bangalore
ಕಿ*ಡ್ನ್ಯಾಪ್ ಆದ ಮಗ ಸಿಕ್ಕಾಗ ತಾಯಿಗೆ ಕಾದಿತ್ತು ಶಾಕ್…!
ಬೆಂಗಳೂರು : ಮಗ ಕಿ*ಡ್ನ್ಯಾಪ್ ಆಗಿದ್ದಾನೆ ಅಂತ ಪೊಲೀಸರಿಗೆ ದೂರು ನೀಡಿದ ತಾಯಿ ಪೊಲೀಸರ ಕಾರ್ಯಾಚರಣೆ ಬಳಿಕ ಶಾಕ್ಗೆ ಒಳಗಾಗಿದ್ದಾರೆ. ಕಿ*ಡ್ನ್ಯಾಪ್ ಆಗಿದ್ದ ಮಗನ ಬಿಡುಗಡೆಗೆ 20 ಸಾವಿರ ಹಣ ಪಾವತಿಸಿದ ಚಿಕ್ಕಮ್ಮ ಮಗ ಮನೆಗೆ ಬಾರದ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದಾಗ ಆರೋಪಿಗಳನ್ನ ಕಂಡ ದೂರುದಾರೆ ಹೌಹಾರಿದ್ದಾರೆ. ಪೊಲೀಸರು ಅರೆಸ್ಟ್ ಮಾಡಿದ್ದ ಆರೋಪಿಗಳಲ್ಲಿ ಮಗನೂ ಇದ್ದಿದ್ದೇ ಚಿಕ್ಕಮ್ಮ ಶಾಕ್ ಆಗಲು ಕಾರಣವಾಗಿದೆ.
ಕಿ*ಡ್ನ್ಯಾಪ್ ಆಗಿದ್ದು ಯಾರು..? ಇಟ್ಟ ಡಿಮ್ಯಾಂಡ್ ಏನು ..?
ಬೆಂಗಳೂರಿನ ಬೊಮ್ಮನ ಹಳ್ಳಿಯಲ್ಲಿನ ಆಕ್ಸ್ಫರ್ಡ್ ಕಾಲೇಜಿನ ವಾರ್ಡನ್ ಆಗಿದ್ದ ಜೀವನ್ ಎಂಬಾತ ಮಾರ್ಚ್ 11 ರ ರಾತ್ರಿಯಲ್ಲಿ ಕಿ*ಡ್ನ್ಯಾಪ್ ಆಗಿದ್ದ. ಇದಕ್ಕೆ ಸಾಕ್ಷಿಯಾಗಿ ತಲೆಯಿಂದ ರ*ಕ್ತ ಸುರಿಯುತ್ತಿದ್ದ ವಿಡಿಯೋ ಒಂದು ಅದೇ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದ ಜೀವನ್ನ ಚಿಕ್ಕಮ್ಮ ಸುನಂದ ಎಂಬವರ ಮೊಬೈಲ್ಗೆ ಬಂದಿತ್ತು. ವಿಡಿಯೋ ಬಂದ ಕೆಲ ಹೊತ್ತಿನಲ್ಲೇ ಚಿಕ್ಕಮ್ಮನಿಗೆ ಕರೆ ಮಾಡಿದ್ದ ಜೀವನ್ ತನ್ನನ್ನು ಯಾರೋ ಕಿ*ಡ್ನ್ಯಾಪ್ ಮಾಡಿದ್ದು, ಹಣಕ್ಕಾಗಿ ಹೊ*ಡೆದು ಬ*ಡಿದು ಪೀ*ಡಿಸುತ್ತಿದ್ದಾರೆ ಎಂದು ಕಣ್ಣೀರಿಟ್ಟಿದ್ದ. ಈ ವೇಳೆ ಮಾತನಾಡಿದ ಸುನಂದ ಕಿ*ಡ್ನ್ಯಾಪ್ ಮಾಡಿದವರು ಕೇಳಿದ್ದ 20 ಸಾವಿರವನ್ನು ಅವರು ಹೇಳಿದ ಅಕೌಂಟ್ಗೆ ವರ್ಗಾಯಿಸಿದ್ದಾರೆ. ಆದ್ರೆ ಹಣ ವರ್ಗಾವಣೆ ಮಾಡಿದ್ರೂ ಮಗ ಮನೆಗೆ ಬಂದಿಲ್ಲ ಎಂದು ಆತಂಕಗೊಂಡ ಸುನಂದ ನೇರವಾಗಿ ಬೊಮ್ಮನ ಹಳ್ಳಿ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದಾರೆ. ತಕ್ಷಣ ಕಾರ್ಯ ಪೃವೃತ್ತರಾದ ಪೊಲೀಸರು ಜೀವನ್ನನ್ನು ಪತ್ತೆ ಮಾಡಿ ಕರೆ ತಂದಿದ್ದಾರೆ.
ತಾಯಿಗೆ ಶಾಕ್ ಆಗಿದ್ದು ಯಾಕೆ ?
ದೂರು ಪಡೆದ ಪೊಲೀಸರು ತಕ್ಷಣ ಸುನಂದ ಅವರಿಂದ ಮೊಬೈಲ್ ಕಾಲ್, ಮೊಬೈಲ್ ದೃಶ್ಯ ಎಲ್ಲವನ್ನೂ ಪಡೆದು ತನಿಖೆ ಆರಂಭಿಸಿದ್ದಾರೆ. ಮೊಬೈಲ್ ಲೊಕೇಷನ್ ಟ್ರೇಸ್ ಮಾಡಿ ಕಿ*ಡ್ನ್ಯಾಪರ್ಸ್ ಇರೋ ಜಾಗವನ್ನು ಸರ್ಚ್ ಮಾಡಿದ್ದಾರೆ. ಹೀಗೇ ಕಿ*ಡ್ನ್ಯಾಪರ್ಸ್ ಹಿಂದೆ ಬಿದ್ದ ಪೊಲೀಸರು ನಾಲ್ವರನ್ನು ಬಂಧಿಸಿ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಈ ವೇಳೆ ಕಿ*ಡ್ನ್ಯಾಪ್ ಆಗಿದ್ದ ಜೀವನ್ ಕೂಡಾ ಆರೋಪಿಗಳ ಜೊತೆಗಿರುವುದು ನೋಡಿ ಚಿಕ್ಕಮ್ಮ ಸುನಂದ ಹೌಹಾರಿದ್ದಾರೆ.
ಜೂ*ಜಾಡಲು ಹಣಕ್ಕಾಗಿ ಕಿ*ಡ್ನ್ಯಾಪ್ ನಾಟಕ..!
ಆಕ್ಸ್ಫರ್ಡ್ ಕಾಲೇಜಿನಲ್ಲಿ ವಾರ್ಡನ್ ಆಗಿದ್ದ ಜೀವನ್ ಆನ್ಲೈನ್ ಜೂ*ಜಿನ ದಾಸನಾಗಿದ್ದ. ಗೋಲ್ಡ್ 369 ಎಂಬ ಆನ್ಲೈನ್ ಗೇಮ್ನಲ್ಲಿ ಜೂ*ಜಾಡಿ ಹಣ ಕಳೆದುಕೊಂಡಿದ್ದ. ಕಳೆದುಕೊಂಡ ಹಣ ಮತ್ತೆ ಪಡೆಯಬೇಕಾದ್ರೆ ಮತ್ತೆ ಜೂ*ಜಾಡಬೇಕಿತ್ತು. ಆದರೆ ಅದಕ್ಕಾಗಿ ಹಣ ಇಲ್ಲ ಅನ್ನೋ ಕಾರಣಕ್ಕೆ ಈ ಕಿ*ಡ್ನ್ಯಾಪ್ ನಾಟಕದ ಸ್ಕ್ರಿಪ್ಟ್ ರೆಡಿ ಮಾಡಿದ್ದಾನೆ. ಗೆಳೆಯರೊಂದಿಗೆ ಸೇರಿಕೊಂಡು ತಲೆಗೆ ಟೊಮೆಟೋ ಸಾಸ್ ಚೆಲ್ಲಿ ರ*ಕ್ತ ಬಂದಂತೆ ವಿಡಿಯೋ ಮಾಡಿ ಚಿಕ್ಕಮ್ಮನಿಗೆ ಕಳುಹಿಸಿದ್ದಾನೆ. ಮಗನ ಕಿ*ಡ್ನ್ಯಾಪ್ ವಿಡಿಯೋ ನೋಡಿ ಭಯ ಪಟ್ಟಿದ್ದ ಚಿಕ್ಕಮ್ಮ ಸುನಂದ ತಕ್ಷಣ 20 ಸಾವಿರ ಹಣ ಟ್ರಾನ್ಸ್ಫರ್ ಮಾಡಿದ್ದಾರೆ. ಈ ಹಣ ಪಡೆದ ಜೀವನ್ ಹಾಗೂ ಆತನ ಗೆಳೆಯರು ಆನೇಕಲ್ನ ಬಿಂಗಿಪುರ ಮನೆಯೊಂದರಲ್ಲಿ ಆನ್ಲೈನ್ ಜೂ*ಜು ಆಡಲು ಕೂತಿದ್ದಾಗಲೇ ಪೊಲೀಸರು ಎಂಟ್ರಿ ಕೊಟ್ಟಿದ್ದಾರೆ. ಆರೋಪಿ ಜೀವನ್ ಸೇರಿ ಆತನ ಗೆಳೆಯರಾದ ವಿನಯ್, ಪೂರ್ಣೇಶ್,ಪ್ರೀತಮ್ ಹಾಗೂ ರಾಜು ಎಂಬವರನ್ನು ಅರೆಸ್ಟ್ ಮಾಡಿದ್ದಾರೆ.
ಜೂ*ಜು ಜೀವನವನ್ನೇ ಹಾಳು ಮಾಡುತ್ತದೆ ಎಚ್ಚರ…!
ಕೆಟ್ಟಚಟಗಳು ಎಲ್ಲವೂ ಮನೆ ಹಾಳು ಮಾಡುವಂತಹದೇ ಆದ್ರೂ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಮೂಲಕ ಬರುವ ಆನ್ಲೈನ್ ಗೇಮ್ಗಳು ಅದೆಷ್ಟೋ ಜನರ ಬದುಕನ್ನೇ ಕಸಿದುಕೊಂಡಿದೆ. ಆನ್ಲೈನ್ ಗೇಮ್ನಲ್ಲಿ ಹಣ ಕಳೆದುಕೊಂಡು ಜೀವನವನ್ನೇ ಅಂತ್ಯ ಮಾಡಿಕೊಂಡ ಸಾಕಷ್ಟು ನಿಧರ್ಶನಗಳು ನಮ್ಮ ಕಣ್ಣ ಮುಂದೆ ಇದೆ. ಇದೀಗ ಆನ್ಲೈನ್ ಗೇಮ್ ಆಡಲು ಹಣಕ್ಕಾಗಿ ಖತರ್ನಾಕ್ ಐಡಿಯಾ ಮಾಡಿದ ಜೀವನ್ ಕೆಲಸವನ್ನೂ ಕಳೆದುಕೊಂಡಿದ್ದು, ಚಿಕ್ಕಮ್ಮನಿಗೂ ವಂಚಿಸಿ ಜೈಲು ಪಾಲಾಗಿದ್ದಾನೆ . ಹಾಗಾಗಿ ಆನ್ಲೈನ್ ಗೇಮ್ ನಿಮ್ಮ ಮೊಬೈಲ್ನಲ್ಲಿ ಇದ್ರೆ ಇಂದೇ ಡಿಲೀಟ್ ಮಾಡಿ ನೆಮ್ಮದಿಯ ಜೀವನ ಮಾಡಿ.
bangalore
ವರದಕ್ಷಿಣೆ ಕಿರುಕುಳ; ನೇ*ಣಿಗೆ ಶರಣಾದ ಟೆಕ್ಕಿ
ಮಂಗಳೂರು/ಬೆಂಗಳೂರು : ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಗಂಗಮ್ಮನ ಗುಡಿಯಲ್ಲಿ ನಡೆದಿದೆ. ಪೂಜಾ (22) ಜೀವಾಂತ್ಯಗೊಳಿಸಿದ ವಿವಾಹಿತೆ. ಪೂಜಾ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ.
ಕಳೆದ ಎರಡು ವರ್ಷಗಳ ಹಿಂದೆ ಸುನೀಲ್ ಎಂಬಾತನನ್ನು ಪೂಜಾ ಮದುವೆಯಾಗಿದ್ದರು. ಮದುವೆಯಾದ ಬಳಿಕ ವರದಕ್ಷಿಣೆಗಾಗಿ ಪತಿ ಪೀಡಿಸುತ್ತಿದ್ದ. ಇದರಿಂದ ಮನನೊಂದು ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಇದನ್ನೂ ಓದಿ : ಸೀಲ್ಡ್ ತಂಪು ಪಾನೀಯ ಬಾಟಲ್ ಒಳಗಿತ್ತು ಜೇಡರ ಹುಳ!
ಮಗಳ ಸಾವಿಗೆ ಪತಿ ಸುನೀಲ್ ಹಾಗೂ ಮೈದುನ ಅನಿಲ್ ಕಾರಣ ಎಂದು ಪೂಜಾ ಪೋಷಕರು ಆರೋಪಿಸಿದ್ದಾರೆ. ಈ ಬಗ್ಗೆ ಗಂಗಮ್ಮನಗುಜಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bangalore
ಈ ಪುಣ್ಯಕ್ಷೇತ್ರಕ್ಕೆ ಹೋಗಲು ರಾಜ್ಯ ಸರ್ಕಾರದಿಂದ ಸಹಾಯಧನ ಸಿಗಲಿದೆ..!
ಬೆಂಗಳೂರು : ಕರ್ನಾಟಕ ರಾಜ್ಯದಿಂದ ಕೈಲಾಸ ಮಾನಸ ಸರೋವರ ಹಾಘೂ ಚಾರ್ಧಾಮ್ ಯಾತ್ರಿಗಳಿಗೆ ಅನುದಾನ ನೀಡುವ ಕುರಿತು ಮುಜರಾಯಿ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಮಾನಸ ಸರೋವರ ಯಾತ್ರಿಗಳಿಗೆ ರೂ.30 ಸಾವಿರ, ಚಾರ್ಧಾಮ್ ಯಾತ್ರಿಗಳಿಗೆ ರೂ.20 ಸಾವಿರ , ಹಾಗೂ ಈಗಾಗಲೇ ಕಾಶಿ ಯಾತ್ರೆ ಕೈಗೊಂಡ 30 ಸಾವಿರ ಯಾತ್ರಿಗಳಿಗೆ ತಲಾ ರೂ.5 ಸಾವಿರ ಸಹಾಯಧನ ನೀಡಲಾಗುತ್ತದೆ.
ಕೇವಲ ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳು ಮಾತ್ರ ಈ ಸಹಾಯಧನ ಪಡೆಯಲು ಅರ್ಹರಾಗಿದ್ದಾರೆ. ಈಗಾಗಲೇ ಈ ತೀರ್ಥ ಕ್ಷೇತ್ರಗಳಿಗೆ ಹೋಗಿ ಬಂದಿರುವವರು ಸಹಾಯಧನವನ್ನು ಪಡೆಯಲು ಅರ್ಹರಾಗಿದ್ದಾರೆ. ಇದಕ್ಕಾಗಿ ರೂ.25 ಪಾವತಿಸಿ ಸಂಬಂಧಿಸಿದ ವೆಬ್ಸೈಟ್ ಅಥವಾ ಮೊಬೈಲ್ ಆಪ್ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದಾಗಿದೆ.
ಚಾರ್ಧಾಮ್ ಯಾತ್ರೆಯ ಮಾರ್ಗಸೂಚಿಗಳು
- ಕರ್ನಾಟಕದ ಖಾಯಂ ನಿವಾಸಿಯಾಗಿದ್ದು, ಚುನಾವಣಾ ಗುರುತಿನ ಚೀಟಿ ಹಾಗೂ ಆಧಾರ್ ಕಾರ್ಡ್ ಅನ್ನು ಅಪ್ಲೋಡ್ ಮಾಡುವುದು.
- 45 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ಮಾತ್ರ ಈ ಯೋಜನೆಯಡಿ ಸಹಾಯಧನವನ್ನು ಪಡೆಯಲು ಅರ್ಹರಾಗಿರುತ್ತಾರೆ. ಇದಕ್ಕೆ ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಅಪ್ಲೋಡ್ ಮಾಡಬೇಕು.
- ಯಾತ್ರಾರ್ಥಿಗಳು ಸಹಾಯಧನವನ್ನು ಒಂದು ಬಾರಿ ಪಡೆದ ನಂತರದಲ್ಲಿ ಅದೇ ವ್ಯಕ್ತಿಗೆ ಮತ್ತೊಮ್ಮೆ ಅನುದಾನ ನೀಡಲಾಗುವುದಿಲ್ಲ.
ಕಾಶಿ ಯಾತ್ರೆಯ ಮಾರ್ಗಸೂಚಿಗಳು
- ಕರ್ನಾಟಕ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳು ಆಯಾ ಆರ್ಥಿಕ ವರ್ಷದ ಮೊದಲ ದಿನಕ್ಕೆ ಅನ್ವಯಿಸುವಂತೆ ಏಪ್ರಿಲ್ 1ಕ್ಕೆ 18 ವರ್ಷಗಳ ಮೇಲ್ಪಟ್ಟವರಾಗಿರತಕ್ಕದ್ದು.
- 18 ವಯಸ್ಸಿನ ಕೆಳಗಿನವರ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. 18 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಹಾಜರುಪಡಿಸಬೇಕು.
ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಮಾರ್ಗಸೂಚಿಯನ್ನು ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುತ್ತದೆ
bangalore
ಗೋಬಿ ಮಂಚೂರಿ ಆಯ್ತು..! ಈಗ ಚಿಕನ್ ಕಬಾಬ್, ಫಿಶ್ ಫುಡ್ ಮೇಲೆ ಕಣ್ಣು…!
ಮಂಗಳೂರು : ಫಿಶ್ ಸೇರಿದಂತೆ ಚಿಕನ್ ಕಬಾಬ್ ಆಹಾರದಲ್ಲಿ ಕೃತಕ ಬಣ್ಣ ಬೆರಸುವುದನ್ನ ನಿಷೇಧಿಸಿ ಆಹಾರ ಸುರಕ್ಷತಾ ಇಲಾಖೆ ಆದೇಶ ಹೊರಡಿಸಿದೆ. ಕೆಲವು ಆಹಾರಗಳಲ್ಲಿ ಕೃತಕ ಬಣ್ಣದ ಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಈ ಹಿಂದೆ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿಗಳಲ್ಲಿ ಕೃತಕ ಬಣ್ಣಗಳ ಬಳಕೆಯನ್ನ ನಿಷೇಧಿಸಲಾಗಿತ್ತು.
ಇದೀಗ ಆರೋಗ್ಯ ಸಚಿವರ ಸೂಚನೆಯಂತೆ ಪರಿಶೀಲನೆ ನಡೆಸಿದ ಅಧಿಕಾರಿಗಳು ಚಿಕನ್ ಕಬಾಬ್ ಮತ್ತು ಫಿಶ್ ಫುಡ್ ನಲ್ಲಿ ಕಲರಿಂಗ್ ಇರುವುದು ಪತ್ತೆಯಾಗಿದೆ. ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಚಿಕನ್ ಕಬಾಬ್ ಕಳಪೆಯಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದು ಕಂಡುಬಂದಿದೆ. ಈ ಹಿನ್ನಲೆಯಲ್ಲಿ ಹಿನ್ನೆಲೆಯಲ್ಲಿ ಚಿಕನ್ ಕಬಾಬ್, ಫಿಶ್ ಆಹಾರಗಳಲ್ಲಿ ಕೃತಕ ಬಣ್ಣ ಬೆರಸುವಿಕೆಯನ್ನ ನಿಷೇಧಿಸಿ ಆಹಾರ ಸುರಕ್ಷತಾ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಕಾನೂನು ಉಲ್ಲಂಘಿಸಿದ್ರೆ 7 ವರ್ಷದಿಂದ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ವರೆಗಿನ ದಂಡ ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗುವುದು ಎಂದು ಎಚ್ಚರಿಸಲಾಗಿದೆ.
ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ 39 ಕಬಾಬ್ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ಪರೀಕ್ಷಿಸಲಾಗಿದೆ. 08 ಕಬಾಬ್ನ ಮಾದರಿಗಳು ಕೃತಕ ಬಣ್ಣದಿಂದ ಕೂಡಿರುವುದರಿಂದ ಅಸುರಕ್ಷಿತ ಎಂದು ವಿಶ್ಲೇಷಣಾ ವರದಿಗಳಲ್ಲಿ ಕಂಡುಬಂದಿದೆ.
- LATEST NEWS4 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ