Connect with us

LATEST NEWS

ಮುಸ್ಲಿಂ ಬಾಲಕನಿಂದ ಬದಲಾಯ್ತು ದೇವಸ್ಥಾನದ ಹೆಸರು…!

Published

on

ಮಂಗಳೂರು ( ಕೇರಳ ): ಮಂಚ್ ಚಾಕೊಲೇಟ್ ಎಂದರೆ ಯಾರಿಗೆ ತಾನೇ ಇಷ್ಟ ಇಲ್ಲಿ ಹೇಳಿ. ಸಣ್ಣ ಮಕ್ಕಳಿಗಂತೂ ಈ ಚಾಕೊಲೇಟ್ ಅಚ್ಚುಮೆಚ್ಚು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕ್ಯಾಂಪ್ಕೋ ಚಾಕೋಲೇಟ್ ಫ್ಯಾಕ್ಟರಿ ಹಾಗೂ ಗೋವಾದ ನೆಸ್ಲೆ ಫ್ಯಾಕ್ಟರಿಯಲ್ಲಿ ಈ ಮಂಚ್ ತಯಾರಾಗುತ್ತದೆ. ಬಿಸ್ಕೆಟ್‌ಗಳಿಂದ ಕೂಡಿದ ಅದರ ಮೇಲ್ಭಾಗದಲ್ಲಿ ಚಾಕೋ ಕ್ರೀಮ್ ಇರುವ ಮಂಚ್ ತಿನ್ನಲು ಎಲ್ಲರೂ ಇಷ್ಟ ಪಡ್ತಾರೆ. ಇಂತಹ ಮಂಚ್‌ ಚಾಕಲೋಟ್‌ ಈಗ ದೇವರಿಗೆ ನೈವೇದ್ಯವಾಗುತ್ತಿದೆ.

ಹೌದು ಭಾರತದಲ್ಲಿ ದೇವಾಲಯಗಳ ವಿಶೇಷತೆ ಹಾಗೂ ಮಹಿಮೆಯ ಬಗ್ಗೆ ಜನರಿಗೆ ಹೆಚ್ಚಾಗಿ ಹೇಳಬೇಕಿಲ್ಲ. ದೇವರ ನಂಬಿ ವಿವಿಧ ಹರಕೆಗಳನ್ನು ಕಟ್ಟಿಕೊಳ್ಳುವ ಜನರು ಸಹ ಬಹಳಷ್ಟಿದ್ದಾರೆ. ಸಾಮಾನ್ಯವಾಗಿ ನಾವು ದೇವರಿಗೆ ಸಿಹಿ ಪದಾರ್ಥ, ಹೂವು, ಹಣ್ಣು ಈ ರೀತಿ ಪದಾರ್ಥಗಳನ್ನು ನೈವೇದ್ಯ ಮಾಡುತ್ತೇವೆ. ಆದರೆ ದೇವರಿಗೆ ಮಂಚ್ ಚಾಕೊಲೇಟ್ ಹರಕೆ ನೀಡುವ ದೇವಲಾಯದ ಬಗ್ಗೆ ನಿಮಗೆ ಗೊತ್ತಾ? ಹೌದು, ಅದೊಂದು ದೇವಸ್ಥಾನದಲ್ಲಿ ಮಂಚ್ ಚಾಕೊಲೇಟ್  ಹರಕೆಯ ರೂಪದಲ್ಲಿ ದೇವರಿಗೆ ಸಮರ್ಪಣೆಯಾಗುತ್ತದೆ. ಯಾವುದು ಈ ದೇವಸ್ಥಾನ ಎನ್ನುವುದರ ಬಗ್ಗೆ ತಿಳಿಯೋಣ.

ಕೇರಳದ ದೇವಾಲಯ ಇದು

ಕೇರಳದ ಒಂದು ಸಣ್ಣ ಮೂಲೆಯಲ್ಲಿರುವ ಈ ದೇವಸ್ಥಾನ ಆಧುನಿಕತೆಯ ಮತ್ತೊಂದು ರೂಪ ಎನ್ನಬಹುದು. ಸಾಮಾನ್ಯವಾಗಿ ಅಯ್ಯಪ್ಪನಿಗೆ ತುಪ್ಪ, ಕೃಷ್ಣನಿಗೆ ಬೆಣ್ಣೆ, ಗಣೇಶನಿಗೆ ಲಡ್ಡು ಹೀಗೆ ಅರ್ಪಣೆ ಮಾಡುತ್ತೇವೆ. ಆದರೆ ಅಲಪ್ಪುಳದ ಬಾಲಮುರುಗನ್ ದೇವರಿಗೆ ಮಂಚ್ ಚಾಕೋಲೇಟ್ ಅಂದ್ರೆ ಇಷ್ಟವಂತೆ. ಕಳೆದ ಆರು ವರ್ಷಗಳಿಂದ ಇಲ್ಲಿ ಬಾಲಮುರಗ ದೇವರಿಗೆ ಬಹುತೇಕ ಎಲ್ಲಾ ಸೇವೆಗಳು ಮಂಚ್‌ ಚಾಕೋಲೇಟ್‌ನಿಂದಲೇ ನಡೆಯುತ್ತದೆ.  ಹೀಗಾಗಿ ಹಿಂದೆ ಬಾಲಮುರುಗ ಅಂತ ಹೆಸರಿದ್ದ ಈ ದೇವಸ್ಥಾನ ಈಗ ಮಂಚ್ ಮುರುಗನ್ ದೇವಸ್ಥಾನ ಎಂದೇ ಫೇಮಸ್ ಆಗಿದೆ.

ವಿಶೇಷವಾಗಿ ಬಾಲಮುರುಗ ದೇವಸ್ಥಾನ ಅಂದ್ರೆ ಮಕ್ಕಳಿಗೆ ಬಹಳ ಇಷ್ಟವಾದ ದೇವಸ್ಥಾನವಾಗಿದೆ. ಪರೀಕ್ಷೆಯ ಸಮಯದಲ್ಲಿ ಮಕ್ಕಳು ಹೆಚ್ಚಾಗಿ ಈ ದೇವಾಲಯಕ್ಕೆ ಬಂದು ದೇವರಿಗೆ ಒಂದು ಮಂಚ್ ಕೊಟ್ಟು ಪರೀಕ್ಷೆ ಸುಲಭ ಇರಲಿ ಎಂದು ಪ್ರೀತಿಯಿಂದ ಬೇಡುತ್ತಾರೆ. ಹೀಗೆ ಮಕ್ಕಳು ಇಲ್ಲಿ ಹೆಚ್ಚಾಗಿ ಬರಲು, ದೇವರಿಗೆ ಮಂಚ್ ಚಾಕೋಲೇಟ್ ಹರಕೆ ನೀಡಲೂ ಒಂದು ಕಾರಣ ಇದೆ. ಹಿಂದೆ ಸಾಮಾನ್ಯ ಎಲ್ಲಾ ದೇವಾಲಯದಂತೆ ಇಲ್ಲೂ ಬೇರೆಯೇ ಹರಕೆ ಸೇವೆ ನಡೆಯುತ್ತಿದ್ದರೂ ಅದೊಂದು ಕಾರಣದಿಂದ ಇತ್ತೀಚಿನ ವರ್ಷದಲ್ಲಿ ಇದು ಮಂಚ್‌ ಸೇವೆಗೆ ಬದಲಾಗಿದೆ.

ಏನಿದು ಮಂಚ್ ಮುರುಗನ್ ಕಥೆ?

ಸುಮಾರು 6 ವರ್ಷಗಳ ಹಿಂದೆ ಆಟವಾಡುತ್ತಿದ್ದ ಒಬ್ಬ ಪುಟ್ಟ ಮುಸ್ಲಿಂ ಬಾಲಕ ಈ ದೇವಾಲಯಕ್ಕೆ ಬಂದು ಗಂಟೆ ಬಾರಿಸಿದ್ದ ಎಂಬ ಕಾರಣಕ್ಕೆ ಪೋಷಕರು ಆತನಿಗೆ ಹೆದರಿಸಿದ್ದರಂತೆ. ಆದರೆ ಆ ರಾತ್ರಿಯೇ ಬಾಲಕನ ಆರೋಗ್ಯ ಹದಗೆಡುತ್ತದೆ. ಕನಸಿನಲ್ಲಿ ಸಹ ಆ ಬಾಲಕ ಮುರುಗನ್ ಹೆಸರು ಕನವರಿಸುತ್ತಿದ್ದ. ಹಾಗಾಗಿ ಪೋಷಕರು ದೇವಸ್ಥಾನಕ್ಕೆ ಕರೆದುಕೊಂಡು ಬರುತ್ತಾರೆ. ಆಗ ಅಲ್ಲಿನ ಅರ್ಚಕರು ಇವರ ಕಥೆ ಕೇಳಿ ದೇವರಿಗೆ ಏನಾದರೂ ನೈವೇದ್ಯ ಮಾಡಿ ಎನ್ನುತ್ತಾರೆ. ಆ ಬಾಲಕ ತನ್ನ ಕೈಯಲ್ಲಿದ್ದ ಮಂಚ್ ಚಾಕೊಲೇಟ್ ಅರ್ಪಣೆ ಮಾಡುವುದಾಗಿ ಹಠ ಮಾಡುತ್ತಾರೆ. ಅವನ ಆಸೆಯಂತೆ ಮಂಚ್ ಅರ್ಪಣೆ ಮಾಡಿದ ಕೆಲವೇ ಸಮಯದಲ್ಲಿ ಆ ಬಾಲಕನ ಆರೋಗ್ಯ ಸುಧಾರಿಸುತ್ತದೆ. ಈ ಸುದ್ದಿ ಗಾಳಿಯಂತೆ ಇಡೀ ಊರಿಗೆ ಹರಡುತ್ತದೆ. ಈ ಘಟನೆಯ ನಂತರ ಈ ದೇವರಿಗೆ ಮಂಚ್ ಮುರುಗನ್ ಎಂದು ಕರೆಯಲು ಆರಂಭಿಸುತ್ತಾರೆ.

ಭಕ್ತರಿಗೂ ಮಂಚ್ ಪ್ರಸಾದ

ಈ ದೇವಾಲಯದ ವಾರ್ಷಿಕ ಜಾತ್ರೆಯಂದು ಕೇರಳದ ವಿವಿಧ ಭಾಗಗಳಿಂದ ಭಕ್ತರು ಮಂಚ್ ಚಾಕೊಲೇಟ್‌ಗಳನ್ನು ಬಾಕ್ಸ್ ಬಾಕ್ಸ್‌ನಲ್ಲಿ ತಂದು ದೇವರಿಗೆ ಸಮರ್ಪಿಸುತ್ತಾರೆ. ಅದೇ ಮಂಚನ್ನು ದೇವರಿಗೆ ನೈವೇದ್ಯ ರೂಪಲ್ಲಿ ಇಟ್ಟು ಬಳಿಕ ಅದನ್ನು ಪ್ರಸಾದದ ರೂಪವಾಗಿ ಜನರಿಗೆ ನೀಡಲಾಗುತ್ತದೆ. ಒಟ್ಟಾರೆಯಾಗಿ 300 ವರ್ಷಗಳಷ್ಟು ಹಳೆಯದಾದ ಮುರುಗನ್ ದೇವರ ಆಶೀರ್ವಾದವನ್ನು ಪಡೆಯಲು ಜಾತಿ, ಮತ ಮತ್ತು ಧರ್ಮದ ಭೇದವಿಲ್ಲದೆ ಜನರು ಚಾಕೊಲೇಟ್ಗಳ ಬಾಕ್ಸ್ ಹಿಡಿದು ದೇಗುಲಕ್ಕೆ ಬರುತ್ತಾರೆ ಎಂಬುದು ವಿಶೇಷ.

Click to comment

Leave a Reply

Your email address will not be published. Required fields are marked *

FILM

ಸೋಶಿಯಲ್ ಮೀಡಿಯಾದಲ್ಲಿ ಗುಡ್ ನ್ಯೂಸ್ ಹಂಚಿಕೊಂಡ ಚಂದನ್ ಗೌಡ-ಕವಿತಾ ದಂಪತಿ

Published

on

ಚಂದನ್ ಗೌಡ – ಕವಿತಾ ದಂಪತಿ ಯಾರಿಗೆ ತಾನೇ ಗೊತ್ತಿಲ್ಲ. ಈ ಜೋಡಿ ‘ಲಕ್ಷ್ಮೀ ಬಾರಮ್ಮಾ’ ಮೂಲಕಾನೇ ಫೇಮಸ್. ಈ ಧಾರಾವಾಹಿಯಲ್ಲಿ ಕೆಲವು ಸಮಯ ನಟಿಸಿದ್ದ ಚಂದನ್ ಹೊರಬಂದಿದ್ದರು. ಕವಿತಾ ಕೂಡಾ ಅಷ್ಟೇ ಈ ಧಾರಾವಾಹಿ ಖ್ಯಾತಿ ನೀಡಿದ್ದರೂ, ನಂತರ ದಿನಗಳಲ್ಲಿ ಹೊರನಡೆದಿದ್ದರು. ಆದ್ರೆ, ಈ ಜೋಡಿ ರಿಯಲ್ ನಲ್ಲಿ ಒಂದಾಗಿ ಅಭಿಮಾನಿಗಳಿಗೆ ಖುಷಿ ಕೊಟ್ಟಿತ್ತು. ಇದೀಗ ಚಂದು – ಲಚ್ಚಿ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಖುಷಿ ಸುದ್ದಿ ಹಂಚಿಕೊಂಡ ದಂಪತಿ :

ನಟ ಚಂದನ್ ಕುಮಾರ್, ಕವಿತಾ ಗೌಡ ಅವರು ಬೇಬಿ ಸ್ಕ್ಯಾನ್ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಮೂಲಕ ತಾವು ಮೊದಲ ಮಗುವಿನ ನಿರೀಕ್ಷೆಯಲ್ಲಿ ಇರುವ ಸಂಭ್ರಮ ಹಂಚಿಕೊಂಡಿದ್ದಾರೆ. ನಟಿ ಕವಿತಾ ಗೌಡ ಚಂದನ್ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆಅಭಿಮಾನಿಗಳಿಂದ, ನಟ, ನಟಿಯರಿಂದ ಶುಭ ಹಾರೈಕೆ ಹರಿದು ಬರುತ್ತಿದೆ. ನೇಹಾ ಗೌಡ, ಗೀತಾ ಭಾರತೀ ಭಟ್, ಧನರಾಜ್, ವಿನಯ್ ಗೌಡ, ಪ್ರಿಯಾಂಕಾ ಚಿಂಚೋಳಿ ಮೊದಲಾದವರು ಶುಭಾಶಯ ತಿಳಿಸಿದ್ದಾರೆ. 2021 ಮೇ 14ರಂದು ಲಾಕ್ ಡೌನ್ ಸಂದರ್ಭದಲ್ಲಿ ಈ ಜೋಡಿ ಮದುವೆಯಾಗಿತ್ತು.

ಮುಂದೆ ಓದಿ..; ರಜನಿಕಾಂತ್-ಐಶ್ವರ್ಯ ರೈ ಸಂಬಂಧಪಟ್ಟ ವೀಡಿಯೋ ಈಗ ವೈರಲ್ ..!! ಅಮಿತಾಬಚನ್, ಅಭಿಷೇಕ್‌ಗೆ ಏನಾಗಿದೆ? ಎಂದು ಹೇಳಿದ್ಯಾಕೆ?

ಬ್ಯುಸಿ ಲೈಫ್ :

ಕೆಲ ತಿಂಗಳುಗಳಿಂದ ಕವಿತಾ ಗೌಡ ಅವರು ಉದ್ಯಮದ ಕಡೆಗೆ ಮುಖ ಮಾಡಿದ್ದರು. ಚಂದನ್ ಜೊತೆ ಸೇರಿ ಒಂದಾದ ಮೇಲೆ ಒಂದರಂತೆ ಹೋಟೆಲ್ ಬ್ರ್ಯಾಂಚ್ ಆರಂಭಿಸಿದ್ದಾರೆ. ಅಷ್ಟೇ ಅಲ್ಲದೆ ಮೇಕಪ್ ಸ್ಟುಡಿಯೋವನ್ನು ಕೂಡ ಆರಂಭಿಸಿದ್ದಾರೆ.

Continue Reading

FILM

ಬರ್ಬರ ಹತ್ಯೆಯಾದ ಬ್ಯೂಟಿ ಕ್ವೀನ್.!! ಮುಳುವಾಯಿತಾ ಇನ್ಸ್ಟಾಗ್ರಾಮ್ ಪೋಸ್ಟ್‌..! ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ದೃಶ್ಯ

Published

on

ಬ್ಯೂಟಿ ಕ್ವೀನ್ ಎಂದು ಕಿರೀಟ ಮುಡಿಗೇರಿಸಿಕೊಂಡವಳು ಎರಡೇ ವರ್ಷಕ್ಕೆ ಹಂತಕರ ಗುಂಡೇಟಿಕೆ ಬಲಿಯಾಗಿದ್ದಾಳೆ. ರೆಸ್ಟೋರೆಂಟ್‌ನಲ್ಲಿ ಆರಾಮವಾಗಿ ವಿರಾಮಿಸಿ ಬಗೆ ಬಗೆಯ ಸೀಫುಡ್ ಆರ್ಡರ್ ಮಾಡಿದ್ರು.  ಇನ್ನೇನು ಫುಡ್‌ಅನ್ನು ಆಹ್ಲಾದಿಸಬೇಕು ಅನ್ನೋವಷ್ಟರಲ್ಲಿ ದುರಂತ ಅಂದ್ರೆ ಹಂತಕರ ಗುಂಡೇಟಿಗೆ ಈ ಸುಂದರಿ ಬಲಿಯಾಗಿದ್ದಾರೆ.

23ವರ್ಷಕ್ಕೆ ಬ್ಯೂಟಿ ಕ್ವೀನ್ ಆದ ಲ್ಯಾಂಡಿ

ಲ್ಯಾಂಡಿ ಪರ್ರಾಗಾ ಗೊಯ್ಬುರೊ ತನ್ನ 23 ವರ್ಷಕ್ಕೆ ಬ್ಯೂಟಿ ಕ್ವೀನ್ ಕಿರೀಟವನ್ನು ಮುಡಿಗೇರಿಸಿಕೊಂಡವಳು. 2022ರ ಮಿಸ್‌ ಈಕ್ವೆಡಾರ್ ಸ್ಪರ್ಧೆಯಲ್ಲಿ ಬ್ಯೂಟಿ ಕ್ವೀನ್ ಆಗಿ ಲಕ್ಷಾಂತರ ಅಭಿಮಾನಿಗಳನ್ನು ಗಿಟ್ಟಿಸಿಕೊಂಡಿದ್ದಾಳೆ.  ಬಿಕಿನಿ ಕ್ವೀನ್ ಎಂದೆನಿಸಿಕೊಂಡ ಈಕೆ ಇನ್ಸ್ಟಾಗ್ರಾಮ್‌ನಲ್ಲಿ ಲಕ್ಷಾಂತರ ಫಾಲೋವರ್ಸ್‌ಗಳನ್ನು ಹೊಂದಿದ್ದಾಳೆ. ಹಲವು ಉದ್ಯಮಗಳನ್ನು ಕೂಡ ಈಕೆ ನಡೆಸುತ್ತಿದ್ದಳು.  ಲ್ಯಾಂಡಿ ಪರ್ರಾಗಾ ಸಾವಿನ ಸುದ್ದಿ ಕೇಳಿ ಎಲ್ಲರೂ ಆಘಾತಕ್ಕೊಳಗಾಗಿದ್ದಾರೆ.

ರಜನಿಕಾಂತ್-ಐಶ್ವರ್ಯ ರೈ ಸಂಬಂಧಪಟ್ಟ ವೀಡಿಯೋ ಈಗ ವೈರಲ್ ..!! ಅಮಿತಾಬಚನ್, ಅಭಿಷೇಕ್‌ಗೆ ಏನಾಗಿದೆ? ಎಂದು ಹೇಳಿದ್ಯಾಕೆ?

ಸಾವಿಗೆ ಕಾರಣವಾದ ಇನ್ಸ್ಟಾಗ್ರಾಮ್ ಪೋಸ್ಟ್:

ಎ.28ರಂದು ಕ್ವೆವೆಡೊ ನಗರದ ರೆಸ್ಟೋರೆಂಟ್‌ವೊಂದಕ್ಕೆ ಲ್ಯಾಂಡಿ ತೆರಳಿದ್ದರು. ಈ ವೇಳೆ ವೆರೈಟಿ ಸೀ ಫುಡ್‌ಗಳನ್ನು ಆರ್ಡರ್ ಮಾಡಿದ್ದಾರೆ. ಫುಡ್‌ಗಳು ಟೇಬಲ್ ಮೇಲೆ ಬಂದ ಕೂಡಲೇ ಫೊಟೋ ಕ್ಲಿಕ್ಕಿಸಿ ಇನ್ಸ್ಟಾಗ್ರಾಂ ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಫೊಟೋ ಲ್ಯಾಂಡಿಯ ಪ್ರಾಣಕ್ಕೆ ಕುತ್ತು ತಂದಿತ್ತು. ಹಂತಕರು ಪೋಸ್ಟ್ ಮಾಡಿದ್ದ ಫೊಟೋದ ಜಾಲವನ್ನು ಹಿಡಿದು ಹಿಂಬಾಲಿಸಿದ ಇಬ್ಬರು ದುಷ್ಕರ್ಮಿಗಳು ಲ್ಯಾಂಡಿ ಮೇಲೆ ಡೆಡ್ಲಿ ಅಟ್ಯಾಕ್ ಮಾಡಿದ್ದಾರೆ. ರೆಸ್ಟೋರೆಂಟ್‌ಗೆ ಬಂದ ದುಷ್ಕರ್ಮಿಗಳು ಲ್ಯಾಂಡಿ ಮೇಲೆ ಗನ್‌ನಿಂದ ಶೂಟ್ ಮಾಡಿ ಪರಾರಿಯಾಗಿದ್ದಾರೆ. ಈಕ್ವೆಡಾರ್‌ನ ಸುಂದರಿ ದುಷ್ಕರ್ಮಿಗಳ ಗುಂಡೇಟಿಗೆ ರಕ್ತದ ಮಡುವಿನಲ್ಲಿ ಬರ್ಬರವಾಗಿ  ಹತ್ಯೆಯಾಗಿದ್ದಾರೆ. ಹಂತಕರು ಈಕೆಯ ಇನ್ಸ್ಟಾಗ್ರಾಮ್‌ನ್ನು ಫಾಲೋ ಮಾಡಿ ಹತ್ಯೆ ಮಾಡಿದ್ದು ಅಲ್ಲಿಂದ ಎಸ್ಕೇಪ್ ಆಗಿದ್ದಾರೆ. ಈ ವೀಡಿಯೋ ರೆಸ್ಟೋರೆಂಟ್‌ನಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಹತ್ಯೆಗೆ ಕಾರಣವೇನು ಎಂಬುದನ್ನು ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದು ವಿಶೇಷ ತಂಡ ರಚನೆ ಮಾಡಿದ್ದಾರೆ. 2023ರಲ್ಲಿ ಅಟಾರ್ನಿ ಜನರಲ್ ಕಚೇರಿಯಲ್ಲಿ ನಡೆದ ಸಂಘಟಿತ ಅಪರಾಧ ಪ್ರಕರಣದಲ್ಲಿ, ಡ್ರಗ್ ಕಳ್ಳ ಸಾಗಾಣಿಕೆಯಲ್ಲಿ ಲ್ಯಾಂಡಿ ಹೆಸರು ಕೇಳಿಬಂದಿತ್ತು. ಡ್ರಗ್ಸ್ ಜಾಲದಲ್ಲಿ ಸಿಲುಕಿದ್ದ ತನ್ನ ಬಾಯ್‌ಫ್ರೆಂಡ್‌ನಿಂದ ದೂರಾಗಿದ್ದ ಲ್ಯಾಂಡ್ರಿಯ ಈ ನಿಗೂಢ ಬರ್ಬರ ಹತ್ಯೆಗೆ ಕಾರಣ ತಿಳಿಯಲು ತನಿಖೆ ನಡೆಯುತ್ತಿದೆ.

 

 

 

Continue Reading

FILM

ರಜನಿಕಾಂತ್-ಐಶ್ವರ್ಯ ರೈ ಸಂಬಂಧಪಟ್ಟ ವೀಡಿಯೋ ಈಗ ವೈರಲ್ ..!! ಅಮಿತಾಬಚನ್, ಅಭಿಷೇಕ್‌ಗೆ ಏನಾಗಿದೆ? ಎಂದು ಹೇಳಿದ್ಯಾಕೆ?

Published

on

ಮುಂಬೈ/ಮಂಗಳೂರು: ಸೂಪರ್ ಸ್ಟಾರ್ ರಜನಿಕಾಂತ್ ಸಿನೆಮಾ ಲೋಕದಲ್ಲಿ ತಮ್ಮದೇ ಆದ ಸ್ಟಾಂಡ್‌ ಕ್ರಿಯೇಟ್ ಮಾಡಿದ್ದಾರೆ. ಕೇವಲ ತಮಿಳು ಭಾಷೆ ಅಲ್ಲದೇ ಎಲ್ಲಾ ಭಾಷೆಗಳಲ್ಲಿಯೂ ರಜನಿಗೆ ಫ್ಯಾನ್ಸ್ ಇದ್ದಾರೆ. ಇನ್ನು ಅವರ ಚಾರ್ಮ್ ಅಬ್ಬಾ…! ವಯಸ್ಸಲ್ಲಿ 73 ಆದರೂ ಚಿರ ಯುವಕನಂತೆ ಕಾಣಿಸುವ ಎನರ್ಜಿ ಇವರದು. ಇನ್ನು ಇವರ ಸಿನೆಮಾ ರಿಲೀಸ್ ಆದ್ರೆ ಸಾಕು ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತೆ. ಅದಕ್ಕೆ ಇತ್ತೀಚೆಗೆ ರಿಲೀಸ್ ಆದ ಜೈಲರ್ ಸಿನೆಮಾವೇ ಸಾಕ್ಷಿ. ಇದೀಗ ರಜನಿ ಹಾಗೂ ಐಶ್ವರ್ಯ ರೈ ಗೆ ಸಂಬಂಧಪಟ್ಟ ಹಳೆ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿದೆ.

rajani-aishwarya

14 ವರ್ಷಗಳ ಹಿಂದೆಯೇ ಕೆಲವರು ರಜನಿಕಾಂತ್ ಅವರನ್ನು ಹೀರೋ ಅಲ್ಲ ಎಂಬಂತೆ ವರ್ತಿಸಿದ್ದರಂತೆ. ಹೀಗಂತ ಖುದ್ದು ರಜನಿ ಅವರು ರೋಬೋ ಸಿನೆಮಾ ಪ್ರೆಸ್‌ಮೀಟ್‌ ನಲ್ಲಿ ಇಂಟ್ರಸ್ಟಿಂಗ್ ವಿಷಯವನ್ನು ಹಂಚಿಕೊಂಡಿದ್ದರು. ಇದೀಗ ಈ ವೀಡಿಯೋ ಮತ್ತೆ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡ್ತಿದೆ.

ಐಶ್ವರ್ಯ ರೈ ಬಚ್ಚನ್‌ಗೆ, ಸೊಸೆಯ ‘ವಾಟ್‌ ದಿ ಹೆಲ್‌ ನವ್ಯಾ’ದಲ್ಲಿ ಡಿಮ್ಯಾಂಡ್‌…!

ಪ್ರೆಸ್‌ಮೀಟ್‌ನಲ್ಲಿ ಮಾತು ಆರಂಭಿಸಿದ ರಜನಿ ‘ನನ್ನ ಜೊತೆ ಹೀರೋಯಿನ್‌ ಆಗಿ ನಟಿಸಿರುವುದಕ್ಕೆ ಐಶ್ವರ್ಯಾಗೆ ಧನ್ಯವಾದಗಳು. ಕೆಲ ದಿನಗಳ ಹಿಂದೆ ಬೆಂಗಳೂರಿನಲ್ಲಿರುವ ನನ್ನ ಸಹೋದರನ ಮನೆಗೆ ಹೋಗಿದ್ದೆ. ಪಕ್ಕದ ಮನೆ ರಾಜಸ್ಥಾನ ಕುಟುಂಬದವರು ನನ್ನನ್ನು ನೋಡಲು ಬಂದರು. ಅದರಲ್ಲಿ ನಂದುಲಾಲ್ ಎಂಬವರು ನನ್ನನ್ನು ಮಾತನಾಡಿಸಿದರು. ಅವರಿಗೆ 60 ವರ್ಷ ವಯಸ್ಸಾಗಿತ್ತು. ಸರ್ ನಿಮ್ಮ ತಲೆ ಕೂದಲಿಗೆ ಏನಾಗಿದೆ ಎಂದು ಕೇಳಿದರು. ಬಿಡಿ ಎಲ್ಲಾ ಉದುರಿ ಹೋಗಿದೆ ಎಂದು ಹೇಳಿದೆ. ನಿಮ್ಮ ನಿವೃತ್ತಿ ಜೀವನ ಹೇಗಿದೆ. ಲೈಫ್ ಎಂಜಾಯ್ ಮಾಡ್ತಿದ್ದೀರಾ ಎಂದು ಕೇಳಿದರು. ಇಲ್ಲಾ ನಾನೊಂದು ಸಿನೆಮಾ ಮಾಡ್ತಾ ಇದ್ದೇನೆ. ಐಶ್ವರ್ಯ ರೈ ಹೀರೋಯಿನ್ ಅಂದೆ. ‘ಹೀರೋ ಯಾರು ಸರ್’ ಎಂದು ಮರು ಪ್ರಶ್ನಿಸಿದರು.  ಅವರ ಜೊತೆ ಇದ್ದವರು ಡ್ಯಾಡಿ ಇವರೇ ಹೀರೋ ಎಂದು ಮೆಲುಧ್ವನಿಯಲ್ಲಿ ಹೇಳ್ತಾರೆ. ನಂದುಲಾಲ್  ಮೌನವಾಗಿ ನನ್ನನ್ನೇ ದಿಟ್ಟಿಸಿ ನೋಡಿ ಏನೂ ಮಾತನಾಡದೆ ಹೊರಟು ಬಿಟ್ಟರು. ಅಷ್ಟರಾಗಲೇ ಮನೆ ಒಳಗಡೆಯಿಂದು ಒಂದು ಧ್ವನಿ ಬರುತ್ತೆ. ಐಶ್ವರ್ಯ ರೈ ಗೆ ಏನಾಗಿದೆ..? ಅಲ್ಲಾ ಅಭಿಷೇಕ್ ಹೇಗೆ ಒಪ್ಪಿದ್ರು..? ಅಮಿತಾಬಚನ್‌ಗಾದ್ರು ಎನಾಗಿದೆ.. ಐಶ್ವರ್ಯಾಳನ್ನು ಇವರ ಜೊತೆ ಹೀರೋಯಿನ್ ಮಾಡಲು ಒಪ್ಪಿದ್ದಾರಲ್ಲ  ಎಂಬ ಮಾತು ಕೇಳಿ ಬಂತು ಎಂದು ರಜನಿಕಾಂತ್ ಸಿನೆಮಾ ಪ್ರೆಸ್ ಮೀಟ್‌ನಲ್ಲಿ ನಡೆದ ಘಟನೆಯನ್ನು ಮೆಲುಕು ಹಾಕಿದ್ದರು.

Continue Reading

LATEST NEWS

Trending