Connect with us

LATEST NEWS

ಮಂಗಳೂರಿನಲ್ಲಿ ಪತ್ರಕರ್ತನ ಮೇಲೆ ನೈತಿಕ ಪೊಲೀಸ್‌ಗಿರಿ – ಇಬ್ಬರು ಆರೋಪಿಗಳ ಬಂಧನ..!

Published

on

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಅನೈತಿಕ ಪೊಲೀಸ್‌ಗಿರಿ ಅಂಕೆ ಮೀರಿ ಬೆಳೆಯುತ್ತಿದ್ದು, ಬಂಟ್ವಾಳದಲ್ಲಿ ಪೊಲೀಸ್ ಸಿಬ್ಬಂದಿಯನ್ನು ಅಡ್ಡಗಟ್ಟಿ ನಿಂದಿಸಿದ ಪ್ರಕರಣದ ಸಂದರ್ಭದಲ್ಲೇ ನಗರದ ಯುವ ವರದಿಗಾರನನ್ನು ತಡೆದು ಧರ್ಮದ ಹೆಸರೆತ್ತಿ ಅವಾಚ್ಯವಾಗಿ ನಿಂದಿಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ನಗರದ ಖಾಸಗಿ ವೆಬ್‌ಸೈಟ್ ಒಂದರ ಯುವ ವರದಿಗಾರ ಅಭಿಜಿತ್ ಅವರು, ಜು. 26ರಂದು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಕಾವೂರು ಜಂಕ್ಷನ್ ಬಳಿಯ ಹೊಟೇಲೊಂದರಲ್ಲಿ ತನ್ನ ಕಾಲೇಜಿನ ಸಹಪಾಠಿಯಾಗಿದ್ದ ಯುವತಿ ಜತೆ ಊಟ ಮುಗಿಸಿ ಹೊರ ಬರುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಬಂದು ‘ನೀನು ಬ್ಯಾರಿಯೊಂದಿಗೆ ಏನು ಮಾತನಾಡುತ್ತಿ. ನೀನು ಬ್ಯಾರಿಯ ಇಲ್ಲಿಂದ ಹೊರಡು’ ಎಂದು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆ.

ಈ ಸಂದರ್ಭ ಅಭಿಜಿತ್ ತಾನು ಪತ್ರಿಕಾ ವರದಿಗಾರ ಎಂದು ತನ್ನ ಐಡಿ ಕಾರ್ಡ್ ತೋರಿಸಿದರೂ ಮತ್ತೆ ಅವಾಚ್ಯ ಶಬ್ಧಗಳಿಂದ ಆ ಅಪರಿಚಿತ ವ್ಯಕ್ತಿ ನಿಂದಿಸಿದ್ದ. ಈ ಬಗ್ಗೆ ಅಭಿಜಿತ್ ಅದೇ ದಿನ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಆ ಸಂದರ್ಭದಲ್ಲಿ ಆ ವ್ಯಕ್ತಿಯ ಕಾರಿನ ನಂಬರ್ ನೋಟ್ ಮಾಡಿದ್ದರು.

ಪೊಲೀಸ್ ಆಯುಕ್ತ ಕುಲದೀಪ್ ಆರ್. ಜೈನ್ ಅವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದರಿಂದ ಅವರ ನಿರ್ದೇಶನದ ಮೇರೆಗೆ ಆರೋಪಿ ಚೇತನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಗೊಳಪಡಿಸಿದ್ದಾರೆ. ಜು. 28ರಂದು ಎಫ್‌ಐಆರ್ ದಾಖಲಾಗಿದ್ದು, ಬಳಿಕ ಪ್ರಕರಣದ ಆರೋಪಿ, ಕೋಟೆಕಾರ್ ನಿವಾಸಿ ಚೇತನ್ ಎಂಬಾತನನ್ನು ಬಂಧಿಸಿ, ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.

“ಪ್ರಕರಣದ ಬಗ್ಗೆ ಮಾಹಿತಿ ನೀಡಿರುವ ಅಭಿಜಿತ್, ‘ನನ್ನ ಸ್ನೇಹಿತೆಯ ಜತೆ ಮಧ್ಯಾಹ್ನ ಊಟ ಮುಗಿಸಿ ಹೊಟೇಲ್‌ನಿಂದ ಹೊರ ಬರುತ್ತಿದ್ದ ಸಂದರ್ಭ ಕಾರಿನಲ್ಲಿ ಬಂದ ಇಬ್ಬರು ಅಪರಿಚಿತರು ನಮ್ಮ ಬಳಿ ಬಂದಿದ್ದಾರೆ. ಅವರಲ್ಲಿ ಒಬ್ಬಾತ ಅವಾಚ್ಯ ಶಬ್ಧಗಳನ್ನು ಉಪಯೋಗಿಸಿ ನಿಂದಿಸಿದ್ದಾನೆ.

ನಾನು ವರದಿಗಾರ ಎಂದು ಹೇಳಿ ಐಡಿ ತೋರಿಸಿದರೂ ಸಮಾಧಾನಗೊಳ್ಳದೆ ನಿಂದನೆ ಮುಂದುವರಿಸಿದ್ದಾನೆ. ಅವರ ಕಾರಿನ ನಂಬರ್ ನೋಟ್ ಮಾಡಿದ್ದು, ಪ್ರಕರಣ ದಾಖಲಿಸಿದ್ದೇನೆ. ಠಾಣಾ ಪೊಲೀಸರು, ಎಸಿಪಿ ಸೇರಿದಂತೆ ಪೊಲೀಸ್ ಕಮಿಷನರ್ ಕೂಡಾ ಪ್ರಕರಣದಲ್ಲಿ ಸಹಕಾರ ನೀಡಿದ್ದಾರೆ” ಎಂದು ಹೇಳಿದ್ದಾರೆ.

DAKSHINA KANNADA

ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನ ಗಣಪತಿ ವಿಗ್ರಹದ ವಿಸರ್ಜನೆ

Published

on

ಮಂಗಳೂರು: ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನಲ್ಲಿ 3ದಿನಗಳ ಕಾಲ ನಡೆದ 17ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಗುರುವಾರ ರಾತ್ರಿ ಸಂಪನ್ನಗೊಂಡಿತು.

ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಸಹಯೋಗದಲ್ಲಿ ದಕ್ಷಿಣ ಕನ್ನಡ, ಉಡುಪಿ ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳ ಸಹಯೋಗದಲ್ಲಿ ನಡೆದ ಈ ಉತ್ಸವದ ಕೊನೆಗೆ ಶ್ರೀ ಸಿದ್ದಿವಿನಾಯಕ ದೇವರಿಗೆ ಮಹಾಪೂಜೆ ನೆರವೇರಿಸಲಾಯಿತು.

ಬಳಿಕ ಕಡೆಂಜ ಅಶೋಕ್ ಕುಮಾರ್ ಚೌಟ ಶೋಭಾಯಾತ್ರೆಯನ್ನು ಉದ್ಘಾಟಿಸಿದರು. ಚೆಂಡೆ ವಾದ್ಯ ಮೇಳ ಮತ್ತು ಭಜನಾ ಸೇವೆಗಳ ಜೊತೆಗೆ ಸಾಗಿ ಬಂದ ಶೋಭಾಯಾತ್ರೆಯು ಬಂಟ್ಸ್ ಹಾಸ್ಟೆಲ್ ನ ಹಿಂಭಾಗವಾಗಿ ಹೊರಟು ಪಿವಿಸ್ ಸರ್ಕಲ್, ನವಭಾರತ ಸರ್ಕಲ್, ಡೊಂಗರಕೇರಿ, ನ್ಯೂ ಚಿತ್ರ ಆಗಿ ಕಾರ್ ಸ್ಟ್ರೀಟ್ ಗೆ ಸಾಗಿ ಕುಡ್ತೇರಿ ಮಹಮ್ಮಾಯಿ ದೇವಸ್ಥಾನದ ಕೆರೆಗೆ ಬಂದು ಗಣಪತಿ ಮೂರ್ತಿಯ ವಿಗ್ರಹದ ವಿಸರ್ಜನೆ ಮಾಡಲಾಯಿತು.

3ಜಿಲ್ಲೆಗಳಿಂದ ಆಗಮಿಸಿದ ಬಂಟರ ಮತ್ತು ಊರ – ಪರವೂರ ಭಕ್ತರು ವೈಭವದ ಶೋಭಾಯಾತ್ರೆಯಲ್ಲಿ ಪಾಲ್ಗೊಂಡರು .

Continue Reading

LATEST NEWS

ಸಿರಿಮನೆ ಫಾಲ್ಸ್ ಗೆ ತೆರಳುತ್ತಿದ್ದ ವಿಭಿನ್ನ ಕೋಮಿನ ಜೋಡಿಗಳನ್ನು ತಡೆದ ಹಿಂದೂ ಕಾರ್ಯಕರ್ತರು – FIR ದಾಖಲು..!

Published

on

ಉಡುಪಿ: ವಿಭಿನ್ನ ಕೋಮಿನ ಜೋಡಿಗಳಿಬ್ಬರು ಜಾಲಿ ರೈಡ್ ಗೆ ತೆರಳಿದ್ದಾಗ ಜೋಡಿಗಳನ್ನು ತಡೆದು ನಿಲ್ಲಿಸಿದ ಸಂಘ ಪರಿವಾರದ ಕಾರ್ಯಕರ್ತರು ಅನೈತಿಕ ಪೊಲೀಸ್ ಗಿರಿ ನಡೆಸಿರುವ ವಿಡಿಯೊವೊಂದು ವೈರಲ್ ಆಗಿದೆ.

ಕಳೆದ ಎರಡು ತಿಂಗಳ ಹಿಂದೆ ಜೋಡಿಗಳಿಬ್ಬರು ಅಗುಂಬೆಯ ಸಿರಿಮನೆ ಫಾಲ್ಸ್ ಗೆ ತೆರಳಿದ್ದರು.

ಇವರಿಬ್ಬರು ವಿಭಿನ್ನ ಕೋಮಿನವರೆಂದು ತಿಳಿದ ಸಂಘ ಪರಿವಾರದ ಕಾರ್ಯಕರ್ತರು ಶೃಂಗೇರಿ ಬಳಿ ಅಡ್ಡ ಹಾಕಿ ಅನೈತಿಕ ಪೊಲೀಸ್ ಗಿರಿ ನಡೆಸಿದ್ದರು.

ಬಳಿಕ ಇಬ್ಬರ ವಿಡಿಯೋ ಚಿತ್ರೀಕರಣ ಮಾಡಿದ್ದರು.

ಈ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ  ಬಗ್ಗೆ  ಯುವತಿಯ ಸಹೋದರ ಅನೈತಿಕ ಪೊಲೀಸ್ ಹಾಗೂ ವಿಡಿಯೋ ಆಗಿರುವುದರ ಕುರಿತಾಗಿ  ಕಾಪು ಪೊಲೀಸ್  ಠಾಣೆಯಲ್ಲಿ ದೂರು ದಾಖಲಿಸಿದ್ದು, ತನಿಖೆ ಮುಂದುವರೆದಿದೆ.

 

 

Continue Reading

DAKSHINA KANNADA

ಹಿಂದೂ ನಾಯಕರ ಫೇಸ್ಬುಕ್‌ ಅಕೌಂಟ್‌ ಹ್ಯಾಕ್‌- ಶ್ರೀಕಾಂತ್‌ ಶೆಟ್ಟಿ ಆರೋಪ..!

Published

on

ಹಿಂದೂ ಜಾಗರಣ ವೇದಿಕೆಯ ಕರ್ನಾಟಕದ ಕೆಲವು ನಾಯಕರ ಫೇಸ್ಬುಕ್‌ ಖಾತೆಗಳನ್ನು ನಿಷ್ಕ್ರೀಯಗೊಳಿಸಿದಕ್ಕೆ ಹಿಂದೂ ಜಾಗರಣ  ವೇದಿಕೆ ಮುಖಂಡ ಶ್ರೀಕಾಂತ್‌ ಶೆಟ್ಟಿ ಆರೋಪಿಸಿದ್ದಾರೆ. 

ಉಡುಪಿ: ಹಿಂದೂ ಜಾಗರಣ ವೇದಿಕೆಯ ಕರ್ನಾಟಕದ ಕೆಲವು ನಾಯಕರ ಫೇಸ್ಬುಕ್‌ ಖಾತೆಗಳನ್ನು ನಿಷ್ಕ್ರೀಯಗೊಳಿಸಲಾಗಿದೆ.

ಆದರೆ ಇದನ್ನು ಸ್ವತಃ ಫೇಸ್ಬುಕ್‌ ಸಂಸ್ಥೆಯೇ ನಿಷ್ಕ್ರೀಯಗೊಳಿಸಿದೆಯೋ ಅಥವಾ ಯಾರದ್ದೋ ದೂರಿನ ಆಧಾರದಲ್ಲಿ ನಿಷ್ಕ್ರೀಯಗೊಳಿಸಲಾಗಿದೆಯೋ ಎನ್ನುವುದು ತಿಳಿದು ಬಂದಿಲ್ಲ.

ಆದರೆ ಇದು ಹಿಂದೂ ವಿಚಾರಧಾರೆಯ ಪ್ರಚಾರ ಮತ್ತು ಹೋರಾಟ ನಡೆಸುತ್ತಿರುವವರ ಮೇಲೆ ನಡೆದ ವ್ಯವಸ್ಥಿತ ಸೈಬರ್  ದಾಳಿಯಾಗಿದೆ ಎಂದು ವೇದಿಕೆ ಮುಖಂಡ ಶ್ರೀಕಾಂತ್‌ ಶೆಟ್ಟಿ ಆರೋಪಿಸಿದ್ದಾರೆ.

ಸ್ವತಃ ಶ್ರೀಕಾಂತ್‌ ಶೆಟ್ಟಿ ಸಂಘಟನೆಯ ಇತರ ಪ್ರಚಾರಕರಾದ ಪ್ರವೀಣ್‌ ಯಕ್ಷಮಠ, ಕೆ ಟಿ ಉಲ್ಲಾಸ್‌, ಸುಕೃತ್‌ ಭಾರದ್ವಾಜ್‌, ಅರವಿಂದ ಕೋಟೇಶ್ವರ ಮೊದಲಾದ 20ಕ್ಕೂ ಹೆಚ್ಚು ಮಂದಿಯ ಫೇಸ್ಬುಕ್‌ ಪೇಜ್‌ಗಳನ್ನು ಡಿಲಿಟ್ ಮಾಡಲಾಗಿದೆ.

ನಾವು ಯಾರೂ ಸಾಮಾಜಿಕ ಸಾಮರಸ್ಯವನ್ನು ಕೆಡಿಸಿಲ್ಲ. ಗಲಭೆ ಸೃಷ್ಟಿಸಿಲ್ಲ. ಕೇವಲ ಹಿಂದೂಪರ ಹೋರಾಟ ಮಾಡುತ್ತಿರುವವರು.

ಆದ್ದರಿಂದ ಹಿಂದೂ ಚಳುವಳಿಯಲ್ಲಿ ಭಾಗವಹಿಸುತ್ತಿರುವವರನ್ನು ಹತ್ತಿಕ್ಕುವ ಹುನ್ನಾರ ಇದು ಎನ್ನುವುದು ಸಾಬೀತಾಗಿದೆ ಎಂದವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಾಡಲಾಗಿರುವ ಕೆಲಸ ಇದು.

2014ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಹಿಂದೂವಾದಿ ಸಂಗಟನೆಳು ಮೋದಿ ಪರವಾಗಿ ಯಶಸ್ವಿ ಕೆಲಸ ಮಾಡಿದ್ದೆವು.

2024ರ ಚುನಾವಣೆಯಲ್ಲಿ ಮತ್ತೇ ಅದಾಗಬಾರದು ಎನ್ನುವ ಪೂರ್ವ ತಯಾರಿ ಇದಾಗಿದೆ ಎಂದವರು ಹೇಳಿದ್ದಾರೆ.

ಆದರೆ ಆರ್‌ಎಸ್‌ಎಸ್‌ನ ಭಾಗವಾಗಿರುವ ಹಿಂದು ಜಾಗರಣ ವೇದಿಕೆ ಸಾಮಾಜಿಕ ಜಾಲತಾಣಗಳನ್ನು ನಂಬಿಕೊಂಡಿರುವ ಫೇಸ್ಬುಕ್‌ ಉಳಿಯಲ್ಲ.

ಆನ್ ಗ್ರೌಂಡ್‌ ಜನರ ಮಧ್ಯೆ ಕೆಲಸ ಮಾಡವ ವೇದಿಕೆ.

ಈ ಫೇಸ್ಬುಕ್‌ ಖಾತೆಗಳ ನಿಷ್ಕ್ರೀಯ ಕೃತ್ಯವನ್ನು ಸವಾಲಾಗಿ ಸ್ವೀಕರಿಸಿ ಕೆಲಸ ಮಾಡುತ್ತದೆ ಎಂದು ಎಚ್ಚರಿಸಿದ್ದಾರೆ.

Continue Reading

LATEST NEWS

Trending