Connect with us

LATEST NEWS

“ಉದ್ಯೋಗಿ ಸಾವಿನ ನೈಜ ಕಾರಣ ಮುಚ್ಚಿಡುತ್ತಿರುವ ಎಂಆರ್‌ಪಿಎಲ್‌”..!?

Published

on

ಮಂಗಳೂರು: ಎಮ್ಆರ್ ಪಿಎಲ್ ಕೈಗಾರಿಕಾ ಘಟಕದಲ್ಲಿ ಸ್ಥಳೀಯ ಗುತ್ತಿಗೆ ಕಾರ್ಮಿಕ ಕೇಶವ ಕೋಟ್ಯಾನ್ ಕರ್ತವ್ಯದ ಸಂದರ್ಭ ಕ್ರೇನ್ ಅಪಘಾತದಲ್ಲಿ ಸಾವಿಗೀಡಾಗಿದ್ದು, ಸಾವಿನ ನೈಜ ಕಾರಣವನ್ನು ಕಂಪೆನಿ ಮುಚ್ಚಿಡುತ್ತಿದೆ.

ಜೊತೆಗೆ ಸಂತ್ರಸ್ತ ಕುಟುಂಬಕ್ಕೆ ಪರಿಹಾರ ಒದಗಿಸುವಲ್ಲಿಯೂ ಎಮ್ಆರ್ ಪಿಎಲ್ ಆಡಳಿತ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಯತ್ನಿಸುತ್ತಿದೆ. ಇದು ಖಂಡನೀಯ. ಕೇಶವ ಕೋಟ್ಯಾನ್ ಸಾವಿನ ಕುರಿತು ಪಾರದರ್ಶಕ ತನಿಖೆ ನಡೆಯಬೇಕು ಹಾಗೂ ಕರ್ತವ್ಯದ ವೇಳೆ ಕಂಪೆನಿಯ ನಿರ್ಲಕ್ಷದಿಂದ ಸಾವಿಗೀಡಾದ ಕೇಶವ ಕೋಟ್ಯಾನ್ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ, ಕುಟುಂಬ ಸದಸ್ಯನಿಗೆ ಎಮ್ಅರ್ ಪಿಎಲ್ ನಲ್ಲಿ ಖಾಯಂ ಉದ್ಯೋಗ ಒದಗಿಸಿಕೊಡಬೇಕು ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆಗ್ರಹಿಸಿದ್ದಾರೆ.

ಕೇಶವ ಕೋಟ್ಯಾನ್ ಕರ್ತವ್ಯ ನಿರತರಾಗಿದ್ದಾಗ ಕ್ರೇನ್ ನ ಭಾರವಾದ ವಸ್ತು ಎದೆ ಹಾಗೂ ಮುಖದ ಭಾಗಕ್ಕೆ ಬಡಿದು ಸಾವಿಗೀಡಾಗಿದ್ದಾರೆ ಎಂಬುದು ಬಹಿರಂಗಗೊಂಡಿರುವ ಮಾಹಿತಿ. ಇದು ಕಂಪೆನಿಯ ಬೇಜವಾಬ್ದಾರಿತನದಿಂದ ನಡೆದ ದುರ್ಘಟನೆ‌.

ಆದರೆ ಕಂಪೆನಿ ಇದನ್ನು ಮುಚ್ಚಿಟ್ಟು ಕೇಶವ ಕೋಟ್ಯಾನ್ ಅವರದ್ದು ಸ್ವಾಭಾವಿಕ ಸಾವು ಎಂದು ಹೇಳಿಕೆ ಬಿಡುಗಡೆ ಮಾಡಿದೆ. ಇದು ಆಘಾತಕಾರಿ.

ತನ್ನ ಹೊಣೆಗಾರಿಕೆಯಿಂದ ನುಣುಚಿಕೊಳ್ಳುವ ಯತ್ನ. ಅದಲ್ಲದೆ ಕಂಪೆನಿಯು ಪ್ರಭಾವ ಬಳಸಿ ಸೈಟ್ ಜವಾಬ್ದಾರಿ ಹೊಂದಿದ್ದ ಅಧಿಕಾರಿಗಳ ಬದಲಿಗೆ ಕಂಪೆನಿಯು ಖಾಸಗಿಯವರಿಂದ ಗುತ್ತಿಗೆ ಆಧಾರದಲ್ಲಿ ತರಿಸಿಕೊಂಡಿರುವ ಕ್ರೇನ್ ನ ಅಪರೇಟರ್ ವಿರುದ್ದ ದೂರು ದಾಖಲಾಗುವಂತೆ ಮಾಡಿದೆ.

ಖಾಸಗಿ ಉದ್ಯೋಗಿಯಾಗಿರುವ ಬಡಪಾಯಿ ಕ್ರೇನ್ ಅಪರೇಟರ್ ನನ್ನು ಬಲಿಪಶು ಮಾಡಿ ಎಮ್ಆರ್ ಪಿಎಲ್ ಅಧಿಕಾರಿಗಳನ್ನು ರಕ್ಷಿಸುವ ಕುತಂತ್ರ ಮಾಡಲಾಗಿದೆ.

ಸ್ವಾಭಾವಿಕ ಸಾವು ಆಗಿದ್ದರೆ ಕ್ರೇನ್ ಆಪರೇಟರ್ ವಿರುದ್ದ ದೂರು ದಾಖಲಿಸಿರುವುದು ಯಾಕೆ ? ಕಂಪೆನಿ ತನ್ನ ತಪ್ಪುಗಳನ್ನು ಮರೆಮಾಚಲು ಕೇಶವ ಕೋಟ್ಯಾನ್ ಸಾವಿನ ಘಟನೆಯನ್ನೇ ತಿರುಚುತ್ತಿದೆ. ಪೋಸ್ಟ್ ಮಾರ್ಟಮ್ ನಡೆಸಲು, ಮೃತ ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲು 24 ಗಂಟೆಗೂ ಹೆಚ್ಚು ಅವಧಿ ತೆಗೆದುಕೊಂಡಿರುವುದು ಇದಕ್ಕೆ ಸಾಕ್ಷಿ.

ಪ್ರಕರಣ ಮುಚ್ಚಿ ಹಾಕಲು ಒಳಗಿನಿಂದ ನಡೆಯುತ್ತಿರುವ ಪ್ರಯತ್ನಗಳನ್ನು ಈ ಬೆಳವಣಿಗೆಗಳು ಬಯಲಿಗೆಳೆದಿದೆ. ಕೇಶವ ಕೋಟ್ಯಾನ್ ಸಾವಿಗೀಡಾಗಿ ಒಂದು ದಿನ ಕಳೆದರೂ ಕಂಪೆನಿಯ ವತಿಯಿಂದ ಸಂತ್ರಸ್ತ ಕುಟುಂಬಕ್ಕೆ ಯಾವುದೇ ಪರಿಹಾರ ಘೋಷಿಸಿಲ್ಲ. ಕೇವಲ ಗುತ್ತಿಗೆದಾರ ಮಾಡಿರುವ ವಿಮೆ, ಹಾಗೂ ವರ್ಕ್ ಮೆನ್ ಕಂಪೊಂಜೇಷನ್ ಕಾಯ್ದೆ ಅಡಿಯಲ್ಲಿ ಸಿಗುವ ಪರಿಹಾರವನ್ನು ಮಾತ್ರ ಬೊಟ್ಟು ಮಾಡುತ್ತಿದೆ.

ವರ್ಕ್ ಮೆನ್ ಕಂಪೊಂಜೇಷನ್ ಪ್ರಕಾರ ಕೇಶವ ಕೋಟ್ಯಾನ್ ಕುಟುಂಬಕ್ಕೆ ಸರಿ ಸುಮಾರು ಹತ್ತು ಲಕ್ಷದಷ್ಚು ಪರಿಹಾರ ಮಾತ್ರ ದೊರಕುತ್ತದೆ. ಇದೆಲ್ಲದಕ್ಕೂ ಕಂಪೆನಿಯು ಗುತ್ತಿಗೆದಾರನತ್ತ ಕೈತೋರುತ್ತಿದೆ.

ಎಮ್ಆರ್ ಪಿಎಲ್ ನಲ್ಲಿ ಗುತ್ತಿಗೆ ಆಧಾರದ ಉದ್ಯೋಗಿಗಳಿಗೂ, ಖಾಯಂ ಉದ್ಯೋಗಿಗಳಿಗೂ ವೇತನ, ಸವಲತ್ತುಗಳಲ್ಲಿ ಅಗಾಧವಾದ ತಾರತಮ್ಯವಿದೆ. ಸ್ಥಳೀಯರನ್ನು ಕಡಿಮೆ ವೇತನಕ್ಕೆ ಜೀತದಾಳುಗಳಂತೆ ದುಡಿಸಿಕೊಳ್ಳಲಾಗುತ್ತದೆ.

22 ವರ್ಷಗಳಿಂದ ಗುತ್ತಿಗೆ ಕಾರ್ಮಿಕರಾಗಿ ದುಡಿಯುತ್ತಿದ್ದರೂ ಕೇಶವ ಕೋಟ್ಯಾನ್ ಉದ್ಯೋಗ ಖಾಯಂ ಆಗದಿರುವುದು ಇದಕ್ಕೊಂದು ನಿದರ್ಶನ. ತಿಂಗಳುಗಳ ಹಿಂದೆ ಎಮ್ಆರ್ ಪಿಎಲ್ ನ ಖಾಯಂ ಉದ್ಯೋಗಿ ಹರೀಶ್ ಲಾಲ್ ಎಂಬವರು ಕಂಪೆನಿಯ ಒಳಗಡೆ ಸಾವಿಗೀಡಾಗಿದ್ದರು.

ಅವರಿಗೆ ಸರಿಸುಮಾರು ಎರಡೂವರೆ ಕೋಟಿ ರೂಪಾಯಿ ಪರಿಹಾರ ಧನ ದೊರಕಿತ್ತು.‌ ಆದರೆ ಅದೇ ರೀತಿ ಕಂಪೆನಿಯ ಒಳಗಡೆ ಕರ್ತವ್ಯ ನಿರತರಾಗಿದ್ದಲೇ ಸಾವಿಗೀಡಾದ 22 ವರ್ಷಗಳಿಂದ ದುಡಿಯುತ್ತಿರುವ ಸ್ಥಳೀಯರಾದ ಗುತ್ತಿಗೆ ಕಾರ್ಮಿಕ ಕೇಶವ ಕೋಟ್ಯಾನ್ ರಿಗೆ ಕಂಪೆನಿಯ ವತಿಯಿಂದ ಬಿಡಿಗಾಸು ನೀಡಲೂ ಸಿದ್ದರಿರದಿರುವುದು ಖೇದಕರ.

ಸ್ಥಳೀಯರ ಹಾಗೂ ಗುತ್ತಿಗೆ ಉದ್ಯೋಗಿಗಳ ಕುರಿತು ಕಂಪೆನಿಯ ಆಡಳಿತ ಹೊಂದಿರುವ ನಿಕೃಷ್ಟ ಮನೋಭಾವವನ್ನು ಇದು ಎತ್ತಿತೋರಿಸುತ್ತದೆ.

ಸಾರ್ವಜನಿಕ ವಲಯದ ಉದ್ಯಮಗಳಲ್ಲಿ ಸಾಮಾನ್ಯವಾಗಿ ಕಾಣಸಿಗದ ಅಸಹಜ ವಂಚಕ ಗುಣಗಳು ಎಮ್ಆರ್ ಪಿಎಲ್ ಅಳವಡಿಸಿಕೊಂಡಿದೆ ಎಂದು ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ.

ಒಟ್ಟು ಕೇಶವ ಕೋಟ್ಯಾನ್ ಅಪಘಾತ, ಸಾವು ಪ್ರಕರಣದ ಕುರಿತು ಪಾರದರ್ಶಕ ತನಿಖೆಯ ಅಗತ್ಯವಿದೆ. ಜಿಲ್ಲಾಡಳಿತ ಈ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ

ಮೇಲೆ ಕ್ರಮ ಕೈಗೊಳ್ಳಬೇಕು. ಓಎನ್ ಜಿಸಿ ಯ ವಿಜಿಲೆನ್ಸ್ ಕಮಿಟಿ ಪ್ರತ್ಯೇಕ ತನಿಖೆ ಕೈಗೊಳ್ಳಬೇಕು. ಅಪಘಾತ ಪ್ರಕರಣವನ್ನು ಕುಸಿದು ಬಿದ್ದು ಸ್ವಾಭಾವಿಕ ಸಾವು ಎಂದು ಪ್ರಕಟನೆ ನೀಡಿ ದಾರಿತಪ್ಪಿಸಿದ,

ಪ್ರಕರಣವನ್ನು ತಿರುಚಲು ಯತ್ನಿಸುತ್ತಿರುವ ಎಮ್ ಆರ್ ಪಿ ಎಲ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಹಾಗೂ ಕೇಶವ ಕೋಟ್ಯಾನ್ ಸಂತ್ರಸ್ತ ಕುಟುಂಬಕ್ಕೆ ಕಂಪೆನಿಯ ವತಿಯಿಂದ ಒಂದು ಕೋಟಿ ರೂಪಾಯಿ ಪರಿಹಾರ ಧನ

ಹಾಗೂ ಅವರ ಕುಟುಂಬಕ್ಕೆ ಒಂದು ಖಾಯಂ ಉದ್ಯೋಗ ಒದಗಿಸಿಕೊಡಬೇಕು ಎಂದು ಡಿವೈಎಫ್ಐ ಆಗ್ರಹಿಸುತ್ತದೆ ಎಂದು ಮುನೀರ್ ಕಾಟಿಪಳ್ಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

DAKSHINA KANNADA

ಹೊತ್ತಿ ಉರಿದು ಭಸ್ಮ*ವಾದ ಸ್ವೀಟ್ ಕಾರ್ನ್ ಸ್ಟಾಲ್‌..!! ಓಡಿ ಜೀವ ಉಳಿಸಿಕೊಂಡ ಸ್ಟಾಲ್ ಮಾಲೀಕ, ಗ್ರಾಹಕರು

Published

on

ಉಳ್ಳಾಲ: ರಸ್ತೆಯ ಬದಿಯಲ್ಲಿ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಸ್ಟಾಲ್ ಒಂದರಲ್ಲಿ ಆಕಸ್ಮಿ*ಕ ಬೆಂಕಿಯಿಂದಾಗಿ ಸ್ಟಾಲ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಉಳ್ಳಾಲದ ದೇರಳಕಟ್ಟೆಯಲ್ಲಿ ನಡೆದಿದೆ.

sweet corn burn

ಗ್ಯಾಸ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದೆ. ರಸ್ತೆಯ ಬದಿಯಲ್ಲೇ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಅಂಗಡಿ ಮಾಲೀಕ ಕಾರ್ನ್ ತಯಾರಿಸುವಾಗ ಈ ಅವಘಡ ಸಂಭವಿಸಿದೆ. ತಕ್ಷಣ ಅಂಗಡಿ ಮಾಲೀಕ ಹಾಗೂ ಸ್ವೀಟ್ ಕಾರ್ನ ತಿನ್ನಲು ಬಂದಿದ್ದ ಗ್ರಾಹಕರು ಓಡಿ ತಪ್ಪಿಸಿಕೊಂಡಿದ್ದಾರೆ. ಸ್ಥಳೀಯರು ತಕ್ಷಣ ಮರಳು ಹಾಗೂ ನೀರನ್ನ ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದ್ರೆ ಅಷ್ಟರಲ್ಲಾಗಲೇ ಸ್ಟಾಲ್ ಉರಿದು ಭಸ್ಮವಾಗಿ ಹೋಗಿದೆ.

Read More..; ಬೆಂಕಿ ಹಚ್ಚಿ ಯುವತಿಯ ಬರ್ಬ*ರ ಹ*ತ್ಯೆ..!! ಕತ್ತು ಕೊಯ್ದು ಸು*ಟ್ಟು ಹಾಕಿರುವ ಶಂಕೆ

sweet corn burn 2

Continue Reading

LATEST NEWS

ಬೆಂಕಿ ಹಚ್ಚಿ ಯುವತಿಯ ಬರ್ಬ*ರ ಹ*ತ್ಯೆ..!! ಕತ್ತು ಕೊಯ್ದು ಸು*ಟ್ಟು ಹಾಕಿರುವ ಶಂಕೆ

Published

on

ಬೆಳಗಾವಿ: 25 ರಿಂದ 30 ವರ್ಷದ ಯುವತಿಯೊಬ್ಬಳನ್ನು ಬರ್ಬರವಾಗಿ ಹ*ತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕದಲ್ಲಿ ನಡೆದಿದೆ. ಇಲ್ಲಿನ ಗ್ರಾಮೀಣ ಪೊಲೀಸ್ ಠಾಣ ವ್ಯಾಪ್ತಿಯ ಮಮದಾಪುರ ಗ್ರಾಮದಲ್ಲಿ ಈ ಕೃತ್ಯ ನಡೆದಿದ್ದು ಕೊ*ಲೆ ಮಾಡಿದವರಾರು? ಹ*ತ್ಯೆ ಆದವಳು ಯಾರು? ಎಂಬುದಾಗಲಿ ಗೊತ್ತಾಗಿಲ್ಲ. ನಿನ್ನೆ(ಎ.18) ಮಧ್ಯಾಹ್ನ 2 ಗಂಟೆ ಸುಮಾರಿಗೆ ಕಾಲುವೆ ಪಕ್ಕದಲ್ಲಿ ಹೊಗೆಯಾಡುತ್ತಿರುವುದನ್ನು ಜನರು ಗಮನಿಸಿದ್ದಾರೆ. ಬಿಸಿಲಿನ ತಾಪಕ್ಕೆ ಹುಲ್ಲು ಇರುವ ಜಾಗಕ್ಕೆ ಬೆಂಕಿ ಬಿದ್ದಿರಬಹುದು ಎಂದು ಕೆಲವರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ಯುವತಿಯ ಮೃತದೇಹ ಕಂಡು ಬಂದಿದೆ.

murder

ಯುವತಿಯ ಕತ್ತು ಕೊಯ್ದು ಬಳಿಕ ಆಕೆಯ ಗುರುತು ಪತ್ತೆಯಾಗದಂತೆ ಸುಟ್ಟು ಹಾಕಿರಬೇಕು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ವಿಧಿ ವಿಜ್ಞಾನ ತಂಡ ಹಾಗೂ ಪೊಲೀಸರು ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಯುವತಿಯನ್ನು ಬೇರೆಡೆ ಕೊಲೆ ಮಾಡಿ ಇಲ್ಲಿ ತಂದು ಸುಟ್ಟು ಹಾಕುವ ಪ್ರಯತ್ನ ನಡೆದಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಆದರೆ ಈ ಯುವತಿ ಯಾರು ಹಾಗೂ ಯಾರು ಕೊಲೆ ಮಾಡಿದ್ದಾರೆ ಅನ್ನೋದು ತನಿಖೆಯಿಂದ ಗೊತ್ತಾಗಬೇಕಾಗಿದೆ.

Read More..: ಉಡುಪಿಯಲ್ಲಿ ಭೀಕರ ಅಪಘಾ*ತ; ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವು

Continue Reading

LATEST NEWS

ಉಡುಪಿಯಲ್ಲಿ ಭೀಕರ ಅಪಘಾ*ತ; ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವು

Published

on

ಉಡುಪಿ : ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವನ್ನಪ್ಪಿರುವ ಘಟನೆ ಉಡುಪಿಯ ಹೇರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಕೃಷ್ಣ ಗಾಣಿಗ ಮೃ*ತ ದುರ್ದೈವಿ. ಉಡುಪಿ ನಗರ ಸಭೆಯಲ್ಲಿ ಎಲೆಕ್ಟ್ರಿಷನ್ ಆಗಿ ಕೃಷ್ಣ ಕೆಲಸ ಮಾಡುತ್ತಿದ್ದರು. ಸಂತೆಕಟ್ಟೆ ಮಾರ್ಗವಾಗಿ ಬ್ರಹ್ಮಾವರದ ಕಡೆಗೆ ಸಾಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಲಾರಿ ಅಡಿಗೆ ಸಿಲುಕಿ ಸ್ಥಳದಲ್ಲೇ ಸಾ*ವನ್ನಪ್ಪಿದ್ದಾರೆ.

ಲಾರಿ ಕೃಷ್ಣ ಅವನ್ನು ಕೆಲ ದೂರ ಎಳೆದೊಯ್ದಿದೆ ಎಂದು ತಿಳಿದು ಬಂದಿದೆ. ಘಟನೆ ಬಳಿಕ ರಸ್ತೆಯಲ್ಲಿ ಕೆಲ ಕಾಲ ಸಂಚಾರ ದಟ್ಟನೆ ಉಂಟಾಗಿತ್ತು.

ಬ್ರಹ್ಮಾವರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Continue Reading

LATEST NEWS

Trending