Connect with us

DAKSHINA KANNADA

Moodbidri: ಎಸ್‌ಸಿಡಿಸಿಸಿ ಬ್ಯಾಂಕ್ ಬೆಳುವಾಯಿ ಶಾಖೆಯಲ್ಲಿ ಹೊಸ ಎಟಿಎಂ ಉದ್ಘಾಟನೆ

Published

on

ಎಸ್‌ಸಿಡಿಸಿಸಿ ಬ್ಯಾಂಕ್‌ನ ಬೆಳುವಾಯಿ ಶಾಖೆಯ  ನೂತನ ಎಟಿಎಂ ಲೋಕಾರ್ಪಣೆ ಹಾಗೂ ಬೆಳ್ಳಿಹಬ್ಬ ಸಂಭ್ರಮಾಚರಣೆ  ಜೂ.20ರಂದು ನಡೆಯಿತು.

ಮೂಡುಬಿದಿರೆ: ಎಸ್‌ಸಿಡಿಸಿಸಿ ಬ್ಯಾಂಕ್‌ ಬೆಳುವಾಯಿ ಶಾಖೆಯ  ನೂತನ ಎಟಿಎಂ ಲೋಕಾರ್ಪಣೆ ಹಾಗೂ ಬೆಳ್ಳಿಹಬ್ಬ ಸಂಭ್ರಮಾಚರಣೆ  ಜೂ.20ರಂದು ನಡೆಯಿತು.

ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಸ್‌ಸಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ನವೋದಯ ಸ್ವಸಹಾಯ ಗುಂಪುಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಉತ್ತರ ಕನ್ನಡ, ಶಿವಮೊಗ್ಗ, ದಾವಣಗೆರೆ, ಹಾವೇರಿ ಜಿಲ್ಲೆಗಳಲ್ಲೂ ಸ್ವಸಹಾಯ ಗುಂಪುಗಳನ್ನು ಆರಂಭಿಸಲಾಗಿದೆ ಎಂದು  ಹೇಳಿದರು.

ರೈತರ ಸಾಲ ಶೇ.100ರಷ್ಟು ಮರುಪಾವತಿಯಾಗುತ್ತಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 111 ಶಾಖೆಗಳನ್ನು ಹೊಂದಿದ್ದು, ರಾಜ್ಯದಲ್ಲೇ ಅತ್ಯುತ್ತಮ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದರು.

ಶಾಸಕ ಉಮಾನಾಥ ಕೋಟ್ಯಾನ್ ನೂತನ ಎಟಿಎಂ ಅನ್ನು ಆದ್ಯ ಲಕ್ಷ್ಮೀ ಕಾಂಪ್ಲೆಕ್ಸ್ ಕಟ್ಟಡದಲ್ಲಿ ಉದ್ಘಾಟಿಸಿದರು.

ಎಸ್‌ಸಿಡಿಸಿಸಿ ಬ್ಯಾಂಕ್ ರಾಜ್ಯದ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾಗಿದ್ದು, ಹಲವಾರು ಜನರಿಗೆ ಅನ್ನದಾತವಾಗಿದೆ.

ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವ ಬೆಳುವಾಯಿಯ ಆರ್ಥಿಕ ಪ್ರಗತಿಗೆ ಬ್ಯಾಂಕ್‌ನ ಬೆಳುವಾಯಿ ಶಾಖೆಯು ವಿಶೇಷ ಕೊಡುಗೆ ನೀಡುತ್ತಿದೆ ಎಂದರು.

ಬ್ಯಾಂಕ್‌ನ ನಿರ್ದೇಶಕ ಭಾಸ್ಕರ್ ಎಸ್.ಕೋಟ್ಯಾನ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಶಾಸಕ ಉಮಾನಾಥ ಕೋಟ್ಯಾನ್ ಹಾಗೂ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರನ್ನು ಶಾಖೆಯ ವತಿಯಿಂದ ಸನ್ಮಾನಿಸಲಾಯಿತು.

ಶಾಖೆಯಲ್ಲಿ 20 ವರ್ಷಗಳಿಂದ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದ ಸತೀಶ್ ಶೆಟ್ಟಿ, ಮೇಲ್ವಿಚಾರಕ ಜಯಂತ್, ಶಾಖಾ ವ್ಯವಸ್ಥಾಪಕಿ ಲಕ್ಷ್ಮೀ ಅವರನ್ನು ಗೌರವಿಸಲಾಯಿತು.

ಕಳೆದ 25 ವರ್ಷಗಳಿಂದ ಗ್ರಾಹಕರಾಗಿರುವ ಉದ್ಯಮಿ ಮಹಮ್ಮದ್ ಅನ್ಸಾರ್ ಅವರಿಗೆ ಉತ್ತಮ ಗ್ರಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ನವೋದಯ ಚಾರಿಟೇಬಲ್ ಟ್ರಸ್ಟ್‌ ಚೈತನ್ಯ ವಿಮಾ ಯೋಜನೆಯ ಸದಸ್ಯರಾಗಿದ್ದು, ಅಪಘಾತದಲ್ಲಿ ಮೃತಪಟ್ಟ ಉಮೇಶ್ ಅವರ ಪತ್ನಿಗೆ ಒಂದು ಲಕ್ಷ ರೂಪಾಯಿ ಪರಿಹಾರ ಮೊತ್ತವನ್ನು ಹಸ್ತಾಂತರಿಸಲಾಯಿತು.

ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ(ಪ್ರಭಾರ) ಕೆ. ಗೋಪಾಲ ಕೃಷ್ಣ ಭಟ್,  ಬ್ಯಾಂಕ್‌ನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಎಂ.ವಾದಿರಾಜ ಶೆಟ್ಟಿ, ಶಶಿಕುಮಾರ್ ರೈ, ಎಸ್.ಬಿ ಜಯರಾಮ ರೈ, ಮೋನಪ್ಪ ಶೆಟ್ಟಿ ಎಕ್ಕಾರು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

DAKSHINA KANNADA

ದೇವರಿಗೆ ಇಟ್ಟ ಹೂವುಗಳನ್ನು ಒಣಗಿದ ನಂತರ ಹೀಗೆ ಮಾಡಿ..!

Published

on

ಮಂಗಳೂರು: ಹೂವುಗಳ ಅಲಂಕಾರದಿಂದ ದೇವರ ಕೋಣೆ ಸುಂದರವಾಗಿ ಕಾಣಿಸುತ್ತದೆ. ಅಲ್ಲದೇ ದೇವರ ಪೂಜೆ ಪೂರ್ಣವೆನಿಸುತ್ತದೆ. ಹೂವುಗಳು ಮನೆಯ ಶಕ್ತಿಯನ್ನು ಬದಲಾಯಿಸುತ್ತದೆ. ಆದರೆ ಅದೇ ಹೂಗಳು ನಿಮ್ಮ ಮನೆಯಲ್ಲಿ ದೋಷಗಳನ್ನು ಸೃಷ್ಟಿಸಲು ಪ್ರಾರಂಭಿಸುತ್ತದೆ.

ಒಣಗಿದ ಹೂವುಗಳನ್ನು ನಿಮ್ಮ ಮನೆಯಲ್ಲಿ ಇರಿಸಿದರೆ ಅಥವಾ ಅದನ್ನು ತೆಗೆಯದೇ ಹಾಗೇ ಬಿಟ್ಟರೆ, ಅದು ನಿಮ್ಮ ಮನೆಯ ಶಕ್ತಿಯನ್ನು ಹಾಳು ಮಾಡುತ್ತದೆ. ಹಾಗಾಗಿ ಒಣಗಿದ ಅಥವಾ ಬಾಡಿದ ಹೂವುಗಳನ್ನು ಮನೆಯಲ್ಲಿ ಇಡಬಾರದು. ದೇವರಿಗೆ ಆಗಿರಬಹುದು ಅಥವಾ ಮನೆಯಲ್ಲೇ ಆಗಿರಬಹುದು ಯಾವಾಗಲೂ ಪರಿಮಳಯಕ್ತ ಹೂವುಗಳನ್ನು ಮಾತ್ರ ಇಟ್ಟುಕೊಳ್ಳಬೇಕು.

ತಾಜಾ ಹೂವುಗಳಿಗೆ ಅದ್ಭುತವಾದ ಧನಾತ್ಮಕ ಶಕ್ತಿಯನ್ನು ಸೃಷ್ಟಿಸುವ ಸಾಮರ್ಥ್ಯವಿರುತ್ತದೆ. ಅವುಗಳಿಂದ ಉತ್ಪತ್ತಿಯಾಗುವ ಶಕ್ತಿಯು ಧನಾತ್ಮಕವಾಗಿ ನಮ್ಮ ಸುತ್ತಮುತ್ತಲಿನ ಸ್ಥಳವನ್ನು ಬದಲಾಯಿಸುತ್ತದೆ. ತಾಜಾ ಹೂವುಗಳು ಇರುವಲ್ಲೆಲ್ಲಾ ತಮ್ಮ ಸುತ್ತಲಿನ ಜೀವಿಗಳನ್ನು ಸಕಾರಾತ್ಮಕವಾಗಿರಿಸುತ್ತದೆ. ಅದೇ ಹೂವುಗಳು ಒಣಗಲು ಪ್ರಾರಂಭವಾದಾಕ್ಷಣ ಅದರಿಂದ ನಕಾರಾತ್ಮಕ ಕಂಪನಗಳು ಹರಡಲು ಪ್ರಾರಂಭವಾಗುತ್ತದೆ.

ಪೂಜೆಯಲ್ಲಿ ಒಣಗಿದ ಹೂವುಗಳನ್ನು ಬಳಸುವುದರಿಂದ ಆ ಪೂಜೆಯಿಂದ ಯಾವುದೇ ರೀತಿಯ ಫಲವನ್ನು ನಮಗೆ ಅನುಭವಿಸಲು ಸಾಧ್ಯವಾಗುವುದಿಲ್ಲ. ಮತ್ತೊಂದೆಡೆ ಪೂಜೆಯು ಯಾವುದೇ ಶುಭ ಫಲವನ್ನು ಪಡೆಯುವುದಿಲ್ಲ. ಬದಲಾಗಿ ಅಶುಭ ಫಲಗಳನ್ನು ಅನುಭವಿಸುವಂತಾಗುತ್ತದೆ.

ಅದಕ್ಕಾಗಿಯೇ ಹೂವುಗಳನ್ನು ಒಣಗುತ್ತಿದ್ದಂತೆ ಅವುಗಳನ್ನು ತಕ್ಷಣವೇ ಅಲ್ಲಿಂದ ಬದಲಾಯಿಸಬೇಕು. ಒಂದು ವೇಳೆ ಒಣಗಿದ ಹೂವುಗಳು ಇದ್ದರೆ ಅದು ಆರೋಗ್ಯದ ಮೇಲೆಯೂ ಮತ್ತಷ್ಟು ಕೆಟ್ಟ ಪರಿಣಾಮ ಬೀರಬಹುದು.

Continue Reading

DAKSHINA KANNADA

ಎಸ್ ಎಸ್ ಎಲ್ ಸಿ ಫಲಿತಾಂಶ: ಜಿಯಾ ಸ್ವೀಡಲ್ ಲಸ್ರಡೊಗೆ 599 ಅಂಕ

Published

on

ಪುತ್ತೂರು : ಸುದಾನ ರೆಸಿಡೆನ್ಶಿಯಲ್ ಸ್ಕೂಲ್, ನೆಹರು ನಗರ, ಮಂಜಲ್ಪಡ್ಪು ಇಲ್ಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ
ಜಿಯಾ ಸ್ವೀಡಲ್ ಲಸ್ರಡೊ 599 ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಇವರು ಕೆದಿಲ ಗ್ರಾಮದ ಕಲ್ಲಾಜೆ ನಿವಾಸಿ ಪಾಟ್ರಿಕ್ ಲಸ್ರಡೊ, ಅಮಿತಾ ಲಸ್ರಡೊ ದಂಪತಿ ಪುತ್ರಿ.

Continue Reading

DAKSHINA KANNADA

ಕುಟುಂಬ ಸದಸ್ಯರ ಮಾರಣ ಹೋಮ..! ಆರು ಜೀವಗಳು ಬಲಿ..!

Published

on

ಮಂಗಳೂರು ( ಉತ್ತರ ಪ್ರದೇಶ ) : ಮದರ್ ಡೇ ದಿನವೇ ತಾಯಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪಾಪಿ ಮಗ ತನ್ನ ಇಡೀ ಕುಟುಂಬದವರನ್ನು ಸಾಯಿಸಿದ್ದಾನೆ. ತಾಯಿ, ಪತ್ನಿ ಹಾಗೂ ಮೂವರು ಮಕ್ಕಳನ್ನು ಬರ್ಭರವಾಗಿ ಹ*ತ್ಯೆಮಾಡಿದ ಆರೋಪಿ ಬಳಿಕ ತಾನೂ ಕೂಡಾ ಗುಂಡು ಹಾರಿಸಿ ಜೀವಾಂತ್ಯಗೊಳಿಸಿದ್ದಾನೆ.

ಈ ಘಟನೆ ಉತ್ತರ ಪ್ರದೇಶದ ಸೀತಾಪುರದಲ್ಲಿ ನಡೆದಿದೆ. ಆರೋಪಿ ಅನುರಾಗ್ ಸಿಂಗ್ ಎಂಬಾತ ತನ್ನ ಪತ್ನಿಯ ತಲೆಗೆ ಹ್ಯಾಮರ್‌ನಿಂದ ಹೊಡೆದಿದ್ದು, ತಾಯಿಗೆ ಗುಂಡು ಹೊಡೆದು ಸಾ*ಯಿಸಿದ್ದಾನೆ. ಬಳಿಕ ತನ್ನ ಮೂವರು ಮಕ್ಕಳನನ್ನು ಮಹಡಿಯಿಂದ ಕೆಳಕ್ಕೆ ಎಸೆದಿದ್ದಾನೆ. ಅನುರಾಗ್ ಸಿಂಗ್ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಎಂಬುದಾಗಿ ಮಾಹಿತಿ ಲಭ್ಯವಾಗಿದೆ. ಆದ್ರೆ ವಿಪರೀತವಾಗಿ ಮದ್ಯ ಸೇವನೆಯ ಚಟ ಹೊಂದಿದ್ದ ಅಂತಾನೂ ಪೊಲೀಸರು ತಿಳಿಸಿದ್ದಾರೆ. ಇದೇ ಕಾರಣದಿಂದ ತಾಯಿ , ಪತ್ನಿ, ಹಾಗೂ ಮೂವರು ಮಕ್ಕಳು ಹ*ತ್ಯೆ ಮಾಡಿದ್ದಾನೆ ಎನ್ನಲಾಗಿದೆ.

62 ವರ್ಷ ಪ್ರಾಯದ ಸಾವಿತ್ರಿ ಸಿಂಗ್, 40 ವರ್ಷ ಪ್ರಾಯದ ಪ್ರಿಯಾಂಕ, ಮಕ್ಕಳಾದ 12 ವರ್ಷದ ಅಸ್ವಿ, 8 ವರ್ಷದ ಅರ್ನಾ, ಹಾಗೂ 4 ವರ್ಷದ ಅದ್ವಿಕ್‌ ಅನುರಾಗ್ ಸಿಂಗ್ ಕೈನಿಂದ ಹತರಾದವರಾಗಿದ್ದಾರೆ. ಬಳಿಕ ಆರೋಪಿ ಕೂಡಾ ಗುಂಡು ಹಾರಿಸಿ ಸ್ವಯಂ ಹ*ತ್ಯೆ ಮಾಡಿಕೊಂಡಿದ್ದಾನೆ.

 

Continue Reading

LATEST NEWS

Trending