DAKSHINA KANNADA
ಮನೆಯಲ್ಲಿ ಸೊಳ್ಳೆ ಕಾಟವೇ? ಈ ಗಿಡಗಳನ್ನು ನೆಟ್ಟರೆ ಸೊಳ್ಳೆ ನಿಮ್ಮ ಹತ್ತಿರ ಸುಳಿಯುವುದಿಲ್ಲ
ಮಂಗಳೂರು: ಮಳೆಗಾಲದಲ್ಲಿ ಸೊಳ್ಳೆಗಳ ಕಾಟ ವಿಪರೀತವಾಗಿರುತ್ತದೆ. ರಾತ್ರಿಯಾದರೆ ಸಾಕು, ಕಿವಿ ಬಳಿ ಗುಯಿಂಗುಟ್ಟುತ್ತ ನಿದ್ದೆ ಮಾಡಲು ಕೂಡ ಬಿಡುವುದಿಲ್ಲ. ಸೊಳ್ಳೆಗಳ ಸಂತತಿಯು ವಿಪರೀತವಾದರೆ ಇನ್ನಿತ್ತರ ಆರೋಗ್ಯ ಸಮಸ್ಯೆಗಳಿಗೂ ದಾರಿ ಮಾಡಿಕೊಡುತ್ತವೆ. ಸೊಳ್ಳೆ ಕಚ್ಚಿದರೆ ಡೆಂಗ್ಯೂ ಮಲೇರಿಯಾ, ಚಿಕನ್ ಗುನ್ಯಾದಂಥಹ ಕಾಯಿಲೆಗಳು ಬರುತ್ತವೆ.
ಸೊಳ್ಳೆ ಏನಾದರೂ ಕಚ್ಚಿ ಬಿಟ್ಟರೆ ಆ ಜಾಗವು ಊದಿಕೊಂಡು ತುರಿಕೆ ಆರಂಭವಾಗಿ ಚರ್ಮದ ಗಂಭೀರ ಸಮಸ್ಯೆಗೆ ಕಾರಣವಾಗಬಹುದು. ಹೆಚ್ಚಿನವರು ಸೊಳ್ಳೆ ಪರದೆ, ಕಾಯಿಲ್, ಕ್ರೀಮ್ ಹೀಗೆ ನಾನಾ ರೀತಿಯಲ್ಲಿ ತಮ್ಮನ್ನು ರಕ್ಷಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ ಮನೆಯ ಸುತ್ತ ಮುತ್ತ ಈ ಗಿಡಗಳನ್ನು ನೆಟ್ಟರೆ ಸೊಳ್ಳೆಗಳು ನಿಮ್ಮ ಹತ್ತಿರವೇ ಸುಳಿಯುವುದಿಲ್ಲ.
ಸೊಳ್ಳೆಗಳಿಂದ ರಕ್ಷಿಸಲು ಹೀಗೆ ಮಾಡಿ:
- ಸೊಳ್ಳೆಗಳನ್ನು ಓಡಿಸಲು ಸುಲಭ ಉಪಾಯವೆಂದರೆ ಮನೆಯ ಸುತ್ತ ಮುತ್ತ ತುಳಸಿ ಮತ್ತು ಪುದೀನ ಸಸ್ಯವನ್ನು ನೆಡುವುದು. ಈ ಸಸ್ಯದ ಎಲೆಯಲ್ಲಿರುವ ಪರಿಮಳದಿಂದ ಸೊಳ್ಳೆಗಳು ಮತ್ತು ಕೀಟಗಳು ಮನೆಯೊಳಗೆ ಬರುವುದಿಲ್ಲ.
- ರೋಸರಿ ಸಸ್ಯವನ್ನು ಮನೆಯ ಹಾಸುಮಾಸಿನಲ್ಲಿ ನೆಡುವುದರಿಂದ ಸೊಳ್ಳೆಗಳು ಬರುವುದಿಲ್ಲ. ಇದರ ಪರಿಮಳಯುಕ್ತವಾದ ಸುವಾಸನೆಗೆ ಈ ಸೊಳ್ಳೆಗಳು ಹಾಗೂ ಕೀಟಗಳು ದೂರ ಓಡುತ್ತವೆ.
- ಲ್ಯಾವೆಂಡರ್ ಸಸ್ಯವು ಕೂಡ ಸೊಳ್ಳೆಗಳ ಕಾಟಕ್ಕೆ ಪ್ರಯೋಜನಕಾರಿಯಾಗಿದೆ. ಈ ಎಲೆಗಳಲ್ಲಿ ಕಂಡುಬರುವ ಎಸೆನ್ಶಿಯಲ್ ಆಯಿಲ್ ಪರಿಮಳದಿಂದ ಸೊಳ್ಳೆಗಳಿಂದ ಸುಲಭವಾಗಿ ಮುಕ್ತಿ ಪಡೆಯಬಹುದಾಗಿದೆ.
- ಮನೆಯ ಮುಂದೆ ಚೆಂಡು ಹೂವಿನ ಸಸ್ಯವನ್ನು ನೆಡುವುದರಿಂದ ನೋಡುವುದಕ್ಕೆ ಸುಂದರವಾಗಿ ಕಾಣುವುದಲ್ಲದೇ ಸೊಳ್ಳೆಗಳನ್ನು ಸುಲಭವಾಗಿ ಓಡಿಸಬಹುದು. ಈ ಹೂವಿನ ಸುವಾಸನೆಯು ಸೊಳ್ಳೆಗಳಿಗೆ ತೊಂದರೆ ಉಂಟುಮಾಡಿ ಅವುಗಳನ್ನು ಓಡಿಸುತ್ತವೆ.
DAKSHINA KANNADA
ಇನ್ಮುಂದೆ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಿಸುವಂತಿಲ್ಲ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
ಬೆಂಗಳೂರು: ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ ಅಂದ್ರೆ ಸೆಲೆಬ್ರಿಟಿಗಳು, ಗಣ್ಯವ್ಯಕ್ತಿಗಳು ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಿದೆ ಎಂದು ಸುತ್ತೋಲೆ ಹೊರಡಿಸಿದೆ.
ಗಣ್ಯವ್ಯಕ್ತಿಗಳು ಮಕ್ಕಳ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸಿ ಸಿಹಿ ಇತ್ಯಾದಿ ಹಂಚುವ ಅದ್ದೂರಿ ಕಾರ್ಯಕ್ರಮಗಳನ್ನು ಸಂಸ್ಥೆಯಲ್ಲಿ ಆಚರಿಸುವುದರಿಂದ ಮಕ್ಕಳಿಗೆ ಅವರ ಹುಟ್ಟು ಹಬ್ಬವನ್ನು ಈ ರೀತಿ ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲವಲ್ಲ ಅಂತ ಬೇಜಾರು ಮಾಡಿಕೊಳ್ಳುತ್ತವೆ. ಇದರಿಂದ ಮನಸ್ಸಿಗೆ ಆಘಾತವಾಗಿ ಮಕ್ಕಳ ಮನಸ್ಸು ದುರ್ಬಲವಾಗುವ ಸಂಭವ ಹೆಚ್ಚಾಗಿರುತ್ತದೆ. ಹೀಗಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ.
DAKSHINA KANNADA
ತೊಳೆದ್ರು ಬಿಳಿ ಬಟ್ಟೆ ಮೇಲಿನ ಕಲೆ ಹೋಗ್ತಿಲ್ವಾ? ಹೀಗೆ ಮಾಡಿ
ಮಂಗಳೂರು: ಬಿಳಿ ಬಟ್ಟೆಯನ್ನು ಕಲೆಯಾಗದಂತೆ ನೋಡಿಕೊಳ್ಳುವುದು ಕಷ್ಟದ ಕೆಲಸ. ಕೆಲವೊಮ್ಮೆ ಕೈ ತಪ್ಪಿ ಟೀ ಕಾಫಿ ಚೆಲ್ಲಿಯೋ, ಪೆನ್ನಿನ ಇಂಕ್ ತಾಗಿಯೋ ಬಿಳಿ ಬಟ್ಟೆಯ ಅಂದವನ್ನು ಹಾಳು ಮಾಡುತ್ತದೆ. ಈ ವೇಳೆ ಯಾವುದೇ ಡಿಟರ್ಜೆಂಟ್, ಸೋಪ್ ಬಳಸಿ ತಿಕ್ಕಿ ತೊಳೆದರೂ ಪ್ರಯೋಜನವಂತೂ ಆಗುವುದೇ ಇಲ್ಲ. ಬಟ್ಟೆಯನ್ನು ಜಾಸ್ತಿ ಉಜ್ಜಿದರೆ, ಆ ಬಟ್ಟೆಗಳು ಹಾಳಾಗುವ ಸಾಧ್ಯತೆ ಇರುತ್ತದೆ. ನಿಮಗೂ ಈ ರೀತಿ ಅನುಭವವಾಗಿದ್ದರೆ ಟೆನ್ಶನ್ ಮಾಡಿಕೊಳ್ಬೇಡಿ, ಈ ವಸ್ತುಗಳನ್ನು ಬಳಸಿ ಕಲೆಯನ್ನು ನಿವಾರಿಸಿಕೊಳ್ಳಬಹುದು.
- ಅರ್ಧ ಕಪ್ ನೀರಿಗೆ ಅರ್ಧ ಕಪ್ ವಿನೆಗರ್ ಮಿಶ್ರಣ ಮಾಡಿ ಬಿಳಿ ಬಟ್ಟೆಯ ಮೇಲೆ ಇರುವ ಕಲೆಗೆ ಸ್ಪ್ರೇ ಮಾಡಿ, ಸ್ವಲ್ಪ ಸಮಯ ಹಾಗೆ ಬಿಡಬೇಕು. ತದನಂತರದಲ್ಲಿ ಅದೇ ನೀರಿನಿಂದ ತಿಕ್ಕಿ ತೊಳೆದರೆ ಕಲೆ ಬಿಡುತ್ತದೆ.
- ಬಿಳಿ ಬಟ್ಟೆ ಮೇಲಿನ ಕಲೆಯನ್ನು ತೆಗೆದು ಹಾಕಲು ಅಡುಗೆ ಸೋಡಾ ಬೆಸ್ಟ್ ಎನ್ನಬಹುದು. ನೀರಿಗೆ ಅಡುಗೆ ಸೋಡಾ ಸೇರಿಸಿ, ಕಲೆಯಾದ ಬಟ್ಟೆಯನ್ನು ಆ ನೀರಿನಲ್ಲಿ ನೆನೆಸಿಡಬೇಕು. ಸ್ವಲ್ಪ ಸಮಯದ ಬಳಿಕ ಬಟ್ಟೆಯನ್ನು ತೊಳೆದರೆ ಕಲೆಯೂ ಹೋಗುತ್ತದೆ.
- ಬಿಳಿ ಬಟ್ಟೆಯಲ್ಲಿ ಕಲೆಯಿದ್ದರೆ ಆ ಜಾಗಕ್ಕೆ ನಿಂಬೆರಸ ಹಾಕಿ ಉಪ್ಪು ಮತ್ತು ಸೋಪಿನಿಂದ ಚೆನ್ನಾಗಿ ತೊಳೆದರೆ ಕಲೆಯೂ ಇಲ್ಲದಂತಾಗುತ್ತದೆ.
ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಸೇರಿಸಿ ಉಜ್ಜುವುದರಿಂದ ಬಿಳಿ ಬಟ್ಟೆ ಮೇಲಿನ ಕಲೆಯೂ ನಿವಾರಣೆಯಾಗುತ್ತದೆ. - ಬಿಳಿ ಬಟ್ಟೆಯಲ್ಲಿ ಕಲೆಯಿದ್ದರೆ ಸ್ವಲ್ಪ ಬಿಸಿ ನೀರನ್ನು ಆ ಜಾಗಕ್ಕೆ ಹಾಕಿ, ಡಿರ್ಟಜೆಂಟ್ ನಿಂದ ಉಜ್ಜಿ ಕಲೆಯನ್ನು ತೆಗೆದು ಹಾಕಬಹುದು.
- ಬಿಳಿ ಬಟ್ಟೆ ಮೇಲಿನ ಕಲೆ ನಿವಾರಣೆಗೆ ಟೂತ್ ಪೇಸ್ಟ್ ಬಳಸುವುದು ಪರಿಣಾಮಕಾರಿಯಾಗಿದೆ. ಕಲೆ ಮೇಲೆ ಟೂತ್ಪೇಸ್ಟ್ ಅನ್ವಯಿಸಿ, ಹತ್ತರಿಂದ ಹದಿನೈದು ನಿಮಿಷಗಳ ಕಾಲ ಹಾಗೆ ಬಿಡಬೇಕು. ಆ ಬಳಿಕ ಡಿಟೆರ್ಜಂಟ್ ಬಳಸಿ ಸ್ವಚ್ಛಗೊಳಿಸಿದರೆ ಕಲೆ ಉಳಿಯುವುದಿಲ್ಲ.
DAKSHINA KANNADA
ಕಟೀಲು ಶ್ರೀದುರ್ಗಾ ಪರಮೇಶ್ವರಿ ಕ್ಷೇತ್ರಕ್ಕೆ ಸ್ವರ್ಣಪಾದುಕೆ ಸಮರ್ಪಣೆ
ಮಂಗಳೂರು: ದಕ್ಷಿಣಾಮ್ನಾಯ ಶೃಂಗೇರಿ ಶಾರದಾ ಪೀಠದ 36ನೆಯ ಅಧಿಪತಿಗಳಾದ ಜಗದ್ಗುರು ಶ್ರೀಭಾರತೀ ತೀರ್ಥ ಮಹಾಸ್ವಾಮಿಗಳವರ ಸನ್ಯಾಸ ಸ್ವೀಕಾರ ಸುವರ್ಣಮಹೋತ್ಸವದ ಸ್ಮರಣಾರ್ಥ ಕಟೀಲು ಶ್ರೀದುರ್ಗಾ ಪರಮೇಶ್ವರಿ ಕ್ಷೇತ್ರಕ್ಕೆ ಶೃಂಗೇರಿ ಶಾರದಾಪೀಠದ ವತಿಯಿಂದ 40 ಲಕ್ಷ ರೂಪಾಯಿ ಮೌಲ್ಯದ ಸ್ವರ್ಣಪಾದುಕೆ ಹಾಗೂ ಒಡ್ಯಾಣವನ್ನು ಸಮರ್ಪಿಸಲಾಗಿದೆ.
ಶ್ರೀಭಾರತೀ ತೀರ್ಥ ಮಹಾಸ್ವಾಮಿಗಳವರು 1974 ರಲ್ಲಿ ಸನ್ಯಾಸ ಸ್ವೀಕರಿಸಿದ್ದು, 2024 ಕ್ಕೆ 50 ವರ್ಷಗಳಾಗುತ್ತಿವೆ. ಶೃಂಗೇರಿಯಲ್ಲಿ ಉಭಯ ಜಗದ್ಗುರುಗಳು ಈ ಪಾದುಕೆ ಹಾಗೂ ಒಡ್ಯಾಣವನ್ನು ಕಟೀಲು ದೇವಳದ ಆನುವಂಶಿಕ ಅರ್ಚಕ ಶ್ರೀಹರಿನಾರಾಯಣದಾಸ ಅಸ್ರಣ್ಣ ಅವರಿಗೆ ಹಸ್ತಾಂತರಿಸಿದರು. ಇದನ್ನು ಜೂ.19 ರಂದು ಶ್ರೀದೇವಿಗೆ ತೊಡಿಸಿ ಅಲಂಕಾರ ಮಾಡಲಾಯಿತು. ಈ ಸೇವೆಯನ್ನು ಶೃಂಗೇರಿ ಶ್ರೀಮಠದ ಶಿಷ್ಯರಾದ ಆಂಧ್ರಪ್ರದೇಶದ ಶ್ರೀಪೋಲಿಸೆಟ್ಟಿ ಶ್ಯಾಮ್ ಸುಂದರ್ ಅವರು ನೀಡಿರುತ್ತಾರೆ.
Read More..; ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕ್ರಿಕೆಟಿಗ ಮಯಂಕ್ ಅಗರವಾಲ್ ಭೇಟಿ