Thursday, March 23, 2023

ಮುಲ್ಕಿ : ಇಬ್ಬರ ಸಾವಿಗೆ ಕಾರಣರಾದ ತುಳು ಕಾಮಿಡಿಯನ್ ಅರ್ಪಿತ್ ಅರೆಸ್ಟ್..!

ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಮಧ್ಯರಾತ್ರಿ ಕಾರುಡಿಕ್ಕಿ ಹೊಡೆದು ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು ಓರ್ವ ಗಂಭೀರ ಗಾಯಗೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಕಾರು ಸಮೇತ ಚಾಲಕನನ್ನು ಬಂಧಿಸಿದ್ದಾರೆ,

ಆರೋಪಿ ಕಾರು ಚಾಲಕನನ್ನು ಹಳೆಯಂಗಡಿ ಇಂದ್ರ ನಗರ ನಿವಾಸಿ ಅರ್ಪಿತ್ ಎಂದು ಗುರುತಿಸಲಾಗಿದ್ದು ಈತ ತುಳು ಸ್ಟ್ಯಾಂಡ್ ಆಫ್ ಕಾಮಿಡಿ ಯೂಟ್ಯೂಬರ್ ಎಂದು ತಿಳಿದು ಬಂದಿದೆ.

ಮಧ್ಯಪ್ರದೇಶದ ಇಂದೋರ್ ನಿಂದ ಕೇರಳ ಕಡೆಗೆ ಹೋಗುತ್ತಿದ್ದ ಲಾರಿ ಪಡುಪಣಂಬೂರು ಬಳಿ ಟಯರ್ ಪಂಚರ್ ಆಗಿದ್ದು ಲಾರಿಯಲ್ಲಿದ್ದ ಮಧ್ಯಪ್ರದೇಶ ನಿವಾಸಿಗಳಾದ ಬಬುಲು(23), ಆಚಲ್ ಸಿಂಗ್ (30) ಹಾಗೂ ಕೇರಳ ನಿವಾಸಿಅನೀಶ್(42) ಎಂಬವರು ಕೆಳಗಿಳಿದು ಹೆದ್ದಾರಿ ಬದಿಯಲ್ಲಿ ಟಯರ್ ತೆಗೆದು ದುರಸ್ತಿ ಮಾಡುತ್ತಿದ್ದಂತೆ ಹೆದ್ದಾರಿಯಲ್ಲಿ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಅತೀ ವೇಗದಿಂದ ಚಲಿಸಿದ ಕಾರು ಲಾರಿಯ ಟಯರ್ ದುರಸ್ತಿ ಮಾಡುತ್ತಿದ್ದ ಮೂವರಿಗೆ ಡಿಕ್ಕಿ ಹೊಡೆದು ಪರಾರಿಯಾಗಿತ್ತು.

ಅಪಘಾತ ರಭಸಕ್ಕೆ ಬಬುಲು ಎಂಬಾತ ಸ್ಥಳದಲ್ಲಿ ಮೃತಪಟ್ಟರೆ, ಇನ್ನೋರ್ವ ಅಚಲ್ ಸಿಂಗ್ ಎಂಬಾತ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದನು.

ಇನ್ನೋರ್ವ ಗಾಯಾಳು ಅನಿಶ್ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾನೆ.ಮೂವರಿಗೆ ಡಿಕ್ಕಿ ಹೊಡೆದ ಕಾರು ಸ್ಥಳದಿಂದ ಪರಾರಿಯಾಗಿದ್ದು ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

2 COMMENTS

  1. So sad to hear this. I was searching this news in Daijiworld but they didn’t posted in their website. Sold media !! May be he is one of their investor
    !!!

LEAVE A REPLY

Please enter your comment!
Please enter your name here

Hot Topics

ಕಲಬುರಗಿಯಲ್ಲಿ ಹಾಡು ಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ..!

ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ ಮಾಡಲಾದ ಘಟನೆ ಕಲಬುರಗಿಯ ಹಾಗರಗಾ ಕ್ರಾಸ್ ಬಳಿ ನಡೆದಿದೆ. ಮಜತ್ ಸುಲ್ತಾನ್ (35) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಕಲಬುರಗಿ : ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ...

ಚಿಕ್ಕಮಗಳೂರು : ಬೈಕಿಗೆ ಬಸ್ ಡಿಕ್ಕಿ – ಇಬ್ಬರು ಸವಾರರು ಸ್ಥಳದಲ್ಲೇ ಮೃತ್ಯು..!

ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ. ಚಿಕ್ಕಮಗಳೂರು: ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು...

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದಿದ್ದ ಕುಮಟಾದ ಯುವತಿ ಡಿಡೀರ್ ನಾಪತ್ತೆ..! 

ಕುಟುಂಬಸ್ಥರ ಜೊತೆ ಉತ್ತರ ಕನ್ನಡದಿಂದ ದಕ್ಷಿಣ ಕನ್ನಡದ ಶ್ರೀ ಕ್ಷೇತ್ರಗಳನ್ನು ಸಂದರ್ಶಿಸಲು ಬಂದಿದ್ದ ಹದಿ ಹರೆಯದ ಯುವತಿ ನಾಪತ್ತೆಯಾಗಿದ್ದಾಳೆ.ಬೆಳ್ತಂಗಡಿ : ಕುಟುಂಬಸ್ಥರ ಜೊತೆ ಉತ್ತರ ಕನ್ನಡದಿಂದ ದಕ್ಷಿಣ ಕನ್ನಡದ ಶ್ರೀ ಕ್ಷೇತ್ರಗಳನ್ನು...