Connect with us

    LATEST NEWS

    ಆನ್​ಲೈನ್​ ಮೂಲಕ ಆರ್ಡರ್​ ಮಾಡಿದ್ದ ಐಸ್​ಕ್ರೀಂನಲ್ಲಿ ಮನುಷ್ಯನ ಬೆರಳು ಪತ್ತೆ

    Published

    on

    ಮುಂಬೈ: ಐಸ್​ಕ್ರೀಂನಲ್ಲಿ ಮನುಷ್ಯನ ಬೆರಳು ಪತ್ತೆಯಾಗಿರುವ ಆಘಾತಕಾರಿ ಘಟನೆ ಮುಂಬೈನಲ್ಲಿ ನಡೆದಿದೆ. ಮಲಾಡ್ ನಿವಾಸಿ ಡಾ.ಒರ್ಲಾಮ್ ಬ್ರಾಂಡನ್ ಸೆರಾವೊ ಅವರು ಆನ್‌ಲೈನ್‌ನಲ್ಲಿ ಐಸ್ ಕ್ರೀಮ್ ಆರ್ಡರ್ ಮಾಡಿದ್ದರು. ಅವರು ಬಹಳ ಆಸಕ್ತಿಯಿಂದ ಐಸ್​ಕ್ರೀಂ ತೆಗೆದು ನೋಡಿ ದಿಗ್ಭ್ರಮೆಗೊಂಡಿದ್ದಾರೆ. ಆ ಐಸ್​ಕ್ರೀಂನಲ್ಲಿ ಮಾನವನ ಬೆರಳು ಪತ್ತೆಯಾಗಿದ್ದು, ಈ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

    ಮೊದಲು ವಾಲ್ನಟ್​ ಎಂದುಕೊಂಡೆವು. ಬಳಿಕ ಕೂಲಂಕುಷವಾಗಿ ಪರಿಶೀಲನೆ ನಡೆಸಿದಾಗ ಇದು ಬೆರಳು ಎಂಬುದು ಅರಿವಾಗಿದೆ ಎಂದಿದ್ದಾರೆ. ನಾನು ಮೂರು ಐಸ್​ಕ್ರೀಂಗಳನ್ನು ಆರ್ಡರ್​ ಮಾಡಿದ್ದೆ, ನಾನು ಬಟರ್​ಸ್ಕಾಚ್​ ಐಸ್​ ಕ್ರೀಮ್ ತಿನ್ನುತ್ತಿದ್ದೆ ಆಗ ಇದ್ದಕ್ಕಿದ್ದಂತೆ ಹಲ್ಲಿಗೇನೋ ತಾಗಿದಂತಾಯಿತು. ನಾನು ವಾಲ್ನಟ್ ಅಥವಾ ಚಾಕೊಲೇಟ್​ ಇರಬೇಕು ಎಂದುಕೊಂಡೆ, ಬಳಿಕ ಉಗುಳಿದಾಗ ಅದು ವಾಲ್ನಟ್ ಆಗಿರಲಿಲ್ಲ, ಮನುಷ್ಯನ ಬೆರಳಾಗಿದ್ದು, ಅದನ್ನು ನೋಡಿ ಒಮ್ಮೆ ದಿಗ್ಭ್ರಮೆಗೊಂಡೆ. ನಾನು ವೈದ್ಯನಾಗಿರುವ ಕಾರಣ ಇದು ಹೆಬ್ಬರಳಿನ ಭಾಗ ಎಂಬುದು ನಾನು ಅರ್ಥಮಾಡಿಕೊಂಡೆ ಅದರಲ್ಲಿ ಉಗುರು ಕೂಡ ಇದೆ ಎಂದರು. ನಾನು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದೆ ಎಂದು ವೈದ್ಯೆ ಹೇಳಿದ್ದಾರೆ.

    ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ, ಐಸ್​​ಕ್ರೀಂ ಬ್ರ್ಯಾಂಡ್​ ವಿರುದ್ಧ ಕಲಬೆರಕೆ ಮತ್ತು ಜನರ ಜೀವಕ್ಕೆ ಅಪಾಯ ತಂದಿರುವ ಆರೋಪದಡಿ ಪ್ರಕರಣ ದಾಖಲಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

    ಪೊಲೀಸರು ಬೆರಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ, ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಐಸ್​ಕ್ರೀಂನಲ್ಲಿ ಬೆರಳು ಎಲ್ಲಿಂದ ಬಂತು ಎಂಬುದನ್ನೂ ಪತ್ತೆ ಮಾಡುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

    ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲೂ ವೈರಲ್ ಆಗಿದೆ. Yummo ಐಸ್ ಕ್ರೀಮ್ ಒಂದು ಹೆಸರಾಂತ ಬ್ರ್ಯಾಂಡ್ ಎಂದು ಹೇಳಲಾಗುತ್ತಿದೆ. ಈಗ ಪೊಲೀಸರು ಮುಂದಿನ ಕ್ರಮ ಏನು ಎಂಬುದು ವರದಿ ಬಂದ ನಂತರವೇ ತಿಳಿದುಬರಲಿದೆ.

    LATEST NEWS

    ಕೊತ ಕೊತ ಅಂತ ಕುದಿಯುತ್ತೆ ಈ ನದಿ! ಇದರ ಹಿಂದಿನ ರಹಸ್ಯ ಇಲ್ಲಿದೆ

    Published

    on

    ಶನಾಯ್-ಟಿಂಪಿಷ್ಕಾ ನದಿ ಇನ್ನಿತರ ನದಿಗಳಿಗಿಂತ ಭಿನ್ನವಾಗಿದ್ದು ಈ ನದಿಯ ನೀರು ಕುದಿಯುತ್ತಿರುತ್ತದೆ. ಏಕೈಕ ಕುದಿಯುವ ನದಿಯಾಗಿರುವ ಶನಾಯ್-ಟಿಂಪಿಷ್ಕಾ ಪೆರುವಿನ ಅಮೆಜಾನ್‌ನಲ್ಲಿದೆ. ಪೆರುವಿನಲ್ಲಿರುವ ಅಮೆಜಾನ್ ಮಳೆಕಾಡಿನ ಮಧ್ಯಭಾಗದಲ್ಲಿ ಹರಿಯುವ ಶನಾಯ್ ನದಿ, ನೈಸರ್ಗಿಕ ವಿಸ್ಮಯ ಎಂದೆನಿಸಿದ್ದು, ವಿಜ್ಞಾನಿಗಳನ್ನು, ಪರಿಶೋಧಕರನ್ನು ಪ್ರವಾಸಿಗರನ್ನು ಆಕರ್ಷಿಸುತ್ತಿದೆ.

    ವಿಶ್ವದ ಏಕೈಕ ಕುದಿಯುವ ನದಿ

    ಅಮೆಜಾನ್ ನದಿಯ ಈ ಗಮನಾರ್ಹ ಉಪನದಿಯು 6.4 ಕಿಲೋಮೀಟರ್ (4.0 ಮೈಲುಗಳು) ಉದ್ದವನ್ನು ವ್ಯಾಪಿಸಿದೆ. ಇದು ವಿಶ್ವದ ಏಕೈಕ ಕುದಿಯುವ ನದಿ ಎಂದು ಹೆಸರುವಾಸಿಯಾಗಿದೆ. ನದಿಯ ನೀರು 45 ಡಿಗ್ರಿ ಸೆಲ್ಸಿಯಸ್‌ನಿಂದ 100 ಡಿಗ್ರಿ ಸೆಲ್ಸಿಯಸ್‌ವರೆಗೆ ಸುಡುವ ತಾಪಮಾನವನ್ನು ಹೊಂದಿದೆ. ಸೂರ್ಯನ ಶಾಖದಿಂದ ಕುದಿಯುವ ನೀರು ಎಂಬ ಅರ್ಥವನ್ನು ಶನಯ್-ಟಿಂಪಿಷ್ಕಾ ಹೆಸರು ಒಳಗೊಂಡಿದೆ.

    ಕೆಲವು ಭಾಗ ಬಿಸಿಯಾಗಿದೆ

    ಇನ್ನು ಈ ನೀರಿನಲ್ಲಿ ಇಳಿದು ಸ್ನಾನ ಮಾಡುವುದೇ ಅಸಂಭವ ಎಂಬುದು ನಿಮ್ಮ ಮನಸ್ಸಿನಲ್ಲಿದ್ದರೆ ನಿಮ್ಮ ಅನಿಸಿಕೆ ತಪ್ಪು ಏಕೆಂದರೆ ಸಂಪೂರ್ಣ ನದಿಯ ನೀರು ಕುದಿಯುತ್ತಿಲ್ಲ ಕೆಲವು ಭಾಗ ಮಾತ್ರವೇ ಬಿಸಿ ನೀರನ್ನೊಳಗೊಂಡಿದೆ ಆದರೆ ಮುಳುಗು ಹಾಕಲು ಈ ನದಿಯಲ್ಲಿ ಸಾಕಷ್ಟು ಸ್ಥಳಾವಕಾಶವಿದೆ. ನದಿಯ ಬಿಸಿಯಿಂದ ಬೆಚ್ಚಗಿನ ಬಿಸಿ ನೀರಿನಲ್ಲಿ ಸ್ನಾನ ಮಾಡಿದ ಅನುಭವ ನಿಮಗುಂಟಾಗುತ್ತದೆ. ನೀರು ಕುದಿಯುತ್ತಿರುವ ಅನಿಸಿಕೆ ನಿಮಗುಂಟಾಗುತ್ತದೆ. ಇನ್ನು ಇಲ್ಲಿ ಯಾವುದೇ ಜಲಚರಗಳು ವಾಸಿಸುತ್ತಿಲ್ಲ ಏಕೆಂದರೆ ನದಿಯ ನೀರು ಕುದಿಯುತ್ತಿರುವ ಕಾರಣ ಯಾವುದೇ ಜೀವಿಗಳು ನೀರನಲ್ಲಿ ವಾಸಿಸುತ್ತಿಲ್ಲ.

    ವೈಜ್ಞಾನಿಕ ಸತ್ಯವೇನು?

    ವೈಜ್ಞಾನಿಕವಾಗಿ, ಮಳೆನೀರು ಅಮೆಜಾನ್ ಮಳೆಕಾಡಿನ ಮೇಲ್ಮೈಗೆ ನುಸುಳಿದಂತೆ, ಅದು ಭೂಮಿಯ ಹೊರಪದರದಲ್ಲಿ ಆಳದಲ್ಲಿ ಅನುಸರಿಸುತ್ತದೆ ಭೂಶಾಖದ ಗ್ರೇಡಿಯಂಟ್ ಕಾರಣದಿಂದಾಗಿ ನೀರನ್ನು ಗಮನಾರ್ಹವಾಗಿ ಬಿಸಿಮಾಡಲಾಗುತ್ತದೆ.

    Continue Reading

    FILM

    ದರ್ಶನ್ ಸರ್ ನನಗೆ ಗುರು ಸಮಾನರು…ಧರ್ಮೋ ರಕ್ಷತಿ ರಕ್ಷಿತಃ… ಎಂದ ನಟಿ ರಚಿತಾ ರಾಮ್; ಹೇಳಿದ್ದೇನು?

    Published

    on

    ಬೆಂಗಳೂರು : ರೇಣುಕಾಸ್ವಾಮಿ ಹ*ತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದರ್ಶನ್ ಬಂಧನವಾಗಿದೆ. ಇತ್ತ ನಟ, ನಟಿಯರು ಪ್ರತಿಕ್ರಿಯೆ ನೀಡಲು ಆರಂಭಿಸಿದ್ದಾರೆ. ಇದೀಗ ರಚಿತಾ ರಾಮ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಇನ್ಟಾಗ್ರಾಂ ಖಾತೆಯಲ್ಲಿ ಈ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


    “ಧರ್ಮೋ ರಕ್ಷತಿ ರಕ್ಷಿತಃ” ಎಂದು ಅವರು ಪೋಸ್ಟ್ ಹಂಚಿಕೊಂಡಿದ್ದಾರೆ. ನಮಸ್ಕಾರ..ಈ ನೋಟ್‌ನ ನಾನು ನಟಿಯಾಗಿ ಅಲ್ಲ ಸಾಮನ್ಯ ಪ್ರಜೆಯಾಗಿ ಬರೆಯುತ್ತಿದ್ದೇನೆ. ಇತ್ತಿಚೆಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು..! ಎಂದಿದ್ದಾರೆ.

    ಇತ್ತೀಚೆಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು.

    ಮೊದಲನೆಯದಾಗಿ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಭಗವಂತ ಧೈರ್ಯ ಭರಿಸುವ ಶಕ್ತಿ ನೀಡಲಿ ಎಂಬ ಪ್ರಾರ್ಥನೆ ಮಾಡುತ್ತೇನೆ. ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆ ಎಂಬ ಭರವಸೆ ನನಗಿದೆ.

    ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ ನಟ ದರ್ಶನ್‌ ಸರ್‌ ನನಗೆ ಗುರು ಸಮಾನರು. ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದಂತಹ ವ್ಯಕ್ತಿ ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ನಂಬಲು ಸ್ವಲ್ಪ ಕಷ್ಟವಾಗುತ್ತಿದೆ. ಏನಿದ್ದರೂ ಸತ್ಯ ಪೊಲೀಸ್‌ ತನಿಖೆಯಿಂದ ನಮ್ಮ ಮುಂದೆ ಬರಲಿದೆ ಎನ್ನುವುದೇ ನನ್ನ ನಂಬಿಕೆ. ನನ್ನ ಮಾಧ್ಯಮ ಮಿತ್ರರು ಈ ಕೇಸ್‌ನ ವರದಿಯಲ್ಲಿ ಪಾರದರ್ಶಕವಾಗಿರುತ್ತೀರಿ ಮತ್ತು ನಿಷ್ಪಕ್ಷವಾಗಿ ಕೆಲಸ ಮಾಡುತ್ತೀರಿ ಎಂದು ಆಶಿಸುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ.

    ಇದನ್ನೂ ಓದಿ : ನಟ ದರ್ಶನ್ ಮತ್ತೊಬ್ಬ ಮ್ಯಾನೇಜರ್ ಆತ್ಮಹ*ತ್ಯೆ!? ಡೆ*ತ್ ನೋಟ್ ನಲ್ಲಿ ಏನಿದೆ!?

    ದರ್ಶನ್ ಹಾಗೂ ರಚಿತಾ ರಾಮ್ ಜೊತೆಯಾಗಿ ನಾಲ್ಕು ಸಿನಿಮಾಗಳಲ್ಲಿ ನಟಿಸಿದ್ದಾರೆ. ಡಿಂಪಲ್ ಕ್ವೀನ್ ತನ್ನ ಸಿನಿ ಜರ್ನಿ ಆರಂಭಿಸಿದ್ದೇ ದರ್ಶನ್ ಜೊತೆಗೆ, ಅದೂ ‘ಬುಲ್ ಬುಲ್’ ಚಿತ್ರದ ಮೂಲಕ. ಅಂಬರೀಶ, ಜಗ್ಗುದಾದಾ, ಕ್ರಾಂತಿ ಚಿತ್ರಗಳಲ್ಲಿ ಇವರಿಬ್ಬರು ಜೊತೆಯಾಗಿ ನಟಿಸಿದ್ದರು.

    Continue Reading

    LATEST NEWS

    ‘ಜೆಲ್ಲಿ ಮೀನು’ ಕುಟುಕಿ ಮೀನುಗಾರ ಸಾವು..!

    Published

    on

    ಕಾರವಾರ: ಇಲ್ಲಿನ ದೇವಬಾಗ್‌ನಲ್ಲಿ ಜೆಲ್ಲಿ ಮೀನು ಕಚ್ಚಿ ಮೀನುಗಾರ ಸಾವನಪ್ಪಿರುವ ಘಟನೆ ನಡೆದಿದೆ. ಮೀನುಗಳಲ್ಲಿ ಜೆಲ್ಲಿ ಮೀನು ನೋಡಲು ಬಲು ಸುಂದರ. ಹೆಚ್ಚಾಗಿ ಮೀನುಗಳು ಯಾರಿಗೂ ಹಾನಿಯುಂಟು ಮಾಡುವುದಿಲ್ಲ.  ಆದರೆ ಈ ಮೀನು ಅತ್ಯಂತ ವಿಷಕಾರಿಯಾಗಿದೆ. ಜೆಲ್ಲಿ ಮೀನು ಪ್ರತಿಯೊಂದನ್ನು ತನ್ನ ಕಾಲಿನ ಮೂಲಕ ಗ್ರಹಿಸುತ್ತದೆ. ಅದರ ಮೂಲಕವೇ ಶತ್ರುಗಳಿಗೆ ಕುಟುಕುತ್ತದೆ. ಈಗೇನಾದರೂ ಆದಲ್ಲಿ ಆ ವ್ಯಕ್ತಿ ಬದುಕುಳಿಯುವುದು ಬಹಳ ವಿರಳ.

    ಕಾರವಾರ ದೇವಬಾಗ್‌ನ ಸಮುದ್ರ ತೀರದಲ್ಲಿ ಮೀನುಗಾರನ ಬಲೆಯಲ್ಲಿ ಜೆಲ್ಲಿ ಮೀನು ಕಂಡುಬಂದಿದೆ. ಮೀನುಗಾರ ಕೃಷ್ಣ ಎಂಬಾತ ಮೀನನ್ನು ಬಲೆಯಿಂದ ಬಿಡಿಸಿ ಸಮುದ್ರಕ್ಕೆ ಬಿಟ್ಟಿದ್ದಾರೆ. ಇದಾದ ಕೆಲವೇ ಕೆಲವು ಸಮಯದಲ್ಲಿ ಕೃಷ್ಣರವರ ಕಣ್ಣು, ಮೈ ಉರಿಯಲು ಆರಂಭಿಸಿದೆ. ಭಯಭೀತರಾದ ಮೀನುಗಾರ ಆಸ್ಪತ್ರೆಗೆ ದಾಖಲಾಗಿದ್ದು, ಅವರನ್ನು ವೆಂಟಿಲೇಟರ್‌ನಲ್ಲಿ ಇಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೃಷ್ಣ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

    Read More..;  ಹಾವು ಕಚ್ಚಿದ್ದರೂ ರೋಗಿಗಳಿಗೆ ಚಿಕಿತ್ಸೆ ನೀಡಿದ ವೈದ್ಯೆ..!

    ಏನಿದು ಜೆಲ್ಲಿ ಫಿಷ್?

    ಈ ಮೀನಿಗೆ ಕನ್ನಡದಲ್ಲಿ ಅಂಬಲಿ ಮೀನು, ಲೋಳೆ ಮೀನು ಎಂದೆಲ್ಲಾ ಕರೀತಾರೆ. ಸಮುದ್ರದಲ್ಲಿ ಆಮೆಗಳು ಮತ್ತು ದೊಡ್ಡ ಮೀನುಗಳು ಜೆಲ್ಲಿ ಮೀನುಗಳನ್ನು ತಿನ್ನುತ್ತವೆ. ಕರಾವಳಿಯಲ್ಲಿ ಅಪರೂಪದ ಹಾಗೂ ಬೃಹತ್ ಗಾತ್ರದ ಜೆಲ್ಲಿ ಫಿಶ್ ಸಮುದ್ರ ಸಂಶೋಧಕಿಯೊಬ್ಬರು ಸಂಶೋಧನೆ ನಡೆಸುವ ವೇಳೆ ಕಣ್ಣಿಗೆ ಬಿದ್ದಿದೆ. ಈ ಮೀನು ಸುಮಾರು 1.5ಮೀ. ಉದ್ದವಿದೆ.

    Continue Reading

    LATEST NEWS

    Trending