LATEST NEWS
ಮೂಡುಬಿದಿರೆ ಠಾಣೆಯ ಹೆಡ್ಕಾನ್ಸ್ಟೇಬಲ್ ಹೃದಯಾಘಾತದಿಂದ ನಿಧನ
ಮೂಡುಬಿದಿರೆ: ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಮೂಡುಬಿದಿರೆ ಪೊಲೀಸ್ ಠಾಣೆಯ ಮುಖ್ಯಪೇದೆಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಿನ್ನೆ ತಡರಾತ್ರಿ ನಡೆದಿದೆ.
ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್(35) ಹೃದಯಾಘಾತದಿಂದ ಮೃತಪಟ್ಟ ಪೊಲೀಸ್ ಸಿಬ್ಬಂದಿ.
ಮೂಲತಃ ಶಿವಮೊಗ್ಗ ಜಿಲ್ಲೆಯ ಆನಹೊಟ್ಟಿ ಗ್ರಾಮದ ಸಂತೋಷ್, ಸ್ಪೆಷಲ್ ಡ್ಯೂಟಿ ನಿಮಿತ್ತ ಶಿವಮೊಗ್ಗ ಜಿಲ್ಲೆಗೆ ತೆರಳಿದ್ದರು. ಡ್ಯೂಟಿ ಮುಗಿಸಿ ಪತ್ನಿ ಮನೆಗೆ ತೆರಳಿದ ಸಂತೋಷ್ ಅಲ್ಲಿ ರಾತ್ರಿ 11 ಗಂಟೆಗೆ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಕಳೆದೆರಡು ವರ್ಷದಿಂದ ಮೂಡುಬಿದಿರೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ವಿಶೇಷ ಮುತುವರ್ಜಿ ವಹಿಸಿ ಪ್ರಕರಣ ವಿಲೇವಾರಿ ಮಾಡುತ್ತಿದ್ದರು. ಈ ಹಿಂದೆ ಬಜ್ಪೆ ಪೊಲೀಸ್ ಠಾಣೆಯಲ್ಲೂ ಕರ್ತವ್ಯ ನಿರ್ವಹಿಸಿದ್ದರು.
ತುಂಬಾ ಆತ್ಮೀಯ ಸ್ವಭಾವ ಹೊಂದಿದ್ದ ಇವರು ಸಹೋದ್ಯೋಗಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಸಹೋದ್ಯೋಗಿಯ ಸಾವಿಗೆ ಠಾಣಾ ಸಿಬ್ಬಂದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಂತಾಪ ವ್ಯಕ್ತಪಡಿಸಿ ಟ್ವೀಟ್ ಮಾಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ “ಪೊಲೀಸ್ ಕುಟುಂಬದ ಕಿರಿಯ ಸದಸ್ಯರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಸಂತೋಷ್ ಅವರು ಕೊನೆಯುಸಿರೆಳೆದಿದ್ದು, ಅವರ ಆತ್ಮಕೆ ಶಾಂತಿ ಸಿಗಲಿ ” ಎಂದು ಕಂಬನಿ ಮಿಡಿದಿದ್ದಾರೆ.
LATEST NEWS
ಕೋವ್ಯಾಕ್ಸಿನಲ್ಲೂ ಇದೆ ಅಡ್ಡ ಪರಿಣಾಮ…ವರದಿಯಿಂದ ಬಯಲಾಯ್ತು ಸತ್ಯ..!
ಮಂಗಳೂರು / ನವದೆಹಲಿ : ಸದ್ಯ ಕೊರೋನಾ ಲಸಿಕೆ ಪಡೆದವರಲ್ಲಿ ಆತಂಕ ಶುರುವಾಗಿದೆ. ಕೊರೋನಾ ಲಸಿಕೆ ಕೋವಿಶೀಲ್ಡ್ ಅಡ್ಡ ಪರಿಣಾಮ ಬೀರಿದೆ ಎಂದು ಈ ಹಿಂದೆ ಹೇಳಲಾಗಿತ್ತು. ಇದರ ಬೆನ್ನಲ್ಲೇ ಕೋವ್ಯಾಕ್ಸಿನ್ ಕೂಡಾ ಅಡ್ಡ ಪರಿಣಾಮ ಬೀರಿದೆ ಎಂಬ ಆಘಾತಕಾರಿ ವಿಚಾರ ಬಹಿರಂಗವಾಗಿದೆ. ಕೋವಿಶೀಲ್ಡ್ ಪಡೆದವರಲ್ಲಿ ಅಡ್ಡ ಪರಿಣಾಮ ಆಗಿದೆ ಅಂತ ಆಸ್ಟ್ರಾಜೆನೆಕಾ ಕಂಪೆನಿ ಒಪ್ಪಿಕೊಂಡಿತ್ತು. ಇದೀಗ ಭಾರತ್ ಬಯೋಟೆಕ್ ಕಂಪೆನಿ ಅಭಿವೃದ್ದಿ ಪಡಿಸಿರುವ ಕೋವ್ಯಾಕ್ಸಿನ್ ಕೂಡಾ ಅಡ್ಡ ಪರಿಣಾಮ ಬೀರುತ್ತದೆ ಎಂದು ವರದಿಯೊಂದು ಹೊರಬಿದ್ದಿದೆ. ಈ ಲಸಿಕೆ ಪಡೆದ ಒಂದು ವರ್ಷದ ಬಳಿಕ ಹಲವರಲ್ಲಿ ಅಡ್ಡ ಪರಿಣಾಮ ಕಾಣಿಸಿಕೊಂಡ ಬಗ್ಗೆ ವರದಿಯಲ್ಲಿ ಹೇಳಲಾಗಿದೆ.
ಹದಿ ಹರೆಯದ ಯುವಕ – ಯುವತಿಯರಲ್ಲಿ ಅಡ್ಡ ಪರಿಣಾಮ :
ಬನಾರಸ್ ಹಿಂದೂ ವಿಶ್ವ ವಿದ್ಯಾಲಯ ನಡೆಸಿದ ಈ ಅದ್ಯಯನ ಪ್ರಕಾರ ಕೋವ್ಯಾಕ್ಸಿನ್ ತೆಗೆದುಕೊಂಡ ಹದಿ ಹರೆಯದ ಯುವಕ – ಯುವತಿಯರಲ್ಲಿ ಅಡ್ಡ ಪರಿಣಾಮ ಕಾಣಿಸಿಕೊಂಡಿದೆ. ಸುಮಾರು 1024 ಯವ ಜನತೆಯನ್ನು ಇದರ ಅಧ್ಯಯನಕ್ಕೆ ಒಳಪಡಿಸಿದಾಗ ಈ ಆಘಾತಕಾರಿ ವರದಿ ಲಭ್ಯವಾಗಿದೆ. ಈ ವರದಿ ಪ್ರಕಾರ ಶೇಕಡಾ 48 ಜನರಿಗೆ ಶ್ವಾಸನಾಳದ ಸೋಂಕು ಪತ್ತೆಯಾಗಿದೆ ಎಂದು ಹೇಳಲಾಗಿದೆ.
ಶೇಕಡಾ 10.5 ಜನರಲ್ಲಿ ಸಾಮಾನ್ಯ ಅಸ್ವಸ್ಥತೆ, 10.2 ಶೇಖಡಾ ಜನರಲ್ಲಿ ನರಮಂಡಲದ ಸಮಸ್ಯೆ, 4.7% ಜನರಲ್ಲಿ ನರ ಸಂಬಂಧಿ ಸಮಸ್ಯೆ ಹಾಗೂ 8.9% ಜನರಲ್ಲಿ ಸಾಮಾನ್ಯ ಸಮಸ್ಯೆಗಳು ಕಾಣಿಸಿದೆ. ಇದಲ್ಲದೆ, ಚರ್ಮ ರೋಗ, ಸ್ನಾಯಗಳಿಗೆ, ನರಗಳಿಗೆ ಮತ್ತು ಕೀಲುಗಳಿಗೆ ಸಂಬಂಧಿಸಿದ ಸಮಸ್ಯೆಗಳು ಕಾಣಿಸಿಕೊಂಡಿದೆ ಎಂದು ವರದಿ ಹೇಳಿದೆ.
ಯುವತಿಯರಲ್ಲಿ ಇದರ ಪರಿಣಾಮ ಹೆಚ್ಚಾಗಿ ಕಂಡು ಬಂದಿದ್ದು, ಶೇಕಡಾ 4.6% ಯುವತಿಯರಲ್ಲಿ ಮುಟ್ಟಿನ ಸಮಸ್ಯೆ ಕಂಡು ಬಂದಿದೆ. ಇನ್ನು ಯುವತಿಯರಲ್ಲಿ ಕಣ್ಣಿನ ಸಮಸ್ಯೆ, ಹಾಗೂ ಹೈಪೋ ಥೈರಾಯಿಡ್ ಕಾಣಸಲು ಈ ಕೋವಾಕ್ಸಿನ್ ಕಾರಣವಾಗಿದೆ ಎಂದು ವರದಿ ಹೇಳಿದೆ.
ಇದನ್ನೂ ಓದಿ : ರಾಖಿ ಸಾವಂತ್ ಗೆ ಕ್ಯಾನ್ಸರ್!? ಮಾಜಿ ಪತಿ ಹೇಳಿದ್ದೇನು?
ಆದ್ರೆ, ಈ ಬಗ್ಗೆ ಇನ್ನಷ್ಟು ಅಧ್ಯಯನ ನಡೆಸಬೇಕಾಗಿದ್ದು, ಸದ್ಯಕ್ಕೆ ಕೋವ್ಯಾಕ್ಸಿನ್ ಪಡೆದು ಒಂದು ವರ್ಷ ಆಗಿದ್ದವರನ್ನು ಈ ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಹೀಗಾಗಿ ಇನ್ನಷ್ಟು ಅಧ್ಯಯನದ ಮೂಲಕ ಇದರಿಂದ ಆಗಿರುವ ಅಡ್ಡ ಪರಿಣಾಮವನ್ನು ಅಧ್ಯಯನ ಮಾಡಬೇಕಿದೆ.
LATEST NEWS
ಅಂಜಲಿ ಹಂ*ತಕನ ಬಂಧನ; ರೈಲಿನಲ್ಲಿ ಪ್ರಯಾಣಿಸುತ್ತಿದ್ದವನ ಪೊಲೀಸರು ಬಂಧಿಸಿದ್ದು ಹೇಗೆ?
ಹುಬ್ಬಳ್ಳಿ : ಅಂಜಲಿ ಅಂಬಿಗೇರ್ ಹ*ತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಗಿರೀಶ್ ಯಾನೆ ವಿಶ್ವನಾಥ್ ಸಾವಂತ್ ನನ್ನು ಬಂಧಿಸಲಾಗಿದೆ. ಆರೋಪಿಯನ್ನು ಹುಬ್ಬಳ್ಳಿ – ಧಾರವಾಡ ನಗರ ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಎರಡು ದಿನಗಳ ಹಿಂದೆ ಅಂಜಲಿ ಅಂಬಿಗೇರ್ ಎಂಬ ಯುವತಿಯನ್ನು ಗಿರೀಶ್ ಯಾನೆ ವಿಶ್ವನಾಥ್ ಸಾವಂತ್ ಹ*ತ್ಯೆ ಮಾಡಿದ್ದ.
ತನ್ನ ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಬೆಳ್ಳಂಬೆಳಗ್ಗೆ ಆಕೆಯ ಮನೆಯೊಳಗೆ ನುಗ್ಗಿ ಚಾಕುವಿನಿಂದ ಇರಿದು ಹ*ತ್ಯೆ ಮಾಡಿದ್ದ. ಆ ಬಳಿಕ ಪರಾರಿಯಾಗಿದ್ದ. ಹುಬ್ಬಳ್ಳಿ ಪೊಲೀಸರು ಆರೋಪಿ ವಿಶ್ವನಾಥ್ ಸಾವಂತ್ ಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದರು. ಇದೀಗ ದಾವಣಗೆರೆಯಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
ಸಿಕ್ಕಿ ಬಿದ್ದಿದ್ದು ಹೇಗೆ?
ಭೀಕರವಾಗಿ ಯುವತಿಯ ಹ*ತ್ಯೆ ಮಾಡಿದ ಪೊಲೀಸರು ವಿಶ್ವನಾಥ್ ಸಾವಂತ್ ಕೊಲೆ ಮಾಡುವುದಕ್ಕೆ ಮುನ್ನ ಮೊಬೈಲ್ ನಲ್ಲಿ ಸಂವಾದ ನಡೆಸುತ್ತಿದ್ದ ಮೂವರನ್ನು ಕರೆದು ತೀವ್ರ ವಿಚಾರಣೆ ನಡೆಸಿದ್ದರು. ಅದರ ಸುಳಿವಿನ ಆಧಾರದಲ್ಲಿ ಇದೀಗ ವಿಶ್ವನಾಥ್ ನನ್ನು ದಾವಣಗೆರೆಯಲ್ಲಿ ಬಂಧಿಸಿದ್ದಾರೆ.
ಇದನ್ನೂ ಓದಿ : ಕಾರಿನಲ್ಲಿ ಮಗುವನ್ನು ಮರೆತು ಹೋದ ತಾಯಿ..! ಕಾರಿನಲ್ಲೇ ಮಗುವಿನ ಅಂತ್ಯ…!
ಅಂಜಲಿಯನ್ನು ಹ*ತ್ಯೆಗೈದ ಬಳಿಕ ವಿಶ್ವ ಬೆಂಗಳೂರು ಮೂಲಕ ರೈಲಿನಲ್ಲಿ ಗೋವಾ, ಮಹಾರಾಷ್ಟ್ರ ಕಡೆ ಹೋಗಿ ತಲೆಮರೆಸಿಕೊಳ್ಳಬೇಕು ಅಂದುಕೊಂಡಿದ್ದ. ರೈಲಿನಲ್ಲಿ ಪ್ರಯಾಣಿಸುತ್ತಿರುವ ಮಾಹಿತಿ ಸಿಕ್ಕ ಹುಬ್ಬಳ್ಳಿ ಪೊಲೀಸರು ದಾವಣಗೆರೆಯಲ್ಲಿ ಅವನನ್ನು ಬಂಧಿಸಲು ಸಕಲ ಸಿದ್ಧತೆ ನಡೆಸಿದ್ದರು. ಆತನ ಬಂಧನಕ್ಕೆ ಯತ್ನಿಸುವ ವೇಳೆ ರೈಲಿನಿಂದ ಜಿಗಿದು ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ರೈಲಿನಿಂದ ಬಿದ್ದ ರಭಸಕ್ಕೆ ಆತನ ಮುಖ ಮತ್ತು ತಲೆಗೆ ಗಂಭೀ*ರ ಗಾ*ಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
DAKSHINA KANNADA
ಈ 7 ರೈಲು ನಿಲ್ದಾಣಗಳಲ್ಲಿ ಸಿಗುತ್ತೆ ಅತೀ ಕಡಿಮೆ ಬೆಲೆಗೆ ತಿಂಡಿ, ಊಟ
ಮಂಗಳೂರು: ಭಾರತೀಯ ರೈಲ್ವೆ ಮಂಡಳಿಯು ಕರ್ನಾಟಕದ ಏಳು ನಿಲ್ದಾಣಗಳು ಸೇರಿದಂತೆ ದೇಶದ 100ಕ್ಕೂ ಹೆಚ್ಚು ರೈಲು ನಿಲ್ದಾಣಗಳಲ್ಲಿ ಸಾಮಾನ್ಯ ಕಂಪಾರ್ಟ್ಮೆಂಟ್ ಕೋಚ್ಗಳ ಬಳಿ ಕಡಿಮೆ ದರದಲ್ಲಿ ಉತ್ತಮ ಆಹಾರವನ್ನು ಒದಗಿಸುವ ಕೌಂಟರ್ಗಳನ್ನು ತೆರೆದಿದೆ.
ಕರ್ನಾಟಕದಲ್ಲಿ ದಕ್ಷಿಣ ರೈಲ್ವೆ ಅಡಿಯಲ್ಲಿ ಮಂಗಳೂರು ಸೆಂಟ್ರಲ್ ಮತ್ತು ಜಂಕ್ಷನ್ ರೈಲ್ವೆ ವಿಭಾಗಗಳಲ್ಲಿ ಸಬ್ಸಿಡಿ ಆಹಾರ ಕೌಂಟರ್ಗಳನ್ನು ತೆರೆಯಲಾಗಿದೆ. ಹಾಗೆಯೇ ನೈರುತ್ಯ ರೈಲ್ವೆಯ ಅಡಿಯಲ್ಲಿ ಕೆಎಸ್ಆರ್ ಬೆಂಗಳೂರು, ಯಶವಂತಪುರ, ಮೈಸೂರು, ವಿಜಯಪುರ ಮತ್ತು ಬಳ್ಳಾರಿ ರೈಲು ನಿಲ್ದಾಣಗಳಲ್ಲಿ ಈ ಆಹಾರ ಕೌಂಟರ್ಗಳನ್ನು ತೆರೆಯಲಾಗಿದೆ.
ಈ ಯೋಜನೆಯು ಭಾರತೀಯ ರೈಲ್ವೆಯ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ಮತ್ತು ಭಾರತೀಯ ರೈಲ್ವೆಯ ಜಂಟಿ ಉಪಕ್ರಮವಾಗಿದೆ. ಕಾಯ್ದಿರಿಸದ ಬೋಗಿಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಆರೋಗ್ಯಕರ ಆಹಾರವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಹಿಂದೆ ಜನತಾ ಊಟದ ಸೇವೆಯ ಅಡಿಯಲ್ಲಿ ರೈಲ್ವೆ ನಿಲ್ದಾಣದ ರೆಸ್ಟೋರೆಂಟ್ಗಳಲ್ಲಿ ಕಡಿಮೆ ದರದ ಆಹಾರ ಲಭ್ಯವಿತ್ತು. ಈಗ ಕೌಂಟರ್ಗಳು ನೇರವಾಗಿ ಪ್ಲಾಟ್ಫಾರ್ಮ್ಗಳಲ್ಲಿ ಈ ಸೇವೆಯನ್ನು ಆರಂಭಿಸಲಾಗಿದೆ.
ಪ್ರಸ್ತುತ 100 ರೈಲು ನಿಲ್ದಾಣಗಳಲ್ಲಿ 150 ಪ್ಲಾಟ್ಫಾರ್ಮ್ಗಳು ಈ ಸೌಲಭ್ಯವನ್ನು ನೀಡುತ್ತವೆ. ಬೆಳಗಿನ ಉಪಹಾರ 20 ರೂ., ಲಘು ಊಟ 50 ರೂ., 3 ರೂ.ಗೆ 200 ಎಂಎಲ್ ನೀರು ನೀಡಲಾಗುತ್ತದೆ. ಈ ಮಾಹಿತಿಯನ್ನು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಒಟ್ಟಾರೆ ಈ ಯೋಜನೆಯು ರೈಲು ಪ್ರಯಾಣಿಕರ ಆಹಾರ ಸಮಸ್ಯೆಯನ್ನು ಪರಿಹರಿಸಲಿದೆ ಎಂಬ ನಿರೀಕ್ಷೆ ಗರಿಗೆದರಿದೆ.
- FILM7 days ago
“ನಿವೇದಿತಾಜೈನ್”ಗೆ ಸಾ*ವಿನ ಸುಳಿವು ಮೊದಲೇ ಇತ್ತಾ.!? ಈಬಗ್ಗೆ ನಿವೇದಿತಾ ತಾಯಿ ಹೇಳಿದ್ದೇನು ಗೊತ್ತಾ?
- LATEST NEWS6 days ago
ವರ್ತೂರು ಸಂತೋಷ್ ತೋಟದಲ್ಲಿ ಮತ್ತೆ ಸೇರಿದ ಬಿಗ್ಬಾಸ್ ಸ್ಪರ್ಧಿಗಳು
- DAKSHINA KANNADA7 days ago
ಪುತ್ತೂರಿನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವಕ!
- DAKSHINA KANNADA7 days ago
ಸ್ಕೂಟರ್ ಸವಾರರ ಮೇಲೆ ಹರಿದ ಟಿಪ್ಪರ್; 17 ವರ್ಷದ ಬಾಲಕ ಸಾ*ವು, ಇಬ್ಬರಿಗೆ ಗಂಭೀ*ರ ಗಾಯ