Connect with us

    LATEST NEWS

    ವರುಣನಾರ್ಭಟಕ್ಕೆ ಬೆಚ್ಚಿ ಬಿದ್ದ ಮುಳ್ಳಯ್ಯನಗಿರಿ: ತೋಯ್ದು ತೊಪ್ಪಾದ ಪ್ರವಾಸಿಗರು

    Published

    on

    ಮಂಗಳುರು/ಚಿಕ್ಕಮಗಳೂರು: ಹಿಂಗಾರು ಮಳೆಯಬ್ಬರ ರಾಜ್ಯದಲ್ಲಿ ಜೋರಾಗಿಯೇ ಇದೆ. ವಿಶೇಷವಾಗಿ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿಯಲ್ಲಿ ಇತಿಹಾಸದಲ್ಲಿ ಕಂಡು ಕೇಳರಿಯದ ಮಳೆ ಈ ಬಾರಿ ದಾಖಲಾಗಿದೆ. ಕರ್ನಾಟಕದ ಅತ್ಯಂತ ಎತ್ತರದ ಪ್ರದೇಶ ಮುಳ್ಳಯ್ಯನಗಿರಿಯ ದತ್ತಪೀಠದಲ್ಲಿ 2 ಅಡಿ ಮಳೆ ನೀರು ನಿಂತುಕೊಂಡಿದೆ.

     

    ಹಿಂಗಾರು ಮಳೆಗೆ ಪಶ್ಚಿಮಘಟ್ಟಗಳ ತಪ್ಪಲು ಅಲ್ಲೋಲ-ಕಲ್ಲೋಲವಾಗಿದೆ. ಕಳೆದ ದಿನ ಸುರಿದ ಭಾರೀ ಮಳೆಗೆ ದತ್ತಪೀಠದ ರಸ್ತೆಯಲ್ಲಿ 2 ಅಡಿ ಎತ್ತರದಲ್ಲಿ ಮಳೆ ನೀರು ಹರಿದಿದೆ. ಮಳೆರಾಯನ ಅಬ್ಬರಕ್ಕೆ ಪ್ರವಾಸಿಗರು ತೊಯ್ದು ತೊಪ್ಪೆಯಾಗಿದ್ದಾರೆ. ಮಳೆ ಮಧ್ಯೆ ಸಿಲುಕಿದ ಪ್ರವಾಸಿಗರು ಮುಳ್ಳಯ್ಯನಗಿರಿ ಸಹವಾಸವೇ ಬೇಡ ಎನ್ನುವಷ್ಟು ಬೆದರಿ ಹೋಗಿದ್ದಾರೆ.

     

    ಸಾವಿರಾರು ಅಡಿ ಆಳ ಇರುವ ಮುಗಿಲೆತ್ತರದ ಬೆಟ್ಟಗುಡ್ಡಗಳ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆರಾಯನ ಅರ್ಭಟ ನಿಲ್ಲುತ್ತಲೇ ಇಲ್ಲ. ಎಷ್ಟೇ ಮಳೆ ಸುರಿದರೂ ನೀರು ಹರಿದು ಹೋಗುತ್ತದೆ. ಆದರೀಗ ಹಿಂಗಾರು ಮಳೆ ಅಬ್ಬರಕ್ಕೆ ಅಂತಹಾ ಪಶ್ಚಿಮ ಘಟ್ಟವೇ ಬೆದರಿ ಹೋಗಿದೆ. ಮುಗಿಲೆತ್ತರದ ಬೆಟ್ಟಗಳ ಮೇಲೆ 2 ಅಡಿ ನೀರು ನಿಂತಿದೆ.

    ಶಿವಮೊಗ್ಗದಲ್ಲೂ ನಿಲ್ಲದ ಮಳೆ:

    ಶಿವಮೊಗ್ಗದಲ್ಲೂ ಕಳೆದ ರಾತ್ರಿಯಿಂದ ಎಡಬಿಡದೆ ಧಾರಾಕಾರ ಮಳೆ ಸುರಿಯುತ್ತಿದೆ. ತಗ್ಗು ಪ್ರದೇಶದ ಮನೆಗಳಿಗೆ‌ ಮಳೆ ನೀರು ನುಗ್ಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದ ದೇವರಾಜು ಅರಸು ಬಡಾವಣೆಯ ಮನೆಗಳು ಜಲಾವೃತಗೊಂಡಿದ್ದು, ಆತಂಕದಲ್ಲಿ ಜನ ಜೀವನ ನಡೆಸುವಂತಾಗಿದೆ. ಅಲ್ಲದೆ ರಸ್ತೆಗಳಲ್ಲಿ ಮಳೆ ನೀರು ಉಕ್ಕಿ ಹರಿಯುತ್ತಿದ್ದು ರಸ್ತೆಗಳು ನದಿಗಳಂತಾಗಿವೆ.

    ಇಡೀ ರಾತ್ರಿ ಸುರಿದ ಮಳೆಗೆ ಜಿಲ್ಲೆಯಾದ್ಯಂತ ಇವತ್ತು ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಕಳೆದ ರಾತ್ರಿ 11 ಗಂಟೆ ಹೊತ್ತಿಗೆ ಆರಂಭವಾದ ಮಳೆ ಬಿಡುವು ನೀಡದೆ ಅಬ್ಬರಿಸುತ್ತಿದೆ. ಗುಡುಗು, ಮಿಂಚು ಸಹಿತ ಮಳೆ ಸುರಿಯುತ್ತಿದೆ. ಇವತ್ತು ಇಡೀ ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. “ಡಿಕೆ ಶಿವಕುಮಾರ್, ವಿಜಯೇಂದ್ರ ಹೊಂದಾಣಿಕೆ ರಾಜಕೀಯ: ಸ್ಫೋಟಕ ಹೇಳಿಕೆ ” ಸಾಗರ, ಹೊಸನಗರ, ಶಿವಮೊಗ್ಗ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕುಗಳಲ್ಲಿ ಭಾರಿ ಮಳೆಯ ಅಲರ್ಟ್‌ ಇದೆ. ತೀರ್ಥಹಳ್ಳಿಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ತಿಳಿಸಿದೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಇನ್ನೆರಡು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ!

    Published

    on

    ಮಂಗಳೂರು : ಬಂಗಾಳಕೊಲ್ಲಿಯಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆಯಲ್ಲಿ ಪೂರ್ವ ಕರಾವಳಿ ಹಾಗೂ ಪಶ್ವಿಮ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುತ್ತಿದೆ.  ಇದರ ಪರಿಣಾಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೆರಡು ದಿನ ಮಳೆ ಸುರಿಯಲಿದ್ದು,  ಅಕ್ಟೋಬರ್ 21 ಮತ್ತು 22 ರಂದು ಎಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

    ಈಗಾಗಲೇ ಬಂಗಾಳಕೊಲ್ಲಿಯ ಸೈಕ್ಲೋನ್ ಎಫೆಕ್ಟ್‌ನಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆಯಾಗಿ ಅವಾಂತರ ಸೃಷ್ಟಿಸಿತ್ತು. ಇತ್ತ ಅರಬ್ಬೀ ಸಮುದ್ರದಲ್ಲಿನ ವಾಯಭಾರ ಕುಸಿತದಿಂದಲೂ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ ಮೊದಲಾದ ಕಡೆಯಲ್ಲಿ ವ್ಯಾಪಕ ಮಳೆಯಾಗುತ್ತಿದೆ.

    ಇದನ್ನೂ ಓದಿ : WATCH : ಮಳೆಯಿಂದ ಮುಳುಗಿದ ಬೆಂಗಳೂರು; ನೀರಿನಲ್ಲಿ ಸಿಲುಕಿಕೊಂಡ ವಾಹನಗಳ ನಡುವೆ ಗಣಪತಿ ಪ್ರತ್ಯಕ್ಷ

    ಇನ್ನೆರಡು ದಿನಗಳ ಕಾಲ ಮಳೆ ತೀವ್ರತೆ ಪಡೆದುಕೊಳ್ಳಲಿದ್ದು, ಗಾಳಿ ಸಹಿತ ಮಳೆ ಸುರಿಯಲಿದ್ದು ಗುಡುಗು ಸಿಡಿಲಿನ ಅಬ್ಬರವೂ ಇರಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡದೆ. ಒಟ್ಟಾಗಿ ರಾಜ್ಯದ 18 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

    ಎಲ್ಲೆಲ್ಲಿ ಮಳೆ?

    ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಶಿವಮೊಗ್ಗ, ಮಂಡ್ಯ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಚದುರಿದಂತೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಕ್ಟೋಬರ್ 21 ರಿಂದ ಮಳೆ ಚುರುಕು ಪಡೆಯಲಿದೆ ಎಂದು ಹೇಳಿದೆ.

    Continue Reading

    LATEST NEWS

    ಋತುಬಂಧ ಎಂದರೇನು ? ಅದರ ಲಕ್ಷಣಗಳಾವುವು ? ಇಲ್ಲಿದೆ ಸಂಪೂರ್ಣ ಮಾಹಿತಿ

    Published

    on

    ಮಂಗಳೂರು: ಮಹಿಳೆಯು ಜೀವನದಲ್ಲಿ ಇನ್ನು ಮುಂದೆ ಸಂತಾನೋತ್ಪತ್ತಿ ಮಾಡಲು ಸಾಧ್ಯವಾಗದ ಸಮಯ ಮತ್ತು ಆಕೆಯ ಋತುಚಕ್ರವು ಕೊನೆಗೊಳ್ಳುವ ಸಮಯವೇ ‘ಋತುಬಂಧ’. ಈ ಸಂದರ್ಭ ಮಹಿಳೆಯರು ಸಾಕಷ್ಟು ದೈಹಿಕ ಮತ್ತು ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಾರೆ. ಇದು ಸರಿಸುಮಾರು 40-50 ನೇ ವಯಸ್ಸಿನಲ್ಲಿ ಸಂಭವಿಸುತ್ತದೆ.

     

    ಹಣ್ಣಿನ ಜೀವದಲ್ಲಿ ಋತುಚಕ್ರ ಬಹು ಮಖ್ಯ ಭಾಗ. ಆಕೆಯಲ್ಲಿ ಹೆಣ್ತನವನ್ನು ಮೂಡಿಸುವುದೇ ಈ ಋತುಚಕ್ರ. ಅದಾದ ಬಳಿಕ ಆಕೆ ಲೈಂಗಿಕ ಕ್ರಿಯೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಸುಂದರ ಜೀವಿಯ ಸೃಷ್ಠಿಗೆ ಕಾರಣೀಭೂತಳಾಗುತ್ತಾಳೆ. ಆ ಅಮುಲ್ಯ ಕ್ಷಣಗಳೆಲ್ಲಾ ಮುಗಿದ ಬಳಿಕ ಬರುವುದೇ ಋತುಬಂಧ.

     

    ಋತು ಬಂಧದ ಲಕ್ಷಣಗಳು:

    1. ಹೆಚ್ಚು ರಕ್ತಸ್ರಾವ ಮತ್ತು ಅನಿಯಮಿತ ಮುಟ್ಟು:
    ಮಹಿಳೆಯರಲ್ಲಿ ಋತುಬಂಧದ ಸಮಯದಲ್ಲಿ ಕಂಡುಬರುವ ಪ್ರಮುಖ ಸಮಸ್ಯೆಗಳಲ್ಲಿ ಒಂದು ಹೆಚ್ಚು ರಕ್ತಸ್ರಾವ ಮತ್ತು ಅನಿಯಮಿತ ಮುಟ್ಟು. ಸಾಮಾನ್ಯವಾಗಿ ತಿಂಗಳಿಗೊಮ್ಮೆ ಪೀರಿಯಡ್‌ ಆಗುವ ದೇಹದಲ್ಲಾಗುವ ಹಾರ್ಮೋನ್ ಬದಲಾವಣೆಗಳಿಂದ ಏರುಪೇರಾಗಿ ತಿಂಗಳಿಗೆ ಎರಡು ಸಲವೂ ಆಗಬಹುದು. ಕೆಲವರಲ್ಲಿ ಹೆಚ್ಚು ರಕ್ತಸ್ರಾವವಾದರೆ ಇನ್ನೂ ಕೆಲವರಲ್ಲಿ ರಕ್ತಸ್ರಾವದ ಕೊರತೆಯಾಗಬಹುದು.
    2. ರಾತ್ರಿಯಲ್ಲಿ ಅತಿಯಾದ ಬೆವರುವಿಕೆ:
    ರಾತ್ರಿ ಮಲಗಿರುವಾಗ ಅತಿಯಾದ ಬೇವರಿನಿಂದಾಗಿ ಪದೇ ಪದೇ ಎಚ್ಚರವಾಗುವುದು. ದೇಹದಲ್ಲಿ ಶಾಖ ವಿಪರೀತವಾಗುವುದು ಋತುಬಂಧದ ಸಮಯದಲ್ಲಿ ಕಂಡುಬರುವ ಪ್ರಮುಖ ಸಮಸ್ಯೆಗಳಲ್ಲಿ ಒಂದು. ಋತುಬಂಧದ ಸಮಯದಲ್ಲಿ ಹಾರ್ಮೋನ್​​ ಏರಿಳಿತಗಳಿಂದ ಈ ರೀತಿಯ ಸಮಸ್ಯೆ ಕಾಡುತ್ತದೆ.
    3. ನಿದ್ರಾಹೀನತೆ ಮತ್ತು ಮಾನಸಿಕ ಒತ್ತಡ:
    ನಿದ್ರಾಹೀನತೆ ಜೊತೆಗೆ ಮಾನಸಿಕ ಒತ್ತಡ ಋತುಬಂಧದ ಸಮಯದಲ್ಲಿ ಹಾರ್ಮೋನ್​​ ಏರಿಳಿತಗಳಿಂದ ಈ ರೀತಿಯ ಸಮಸ್ಯೆ ಕಾಡುತ್ತದೆ. ಪದೇ ಪದೇ ಎಚ್ಚರಗೊಳ್ಳುವುದು, ಮಾನಸಿಕ ಖಿನ್ನತೆಗೆ, ಕಾರಣಗಳೇ ಇಲ್ಲದೇ ಸುಮ್ಮ ಸುಮ್ಮನೇ ಯೋಚನೆ, ಬೇಸರ ಮುಂದಾದ ಲಕ್ಷಣಗಳು ಕಂಡುಬರುತ್ತದೆ.
    4. ಒಣಚರ್ಮದ ಸಮಸ್ಯೆ:
    ಋತುಬಂಧದ ಸಮಯದಲ್ಲಿ ದೇಹ ಸಂಪೂರ್ಣ ಶುಷ್ಕವಾಗವ ಲಕ್ಷಣ ಕಂಡುಬರಬಹುದು. ಜೊತೆಗೆ ನಿಮ್ಮ ಖಾಸಗಿ ಅಂಗವು ಸಹ ಶುಷ್ಕವಾಗಿರಲಿದೆ. ಈ ಸಂದಭದಲ್ಲಿ ದೇಹಕ್ಕೆ ಹರಳೆಣ್ಣೆ ಸ್ನಾನ ಒಳ್ಳೆಯದು. ದೇಹ ಒಣಗದಂತೆ ನೋಡಿಕೊಳ್ಳುವುದರಿಂದ ಒಣಚರ್ಮದಿಂದ ಮುಕ್ತಿ ಪಡೆಯಬಹುದು.

    @TheLancet ಎಂಬ ಟ್ವಟರ್​ ಖಾತೆಯಲ್ಲಿ ನೀಡಿರುವ ಫೋಸ್ಟ್​​ ಪ್ರಕಾರ ಮಹಿಳೆಯರಲ್ಲಿ ಋತುಬಂಧದ ನಂತರದ ದಿನಗಳಲ್ಲಿ ಕ್ಯಾನ್ಸರ್‌ ಕಂಡುಬರುವ ಸಾಧ್ಯತೆ ಹೆಚ್ಚು. ಈ ಬಗ್ಗೆ ಸಾಕಷ್ಟು ಎಚ್ಚರಿಕೆ ಹಾಗೂ ಜಾಗೃತೆ ವಹಿಸಬೇಕು.

    ಅಕಾಲಿಕ ಋತುಬಂಧದ ಪರೀಕ್ಷೆ :

    ಋತುಬಂಧವನ್ನು ಆಂಟಿ-ಮುಲರಿಯನ್ ಹಾರ್ಮೋನ್ (AMH) ಪರೀಕ್ಷೆ ಮೂಲಕ ಪತ್ತೆ ಮಾಡಬಹುದು. ಈಸ್ಟ್ರೊಜೆನ್ ಮಟ್ಟವನ್ನು ಪರಿಶೀಲಿಸಿ ಋತುಬಂಧದ ಬಗ್ಗೆ ಪರೀಕ್ಷೆ ಮಾಡಬಹುದು. ಋತುಬಂಧದಲ್ಲಿ ಈಸ್ಟ್ರೊಜೆನ್ ಮಟ್ಟವು ಕಡಿಮೆಯಾಗುತ್ತದೆ. ಇದಲ್ಲದೇ ಫಾಲಿಕಲ್ ಸ್ಟಿಮ್ಯುಲೇಟಿಂಗ್ ಹಾರ್ಮೋನ್ ಮಟ್ಟವು ಸತತವಾಗಿ 30 mIU/mL ಗಿಂತ ಹೆಚ್ಚಿದ್ದರೆ ಮತ್ತು ಒಂದು ವರ್ಷದಿಂದ ಮುಟ್ಟಾಗದೆ ಹೋದಲ್ಲಿ ಇದು ಋತುಬಂಧದ ಅವಧಿಯನ್ನು ಸೂಚಿಸುತ್ತದೆ.

    Continue Reading

    LATEST NEWS

    WATCH : ಮಳೆಯಿಂದ ಮುಳುಗಿದ ಬೆಂಗಳೂರು; ನೀರಿನಲ್ಲಿ ಸಿಲುಕಿಕೊಂಡ ವಾಹನಗಳ ನಡುವೆ ಗಣಪತಿ ಪ್ರತ್ಯಕ್ಷ

    Published

    on

    ಮಂಗಳೂರು/ ಬೆಂಗಳೂರು : ಕಳೆದೊಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಬೆಂಗಳೂರು ಮಹಾನಗರ ಬಹುತೇಕ ಜಲಾವೃತಗೊಂಡಿದೆ. ನಗರದ ತಗ್ಗು ಪ್ರದೇಶದ ಅನೇಕ ಕಡೆಗಳಲ್ಲಿ ರಸ್ತೆಗಳು ಮಳೆ ನೀರಿನಿಂದ ತುಂಬಿಕೊಂಡಿದ್ದು, ಲಘು ವಾಹನಗಳು ನೀರಿನಲ್ಲಿ ಸಿಲುಕಿಕೊಂಡಿವೆ. ಅಂಡರ್ ಪಾಸ್ ರಸ್ತೆಗಳಲ್ಲಿ ಹಲವಾರು ವಾಹನಗಳು ನೀರಿನಲ್ಲಿ ಸಿಲುಕಿಕೊಂಡಿದ್ದು, ಘನ ವಾಹನಗಳು ಕೂಡ ಸಂಚರಿಸಲು ಪರದಾಡಿದೆ. ಇದೇ ವೇಳೆ ನೀರಿನ ನಡುವಿನಲ್ಲಿ ಗಣಪತಿ ಪ್ರತ್ಯಕ್ಷನಾಗಿ ನಡೆದುಕೊಂಡು ಹೋಗುವ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಅಧಿಕಾರಿಗಳಿಗೆ ಹಿಡಿ ಶಾಪ :

    ಬಿಬಿಎಂಪಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಹಿಡಿ ಶಾಪ ಹಾಕುವ ಗಣಪತಿ ನಗರದ ಅವ್ಯವಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಹಾಗಂತ ಇಲ್ಲಿ ಗಣಪತಿಯಾಗಿ ಕಾಣಿಸಿಕೊಂಡಾತ ಒಬ್ಬ ಸಾಮಾಜಿಕ ಕಾರ್ಯಕರ್ತನಾಗಿದ್ದು, ಬಿಬಿಎಂಪಿಯ ನಿರ್ಲಕ್ಷ್ಯಕ್ಕೆ ಈ ರೀತಿ ವಿಭಿನ್ನವಾಗಿ ಪ್ರತಿಭಟಿಸಿದ್ದಾನೆ. ರಾಜಾಕಾಲುವ ಒತ್ತುವರಿ ತೆರವು ಮಾಡದೆ, ಅಸಮರ್ಪಕ ಕಾಮಗಾರಿಗಳಿಂದ ನಗರದಲ್ಲಿ ಈ ರೀತಿ ಅವ್ಯವಸ್ಥೆ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾನೆ.

    ಇದನ್ನೂ ಓದಿ: ಮೂಲ್ಕಿ : ಮನೆಯ ಅಡುಗೆ ಕೋಣೆಗೆ ಏಕಾಏಕಿ ನುಗ್ಗಿದ ಚಿರತೆ

    ಇಂತಹ ನೀರಿನಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಯಾರಾದ್ರೂ ಬಿದ್ದು ಸಾ*ಯಬಾರದಾ ಅಂತ ಹಿಡಿ ಶಾಪ ಹಾಕಿದ್ದಾನೆ. ಈ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

     

    Continue Reading

    LATEST NEWS

    Trending