟೆ ವರೆಗೂ ಮೂರ್ತಿ ಸ್ಥಾಪನೆ ದೆಹಲಿ ರಾಣಾ ಪತ್ ನಗರ ಬಸದಿಯಲ್ಲಿ ಜರುಗಿತು.
ಬಳಿಕ ಧಾರ್ಮಿಕ ಸಭೆಯಲ್ಲಿ ಧರ್ಮೋಪದೇಶ ನೀಡಿದ ಮೂಡುಬಿದಿರೆ ಸ್ವಾಮೀಜಿ, ಜಿನ ಬಿಂಬ ಸ್ಥಾಪನೆಯಿಂದ ಆತ್ಮ ಕಲ್ಯಾಣ ಹಾಗೂ ಪರ ಕಲ್ಯಾಣವಾಗುವುದು ಜನ ಸಂಸ್ಕೃತಿ ಸಂಸ್ಕಾರ ಧರ್ಮದಿಂದ ಸಾಧ್ಯ ಎಂದು ನುಡಿದರು. ಈ ಸಂದರ್ಭ ಸುಂದರ ಜಿನಾಲಯ ಸ್ಥಾಪನೆಗೆ ಕಾರಣರಾದ ದಾನಿಗಳನ್ನು ಗೌರವಿಸಲಾಯಿತು.
ರಾಷ್ಟ್ರ ಸಂತ 108 ಗುಪ್ತಿ ಸಾಗರ ಮುನಿ ರಾಜ್ ಮೂಡು ಬಿದಿರೆ ಶ್ರೀಗಳವರಿಗೆ ಶಾಸ್ತ್ರ ಸ್ಮರಣಿಕೆ ನೀಡಿದರು. ಬಳಿಕ ದೆಹಲಿ ಗ್ರೀನ್ ಪಾರ್ಕ್ ಬಸದಿಯಲ್ಲಿ ಉಪಸ್ಥಿತರಿದ್ದ 108 ರಾಷ್ಟ್ರ ಸಂತ ಆಚಾರ್ಯ ಪ್ರಾಗ್ಯ ಸಾಗರ ಮುನಿಮಹಾರಾಜ್, ಮೂಡುಬಿದಿರೆ ಶ್ರೀಗಳಿಗೆ ಗೌರವಾನ್ವಿತ ಪ್ರಧಾನಮಂತ್ರಿಗಳಿಂದ ಭಗವಾನ್ ಮಹಾವೀರ ಜನ್ಮ ಕಲ್ಯಾಣದಂದು ನಿರ್ವಾಣ ವರ್ಷ 2550ರ ಅಂಗವಾಗಿ ಬಿಡುಗಡೆಗೊಳಿಸಿದ ರೂ. 100 ರ ನಾಣ್ಯ ಹಾಗೂ ಅಂಚೆ ಇಲಾಖೆ ಬಿಡುಗಡೆಗೊಳಿಸಿದ ಪಾವಪುರಿ ಸಿದ್ದ ಕ್ಷೇತ್ರ ಫಸ್ಟ್ ಡೇ ಕವರ್ ನೀಡಿ ಹರಸಿ ಆಶೀರ್ವಾದ ಮಾಡಿದರು.
ಇದನ್ನೂ ಓದಿ : ಖ್ಯಾತ ಕಿರುತೆರೆ ನಟ ಗುರುಚರಣ್ ಸಿಂಗ್ ನಾಪತ್ತೆ!
ಈ ಸಂದರ್ಭ ಮೂಡುಬಿದಿರೆ ಸ್ವಾಮೀಜಿ ಈ ವರ್ಷ ಪೂರ್ತಿ ಆಚಾರ್ಯ ಶಾಂತಿ ಸಾಗರ ಆಚಾರ್ಯ ಶತಾಬ್ದಿ ವರ್ಷ ಹಾಗೂ ಭಗವಾನ್ ಮಹಾವೀರ ಸ್ವಾಮಿ ನಿರ್ವಾಣ ಕಲ್ಯಾಣ ವಿವಿಧೆಡೆ ಆಚರಿಸಲು ಸಂಕಲ್ಪ ಮಾಡಿದರು.
- FILM6 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM6 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM7 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru6 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!