Connect with us

ಬಸ್ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ಮಗ ಬಲಿ: ಜಿಲ್ಲಾಧಿಕಾರಿಗೆ ಪತ್ರ ಬರೆಯುತ್ತಾ ರೋಧಿಸಿದ ಹೆತ್ತ ಕರುಳು

Published

on

ಬಸ್ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ಮಗ ಬಲಿ: ಜಿಲ್ಲಾಧಿಕಾರಿಗೆ ಪತ್ರ ಬರೆಯುತ್ತಾ ರೋಧಿಸಿದ ಹೆತ್ತ ಕರುಳು

ಉಡುಪಿ: ಇತ್ತೀಚಿನ ದಿನಗಳಲ್ಲಿ ಖಾಸಗಿ ಬಸ್ ಸಿಬ್ಬಂದಿಗಳಿಗೆ ಕೊಂಚ ಮಾನವೀಯತೆ ಕಮ್ಮಿಯಾದಂತೆ ಕಾಣಿಸುತ್ತೆ.

ಲಾಂಗ್ ಜರ್ನಿ ಮಾಡುವವರಿಗೆ ಸೇಫ್ಟಿಯೇ ಇಲ್ಲದಂತಾಗಿದೆ. ಇದಕ್ಕೆ ಪ್ರತ್ಯಕ್ಷ ಉದಾಹರಣೆ ಮೊನ್ನೆ-ಮೊನ್ನೆ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದ ಘಟನೆ.

ಹೌದು.. ಖಾಸಗಿ ಬಸ್ ಸಿಬ್ಬಂದಿಗಳ ಬೇಜವಾಬ್ದಾರಿಯಿಂದ ಮಗನನ್ನು ಕಳೆದುಕೊಂಡ ತಾಯಿಯೊಬ್ಬರು ಉಡುಪಿ ಜಿಲ್ಲಾಧಿಕಾರಿಗೆ ಬರೆದಿರುವ ಬಹಿರಂಗ ಪತ್ರ ಅದೆಂತವರಿಗೂ ಕಣ್ಣೀರು ತರಿಸುತ್ತೆ.

ತನ್ನ ಕಂದಮ್ಮನನ್ನು ಕಳೆದುಕೊಂಡು ಹೆತ್ತಬ್ಬೆ ಬರೆದಿರುವ ಕಣ್ಣೀರ ಪತ್ರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮನಕಲಕುವ ಈ ಪತ್ರಕ್ಕೆ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಪ್ರತಿಕ್ರಿಯೆ ನೀಡಿದ್ದಾರೆ.

ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಆದ್ರೆ ಏನು ಪ್ರಯೋಜನ ತನ್ನ ಮಗನನ್ನು ಕಳೆದುಕೊಂಡು ರೋಧಿಸುತ್ತಿರುವ ಆ ಹೆತ್ತಕರುಳಿನ ಗೋಳು ಕೇಳೋರ್ಯಾರು.?.

ಅಷ್ಟಕ್ಕೂ ತಾಯಿ ಬರೆದ ಪತ್ರದಲ್ಲೇನಿದೆ.? ಇಲ್ಲಿದೆ ಓದಿ…

ಜಿಲ್ಲಾಧಿಕಾರಿ ಸರ್.. ನಮಸ್ತೆ..,

‘ನಮಗಿದ್ದ ಒಬ್ಬನೇ ಮಗ ಸುಹಾಸ್‌ ಮಾರ್ಚ್‌ 7ರಂದು ಬೆಂಗಳೂರಿನಿಂದ ಕುಂದಾಪುರಕ್ಕೆ ಹೊರಟ್ಟಿದ್ದ.

ರಾತ್ರಿ 12.30ಕ್ಕೆ ಟೀ ಕುಡಿದು ಬಸ್ ಹತ್ತಿದ್ದ. ಬಸ್ ಹತ್ತುವಾಗ ಹುಷಾರಾಗಿಯೇ ಇದ್ದ. ಅಲ್ಲಿಯವರೆಗೂ ಎಲ್ಲವೂ ಸರಿಯಿತ್ತು.

ಬಸ್‌ ಬೆಂಗಳೂರಿನಿಂದ ಹೊರಟ ಬಳಿಕ ದಾರಿ ಮಧ್ಯೆ ಮಗನಿಗೆ ಸುಸ್ತು ಹೆಚ್ಚಾಗಿ ಎದೆನೋವು ಕಾಣಿಸಿಕೊಂಡಿದೆ.

2 ಬಾರಿ ಎದೆ ನೋವಾಗುತ್ತಿದೆ ಎಂದು ಬಸ್‌ ಸಿಬ್ಬಂದಿ ಬಳಿ ಹೇಳಿಕೊಂಡಿದ್ದಾನೆ.

ಆದರೆ, ‘ದುರ್ಗಾಂಬಾ’ ಬಸ್ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದಾರೆ. ಬಸ್‌ ಸಿಬ್ಬಂದಿಗಳ ನಿರ್ಲಕ್ಷ್ಯ ಧೋರಣೆಯಿಂದ ನನ್ನ ಮಗನನ್ನು ಕಳೆದುಕೊಳ್ಳಬೇಕಾಯಿತು’.

“ನನ್ನ ಮಗ ‘ಪ್ರೆಸಿಡೆನ್ಸಿ ಯೂನಿವರ್ಸಿಟಿ ರಾಜನಕುಂಟೆ ಬೆಂಗಳೂರು’ ಇಲ್ಲಿ 4 ನೇ ವರ್ಷದ ಎಂಜಿನಿಯರಿಂಗ್ ಓದುತ್ತಿದ್ದ.

ಮಾರ್ಚ್‌ 7ರಂದು ಮಧ್ಯರಾತ್ರಿ ಮಗನಿಗೆ ಕರೆ ಮಾಡಿದಾಗ ಸ್ವೀಕರಿಸಲಿಲ್ಲ.

ಹಾಗಾಗಿ, ಟಿಕೆಟ್‌ ಬುಕ್ ಮಾಡಿದ ಬಸ್‌ ಕಚೇರಿಗೆ ಸತತ ಅರ್ಧ ಗಂಟೆಯವರೆಗೂ ನಿರಂತರವಾಗಿ ಕರೆ ಮಾಡಿದರೂ ರೆಸ್ಪಾನ್ಸ್ ಇರಲಿಲ್ಲ.

ನಂತರ ಕಾಲ್‌ಗೆ ಉತ್ತರಿಸಿದ ಸಿಬ್ಬಂದಿ ‘ಬಸ್‌ ಬರುತ್ತಿದೆ’ ಎಂದು ಜೋರಾಗಿ ಮಾತನಾಡಿ ಕಾಲ್‌ ಕಟ್‌ ಮಾಡಿದರು.

‘ಮಗ ಕಾಲ್ ರಿಸೀವ್ ಮಾಡ್ತಿಲ್ಲ, ದಯವಿಟ್ಟು ಬಸ್‌ ಕಂಡಕ್ಟರ್ ನಂಬರ್ ಕೊಡಿ ಅಂತಾ ಮನವಿ ಮಾಡಿದರೂ ಯಾರೂ ಕೊಡಲಿಲ್ಲ.

ಬೆಳಗಿನ ಜಾವ 4.30ರಿಂದ ಪದೇ ಪದೆ ಕಾಲ್ ಮಾಡುತ್ತಲೇ ಇದ್ದೆ.

ಬೆಳಿಗ್ಗೆ 6.30ಕ್ಕೆ ಕಾಲ್‌ ರಿಸೀವ್ ಮಾಡಿದ ಸಿಬ್ಬಂದಿಯು, ಬಸ್‌ ಕೋಟೇಶ್ವರ ಹತ್ತಿರ ಬರುತ್ತಿದೆ ಎಂದಷ್ಟೆ ಹೇಳಿ ಕಾಲ್ ಕಟ್‌ ಮಾಡಿದರು.

ಸಿಬ್ಬಂದಿಗೆ ನನ್ನ ಮಾತನ್ನು ಕೇಳಿಸಿಕೊಳ್ಳುವ ತಾಳ್ಮೆಯೇ ಇರಲಿಲ್ಲ’.

ಮುಂಜಾನೆ ಬಸ್ ಬಂದಿರಬಹುದು, ಬಸ್‌ ಹತ್ತಿರ ನಾನೇ ಹೋಗ್ತೇನೆ ಅಂತಾ ಪತಿ ಹೋದರು.

ಪತಿ ಹೋದ 20 ನಿಮಿಷಕ್ಕೆ ಬೇರೊಂದು ನಂಬರ್ ನಿಂದ ಕಾಲ್ ಬಂತು. ಆವಾಗ ‘ನಿಮ್ಮ ಮಗ ಮಾತಾಡ್ತಾ ಇಲ್ಲ’ ಅಂತಾ ತಿಳಿಸಿದರು. 7.49ಕ್ಕೆ ಪತಿಗೆ ಈ ವಿಷಯ ತಿಳಿಸಿದೆ.

ಬಳಿಕ ಕುಂದಾಪುರದ ಶಾಸ್ತ್ರೀ ಸರ್ಕಲ್‌ ಪಾರ್ಕ್‌ ಹತ್ತಿರ ಹೋದಾಗ, ಬಸ್ಸಿನಲ್ಲಿ ಮಗ ಹೆಣವಾಗಿ ಮರಳಿದ್ದ. ಮಗನಿಗೆ ಹೃದಯಾಘಾತವಾಗಿರುವ ಸುದ್ದಿ ತಿಳಿಯಿತು.

ಮಗ ದಾರಿ ಮಧ್ಯೆ ಎದೆನೋವು ಎಂದು 2 ಬಾರಿ ಹೇಳಿದಾಗ ಬಸ್‌ ಬಂಟ್ವಾಳದ ಹತ್ತಿರ ಇತ್ತಂತೆ.

ಆಗಲೇ ಬಸ್‌ ಸಿಬ್ಬಂದಿ ಮಗನನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಿ ನಮಗೆ ಕರೆ ಮಾಡಿ ತಿಳಿಸಬಹುದಿತ್ತು.

ಅದೂ ಆಗದಿದ್ದರೆ ನಮ್ಮ ಕರೆಯನ್ನಾದರೂ ಸ್ವೀಕರಿಸಬಹುದಿತ್ತು. ಆವಾಗ್ಲಾದ್ರೂ ನನ್ನ ಮಗ ಬದುಕಿ ಉಳಿಯುತ್ತಿದ್ದ.

ಸಿಬ್ಬಂದಿಯ ಅಕ್ಷಮ್ಯ ನಿರ್ಲಕ್ಷ್ಯದಿಂದ ಮಗನನ್ನು ಕಳೆದುಕೊಂಡಿದ್ದೇವೆ ಸರ್’‌.

ಮಗ ಹಟ್ಟಿಯಂಗಡಿ ಸ್ಕೂಲ್‌ನಲ್ಲಿ ಓದಿದ್ದ. ನನ್ನ ಮಗ ಏನೆಂಬುದನ್ನು ಅಲ್ಲಿನ ಪ್ರಿನ್ಸಿಪಾಲ್ ಶರಣ್ ಅವರನ್ನೊಮ್ಮೆ ವಿಚಾರಿಸಿ ಸರ್, ತುಂಬಾ ಒಳ್ಳೆಯ ಹೆಸರು ತಗೊಂಡಿದ್ದ.

ಇರುವ ಒಬ್ಬ ಮಗನನ್ನು ಕಳೆದುಕೊಂಡು ಹೆತ್ತ ಹೊಟ್ಟೆಗೆ ಬೆಂಕಿ ಇಟ್ಟುಬಿಟ್ಟರು ಸರ್. ಒಂದು ಜೀವ, ಜೀವನ, ನಮ್ಮ ಉಸಿರನ್ನೇ ತೆಗೆದುಬಿಟ್ಟರು ಸರ್.

‘ನಾನು ನನ್ನ ಮಗನನ್ನು ಕಳೆದುಕೊಂಡಿದ್ದಾಗಿದೆ. ನನಗಾದ ಶಿಕ್ಷೆ ಬೇರೆ ಯಾವ ತಾಯಿಗೂ ಆಗುವುದು ಬೇಡ.

ಅದಕ್ಕಾಗಿ ನಿಮ್ಮಲ್ಲಿ ಒಂದು ಮನವಿ. ಬಸ್ಸಿನವರಿಗೆ ಸರಿಯಾದ ಬುದ್ದಿ ಕಲಿಸಬೇಕು. ಅದು ನಿಮ್ಮಿಂದ ಸಾಧ್ಯ ಸರ್.

ದಯವಿಟ್ಟು ಕ್ರಮ ಜರುಗಿಸಿ’.

‘100, 200 ಹೆಚ್ಚಿಗೆ ತೆಗೆದುಕೊಳ್ಳಲಿ, ಆದರೆ, ಜೀವ ತೆಗೆಯೋದು ಯಾವ ನ್ಯಾಯ.

ಎಲ್ಲ ಮುಗಿದ ಮೇಲೆ ಸಾರಿ ಕೇಳುತ್ತಾರೆ ಸರ್, ಹೆತ್ತ ತಾಯಿಯ ಹೊಟ್ಟೆ ಉರಿಯುತ್ತಿದೆ.

ಎಲ್ಲ ಬಸ್‌ನವರಿಗೆ ಸಂದೇಶ ಕೊಡಿ, ನಮಗಾದ ಅನ್ಯಾಯ ಬೇರೆಯವರಿಗೆ ಆಗಬಾರದು’. ಎಂದು ಪತ್ರದಲ್ಲಿ ತಮ್ಮ ನೋವನ್ನು ತೋಡಿಕೊಂಡಿದ್ದಾರೆ.

ತಾಯಿಯ ಪತ್ರ ತಲುಪಿದ ಕೂಡಲೇ, ಪತ್ರಕ್ಕೆ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರು ಪ್ರತಿಕ್ರಿಯಿಸಿದ್ದು, ‘ಪತ್ರ ಓದಿ ಮನಸ್ಸಿಗೆ ನೋವಾಯಿತು.

ಈ ವಿಚಾರವಾಗಿ ಎಸ್‌ಪಿ ವಿಷ್ಣುವರ್ಧನ್‌ ಹಾಗೂ ಎಎಸ್‌ಪಿ ಕುಮಾರಚಂದ್ರ ಅವರ ಬಳಿ ಮಾತನಾಡಿದ್ದು, ತಕ್ಷಣ ನೊಂದ ತಾಯಿಯ ಬಳಿ ದೂರು ಸ್ವೀಕರಿಸುವಂತೆ ಸೂಚಿಸಿದ್ದೇನೆ.

ತನಿಖೆಯಲ್ಲಿ ಬಸ್ ಸಿಬ್ಬಂದಿಯ ನಿರ್ಲಕ್ಷ್ಯ ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಅಲ್ಲದೆ ಮಗನನ್ನು ಕಳೆದುಕೊಂಡ ತಾಯಿಗೆ ಕರೆ ಮಾಡಿ ಸಾಂತ್ವನ ಹೇಳಿದ್ದೇನೆ. ಶೀಘ್ರ ಖಾಸಗಿ ಬಸ್ ಮಾಲೀಕರ ಸಭೆ ಕರೆದು, ಪ್ರಯಾಣಿಕರ ಹಿತದೃಷ್ಟಿಯಿಂದ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ತಿಳಿಸಲಾಗುವುದು.

ಮುಂದೆ ಈ ರೀತಿಯ ಪ್ರಕರಣಗಳಾಗದಂತೆ ಎಚ್ಚರವಹಿಸುವಂತೆ ಸೂಚನೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್‌ ಖೇದ ವ್ಯಕ್ತಪಡಿಸಿದ್ದಾರೆ.

ಅದೇನೇ ಇರಲಿ.. ಕೇವಲ ಬಸ್ ಸಿಬ್ಬಂದಿಗಳ ಉದಾಸಿನಕ್ಕೆ ಒಂದು ಅಮಾಯಕ ಜೀವ ಬಲಿಯಾಗಿದೆ.

ಇನ್ನು ಆ ಹೆತ್ತ ತಾಯಿಗೆ ಮಗನ ಪ್ರೀತಿ ನೀಡೋರ್ಯಾರು.?. ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲೇಬೇಕಾಗಿದೆ.

ಮುಂದಿನ ದಿನಗಳಲದಲಿ ಇಂತಹ ಘಟನೆ ನಡೆಯದಿರಲಿ ಅನ್ನೋದೇ ನಮ್ಮ ಆಶಯ…

Click to comment

Leave a Reply

Your email address will not be published. Required fields are marked *

LATEST NEWS

ಉಡುಪಿ: ಅನ್ಯಕೋಮಿನವರ ಕೊಬ್ಬಿಗೆ ಸಿದ್ದರಾಮಯ್ಯ ಆಡಳಿತವೇ ಮುಖ್ಯ ಕಾರಣ : ಸುನಿಲ್ ಕುಮಾರ್

Published

on

ಉಡುಪಿ : ರಾಜ್ಯದಲ್ಲಿ ಅನ್ಯಕೋಮಿನವರು ದೊಡ್ಡ ಪ್ರಮಾಣದಲ್ಲಿ ವಿಜ್ರಂಭಿಸಲು ಆರಂಭ ಮಾಡಿದ್ದಾರೆ. ರಾಜ್ಯದಲ್ಲಿ ಒಂದಾದ ನಂತರ ಒಂದು ಘಟನೆಗಳು ನಡೆಯುತ್ತಿದೆ. ಅನ್ಯಕೋಮಿನವರ ಈ ಪ್ರಮಾಣದ ಕೊಬ್ಬಿಗೆ ಸಿದ್ದರಾಮಯ್ಯ ಆಡಳಿತ ಮತ್ತು ಧೋರಣೆಯೇ ಮುಖ್ಯ ಕಾರಣ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಹೇಳಿದರು.


ಹುಬ್ಬಳ್ಳಿಯ ನೇಹಾ ಹಿರೇಮಠ ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿಯಲ್ಲಿ ಶನಿವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಸಿದ್ದರಾಮಯ್ಯನವರು ನೇಹಾ ಕುಟುಂಬಕ್ಕೆ ಸಾಂತ್ವನ ಹೇಳುವ ಬದಲು ವೈಯಕ್ತಿಕ ಘಟನೆ ಎಂದು ಹೇಳುತ್ತಾರೆ.

ಇದನ್ನೂ ಓದಿ : ನೇಹಾ ಹ*ತ್ಯೆ ಪ್ರಕರಣ : ಆಕ್ರೋಶ ಹೊರ ಹಾಕಿದ ಸಿನಿತಾರೆಯರು

ಮುಖ್ಯಮಂತ್ರಿಯಾದವರು ಇಂತಹ ಘಟನೆಯಾದಾಗ ಜಾರಿಕೊಂಡರೆ ರಾಜ್ಯದ ರಕ್ಷಣೆ ಯಾರು ಮಾಡಬೇಕು? ರಾಮೇಶ್ವರಂ ಬಾಂಬ್ ಸ್ಫೋಟ, ಪಾಕ್ ಜಿಂದಾಬಾದ್, ಕೊ*ಲೆ ಸಂದರ್ಭದಲ್ಲಿ ಸಿಎಂ ಮಾತನಾಡುವುದಿಲ್ಲ. ಹಾಡು ಹಗಲೇ ಹ*ತ್ಯೆಯಾದಾಗ ಕಠಿಣ ಧೋರಣೆ ವಹಿಸಬೇಕಿತ್ತು. ಲವ್ ಜಿ*ಹಾದ್, ಮತಾಂ*ಧತೆ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಗರಿಗೆದರಿದೆ. ರಾಜ್ಯದ ರಕ್ಷಣೆ ಕಾಂಗ್ರೆಸ್ ನಿಂದ ಅಸಾಧ್ಯ. ಸಮಾಜ ದೊಡ್ಡ ಪ್ರಮಾಣದಲ್ಲಿ ಜಾಗೃತವಾಗ ಬೇಕಾದ ಅನಿವಾರ್ಯತೆ ಇದೆ ಎಂದರು.

 

Continue Reading

FILM

ಸೂಪರ್ ಹಿಟ್ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್ ಡೇಟ್ ಫಿಕ್ಸ್!

Published

on

ಮಲಯಾಳಂನ ಮಂಜುಮ್ಮೆಲ್ ಬಾಯ್ಸ್ ಭಾರೀ ಯಶಸ್ಸನ್ನು ಗಳಿಸಿದ ಚಿತ್ರ. ಚಿತ್ರ ನೋಡಿ ಮತ್ತೆ ಮತ್ತೆ ವೀಕ್ಷಿಸಲು ಥಿಯೇಟರ್ ಗೆ ಜನ ಲಗ್ಗೆ ಇಡುತ್ತಿದ್ದಾರೆ. ಮಲಯಾಳಂ ಸಿನಿ ಪ್ರಿಯರು ಚಿತ್ರ ನೋಡಿ ಭಾರೀ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಯಾವುದೇ ಸಿನಿಮಾ ಬಂದ್ರೂ ಅದು ಓಟಿಟಿಯಲ್ಲಿ ಯಾವಾಗ ಬರುತ್ತೆ ಅಂತ ಕಾಯೋದು ಸಹಜ. ಇದೀಗ ‘ಮಂಜುಮ್ಮೆಲ್ ಬಾಯ್ಸ್’ ಸರದಿ.

ಅತಿ ಹೆಚ್ಚು ಗಳಿಕೆ :


‘ಮಂಜುಮ್ಮೆಲ್ ಬಾಯ್ಸ್’ ಸರಳ ಕಥಾಹಂದರ ಹೊಂದಿದ್ದರೂ ಅದ್ಭುತವಾಗಿ ಕಟ್ಟಿಕೊಡಲಾಗಿದೆ. ಚಿತ್ರವನ್ನು ಚಿದಂಬರಂ ಮನೋಜ್ಞವಾಗಿ ಚಿತ್ರಿಸಿದ್ದಾರೆ. ಫೆಬ್ರವರಿ 22 ರಂದು ಈ ಚಿತ್ರ ತೆರೆಕಂಡಿತ್ತು. ಬಾಕ್ಸ್ ಆಫೀಸ್ ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಈಗಾಗಲೇ ಗ್ರಾಸ್ ಕಲೆಕ್ಷನ್ 200 ಕೋಟಿ ರೂಪಾಯಿ ದಾಟಿದೆ. ಮಲಯಾಳಂನಲ್ಲಿ ಅತಿ ಹೆಚ್ಚು ಗಳಿಕೆ ಕಂಡ ಸಿನಿಮಾ ಎಂಬ ಹೆಗ್ಗಳಿಕೆ ಗಳಿಸಿದೆ.


ಶೌಬಿನ್ ಶಾಹಿರ್, ಶ್ರೀನಾಥ್ ಬಾಸಿ, ಬಾಲು ವರ್ಗೀಸ್, ಗಣಪತಿ ಸೇರಿದಂತೆ ಸಾಕಷ್ಟು ಜನ ಕಲಾವಿದರು ಚಿತ್ರದಲ್ಲಿ ಪಾತ್ರವಾಗಿದ್ದಾರೆ. ಅಂದಾಜು 20 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಾಣವಾಗಿದ್ದ ಸ್ಟಾರ್ ನಟರಿಲ್ಲದ ಈ ಸಿನಿಮಾ 200 ಕೋಟಿ ರೂ. ಕಲೆಕ್ಷನ್ ಮಾಡಿರೋದು ಆಶ್ಚರ್ಯ ಹುಟ್ಟು ಹಾಕಿದೆ.

ಓಟಿಟಿಯಲ್ಲಿ ಯಾವಾಗ ?

‘ಮಂಜುಮ್ಮೆಲ್ ಬಾಯ್ಸ್’ ಸಿನಿಮಾವನ್ನು ಥಿಯೇಟರ್ ಅಂಗಳದಲ್ಲಿ ನೋಡಿ ಎಂಜಾಯ್ ಮಾಡಿದವರು ಅನೇಕ ಮಂದಿ ಇದ್ದಾರೆ. ಇದೀಗ ಸಿನಿಮಾ ಓಟಿಟಿಯಲ್ಲಿ ಯಾವಾಗ ಅನ್ನೋ ಪ್ರಶ್ನೆ ಹುಟ್ಟಿತ್ತು. ಇದಕ್ಕೆ ಉತ್ತರವೂ ಸಿಕ್ಕಿದೆ.

ಡಿಸ್ನಿ ಪ್ಲಸ್ ಹಾಟ್‌ಸ್ಟರ್‌ನಲ್ಲಿ ಮೇ 3 ರಂದು ಸ್ಟ್ರೀಮಿಂಗ್ ಆಗುವುದು ಬಹುತೇಕ ಖಚಿತವಾಗಿದೆ. ಫೆಬ್ರವರಿ 22 ರಂದು ತೆರೆಗೆ ಬಂದಿದ್ದ ಸಿನಿಮಾ ಈಗಾಗಲೇ 50 ದಿನ ಪೂರೈಸಿದೆ. ಸದ್ಯ ತೆಲುಗು, ತಮಿಳು, ಕನ್ನಡಕ್ಕೂ ಸಿನಿಮಾ ಡಬ್ ಆಗಿದ್ದು, ಏಕಕಾಲಕ್ಕೆ ಓಟಿಟಿಯಲ್ಲಿ ಸ್ಕ್ರೀಮಿಂಗ್ ಆಗಲಿದೆಯಾ ಎಂಬುದು ತಿಳಿದು ಬಂದಿಲ್ಲ.

 

Continue Reading

BELTHANGADY

ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!

Published

on

ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕೆ 8 ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ಏ.19ರಂದು ನಡೆದಿದೆ. ಉಪ್ಪಿನಂಗಡಿಯ ಖಾಸಗಿ ಶಾಲೆಯ ಮುಂದಿನ ಅವಧಿಯಲ್ಲಿ 8 ನೇ ತರಗತಿ ವಿದ್ಯಾರ್ಥಿಯಾಗಿದ್ದ ನಂದನ್ (13) ಎಂಬಾತ ಆತ್ಮಹತ್ಯೆಗೆ ಶರಣಾದ ಬಾಲಕ.

Read More..; ನಗರ ಸಭೆ ಉಪಾಧ್ಯಕ್ಷೆ ಮಗ ಸೇರಿ ನಾಲ್ವರ ಹ*ತ್ಯೆ! ಹಂ*ತಕರ ಪತ್ತೆಗೆ ವಿಶೇಷ ತಂಡ ರಚನೆ

ಪಂಜದ ದಿವಂಗತ ರೋಹಿತ್ ಗೌಡ ಎಂಬವರ ಮಗನಾಗಿದ್ದ ಈತ ತನ್ನ ತಂದೆಯ ನಿಧನದ ನಂತರ ದುಗಲಾಡಿಯ ಮಾವನ ಮನೆಯಲ್ಲಿದ್ದ. ಅಲ್ಲಿಂದಲೆ ಉಪ್ಪಿನಂಗಡಿಯ ಖಾಸಗಿ ಶಾಲೆಗೆ ಹೋಗುತ್ತಿದ್ದ. ಈತ ಈ ಬಾರಿ ಏಳನೇ ತರಗತಿ ಉತ್ತೀರ್ಣನಾಗಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ 8 ನೇ ತರಗತಿಗೆ ತೇರ್ಗಡೆ ಹೊಂದಿದ್ದ. ಏ.19ರಂದು ತನ್ನ ಕೆಟ್ಟು ಹೋಗಿದ್ದ ಸೈಕಲ್ ಅನ್ನು ರಿಪೇರಿ ಮಾಡಿಕೊಡಬೇಕೆಂದು ಮನೆಯಲ್ಲಿ ಒತ್ತಾಯಿಸಿದ್ದ. ಮನೆಯ ಇನ್ವಾರ್ಟರ್ ರಿಪೇರಿಗೆ ಬಂದಿರುವುದರಿಂದ ಇವತ್ತು ಬೇಡ ನಾಳೆ ಸೈಕಲ್ ರಿಪೇರಿ ಮಾಡಿಕೊಡಲಾಗುವುದೆಂದು ಮನೆಯವರು ಹೇಳಿದ್ದಾರೆ ಎನ್ನಲಾಗಿದೆ. ಇದೇ ನೆಪವನ್ನು ಇಟ್ಟುಕೊಂಡು ಮನನೊಂದ ಬಾಲಕ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಎಲ್ಲಾ ವಿಚಾರವನ್ನು ಮನೆಯವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಸದ್ಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

Continue Reading

LATEST NEWS

Trending