LATEST NEWS
ಗೂಗಲ್ ಟ್ರೆಂಡ್ಸ್ ನಲ್ಲಿ ಅತಿ ಹೆಚ್ಚು ಹುಡುಕಾಟ; ಟಾಪ್ 5 ಸ್ಥಾನದಲ್ಲಿರುವ ಐದು ಬ್ಯಾಟರ್ಗಳ ಹೆಸರು ಬಹಿರಂಗ
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ವಿಶ್ವದ ಅತ್ಯಂತ ಫೇಮಸ್ ಜೊತೆಗೆ ಶ್ರೀಮಂತ ಕ್ರಿಕೆಟ್ ಲೀಗ್. ವಿಶ್ವದ ಮೂಲೆ ಮೂಲೆಗಳಲ್ಲಿ ಐಪಿಎಲ್ ವೀಕ್ಷಿಸುವ ಅಪಾರ ಅಭಿಮಾನಿಗಳಿದ್ದಾರೆ.
ಐಪಿಎಲ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಆಟಗಾಗರರು ಜನಪ್ರಿಯತೆ ಗಿಟ್ಟಿಸಿಕೊಂಡಿದ್ದಾರೆ. ವಿಶ್ವದಾದ್ಯಂತ ಕ್ರಿಕೆಟ್ ಪ್ರೇಮಿಗಳು ತಮ್ಮ ನೆಚ್ಚಿನ ಕ್ರಿಕೆಟಿಗನಿಗಾಗಿ ಗೂಗಲ್ನಲ್ಲಿ ಹುಡುಕಾಡುತ್ತಾರೆ.
ಐಪಿಎಲ್ 2024 ಆರಂಭವಾಗುವ ಜೊತೆಗೆ, ಗೂಗಲ್ ಟ್ರೆಂಡ್ಸ್ನಲ್ಲಿ ಜಾಗತಿಕವಾಗಿ ಹೆಚ್ಚು ಹುಡುಕಲ್ಪಟ್ಟ ಅಗ್ರ ಐದು ಬ್ಯಾಟರ್ಗಳ ಹೆಸರನ್ನು ಬಹಿರಂಗಪಡಿಸಿದೆ. ಜನವರಿ ಬಳಿಕ ಕ್ರಿಕೆಟ್ ಆಡದೇ ಇದ್ದರೂ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ ಮೊದಲ ಸ್ಥಾನ ಉಳಿಸಿಕೊಂಡಿರೋದು ಅಚ್ಚರಿಯ ಸಂಗತಿ.
ಇವರೇ ಆ ಐವರು :
1. ಕೊಹ್ಲಿ ಅಗ್ರಸ್ಥಾನ :
ವಿರಾಟ್ ಕೊಹ್ಲಿ ಕ್ರಿಕೆಟ್ ಜಗತ್ತು ಕಂಡ ಶ್ರೇಷ್ಠ ಕ್ರಿಕೆಟಿಗರಲ್ಲಿ ಒಬ್ಬರಾದ ವಿರಾಟ್ ಕೊಹ್ಲಿ, ಜನವರಿ ಬಳಿಕ ಕ್ರಿಕೆಟ್ನಿಂದ ದೂರವಿದ್ದರೂ ಐಪಿಎಲ್ನಲ್ಲಿ ಮಿಂಚುತ್ತಿದ್ದಾರೆ. ಎರಡು ತಿಂಗಳಿನಿಂದ ಮೈದಾನಕ್ಕೆ ಇಳಿಯದೇ ಇದ್ದರೂ ಅವರ ಜನಪ್ರಿಯತೆ ಮಾತ್ರ ಕಡಿಮೆಯಾಗಿಲ್ಲ ಅನ್ನೋದಕ್ಕೆ ಇದೇ ಸಾಕ್ಷಿ. ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ಬಲವಾಗಿದ್ದಾರೆ. ಈ ಸೀಸನ್ನಲ್ಲಿ ಕೂಡ ಅವರು ಆರಂಭಿಕರಾಗಿ ಕಣಕ್ಕಿಳಿದಿದ್ದಾರೆ.
ಮೊದಲ ಪಂದ್ಯದಲ್ಲಿ ದೊಡ್ಡ ರನ್ ಗಳಿಸಲು ವಿಫಲವಾದರೂ, ಟಿ20 ಕ್ರಿಕೆಟ್ನಲ್ಲಿ 12,000 ರನ್ ಪೂರೈಸಿದ ಸಾಧನೆ ಮಾಡಿದರು, ಸಿಎಸ್ಕೆ ವಿರುದ್ಧ ಐಪಿಎಲ್ನಲ್ಲಿ 1000 ರನ್ ಗಳಿಸಿದ ಸಾಧನೆ ಮಾಡಿದರು.
2. ರೋಹಿತ್ ಶರ್ಮಾಗೆ ಎರಡನೇ ಸ್ಥಾನ :
ಮುಂಬೈ ಇಂಡಿಯನ್ಸ್ನ ಮಾಜಿ ನಾಯಕ ರೋಹಿತ್ ಶರ್ಮಾ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಮುಂಬೈ ಇಂಡಿಯನ್ಸ್ ತಂಡವನ್ನು ಐದು ಬಾರಿ ಚಾಂಪಿಯನ್ ಮಾಡಿದ ಯಶಸ್ವಿ ನಾಯಕನಾಗಿ ರೋಹಿತ್ ಶರ್ಮಾ ಗುರುತಿಸಿಕೊಂಡಿದ್ದರು. ಈ ಬಾರಿ ಐಪಿಎಲ್ನಲ್ಲಿ ಅವರು ನಾಯಕತ್ವ ಸ್ಥಾನದಿಂದ ಕೆಳಗಿಳಿದಿದ್ದಾರೆ. ಹಾರ್ದಿಕ್ ಪಾಂಡ್ಯ ತಂಡದ ನಾಯಕತ್ವ ವಹಿಸಿದ್ದಾರೆ. ಇದರಿಂದ ರೋಹಿತ್ ಅಭಿಮಾನಿಗಳು ಅಭಿಮಾನಿಗಳು ಆಕ್ರೋಶಗೊಂಡಿದ್ದರು.
3. ಶುಭಮನ್ ಗಿಲ್
ಭಾರತ ತಂಡದ ಆರಂಭಿಕ ಬ್ಯಾಟರ್ ಶುಭಮನ್ ಗಿಲ್ ಭವಿಷ್ಯದ ಸೂಪರ್ ಸ್ಟಾರ್ ಎನಿಸಿಕೊಂಡಿದ್ದಾರೆ. ಗುಜರಾತ್ ಟೈಟಾನ್ಸ್ ಪರ ಆಡುತ್ತಿರುವ ಗಿಲ್ ಪಂದ್ಯದಿಂದ ಪಂದ್ಯಕ್ಕೆ ತಮ್ಮ ಪ್ರದರ್ಶನವನ್ನು ಉತ್ತಮಗೊಳಿಸಿದ್ದಾರೆ, ಅವರು ಈಗಾಗಲೇ ವಿಶ್ವಾದ್ಯಂತ ಕ್ರಿಕೆಟ್ ಅಭಿಮಾನಿಗಳ ಗಮನವನ್ನು ಸೆಳೆದಿದೆ, ಈ ವಾರ ಅವರನ್ನು ಹೆಚ್ಚು ಹುಡುಕಲ್ಪಟ್ಟ ಬ್ಯಾಟರ್ಗಳಲ್ಲಿ ಒಬ್ಬರನ್ನಾಗಿ ಮಾಡಿದೆ. ಪ್ರಸ್ತುತ ಗಿಲ್ ಗುಜರಾತ್ ಟೈಟನ್ಸ್ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ.
4. ಶ್ರೇಯಸ್ ಅಯ್ಯರ್
ಆಕ್ರಮಣಕಾರಿ ಬ್ಯಾಟಿಂಗ್ ನಿಂದಲೇ ಗಮನ ಸೆಳೆದಿರುವ ಶ್ರೇಯಸ್ ಅಯ್ಯರ್ ಐಪಿಎಲ್ನಲ್ಲೂ ಉತ್ತಮ ಆಟಗಾರ ಎಂದೆನಿಸಿಕೊಂಡಿದ್ದಾರೆ. ಕೋಲ್ಕತ್ತಾ ನೈಟ್ ರೈಡರ್ಸ್ನ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿರುವ ಅಯ್ಯರ್ ಅವರ ನಾಯಕತ್ವ ಮತ್ತು ಬ್ಯಾಟಿಂಗ್ ಅವರ ತಂಡದ ಪ್ರದರ್ಶನಗಳಲ್ಲಿ ಪ್ರಮುಖವಾಗಿದೆ.
5. ಕೆಎಲ್ ರಾಹುಲ್
ಲಕ್ನೋ ಸೂಪರ್ ಜೈಂಟ್ಸ್ ನಾಯಕ ಕೆಎಲ್ ರಾಹುಲ್ ಕೂಡಾ ಈ ಪಟ್ಟಿಯಲ್ಲಿದ್ದಾರೆ. ಅವರು 5 ನೇ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಇತ್ತೀಚಿನ ಐಪಿಎಲ್ ಸೀಸನ್ಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದವರಲ್ಲಿ ಒಬ್ಬರಾಗಿದ್ದಾರೆ. ತಂಡಕ್ಕೆ ಅವರದೇ ಮಹತ್ವದ ಕೊಡುಗೆ ನೀಡಿದ್ದಾರೆ.
BELTHANGADY
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು(59 ವ) ಅವರು ಹೃದಯಾಘಾತದಿಂದ ಮೇ.1ರಂದು ರಾತ್ರಿ ನಿಧನರಾಗಿದ್ದಾರೆ.
ಮುಂದೆ ಓದಿ..;ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ
ಕೋಟದಲ್ಲಿ ಮೇ.1ರಂದು ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಹಾಕಿದ್ದರು. ಮೇಳದ ಬಳಿಕ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.
ನಾರಾಯಣ ಮಯ್ಯು ಹಾಗೂ ಲಕ್ಷ್ಮೀ ದಂಪತಿ ಪುತ್ರನಾಗಿದ್ದು 1964ರಲ್ಲಿ ಪುತ್ತೂರಿನ ಸೇಡಿಯಾಪಿನಲ್ಲಿ ಜನಿಸಿದರು. ತನ್ನ 18 ನೇ ವಯಸ್ಸಿನಲ್ಲಿ ಯಕ್ಷಗಾನದಲ್ಲಿ ಬಣ್ಣ ಹಚ್ಚಲು ಆರಂಭಿಸಿದ ಇವರು ಸ್ತ್ರೀ ವೇಷ, ರಾಜ ವೇಷ, ಪುಂಡು ವೇಷಗಳಲ್ಲಿ ನಿಸ್ಸೀಮರಾಗಿದ್ದರು. ಇನ್ನು ಮಾಲಿನಿ, ಚಿತ್ರಾಂಗದೆ, ಮೋಹಿನಿ, ದಾಕ್ಷಾಯಿನಿ, ಪ್ರಮೀಳೆ, ಶ್ರೀ ದೇವಿ, ಸೀತೆ, ದೇವೆಂದ್ರ, ದುಶ್ಯಾಸನ ಮೊದಲಾದ ಪಾತ್ರಗಳ ಅಭಿನಯದಲ್ಲಿಯೂ ಸೈ ಎನಿಸಿಕೊಂಡಿದ್ದರು. ಮೃತರು ಆರೋಗ್ಯ ಸಹಾಯಕಿಯಾಗಿರುವ ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.
LATEST NEWS
ಮುಂದಿನ 5 ದಿನ ರಾಜ್ಯದ 25 ಜಿಲ್ಲೆಗಳಲ್ಲಿ ಬಿಸಿ ಗಾಳಿ ಸಾಧ್ಯತೆ; ಎಲ್ಲೆಲ್ಲಿ?
ಮಂಗಳೂರು : ರಾಜ್ಯದಲ್ಲಿ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಲಿದ್ದು, ಬಿಸಿಲಾಘಾತದಿಂದ ಜನ, ಜಾನುವಾರು ಮತ್ತು ಪಕ್ಷಿ ಸಂಕುಲ ತತ್ತರಿಸಿದೆ. ನೀರಿಗೆ ತತ್ವಾರ ಎದುರಾಗಿದೆ. ಇಂತಹ ಪರಿಸ್ಥಿತಿಯಲ್ಲಿಯೇ ಇದೀಗ ಹವಾಮಾನ ಇಲಾಖೆಯು ರಾಜ್ಯದ 25 ಜಿಲ್ಲೆಗಳಿಗೆ ಶಾಖಾಘಾತದ ಮುನ್ಸೂಚನೆ ನೀಡಿದೆ. ಇಂದಿನಿಂದ 5 ದಿನಗಳ ಕಾಲ ಬಿಸಿ ಗಾಳಿ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.
ಯಾವ ಜಿಲ್ಲೆಗಳಿಗೆ ಬಿಸಿಲಾಘಾತ?
ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ, ಬಳ್ಳಾರಿ, ಹಾಸನ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಮೇ 5 ರವರೆಗೂ ಇದೇ ಪರಿಸ್ಥಿತಿ ಇರಲಿದೆ ಎಂದು ಇಲಾಖೆ ತಿಳಿಸಿದೆ.
ಮೇ 4 ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ವಾತಾವರಣವಿರುವ ಸಂಭವವಿದೆ.
ಮಳೆಯಾಗುವ ಸಾಧ್ಯತೆ :
ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಯ ಕೆಲವೆಡೆ ಬುಧವಾರ ಹಗುರ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ನಾಲ್ಕುದಿನ ಒಣಹವೆ ಇರಲಿದೆ.
ಮೇ 6 ರಿಂದ ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ : ಮಂಗಳೂರು ವಿಮಾನ ನಿಲ್ದಾಣವಿನ್ನು ನಿಶ್ಶಬ್ದ ವಲಯ!
ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ :
ಇಂದಿನಿಂದ(ಮೇ 1 ರಿಂದ) ಮುಂದಿನ ಐದು ದಿನಗಳು ಬಾಗಲಕೋಟೆ, ಕಲಬುರಗಿ ಹಾಗೂ ಕೊಪ್ಪಳದಲ್ಲಿ ರಾತ್ರಿಯ ಅವಧಿಯೂ ಬಿಸಿ ವಾತಾವರಣದಿಂದ ಕೂಡಿರುವ ಸಾಧ್ಯತೆಯಿದೆ. ಮಂಗಳವಾರ ಬೆಳಿಗ್ಗೆ 8.30 ರಿಂದ ಬುಧವಾರ ಬೆಳಗ್ಗಿನ ತನಕದ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 42.8 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 38.2 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ಮೂರು ದಿನ 38 ಡಿಗ್ರಿ ಸೆಲ್ಸಿಯಸ್ ದಾಟಿದೆ.
DAKSHINA KANNADA
ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ
ಮಂಗಳೂರು: ಸಂಗೀತ, ಭರತನಾಟ್ಯದ ಮಾದರಿಯಲ್ಲಿ ಯಕ್ಷಗಾನಕ್ಕೂ ನಿರ್ದಿಷ್ಟ ಚೌಕಟ್ಟಿನಲ್ಲಿ ಪಠ್ಯ ರಚಿಸಿ ಪರೀಕ್ಷೆಗಳನ್ನು ನಡೆಸುವ ಪ್ರಯತ್ನಗಳು ನಡೆಯುತ್ತಿದೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದರು.
ಮಂಗಳೂರಿನ ಪ್ರೆಸ್ ಕ್ಲಬ್ ವತಿಯಿಂದ ನಡೆದ ಪ್ರೆಸ್ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಯಕ್ಷಗಾನದಲ್ಲಿ ಪ್ರತಿಯೊಬ್ಬ ಗುರು ತಮ್ಮದೇ ಆದ ಶೈಲಿಯಲ್ಲಿ ನಾಟ್ಯವನ್ನು ಕಲಿಸುತ್ತಾರೆ. ಯಕ್ಷಗಾನ ಕಲಿಕೆಗೆ ಒಂದು ಚೌಕಟ್ಟು ರೂಪಿಸುವ ಮೂಲಕ ಏಕರೂಪತೆ ತರಬೇಕಾಗಿದೆ. ಯಕ್ಷಧ್ರುವ ಪಟ್ಲ ಫೌಂಡೇಶನ್ನ ಯಕ್ಷ ಶಿಕ್ಷಣ ಯೋಜನೆಯು ಪಠ್ಯ ರೂಪಿಸಿದ್ದು, ಫೌಂಡೇಶನ್ನ ಶಿಕ್ಷಕರು ಇದರ ಪ್ರಕಾರವೇ ನಾಟ್ಯ ಕಲಿಸುತ್ತಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಯಕ್ಷಗಾನಕ್ಕೆಂದೇ ಒಂದು ಸೀಲೆಬಸ್ ಮಾಡಿ ಅದರ ಮುಖೇನ ಯಕ್ಷಗಾನ ನಾಟ್ಯ ಕಲಿಯುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದರು.
- FILM7 days ago
“ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?
- DAKSHINA KANNADA7 days ago
ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?
- LATEST NEWS7 days ago
ಕಾಲಿನ ಮೂಲಕವೇ ಕಾರು ಚಲಾಯಿಸಿ, ಡ್ರೈವಿಂಗ್ ಲೈಸೆನ್ಸ್ ಪಡೆದ ಏಷ್ಯಾದ ಮೊದಲ ಮಹಿಳೆ!
- DAKSHINA KANNADA6 days ago
ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ