FILM
ಶ್ವಾಸಕೋಶದ ಕ್ಯಾನ್ಸರ್ – ಕೋಕಿಲಾ ಬೆನ್ ಆಸ್ಪತ್ರೆಯಲ್ಲಿ ಸಂಜಯ್ ದತ್ ಗೆ ಚಿಕಿತ್ಸೆ
ಮುಂಬೈ : ಶ್ವಾಸಕೋಶ ಕ್ಯಾನ್ಸರ್ಗೆ ತುತ್ತಾಗಿರುವ ಬಾಲಿವುಡ್ ನಟ ಸಂಜಯ್ ದತ್ಗೆ (61 ವರ್ಷ) ಮುಂಬೈನಲ್ಲೇ ಪ್ರಾಥಮಿಕ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪತ್ನಿ ಮಾನ್ಯತಾ ಸ್ಪಷ್ಟ ಪಡಿಸಿದ್ದಾರೆ. ಸಂಜುಬಾಬಾ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ 4ನೇ ಹಂತದಲ್ಲಿದ್ದು ಎಲ್ಲಾ ರೀತಿಯ ಪ್ರಾಥಮಿಕ ಚಿಕಿತ್ಸೆಯನ್ನು ಕೋಕಿಲಾ ಬೆನ್ ಧೀರುಭಾಯಿ ಆಸ್ಪತ್ರೆಯಲ್ಲಿ ಪಡೆಯುತ್ತಿದ್ದಾರೆ. ಮುಂದಿನಹಂತದ ಚಿಕಿತ್ಸೆಗೆ ವಿದೇಶಕ್ಕೆ ತೆರಳುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದು ಮಾನ್ಯತಾ ಹೇಳಿದ್ದಾರೆ.
ಸಂಜು ಬಾಬಾ ಎಂದೇ ಖ್ಯಾತರಾಗಿರುವ ಸಂಜಯ್ ದತ್ ಇತ್ತೀಚೆಗಷ್ಟೇ ಉಸಿರಾಟದ ಸಮಸ್ಯೆಯಿಂದ ಬಾಂದ್ರಾದ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ನಡೆಸಿದ ಹಲವು ಪರೀಕ್ಷೆಗಳಿಂದ ಅವರಿಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಪ್ರಸ್ತುತ ಅವರು ಅಂಧೇರಿಯಲ್ಲಿರುವ ಕೋಕಿಲಾಬೆನ್ ಧೀರುಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಂಜಯ್ ಜೀವನದಲ್ಲಿ ಸಾಕಷ್ಟು ಏಳು–ಬೀಳುಗಳನ್ನು ಕಂಡಿದ್ದಾರೆ, ಆದರೆ ಪ್ರತಿಯೊಂದು ಕಠಿಣ ಪರಿಸ್ಥಿತಿಯಲ್ಲಿಯೂ ಅವರಿಗೆ ಮುಂದೆ ಸಾಗುವಂತೆ ಮಾಡಿರುವುದು ನಿಮ್ಮ ಬೆಂಬಲ ಮತ್ತು ಮೆಚ್ಚುಗೆ. ಅದಕ್ಕೆ ನಾವು ಸದಾ ಋಣಿಯಾಗಿರುತ್ತೇವೆ. ಈಗ ನಮಗೆ ಮತ್ತೊಂದು ಕಠಿಣ ಸವಾಲು ಮುಂದಿದೆ, ನೀವು ಅದೇ ಪ್ರೀತಿ ಮತ್ತು ಕಾಳಜಿಯನ್ನು ತೋರುವಿರೆಂದು ನನಗೆ ಭರವಸೆಯಿದೆ. ಯಾವುದೇ ನಕಾರಾತ್ಮ ಯೋಚನೆಗಳಿಗೂ ಸರಿಯದೆ ಸಂಜುಗಾಗಿ ನಗುನಗುತ್ತ, ಸಹಜ ಬದುಕನ್ನು ಸಾಗಿಸಬೇಕಿದೆ. ಇದು ಸುದೀರ್ಘ ಪ್ರಯಾಣವಾಗಿರಲಿದೆ’ ಎಂದು ತಿಳಿಸಿದ್ದಾರೆ.
ಸಂಜಯ್ ದತ್ ಆರೋಗ್ಯದ ಬಗ್ಗೆ ಆಗಾಗ್ಗೆ ನಿಮಗೆ ಮಾಹಿತಿ ನೀಡುತ್ತೇವೆ. ಆದರೆ ಅವರ ಆರೋಗ್ಯದ ಬಗ್ಗೆ ಊಹಾಪೋಹಗಳನ್ನು ನಿಲ್ಲಿಸಿ ಹಾಗೂ ವೈದ್ಯರು ಅವರ ಕರ್ತವ್ಯ ನಿರ್ವಹಿಸಲು ಬಿಡಿ ಎಂದು ಕುಟುಂಬವರ್ಗ ಮನವಿ ಮಾಡಿದೆ.
DAKSHINA KANNADA
‘ನಾಟು ನಾಟು’ ರೀತಿಯ ಸಾಂಗ್..! ಕುತೂಹಲ ಮೂಡಿಸಿದ ‘ವಾರ್ 2’
2019 ರಲ್ಲಿ ಸೂಪರ್ ಹಿಟ್ ಆಗಿದ್ದ ‘ವಾರ್’ ಸಿನೆಮಾದ ಸೆಕಂಡ್ ವರ್ಷನ್ ‘ವಾರ್ 2’ ತೆರೆ ಮೇಲೆ ಬರಲು ಭರದ ಸಿದ್ಧತೆ ನಡೆಸಿದೆ. ‘ವಾರ್’ ಸಿನೆಮಾದಲ್ಲಿ ‘ ಜೈ ಜೈ ಶಿವಶಂಕರ್’ ಹಾಡು ಸುಪರ್ ಹಿಟ್ ಆಗಿದ್ದು ಫ್ಯಾನ್ಸ್ಗಳು ಹಾಡಿಗೆ ಫಿದಾ ಆಗಿದ್ರು. ಟೈಗರ್ ಶ್ರಾಫ್ ಹಾಗೂ ಹೃತಿಕ್ ರೋಷನ್ ನಟನೆಯ ‘ವಾರ್’ ಸಿನೆಮಾ ಬಳಿಕ ಈಗ ‘ವಾರ್ 2’ ರೆಡಿ ಆಗ್ತಾ ಇದೆ. ಇದರಲ್ಲಿ ಹೃತಿಕ್ ರೋಷನ್ ಹಾಗೂ ಜ್ಯೂನಿಯರ್ ಎನ್ಟಿಆರ್ ಜೊತೆಯಾಗಿದ್ದಾರೆ.
ಅದ್ಧೂರಿಯಾಗಿ ನಿರ್ಮಾಣ ಆಗ್ತಾ ಇರೋ ‘ವಾರ್ 2’ ಸಿನೆಮಾಗೆ ದೊಡ್ಡ ಮಟ್ಟದಲ್ಲಿ ಹೂಡಿಕೆ ಮಾಡಲಾಗ್ತಾ ಇದೆ. ಯಶ್ ರಾಜ್ ಫಿಲಂಸ್ ಸಂಸ್ಥೆ ಈ ‘ವಾರ್ 2’ ಸಿನೆಮಾಗೆ ಬಂಡವಾಳ ಹಾಕುತ್ತಿದೆ. ‘ವಾರ್’ ಸಿನೆಮಾದಂತೆ ಈ ಸಿನೆಮಾದಲ್ಲೂ ವಿಶೇಷ ಹಾಡನ್ನ ಸಿನೆಮಾ ತಂಡ ಪ್ಲ್ಯಾನ್ ಮಾಡಿದೆ. ಜೂನಿಯರ್ ಎನ್ಟಿಆರ್ ಅವರ ಆಸ್ಕರ್ ಅವಾರ್ಡ್ ವಿನ್ ಆಗಿದ್ದ ‘ನಾಟು ನಾಟು” ಹಾಡಿನಂತೆ ಇರೋ ಹಾಡಿಗೆ ಹೃತಿಕ್ ಹಾಗೂ ಜ್ಯೂನಿಯರ್ ಎನ್ಟಿಆರ್ ಹೆಜ್ಜೆ ಹಾಕಲಿದ್ದಾರೆ ಎನ್ನಲಾಗಿದೆ. ‘ನಾಟು ನಾಟು’ ರೀತಿಯ ಹಾಡು ಹಾಗೂ ಡ್ಯಾನ್ಸ್ ‘ವಾರ್ 2’ ಸಿಎನಮಾದ ಹೈಲೈಟ್ ಆಗಲಿದೆ ಎಂದು ಬಾಲಿವುಡ್ ಹಂಗಾಮ ವರದಿ ಮಾಡಿದೆ.
ಈಗಾಗಲೇ ‘ವಾರ್ 2’ ಚಿತ್ರದ ಶೂಟಿಂಗ್ ಆರಂಭವಾಗಿದೆ. ಚಿತ್ರದ ಸೆಟ್ ಫೋಟೋಗಳು ಕೂಡಾ ಲೀಕ್ ಆಗಿವೆ. ಅಯಾನ್ ಮುಖರ್ಜಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಆದಿತ್ಯ ಚೋಪ್ರಾ ಅವರು ದೊಡ್ಡ ಬಜೆಟ್ನಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ‘ವಾರ್ 2’ ಚಿತ್ರದಲ್ಲಿ ಕಿಯಾರಾ ಅಡ್ವಾಣಿ ನಟಿಸುತ್ತಿದ್ದಾರೆ. ಈ ಸಿನಿಮಾ 2025ರಲ್ಲಿ ಆಗಸ್ಟ್ 14ರಂದು ರಿಲೀಸ್ ಆಗಲಿದೆ.
FILM
ಸೂಪರ್ ಹಿಟ್ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್ ಡೇಟ್ ಫಿಕ್ಸ್!
ಮಲಯಾಳಂನ ಮಂಜುಮ್ಮೆಲ್ ಬಾಯ್ಸ್ ಭಾರೀ ಯಶಸ್ಸನ್ನು ಗಳಿಸಿದ ಚಿತ್ರ. ಚಿತ್ರ ನೋಡಿ ಮತ್ತೆ ಮತ್ತೆ ವೀಕ್ಷಿಸಲು ಥಿಯೇಟರ್ ಗೆ ಜನ ಲಗ್ಗೆ ಇಡುತ್ತಿದ್ದಾರೆ. ಮಲಯಾಳಂ ಸಿನಿ ಪ್ರಿಯರು ಚಿತ್ರ ನೋಡಿ ಭಾರೀ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಯಾವುದೇ ಸಿನಿಮಾ ಬಂದ್ರೂ ಅದು ಓಟಿಟಿಯಲ್ಲಿ ಯಾವಾಗ ಬರುತ್ತೆ ಅಂತ ಕಾಯೋದು ಸಹಜ. ಇದೀಗ ‘ಮಂಜುಮ್ಮೆಲ್ ಬಾಯ್ಸ್’ ಸರದಿ.
ಅತಿ ಹೆಚ್ಚು ಗಳಿಕೆ :
‘ಮಂಜುಮ್ಮೆಲ್ ಬಾಯ್ಸ್’ ಸರಳ ಕಥಾಹಂದರ ಹೊಂದಿದ್ದರೂ ಅದ್ಭುತವಾಗಿ ಕಟ್ಟಿಕೊಡಲಾಗಿದೆ. ಚಿತ್ರವನ್ನು ಚಿದಂಬರಂ ಮನೋಜ್ಞವಾಗಿ ಚಿತ್ರಿಸಿದ್ದಾರೆ. ಫೆಬ್ರವರಿ 22 ರಂದು ಈ ಚಿತ್ರ ತೆರೆಕಂಡಿತ್ತು. ಬಾಕ್ಸ್ ಆಫೀಸ್ ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಈಗಾಗಲೇ ಗ್ರಾಸ್ ಕಲೆಕ್ಷನ್ 200 ಕೋಟಿ ರೂಪಾಯಿ ದಾಟಿದೆ. ಮಲಯಾಳಂನಲ್ಲಿ ಅತಿ ಹೆಚ್ಚು ಗಳಿಕೆ ಕಂಡ ಸಿನಿಮಾ ಎಂಬ ಹೆಗ್ಗಳಿಕೆ ಗಳಿಸಿದೆ.
ಶೌಬಿನ್ ಶಾಹಿರ್, ಶ್ರೀನಾಥ್ ಬಾಸಿ, ಬಾಲು ವರ್ಗೀಸ್, ಗಣಪತಿ ಸೇರಿದಂತೆ ಸಾಕಷ್ಟು ಜನ ಕಲಾವಿದರು ಚಿತ್ರದಲ್ಲಿ ಪಾತ್ರವಾಗಿದ್ದಾರೆ. ಅಂದಾಜು 20 ಕೋಟಿ ರೂ. ಬಜೆಟ್ನಲ್ಲಿ ನಿರ್ಮಾಣವಾಗಿದ್ದ ಸ್ಟಾರ್ ನಟರಿಲ್ಲದ ಈ ಸಿನಿಮಾ 200 ಕೋಟಿ ರೂ. ಕಲೆಕ್ಷನ್ ಮಾಡಿರೋದು ಆಶ್ಚರ್ಯ ಹುಟ್ಟು ಹಾಕಿದೆ.
ಓಟಿಟಿಯಲ್ಲಿ ಯಾವಾಗ ?
‘ಮಂಜುಮ್ಮೆಲ್ ಬಾಯ್ಸ್’ ಸಿನಿಮಾವನ್ನು ಥಿಯೇಟರ್ ಅಂಗಳದಲ್ಲಿ ನೋಡಿ ಎಂಜಾಯ್ ಮಾಡಿದವರು ಅನೇಕ ಮಂದಿ ಇದ್ದಾರೆ. ಇದೀಗ ಸಿನಿಮಾ ಓಟಿಟಿಯಲ್ಲಿ ಯಾವಾಗ ಅನ್ನೋ ಪ್ರಶ್ನೆ ಹುಟ್ಟಿತ್ತು. ಇದಕ್ಕೆ ಉತ್ತರವೂ ಸಿಕ್ಕಿದೆ.
ಡಿಸ್ನಿ ಪ್ಲಸ್ ಹಾಟ್ಸ್ಟರ್ನಲ್ಲಿ ಮೇ 3 ರಂದು ಸ್ಟ್ರೀಮಿಂಗ್ ಆಗುವುದು ಬಹುತೇಕ ಖಚಿತವಾಗಿದೆ. ಫೆಬ್ರವರಿ 22 ರಂದು ತೆರೆಗೆ ಬಂದಿದ್ದ ಸಿನಿಮಾ ಈಗಾಗಲೇ 50 ದಿನ ಪೂರೈಸಿದೆ. ಸದ್ಯ ತೆಲುಗು, ತಮಿಳು, ಕನ್ನಡಕ್ಕೂ ಸಿನಿಮಾ ಡಬ್ ಆಗಿದ್ದು, ಏಕಕಾಲಕ್ಕೆ ಓಟಿಟಿಯಲ್ಲಿ ಸ್ಕ್ರೀಮಿಂಗ್ ಆಗಲಿದೆಯಾ ಎಂಬುದು ತಿಳಿದು ಬಂದಿಲ್ಲ.
FILM
ನೇಹಾ ಹ*ತ್ಯೆ ಪ್ರಕರಣ : ಆಕ್ರೋಶ ಹೊರ ಹಾಕಿದ ಸಿನಿತಾರೆಯರು
ಬೆಂಗಳೂರು : ಹುಬ್ಬಳ್ಳಿ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹಾ ಹ*ತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಪೊಲೀಸರು ಈಗಾಗಲೇ ಆರೋಪಿ ಫಯಾಜ್ ನನ್ನು ಬಂಧಿಸಿದ್ದಾರೆ. ಈ ಘಟನೆಗೆ ರಾಜ್ಯವ್ಯಾಪಿ ಆಕ್ರೋಶ ಕೇಳಿ ಬಂದಿದೆ.
ಇದೀಗ ಸಿನಿ ತಾರೆಯರೂ ಕೂಡ ಘಟನೆಗೆ ಕಿಡಿಕಾರಿದ್ದಾರೆ. ಈ ಬಗ್ಗೆ ಆಕ್ರೋಶ ಹೊರಹಾಕುತ್ತಿದ್ದಾರೆ.
ಅತ್ಯಂತ ಹೀನ ಕೃತ್ಯ
ನಟ ಧ್ರುವ ಸರ್ಜಾ ಅವರು ಟ್ವೀಟ್ ಮಾಡಿ, ಸಹೋದರಿ ನೇಹಾ ಹಿರೇಮಠ್ ರ ಹ*ತ್ಯೆ ಅತ್ಯಂತ ಹೀನ ಕೃತ್ಯ. ಕ್ಯಾಂಪಸ್ ಲಿ ಹ*ತ್ಯೆ ನಿಜಕ್ಕೂ ಆತಂಕ ಮೂಡಿಸುತ್ತದೆ. ಸರ್ಕಾರ ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು. ಹಾಗು ಇದನ್ನ ಎಲ್ಲಾ ಆಯಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು. ಜೈ ಆಂಜನೇಯ ಎಂದಿದ್ದಾರೆ.
ಮಹಿಳೆಯರಿಗೆ ಸುರಕ್ಷತೆ ಎಲ್ಲಿದೆ?
ಘಟನೆ ಬಗ್ಗೆ ನಟಿ, ನಿರ್ಮಾಪಕಿ ರಕ್ಷಿತಾ ಪ್ರೇಮ್ ಆಕ್ರೋಶ ಹೊರ ಹಾಕಿದ್ದಾರೆ. ನೇಹಾ ಹಿರೇಮಠ್ಗೆ ನ್ಯಾಯ ಸಿಗಲೇಬೇಕು. ಮಹಿಳೆಯರಿಗೆ ಸುರಕ್ಷತೆ ಎಲ್ಲಿದೆ? ಕಾಲೇಜಿಗೆ ಹೋಗುವ ಯುವತಿಯರಿಗೂ ಕೂಡ ರಕ್ಷಣೆ ಇಲ್ಲ. ಶೇಮ್ ಶೇಮ್ ಎಂದಿದ್ದಾರೆ.
ಪ್ರೀತಿಸಬೇಕು ಅಂತ ಅದ್ಹೇಗೆ ಒತ್ತಾಯಿಸಲು ಸಾಧ್ಯ? ಪ್ರೀತಿಯನ್ನ ಒಪ್ಪಿಕೊಳ್ಳಲಿಲ್ಲ ಅಂತ ಬರ್ಬರವಾಗಿ ಹುಬ್ಬಳ್ಳಿ ಕಾಲೇಜ್ ಕ್ಯಾಂಪಸ್ನಲ್ಲೇ ಹ*ತ್ಯೆ ಮಾಡಿದ್ದಾನೆ. ಅದೆಂಥಾ ಮೈಂಡ್ ಸೆಟ್ ಹೊಂದಿದ್ದಾರೆ ಆ ವಯಸ್ಸಿನ ಹುಡುಗರು? ಪೋಷಕರಾಗಿ ನಮ್ಮ ಗಂಡು ಮಕ್ಕಳಿಗೆ ಕೆಲವು ಬೇಸಿಕ್ ಸಂಗತಿಗಳನ್ನ ನಾವು ಹೇಳಿಕೊಡಲೇಬೇಕು. ಅದನ್ನೆಲ್ಲಾ ಶಾಲಾ ಕಾಲೇಜುಗಳಲ್ಲಿ ಕಲಿಸುವುದಿಲ್ಲ. ಇದನ್ನ ಸಹಿಸಲು ಸಾಧ್ಯವೇ ಇಲ್ಲ. ಶೇಮ್ ಶೇಮ್. ಪೋಷಕರಾಗಿ ನನ್ನ ಹೃದಯ ಛಿದ್ರವಾಗುತ್ತಿದೆ ಎಂದು ರಕ್ಷಿತಾ ಪ್ರೇಮ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಇದನ್ನೂ ಓದಿ : ನಗರ ಸಭೆ ಉಪಾಧ್ಯಕ್ಷೆ ಮಗ ಸೇರಿ ನಾಲ್ವರ ಹ*ತ್ಯೆ! ಹಂ*ತಕರ ಪತ್ತೆಗೆ ವಿಶೇಷ ತಂಡ ರಚನೆ
ಎನ್ಕೌಂಟರ್ ಮಾಡಬೇಕು :
ನಟಿ ಕಾವ್ಯಾ ಶಾಸ್ತ್ರಿಯೂ ತಮ್ಮ ಇನ್ಸ್ಟಾ ಗ್ರಾಂ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ. ಹಂ*ತಕ ಫಯಾಜ್ನನ್ನು ಎನ್ಕೌಂಟರ್ ಮಾಡಬೇಕು. ಅವನಿಗೆ ಯಾವುದೇ ಕರುಣೆ ಬೇಕಾಗಿಲ್ಲ. ನೇಹಾ ಹಿರೇಮಠ್ ಕೊ*ಲೆ ಖಂಡನೀಯ. ಕೊ*ಲೆಗಾರನಿಗೆ ಸಿಗುವ ಶಿಕ್ಷೆ ಎಲ್ಲರಿಗೂ ಪಾಠವಾಗಬೇಕು ಎಂದು ಬರೆದುಕೊಂಡಿದ್ದಾರೆ.
ಘಟನೆ ಏನು ?
ಹುಬ್ಬಳ್ಳಿ ಕಾರ್ಪೋರೇಟರ್ ನಿರಂಜನ್ ಹಿರೇಮಠ ಅವರ ಮಗಳು ನೇಹಾ ಹಿರೇಮಠಳನ್ನು ಫಯಾಜ್ ಎಂಬಾತ ಕಾಲೇಜ್ ಕ್ಯಾಂಪಸ್ ನಲ್ಲಿ ಚಾಕುವಿನಿಂದ ಇರಿದು ಎಪ್ರಿಲ್ 18 ರಂದು ಹ*ತ್ಯೆ ಮಾಡಿದ್ದ. ಹುಬ್ಬಳ್ಳಿಯ ಕೆಎಲ್ ಇ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನೇಹಾ ಪ್ರಥಮ ವರ್ಷದ ಎಂಸಿಎ ಓದುತ್ತಿದ್ದಳು. ಸದ್ಯ ಪ್ರಕರಣದ ಬಗ್ಗೆ ತೀವ್ರ ಆಕ್ರೋಶ ಕೇಳಿ ಬಂದಿದೆ. ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು ಎಂಬ ಆಗ್ರಹ ಕೇಳಿ ಬಂದಿದೆ.