Connect with us

LATEST NEWS

ಮೂಲ್ಕಿ ತಹಶೀಲ್ದಾರ್ ಬೆಂಡೆತ್ತಿದ ಶಾಸಕ ಉಮನಾಥ್‌: ಟೇಬಲ್‌ನಲ್ಲಿ ಕೊಳೆಯುತ್ತಿದ್ದ ಫೈಲ್‌ಗಳು ಕಂಡು ಗರಂ

Published

on

ಮುಲ್ಕಿ: ಇಲ್ಲಿನ ತಾಲೂಕು ತಹಶೀಲ್ದಾರ್ ಕಛೇರಿಯಲ್ಲಿ ಕಡತಗಳ ವಿಲೇವಾರಿ ವಿಳಂಬವಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಮುಲ್ಕಿ-ಮೂಡಬಿದ್ರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.


ಶಾಸಕರು ಸುಮಾರು 10.45ಕ್ಕೆ ತಹಶೀಲ್ದಾರ್ ಅಫೀಸಿಗೆ ಭೇಟಿ ನೀಡಿದ್ದರೂ ಬೆಳಗಿನ ಅವಧಿಯಲ್ಲಿ ತಹಶೀಲ್ದಾರ್ ಕಮಲಮ್ಮ ಕಛೇರಿಯಲ್ಲಿ ಇರಲಿಲ್ಲ.

ಈ ಸಂದರ್ಭ ಶಾಸಕರು ಕೆಂಡಾಮಂಡಲರಾಗಿ ಕಛೇರಿಯ ಸಿಬ್ಬಂದಿಯನ್ನು ಹಾಗೂ ಕಂದಾಯ ನಿರೀಕ್ಷಕರನ್ನು ತರಾಟೆಗೆ ತೆಗೆದುಕೊಂಡು ತಹಶೀಲ್ದಾರ್ ಸಿಬ್ಬಂದಿ ಮೂಲಕ ಟೇಬಲ್ ಮೇಲಿಟ್ಟಿದ್ದ ಕಡತಗಳನ್ನು ಪರಿಶೀಲಿಸಿದಾಗ

ಕಳೆದ ಡಿಸೆಂಬರ್ 13ನೇ ತಾರೀಖಿನ ನಂತರ ವಿಲೇವಾರಿಯಾಗದ ಕಡತಗಳು ಕೊಳೆಯುತ್ತಾ ಬಿದ್ದಿದ್ದನ್ನು ಕಂಡ ಶಾಸಕರು ಮತ್ತೆ ಆಕ್ರೋಶಗೊಂಡು ಕೂಡಲೇ ಜಿಲ್ಲಾಧಿಕಾರಿಗಳಗಳನ್ನು ಮೊಬೈಲ್ ಮೂಲಕ ಸಂಪರ್ಕಿಸಿ ಕೂಡಲೇ ತಹಶಿಲ್ದಾರ್ ಕಮಲಮ್ಮ ನವರ ಕರ್ತವ್ಯಲೋಪದ ಬಗ್ಗೆ ತಿಳಿಸಿ ವರ್ಗಾವಣೆ ಇಲ್ಲದಿದ್ದರೆ ಅಮಾನತು ಮಾಡಲು ಸೂಚನೆ ನೀಡಿದರು.

ಸುಮಾರು 11 ಗಂಟೆ ಬಳಿಕ ನಂತರ ಕಛೇರಿಗೆ ತಹಶಿಲ್ದಾರ್ ಕಮಲಮ್ಮ ಬಂದಾಗ ಶಾಸಕರು ಪ್ರಶ್ನೆಗಳ ಮೇಲೆ ಪ್ರಶ್ನೆಗಳು ಹೇಳಿದಾಗ ಕಕ್ಕಾಬಿಕ್ಕಿಯಾದ ತಹಶಿಲ್ದಾರ್ ಅನಾರೋಗ್ಯದ ನಿಮಿತ್ತ ಕಡತಗಳು ಬಾಕಿಯಾಗಿದೆ ಎಂದು ಕುಂಟುನೆಪ ಹೇಳಿದರು.

ಇದರಿಂದ ಮತ್ತೆ ಆಕ್ರೋಶಗೊಂಡ ಶಾಸಕರು ಮಧ್ಯಾಹ್ನದ ಒಳಗೆ ಕಡತ ವಿಲೇವಾರಿ ಯಾಗಬೇಕು ಇಲ್ಲದಿದ್ದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಪ್ರತಿ ದಿನ ಬೆಳಗ್ಗೆ 10 ಗಂಟೆಗೆ ಸರಿಯಾಗಿ ಕರ್ತವ್ಯಕ್ಕಾಗಿ ತಹಶಿಲ್ದಾರ್ ಕಚೇರಿಗೆ ಹಾಜರಾಗಬೇಕು ಎಂದು ಸೂಚನೆ ನೀಡಿದರು.
ಈ ಸಂದರ್ಭ ಮುಲ್ಕಿ ನಪಂ ಅಧ್ಯಕ್ಷ ಸುಭಾಷ್ ಶೆಟ್ಟಿ, ಉಪಾಧ್ಯಕ್ಷ ಸತೀಶ್ ಅಂಚನ್, ಮಂಡಲಾಧ್ಯಕ್ಷ ಸುನಿಲ್ ಆಳ್ವ, ಶೈಲೇಶ್ ಕುಮಾರ್, ವಿಠ್ಠಲ್ ಎನ್.ಎಂ, ರಮಾನಾಥ ಪೈ ಮತ್ತಿತರರಿದ್ದರು.

LATEST NEWS

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಸಹೋದರಿ ಆತ್ಮಹ*ತ್ಯೆಗೆ ಯತ್ನ

Published

on

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಹ*ತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಆಕೆಯ ತಂಗಿ ಯಶೋಧಾ ಆತ್ಮಹ*ತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಮನೆಯಲ್ಲಿ ಫಿನಾಯಲ್ ಸೇವಿಸಿ ಜೀವಾಂತ್ಯಗೊಳಿಸಲು ಯತ್ನಿಸಿದ ಆಕೆಯನ್ನು ತಕ್ಷಣ ಕಿಮ್ಸ್ ಆಸ್ಪತ್ರೆಗೆ ದಾಖಲಾಯಿತು. ಸದ್ಯ ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

ಕೊಲೆಗೀಡಾದ ಅಂಜಲಿ
ಅಂಜಲಿ ಅಂಬಿಗೇರ ಹ*ತ್ಯೆ ಖಂಡಿಸಿ ಶನಿವಾರ (ಮೇ 18) ರಂದು ಅಂಬಿಗರ ಚೌಡಯ್ಯ ಪೀಠದ ಶ್ರೀ ಶಾಂತಭೀಷ್ಮ ಸ್ವಾಮೀಜಿ, ದಿಂಗಾಲೇಶ್ವರ ಶ್ರೀ, ಮನಸೂರಿನ ಬಸವರಾಜ ದೇವರು ಶ್ರೀ ಸೇರಿದಂತೆ ವಿವಿಧ ಮಠಾಧೀಶರು ಮತ್ತು ಸಾರ್ವಜನಿಕರು ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಯಲ್ಲಿ ಯಶೋಧಾ ಕೂಡ ಭಾಗಿಯಾಗಿದ್ದಳು.

ಪ್ರತಿಭಟನೆ ವೇಳೆ ಯಶೋಧಾ ಪ್ರಜ್ಞೆ ತಪ್ಪಿ ಬಿದ್ದಿದ್ದಳು. ಕೂಡಲೇ ಆಕೆಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿತ್ತು. ರಾತ್ರಿ ಪಿನಾಯಲ್​ ಸೇವಿಸಿ ಜೀವಾಂತ್ಯಗೊಳಿಸಲು ಯತ್ನಿಸಿದ್ದಾಳೆ. ಅಕ್ಕನ ಸಾ*ವಿನಿಂದ ಮನನೊಂದಿದ್ದ ಯಶೋಧಾ ಆತ್ಮಹ*ತ್ಯೆಗೆ ಯತ್ನಿಸಿದ್ದಾಳೆ.

ಇದನ್ನೂ ಓದಿ : KARKALA: ಕಲ್ಲು ಸಾಗಾಟದ ಲಾರಿ ಪಲ್ಟಿ; ಇಬ್ಬರು ಕಾರ್ಮಿಕರು ಸಾ*ವು

ಏನಿದು ಪ್ರಕರಣ ?

ಮೇ 15 ರಂದು ಹುಬ್ಬಳ್ಳಿ ವೀರಾಪುರ ಓಣಿಯಲ್ಲಿ ಬೆಳ್ಳಂಬೆಳಗ್ಗೆ ಯುವತಿಯ ಭೀಕರ ಹ*ತ್ಯೆ ನಡೆದಿತ್ತು. ಅಂಜಲಿ ಅಂಬಿಗೇರ (21) ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಆರೋಪಿ ಗಿರೀಶ್ ಅಲಿಯಾಸ್ ವಿಶ್ವ ಏಕಾಏಕಿ ಮನೆಗೆ ನುಗ್ಗಿದ್ದ. ಬಳಿಕ ಆಕೆಯ ಮನೆಯವರ ಎದುರೇ ಅಂಜಲಿಯನ್ನ ಭೀಕರವಾಗಿ ಹ*ತ್ಯೆಗೈದಿದ್ದ. ಪರಾರಿಯಾಗಿದ್ದ ಆರೋಪಿಯನ್ನು ಈಗಾಗಲೇ ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ.

Continue Reading

DAKSHINA KANNADA

‘ಆರ್‌ಸಿಬಿ’ ಸೂಪರ್‌ ಕಮ್‌ಬ್ಯಾಕ್..! ಕ್ರೀಡಾಂಗಣದಲ್ಲಿ ಸ್ಟಾರ್ಸ್‌ ಕಲರವ

Published

on

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಒಂದು ಕಡೆ ಮಳೆಯ ಆರ್ಭಟ. ಇನ್ನೊಂದು ಕಡೆ ಸತತ 7 ಪಂದ್ಯಗಳಲ್ಲಿ ಸೋತು ಪ್ಲೇ ಆಫ್ ಕನಸಲ್ಲಿದ್ದ ತಂಡಕ್ಕೆ ಈ ಪದ್ಯ ಅದೃಷ್ಟವನ್ನು ತಂದುಕೊಟ್ಟಿದೆ. ಒಂದು ಕಡೆ ಪ್ಲೇ ಆಫ್ ಗೆ ಹೋಗಲು ರನ್ ಮಾತ್ರ ಅಲ್ಲ, ನಿಗದಿತ ರನ್ನಿನ ಒಳಗಡೆ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಕಟ್ಟಿ ಹಾಕಬೇಕಿತ್ತು.

 

ಅದೃಷ್ಟ ಹೊತ್ತು ತಂದ ಮಳೆರಾಯ

ಇನ್ನು ವಿಶೇಷ ಅಂದ್ರೆ ಬೆಂಗಳೂರಿನ ಹಲವು ಕಡೆ ಮಳೆರಾಯನ ಆರ್ಭಟ ಜೋರಾಗಿತ್ತು. ಎಡೆಬಿಡದೆ ಸುರಿದ ಮಳೆಯಿಂದ ಸಂಚಾರಕ್ಕೂ ಅಡ್ಡಿ ಉಂಟಾಗಿತ್ತು.  ಅದೃಷ್ಟ ಅಂದ್ರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ವಲ್ಪ ಹೊತ್ತಷ್ಟೇ ಮಳೆ ಸುರಿದಿದೆ. ಇದು ಮಳೆರಾಯನ ಕೃಪೆಯೆಂದೇ ನೆಟ್ಟಿಗರು ಹೇಳುತ್ತಿದ್ದಾರೆ. ಒಂದು ವೇಳೆ ಮಳೆಯಬ್ಬರ ಜೋರಾಗಿದ್ದು ಪಂದ್ಯ ಮಳೆಗೆ ಆಹುತಿಯಾಗಿದ್ದರೆ ಆರ್‌ಸಿಬಿ ಒಂದು ಆಂಕ ಪಡೆದು ಪಂದ್ಯಕೂಟದಿಂದ ನಿರ್ಗಮಿಸಬೇಕಾಗಿತ್ತು.

ಪ್ಲೇಆಫ್ ನಿರೀಕ್ಷೆಯಲ್ಲಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಕೊನೆಯ ಮ್ಯಾಚ್​ನಲ್ಲಿ ಸೋಲುಣಿಸಿ ಇದೀಗ ಟಾಪ್-4 ಹಂತಕ್ಕೇರಿದೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಆರ್​ಸಿಬಿ ಗ್ರೇಟೆಸ್ಟ್ ಕಂಬ್ಯಾಕ್ ಮಾಡಿದೆ. ಆರ್ಸಿಬಿ ಫ್ಯಾನ್ಸ್ ಗಳ ಹರ್ಷ ಹೇಳತೀರದು. ಎಲ್ಲೆಡೆ ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದಾರೆ.

ಪಂದ್ಯ ವೀಕ್ಷಣೆಗೆ ಘಟಾನುಘಟಿಗಳು ಭಾಗಿ:

ಇನ್ನೂ ಈ ರೋಚಕ ಪಂದ್ಯ ವನ್ನು ವೀಕ್ಷಿಸಲು ಮಾಜಿ ಕ್ರಿಕೆಟಿಗ ಕ್ರಿಸ್ ಗೇಲ್, ಕಾಂತಾರ ಸಿನೆಮಾ ರಿಷಬ್ ಶೆಟ್ಟಿ ಭಾಗಿಯಾಗಿದ್ದರು. ಇನ್ನೂ ಇವರಿಬ್ಬರು ಜೊತೆಯಾಗಿ ಕಾಣಿಸಿಕೊಂಡು ಚಿಯರ್‌ ಅಪ್ ಮಾಡಿದ್ದು, ಕ್ಯಾಮೆರಾ ಕಣ್ಣಿಗೆ ಇಬ್ಬರೂ ಪೋಸ್ ನೀಡಿದ್ದಾರೆ. ರಾಜ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡಾ ಆರ್‌ಸಿಬಿ ಫ್ಯಾನ್‌ ಆಗಿದ್ದು ನಿನ್ನೆಯ ಪಂದ್ಯ ವನ್ನು ವೀಕ್ಷಣೆ ಮಾಡಿದ್ದಾರೆ.

ಬೆಂಗಳೂರು ರಾಯಲ್‌ ಚಾಲೆಂಜರ್ಸ್‌ ನ ಮಹಿಳಾ ತಂಡ ಈ ಬಾರಿಯ ಟ್ರೋಫಿಯನ್ನು ತಂದುಕೊಟ್ಟಿದ್ದಾರೆ. ನಿನ್ನೆಯ ಪಂದ್ಯದಲ್ಲಿ ಮಹಿಳಾ ತಂಡ ಜರ್ಸಿಯನ್ನು ತೊಟ್ಟು ಚಿಯರ್ ಅಪ್ ಮಾಡಿದ್ದಾರೆ.

ಇನ್ನು ಎಲಿಮಿನೇಟರ್​ ಪಂದ್ಯಕ್ಕೆ ಅರ್ಹತೆ ಪಡೆದಿರುವ ಆರ್​ಸಿಬಿ ಪಾಲಿಗೆ ಮತ್ತೊಂದು ಮಾಡು ಇಲ್ಲವೇ ಮಡಿ ಪಂದ್ಯ ಎದುರಾಗಿದೆ. ಮೇ 22 ರಂದು ಅಹಮದಾಬಾದ್​ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್​ಸಿಬಿ ಜಯ ಗಳಿಸಿದರೆ ಕ್ವಾಲಿಫೈಯರ್-2 ಗೆ ಅರ್ಹತೆ ಗಿಟ್ಟಿಸಿಕೊಳ್ಳಲಿದೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೈನಲ್​ಗೇರಲಿದೆಯಾ ಎಂದು ಕಾದು ನೋಡಬೇಕಿದೆ.

Continue Reading

LATEST NEWS

‘ಗೀತಾಂಜಲಿ ಸಿಲ್ಕ್ಸ್’, ‘ಶಾಂತಿ ಸಾಗರ್’ ಹೊಟೇಲ್ ಸಂಸ್ಥಾಪಕ ನೀರೆಬೈಲೂರು ಗೋವಿಂದ ನಾಯಕ್ ನಿ*ಧನ

Published

on

ಉಡುಪಿ : ಉಡುಪಿಯ ಖ್ಯಾತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್ಸ್’ ಮತ್ತು ‘ಶಾಂತಿ ಸಾಗರ್’ ಹೊಟೇಲ್ ಸಂಸ್ಥಾಪಕ ನೀರೆಬೈಲೂರು ಗೋವಿಂದ ನಾಯಕ್ ಇಂದು ಮುಂಜಾನೆ ಸ್ವಗೃಹದಲ್ಲಿ ವಿಧಿವ*ಶರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

ಮೃ*ತರು ಐವರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಇದನ್ನೂ ಓದಿ : KARKALA: ಕಲ್ಲು ಸಾಗಾಟದ ಲಾರಿ ಪಲ್ಟಿ; ಇಬ್ಬರು ಕಾರ್ಮಿಕರು ಸಾ*ವು

Continue Reading

LATEST NEWS

Trending