LATEST NEWS
ಮುಸ್ಲಿಂ ಬಾಲಕನಿಂದ ಬದಲಾಯ್ತು ದೇವಸ್ಥಾನದ ಹೆಸರು…!
ಮಂಗಳೂರು ( ಕೇರಳ ): ಮಂಚ್ ಚಾಕೊಲೇಟ್ ಎಂದರೆ ಯಾರಿಗೆ ತಾನೇ ಇಷ್ಟ ಇಲ್ಲಿ ಹೇಳಿ. ಸಣ್ಣ ಮಕ್ಕಳಿಗಂತೂ ಈ ಚಾಕೊಲೇಟ್ ಅಚ್ಚುಮೆಚ್ಚು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕ್ಯಾಂಪ್ಕೋ ಚಾಕೋಲೇಟ್ ಫ್ಯಾಕ್ಟರಿ ಹಾಗೂ ಗೋವಾದ ನೆಸ್ಲೆ ಫ್ಯಾಕ್ಟರಿಯಲ್ಲಿ ಈ ಮಂಚ್ ತಯಾರಾಗುತ್ತದೆ. ಬಿಸ್ಕೆಟ್ಗಳಿಂದ ಕೂಡಿದ ಅದರ ಮೇಲ್ಭಾಗದಲ್ಲಿ ಚಾಕೋ ಕ್ರೀಮ್ ಇರುವ ಮಂಚ್ ತಿನ್ನಲು ಎಲ್ಲರೂ ಇಷ್ಟ ಪಡ್ತಾರೆ. ಇಂತಹ ಮಂಚ್ ಚಾಕಲೋಟ್ ಈಗ ದೇವರಿಗೆ ನೈವೇದ್ಯವಾಗುತ್ತಿದೆ.
ಹೌದು ಭಾರತದಲ್ಲಿ ದೇವಾಲಯಗಳ ವಿಶೇಷತೆ ಹಾಗೂ ಮಹಿಮೆಯ ಬಗ್ಗೆ ಜನರಿಗೆ ಹೆಚ್ಚಾಗಿ ಹೇಳಬೇಕಿಲ್ಲ. ದೇವರ ನಂಬಿ ವಿವಿಧ ಹರಕೆಗಳನ್ನು ಕಟ್ಟಿಕೊಳ್ಳುವ ಜನರು ಸಹ ಬಹಳಷ್ಟಿದ್ದಾರೆ. ಸಾಮಾನ್ಯವಾಗಿ ನಾವು ದೇವರಿಗೆ ಸಿಹಿ ಪದಾರ್ಥ, ಹೂವು, ಹಣ್ಣು ಈ ರೀತಿ ಪದಾರ್ಥಗಳನ್ನು ನೈವೇದ್ಯ ಮಾಡುತ್ತೇವೆ. ಆದರೆ ದೇವರಿಗೆ ಮಂಚ್ ಚಾಕೊಲೇಟ್ ಹರಕೆ ನೀಡುವ ದೇವಲಾಯದ ಬಗ್ಗೆ ನಿಮಗೆ ಗೊತ್ತಾ? ಹೌದು, ಅದೊಂದು ದೇವಸ್ಥಾನದಲ್ಲಿ ಮಂಚ್ ಚಾಕೊಲೇಟ್ ಹರಕೆಯ ರೂಪದಲ್ಲಿ ದೇವರಿಗೆ ಸಮರ್ಪಣೆಯಾಗುತ್ತದೆ. ಯಾವುದು ಈ ದೇವಸ್ಥಾನ ಎನ್ನುವುದರ ಬಗ್ಗೆ ತಿಳಿಯೋಣ.
ಕೇರಳದ ದೇವಾಲಯ ಇದು
ಕೇರಳದ ಒಂದು ಸಣ್ಣ ಮೂಲೆಯಲ್ಲಿರುವ ಈ ದೇವಸ್ಥಾನ ಆಧುನಿಕತೆಯ ಮತ್ತೊಂದು ರೂಪ ಎನ್ನಬಹುದು. ಸಾಮಾನ್ಯವಾಗಿ ಅಯ್ಯಪ್ಪನಿಗೆ ತುಪ್ಪ, ಕೃಷ್ಣನಿಗೆ ಬೆಣ್ಣೆ, ಗಣೇಶನಿಗೆ ಲಡ್ಡು ಹೀಗೆ ಅರ್ಪಣೆ ಮಾಡುತ್ತೇವೆ. ಆದರೆ ಅಲಪ್ಪುಳದ ಬಾಲಮುರುಗನ್ ದೇವರಿಗೆ ಮಂಚ್ ಚಾಕೋಲೇಟ್ ಅಂದ್ರೆ ಇಷ್ಟವಂತೆ. ಕಳೆದ ಆರು ವರ್ಷಗಳಿಂದ ಇಲ್ಲಿ ಬಾಲಮುರಗ ದೇವರಿಗೆ ಬಹುತೇಕ ಎಲ್ಲಾ ಸೇವೆಗಳು ಮಂಚ್ ಚಾಕೋಲೇಟ್ನಿಂದಲೇ ನಡೆಯುತ್ತದೆ. ಹೀಗಾಗಿ ಹಿಂದೆ ಬಾಲಮುರುಗ ಅಂತ ಹೆಸರಿದ್ದ ಈ ದೇವಸ್ಥಾನ ಈಗ ಮಂಚ್ ಮುರುಗನ್ ದೇವಸ್ಥಾನ ಎಂದೇ ಫೇಮಸ್ ಆಗಿದೆ.
ವಿಶೇಷವಾಗಿ ಬಾಲಮುರುಗ ದೇವಸ್ಥಾನ ಅಂದ್ರೆ ಮಕ್ಕಳಿಗೆ ಬಹಳ ಇಷ್ಟವಾದ ದೇವಸ್ಥಾನವಾಗಿದೆ. ಪರೀಕ್ಷೆಯ ಸಮಯದಲ್ಲಿ ಮಕ್ಕಳು ಹೆಚ್ಚಾಗಿ ಈ ದೇವಾಲಯಕ್ಕೆ ಬಂದು ದೇವರಿಗೆ ಒಂದು ಮಂಚ್ ಕೊಟ್ಟು ಪರೀಕ್ಷೆ ಸುಲಭ ಇರಲಿ ಎಂದು ಪ್ರೀತಿಯಿಂದ ಬೇಡುತ್ತಾರೆ. ಹೀಗೆ ಮಕ್ಕಳು ಇಲ್ಲಿ ಹೆಚ್ಚಾಗಿ ಬರಲು, ದೇವರಿಗೆ ಮಂಚ್ ಚಾಕೋಲೇಟ್ ಹರಕೆ ನೀಡಲೂ ಒಂದು ಕಾರಣ ಇದೆ. ಹಿಂದೆ ಸಾಮಾನ್ಯ ಎಲ್ಲಾ ದೇವಾಲಯದಂತೆ ಇಲ್ಲೂ ಬೇರೆಯೇ ಹರಕೆ ಸೇವೆ ನಡೆಯುತ್ತಿದ್ದರೂ ಅದೊಂದು ಕಾರಣದಿಂದ ಇತ್ತೀಚಿನ ವರ್ಷದಲ್ಲಿ ಇದು ಮಂಚ್ ಸೇವೆಗೆ ಬದಲಾಗಿದೆ.
ಏನಿದು ಮಂಚ್ ಮುರುಗನ್ ಕಥೆ?
ಸುಮಾರು 6 ವರ್ಷಗಳ ಹಿಂದೆ ಆಟವಾಡುತ್ತಿದ್ದ ಒಬ್ಬ ಪುಟ್ಟ ಮುಸ್ಲಿಂ ಬಾಲಕ ಈ ದೇವಾಲಯಕ್ಕೆ ಬಂದು ಗಂಟೆ ಬಾರಿಸಿದ್ದ ಎಂಬ ಕಾರಣಕ್ಕೆ ಪೋಷಕರು ಆತನಿಗೆ ಹೆದರಿಸಿದ್ದರಂತೆ. ಆದರೆ ಆ ರಾತ್ರಿಯೇ ಬಾಲಕನ ಆರೋಗ್ಯ ಹದಗೆಡುತ್ತದೆ. ಕನಸಿನಲ್ಲಿ ಸಹ ಆ ಬಾಲಕ ಮುರುಗನ್ ಹೆಸರು ಕನವರಿಸುತ್ತಿದ್ದ. ಹಾಗಾಗಿ ಪೋಷಕರು ದೇವಸ್ಥಾನಕ್ಕೆ ಕರೆದುಕೊಂಡು ಬರುತ್ತಾರೆ. ಆಗ ಅಲ್ಲಿನ ಅರ್ಚಕರು ಇವರ ಕಥೆ ಕೇಳಿ ದೇವರಿಗೆ ಏನಾದರೂ ನೈವೇದ್ಯ ಮಾಡಿ ಎನ್ನುತ್ತಾರೆ. ಆ ಬಾಲಕ ತನ್ನ ಕೈಯಲ್ಲಿದ್ದ ಮಂಚ್ ಚಾಕೊಲೇಟ್ ಅರ್ಪಣೆ ಮಾಡುವುದಾಗಿ ಹಠ ಮಾಡುತ್ತಾರೆ. ಅವನ ಆಸೆಯಂತೆ ಮಂಚ್ ಅರ್ಪಣೆ ಮಾಡಿದ ಕೆಲವೇ ಸಮಯದಲ್ಲಿ ಆ ಬಾಲಕನ ಆರೋಗ್ಯ ಸುಧಾರಿಸುತ್ತದೆ. ಈ ಸುದ್ದಿ ಗಾಳಿಯಂತೆ ಇಡೀ ಊರಿಗೆ ಹರಡುತ್ತದೆ. ಈ ಘಟನೆಯ ನಂತರ ಈ ದೇವರಿಗೆ ಮಂಚ್ ಮುರುಗನ್ ಎಂದು ಕರೆಯಲು ಆರಂಭಿಸುತ್ತಾರೆ.
ಭಕ್ತರಿಗೂ ಮಂಚ್ ಪ್ರಸಾದ
ಈ ದೇವಾಲಯದ ವಾರ್ಷಿಕ ಜಾತ್ರೆಯಂದು ಕೇರಳದ ವಿವಿಧ ಭಾಗಗಳಿಂದ ಭಕ್ತರು ಮಂಚ್ ಚಾಕೊಲೇಟ್ಗಳನ್ನು ಬಾಕ್ಸ್ ಬಾಕ್ಸ್ನಲ್ಲಿ ತಂದು ದೇವರಿಗೆ ಸಮರ್ಪಿಸುತ್ತಾರೆ. ಅದೇ ಮಂಚನ್ನು ದೇವರಿಗೆ ನೈವೇದ್ಯ ರೂಪಲ್ಲಿ ಇಟ್ಟು ಬಳಿಕ ಅದನ್ನು ಪ್ರಸಾದದ ರೂಪವಾಗಿ ಜನರಿಗೆ ನೀಡಲಾಗುತ್ತದೆ. ಒಟ್ಟಾರೆಯಾಗಿ 300 ವರ್ಷಗಳಷ್ಟು ಹಳೆಯದಾದ ಮುರುಗನ್ ದೇವರ ಆಶೀರ್ವಾದವನ್ನು ಪಡೆಯಲು ಜಾತಿ, ಮತ ಮತ್ತು ಧರ್ಮದ ಭೇದವಿಲ್ಲದೆ ಜನರು ಚಾಕೊಲೇಟ್ಗಳ ಬಾಕ್ಸ್ ಹಿಡಿದು ದೇಗುಲಕ್ಕೆ ಬರುತ್ತಾರೆ ಎಂಬುದು ವಿಶೇಷ.
kerala
5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್..!
ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.
ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.
ಆನ್ ಲೈನ್ ಗೇಮಿಂಗ್ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?
ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್ಲೈನ್ ಗೇಮಿಂಗ್ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
LATEST NEWS
WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.
ಸೀಟ್ ಗಾಗಿ ಎಡವಟ್ಟು :
ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.
ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್ಗೆ 60 ರೂ., ಹಾಲ್ಫ್ಗೆ 40 ರೂ.
ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.
ರೋಹಿತ್ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.
ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.
- LATEST NEWS4 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ