ಮಂಗಳೂರು: ನಗರದ ಸುರತ್ಕಲ್ ಹತ್ತಿರದ ಕಾಟಿಪಳ್ಳ ಗ್ರಾಮದ ಗಣೇಶಪುರದಲ್ಲಿ ವಾಸ್ತವ್ಯ ಹೂಡಿದ್ದ 2 ಮಕ್ಕಳ ತಾಯಿ ತನ್ನ ಮಕ್ಕಳೊಂದಿಗೆ ನಾಪತ್ತೆಯಾದ ಘಟನೆ ನಡೆದಿದೆ.
ಭಾರತಿ ಮಾದರ (35 ವರ್ಷ) ಮಕ್ಕಳಾದ ಅಮೃತ (11 ವರ್ಷ) ಮತ್ತು ಗಣೇಶ್ (9 ವರ್ಷ) ನಾಪತ್ತೆಯಾದವರಾಗಿದ್ದಾರೆ.
ಭಾರತಿ ತನ್ನ ಇಬ್ಬರು ಮಕ್ಕಳ ಜೊತೆ ಮಾ.21ರ ರಾತ್ರಿ ಮನೆಯಿಂದ ಹೋದವರು ಇಲ್ಲಿಯವರೆಗೆ ಹಿಂತಿರುಗಿರಲಿಲ್ಲ. ಅವರು ಕಾಣೆಯಾಗಿರುವ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾದವರ ಚಹರೆ ಇಂತಿದೆ:
ಭಾರತಿ ಮಾದರ: ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಶರೀರ, 4 ಅಡಿ 6 ಇಂಚು ಎತ್ತರ, ಬಲಗೈಯಲ್ಲಿ ಎಚ್.ಬಿ. ಎಂಬ ಹಚ್ಚೆ ಇದೆ, ಕನ್ನಡ, ಹಿಂದಿ ಮತ್ತು ತುಳು ಭಾಷೆ ಅರ್ಥವಾಗುತ್ತದೆ.
ಕಾಣೆಯಾಗುವ ಸಮಯದಲ್ಲಿ ಹಳದಿ ಬಣ್ಣದಲ್ಲಿ ಕೆಂಪು ಚುಕ್ಕೆಗಳಿರುವ ಸೀರೆ ಹಾಗೂ ಕಪ್ಪು ಬಣ್ಣದ ರವಿಕೆ ಧರಿಸಿರುತ್ತಾರೆ.
ಅಮೃತಾ: 3 ಅಡಿ 5ಇಂಚು ಎತ್ತರ, 5ನೇ ತರಗತಿ ಓದುತ್ತಿದ್ದು, ಎಣ್ಣೆ ಕಪ್ಪು ಮೈಬಣ್ಣ, ಕನ್ನಡ ಭಾಷೆ ತಿಳಿದಿರುತ್ತದೆ, ಕಪ್ಪು ಬಣ್ಣದ ಧೋತಿ ಪ್ಯಾಂಟ್ ಮತ್ತು ಕೆಂಪು ಬಣ್ಣದ ಟಾಪ್ ಧರಿಸಿರುತ್ತಾಳೆ.
ಗಣೇಶ: 3 ಅಡಿ ಎತ್ತರ, 3ನೇ ತರಗತಿ ಓದುತ್ತಿದ್ದು, ಎಣ್ಣೆ ಕಪ್ಪು ಮೈಬಣ್ಣ, ಕನ್ನಡ ಭಾಷೆ ತಿಳಿದಿರುತ್ತದೆ, ಕಪ್ಪು ಬಣ್ಣದ ಟೀ ಶರ್ಟ್ ಹಾಗೂ ನೀಲಿ ಬಣ್ಣದ ಚಡ್ಡಿ ಧರಿಸಿರುತ್ತಾರೆ.
ಈ ತಾಯಿ ಮಕ್ಕಳು ಪತ್ತೆಯಾದಲ್ಲಿ ಸುರತ್ಕಲ್ ಪೊಲೀಸ್ ಠಾಣಾ ದೂ.ಸಂಖ್ಯೆ: 0824-2220540, ಮೊ.ಸಂಖ್ಯೆ:- 9480805360, 9480802345, ಕಂಟ್ರೋಲ್ ರೂಂ: 0824-2220800 ಮೂಲಕ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.