Connect with us

    DAKSHINA KANNADA

    ಸಾ*ಯುವ ಮೊದಲು ಸಾಲ ತೀರಿಸಿದ ಮುಮ್ತಾಜ್ ಅಲಿ!

    Published

    on

    ಮಂಗಳೂರು : ಮುಮ್ತಾಜ್ ಅಲಿ ಅವರ ಆತ್ಮಹ*ತ್ಯೆ ಒಂದೇ ದಿನದ ನಿರ್ಧಾರ ಆಗಿರಲಿಲ್ಲ ಅನ್ನೋದು ಇದೀಗ ಬೆಳಕಿಗೆ ಬಂದಿದೆ‌. ಹನಿ ಟ್ರ್ಯಾಪ್ ಮಾಡಿ ದುಡ್ಡು ಕೀಳಲು ನಿಂತವರ ಕಿರುಕು*ಳ ತಾಳಲಾರದೆ ಕುಗ್ಗಿ ಹೋಗಿ ಇಂತಹ ಒಂದು ತೀರ್ಮಾನಕ್ಕೆ ಬಂದಿದ್ದಾರೆ.

    ಆತ್ಮಹ*ತ್ಯೆ ಮಾಡಿಕೊಳ್ಳುವ ಮೊದಲು ಸಾಲಗಾರರಿಗೆ ಬಾಕಿ ಇಟ್ಟಿದ್ದ ಒಂದೂವರೆ ಕೋಟಿ ಸಾಲವನ್ನು ಮುಮ್ತಾಜ್ ಅಲಿ ಮರು ಪಾವತಿ ಮಾಡಿದ್ದಾರೆ.

    ಇದನ್ನೂ ಓದಿ : ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ : ಇಬ್ಬರು ಅರೆಸ್ಟ್

    ಅಷ್ಟೇ ಅಲ್ಲದೆ,  ಶಾಲೆ ಹಾಗೂ ತನ್ನ ಫಿಶ್ ಮಿಲ್ ನೋಡಿಕೊಳ್ಳುವಂತೆ ತಮ್ಮ ಸಹೋದರರ ಹೆಸರಿನಲ್ಲಿ ಪತ್ರ ಬರೆದಿಟ್ಟಿದ್ದಾರೆ. ಈ ವಿಚಾರ ಇದೀಗ ಬೆಳಕಿಗೆ ಬಂದಿದ್ದು ಸಾಯುವ ನಿರ್ಧಾರ ಮೊದಲೇ ಮಾಡಿದ್ದರು ಅನ್ನೋದು ಸ್ಪಷ್ಟವಾಗಿದೆ. ಸಾಲಗಾರರಿಗೆ ಮೋಸ ಮಾಡದೇ ಹಣ ಹಿಂತಿರುಗಿಸಿದ ಮುಮ್ತಾಜ್ ಬಳಿಕ ಆತ್ಮಹತ್ಯೆ ಗೆ ಶರಣಾಗಿದ್ದಾರೆ. ಸಾವಿನಲ್ಲೂ ತನ್ನ ಬದ್ಧತೆ ಮರೆಯದ ಮುಮ್ತಾಜ್ ಅಲಿ ಬಗ್ಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    DAKSHINA KANNADA

    ಮಂಗಳೂರಿನ ಮಾರ್ನೆಮಿಕಟ್ಟೆ : ಸಹಸ್ರಾರ್ಚನೆ ಸಹಿತ  ದುರ್ಗಾನಮಸ್ಕಾರ ಪೂಜೆ

    Published

    on

    ಮಂಗಳೂರು : ದೈವ ದೇವರ ನಾಡು ಕರಾವಳಿಯಲ್ಲಿ ಈಗ ನವರಾತ್ರಿ ಸಂಭ್ರಮ. ನವರಾತ್ರಿ ವೇಳೆ ಶಕ್ತಿದೇವತೆಯಾದ ದುರ್ಗಾದೇವಿ ಆರಾಧನೆ ಎಲ್ಲೆಡೆ ನಡೆಯುತ್ತದೆ. ಅದರಲ್ಲೂ ಮಂಗಳವಾರದಂದು ನಡೆಯುವ ದುರ್ಗಾನಮಸ್ಕಾರ ಪೂಜೆ ವಿಶೇಷತೆಯಿಂದ ಕೂಡಿದೆ. ಸಾರ್ವಜನಿಕ ವಿಶೇಷ ಸಹಸ್ರಾರ್ಚನೆ ಸಮೇತ ದುರ್ಗಾನಮಸ್ಕಾರ ಪೂಜೆ ಮಾರ್ನೆಮಿಕಟ್ಟೆಯ ಶ್ರೀ ದೇವಿ ಪ್ರತ್ಯಂಗಿರಾ ವಿಪರೀತ ಮಹಾಭದ್ರಕಾಳ್ಯೈ ಕ್ಷೇತ್ರದಲ್ಲಿ ಜ್ಯೋತಿಷ್ಯ ವಿದ್ವಾನ್‌ ದೈವಜ್ಞ ಕರಣ್ ಜ್ಯೋತಿಷಿಯವರ ನೇತೃತ್ವದಲ್ಲಿ ಜರುಗಿತು.

    ಮಂಗಳವಾರದಂದು ದುರ್ಗಾ ದೇವಿಯನ್ನು ಪೂಜಿಸುವುದರಿಂದ ದುರ್ಗಾ ಮಂತ್ರವನ್ನು ಪಠಿಸುವುದರಿಂದ ಇಚ್ಛೆಗಳು , ಬಯಕೆಗಳು ಬಹುಬೇಗ ಈಡೇರುತ್ತವೆ. ಶಕ್ತಿದೇವತೆ ದುರ್ಗಾದೇವಿಯನ್ನು ಪೂಜಿಸುವ ವಿಧಿ- ವಿಧಾನಗಳೂ ಅತ್ಯಂತ ಮಹತ್ವದ್ದಾಗಿದೆ. ದುರ್ಗೆಯನ್ನು ಆರಾಧಿಸುವುದರಿಂದ ತಾಯಿ ಪ್ರಸನ್ನಳಾಗುವ ಜೊತೆಗೆ ಭಕ್ತರ ಆಧ್ಯಾತ್ಮಿಕ ಮತ್ತು ಭೌತಿಕ ಬಯಕೆಗಳು ಕೂಡಾ ಈಡೇರುತ್ತವೆ. ಎಲ್ಲರೂ ಅನುಗ್ರಹಕ್ಕೆ ಪಾತ್ರರಾಗುತ್ತಾರೆ. ಇಂತಹ ಪವಿತ್ರವಾದ ದುರ್ಗಾನಮಸ್ಕಾರ ಪೂಜೆ ಮಂಗಳವಾರದಂದು ನಡೆಯಿತು. ಸಂಪೂರ್ಣ ವಿವರಣೆ ಸಹಿತವಾಗಿ ವಿಶೇಷ ಸಹಸ್ರಾರ್ಚನೆ ಸಮೇತ ದುರ್ಗಾನಮಸ್ಕಾರ ಪೂಜೆ ಮಾರ್ನೆಮಿಕಟ್ಟೆಯ ಶ್ರೀ ದೇವಿ ಪ್ರತ್ಯಂಗಿರಾ ವಿಪರೀತ ಮಹಾಭದ್ರಕಾಳ್ಯೈ ಕ್ಷೇತ್ರದಲ್ಲಿ ಜರುಗಿತು.

    ಜ್ಯೋತಿಷ್ಯ ವಿದ್ವಾನ್‌ ದೈವಜ್ಞ ಶ್ರೀ ಕರಣ್‌ ಜ್ಯೋತಿಷಿಯವರ ಮನೆ ದೇವರಾದ ಶ್ರೀ ದೇವಿ ಪ್ರತ್ಯಂಗಿರಾ ವಿಪರೀತ ಮಹಾಭದ್ರಕಾಳ್ಯೈ ಅಮ್ಮನವರ ಅನುಗ್ರಹದೊಂದಿಗೆ ಅವರ ನಿವಾಸದಲ್ಲಿ ಶರನ್ನವರಾತ್ರಿಯ ಪ್ರಯುಕ್ತ ವೈಭವದೊಂದಿಗೆ ಭಜನಾ ಸೇವೆಗಳೊಂದಿಗೆ ದುರ್ಗಾನಮಸ್ಕಾರ ಪೂಜೆ ಕರಣ್‌ಜ್ಯೋತಿಷಿ ಅವರ ನೇತೃತ್ವದಲ್ಲಿ ಜರುಗಿತು. ಸಂಪೂರ್ಣ ವಿವರಣೆ ಸಹಿತ ಈ ಪೂಜೆಯನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು.

    ಮಹಾಮಂಗಳಾರತಿ ಬಳಿಕ ನೆರೆದ ಎಲ್ಲಾ ಭಕ್ತರಿಗೂ ಪ್ರಸಾದ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಭಜನಾ ಸೇವೆ ನಡೆಯಿತು.

    ಇದನ್ನೂ ಓದಿ : ತನ್ನ ಮನೆಯಲ್ಲಿ ತಾನೇ ಕದ್ದು ಠಾಣೆಗೆ ದೂರು ನೀಡಿದ್ದ ಯುವತಿ

    ಪೂಜೆಯಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್‌, ವಿಶ್ವಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್‌, ಭುಜಂಗ ಕುಲಾಲ್‌, ಪುನೀತ್ ಅತ್ತಾವರ್‌, ನವೀನ್ ಮೂಡುಶೆಡ್ಡೆ, ಕಾರ್ಪೋರೇಟರ್‌ಗಳಾದ ವೀಣಾ ಮಂಗಳ, ಶೈಲೇಶ್‌, ಡಾ. ಪ್ರಜ್ವಲ್‌ ಮಾಣೆ, ಪುತ್ತೂರು ಬಿಜೆಪಿ  ಮುಖಂಡ ದಯಾನಂದ ಶೆಟ್ಟಿ ಉಜಿರೆಮಾರು ಮೊದಲಾದವರು ಪಾಲ್ಗೊಂಡಿದ್ದರು.  ಸಾರ್ವಜನಿಕ ಅನ್ನಸಂತರ್ಪಣೆ ನೆರವೇರಿತು.

    Continue Reading

    BELTHANGADY

    ಉಕ್ಕಿ ಹರಿದ ನದಿಗಳು; ರಾತ್ರೋ ರಾತ್ರಿ ಭಯಾನಕ ವಾತವರಣ ಸೃಷ್ಠಿ

    Published

    on

    ಬೆಳ್ತಂಗಡಿ: ಅಚಾನಕ್ಕಾಗಿ ಬಂದ ಮಳೆಯಿಂದ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿ ಜನರು ಆತಂಕಕ್ಕೊಳಗಾದ ಘಟನೆ ಮಂಗಳವಾರ ರಾತ್ರಿ ನಡೆದಿದೆ.


    ನಿನ್ನೆ (ಅ.8) ರಾತ್ರಿ ದೊಡ್ಡ ಪ್ರಮಾಣದಲ್ಲಿ ಮಳೆ ಸುರಿದಿದ್ದು, ಚಾರ್ಮಾಡಿ, ದಿಡುಪೆ, ನೆರಿಯ ಭಾಗದ ನದಿಗಳಲ್ಲಿ ಏಕಾಏಕಿ ನೀರಿನ ಮಟ್ಟ ಏರಿಕೆಯಾಗಿ ರಸ್ತೆಗೆ ನೀರು ನುಗ್ಗಿದೆ.
    ನೆರಿಯಾದಲ್ಲಿ ಸೇತುವೆ ಮುಳುಗಡೆಯಾಗಿದಲ್ಲದೆ ಅಲ್ಲಲ್ಲಿ ರಸ್ತೆಗೆ ತೋಟಗಳಿಗೆ ನೀರು ನುಗ್ಗಿದೆ. ಇದರಿಂದ ನದಿ ತೀರದ ಜನರಲ್ಲಿ ಆತಂಕ ಉಂಟಾಗಿದೆ. ಸ್ಥಳೀಯರು ಹೇಳುವಂತೆ 2019 ರ ನೆರೆಯ ನಂತರ ಮಂಗಳವಾರ ರಾತ್ರಿ ನದಿಗಳಲ್ಲಿ ಅತೀ ಹೆಚ್ಚು ನೀರು ಬಂದಿದೆ. ರಾತ್ರಿ 7 ಗಂಟೆಯಿಂದ 9 ಗಂಟೆಯವರೆಗೆ ನೀರಿನ ಮಟ್ಟ ಏರಿಕೆ ಕಂಡಿದ್ದು ಮತ್ತೆ ಇಳಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

    Continue Reading

    DAKSHINA KANNADA

    ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ : ಇಬ್ಬರು ಅರೆಸ್ಟ್

    Published

    on

    ಮಂಗಳೂರು : ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮುಮ್ತಾಜ್ ಆಲಿ ಆತ್ಮಹ*ತ್ಯೆ ಮಾಡಿಕೊಂಡ ವಿಚಾರ ತಿಳಿದ ತಕ್ಷಣ ಪರಾರಿಯಾಗಿದ್ದ ರೆಹಮತ್ ಹಾಗೂ ಆಕೆಯ ಪತಿ ಶೋಯೆಬ್ ನನ್ನು ಬಂಧಿಸಲಾಗಿದೆ.  ಬಂಟ್ವಾಳ ತಾಲೂಕಿನ ಮೆಲ್ಕಾರ್ ಎಂಬಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ.

    ಈ ಪ್ರಕರಣದ ಮಾಸ್ಟರ್‌ ಮೈಂಡ್ ಎ2 ಆರೋಪಿ ಅಬ್ದುಲ್ ಸತ್ತಾರ್ ಇನ್ನೂ ನಾಪತ್ತೆಯಾಗಿದ್ದು ಹುಡುಕಾಟ ನಡೆಸಲಾಗುತ್ತಿದೆ.  ಮುಮ್ತಾಜ್ ಆಲಿ ಆತ್ಮಹ*ತ್ಯೆಗೆ ರೆಹಮತ್ ಅಲಿಯಾಸ್ ಆಯಿಷಾ ಎಂಬಾಕೆ ಬ್ಲ್ಯಾಕ್‌ಮೆಲ್ ಮಾಡಿದ್ದು ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಈ  ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ರೆಹಮತ್ , ಅಬ್ದುಲ್ ಸತ್ತಾರ್, ಶಾಫಿ, ಮುಸ್ತಫಾ, ಶೋಯೆಬ್, ಮತ್ತು ಮುಮ್ತಾಜ್ ಆಲಿ ಕಾರು ಚಾಲಕ ಸಿರಾಜ್ ವಿರುದ್ಧ ದೂರು ದಾಖಲಿಸಲಾಗಿತ್ತು.

    ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಬ್ಬರ ಬಂಧನವಾಗಿದ್ದು, ಉಳಿದವರ ಪತ್ತೆ ಕಾರ್ಯ ಮುಂದುವರೆದಿದೆ ಎಂದು ನಗರ ಪೊಲೀಸ್ ಆಯುಕ್ತ ಅನುಮಪ್ ಅಗರ್ವಾಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

     

    Continue Reading

    LATEST NEWS

    Trending