Sunday, March 26, 2023

ಕಾವೂರು ಮಲ್ಲಿ ಲೇಔಟ್‌ನ ಉದ್ಯಮಿ ಹತ್ಯೆ:ಹಣಕ್ಕಾಗಿ ಚೂರಿ ಇರಿದು ಹತ್ಯೆ ಮಾಡಿದ್ದ ಆರೋಪಿಗಳು

ಕಾವೂರು ಮಲ್ಲಿ ಲೇಔಟ್‌ನ ಉದ್ಯಮಿ ಹತ್ಯೆ:ಹಣಕ್ಕಾಗಿ ಚೂರಿ ಇರಿದು ಹತ್ಯೆ ಮಾಡಿದ್ದ ಆರೋಪಿಗಳು

ಕಾವೂರು:ಕೇರಳ ಮೂಲದ ಉದ್ಯಮಿ, ಕಾವೂರು ಮಲ್ಲಿ ಲೇಔಟ್‌ನ ಸುರೇಂದ್ರನ್(೬೦) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕಾವೂರು ಪೊಲೀಸರು ಅಶೋಕನಗರದ ಸಂತೋಷ್ ಸಪಲ್ಯ(೪೨) ಮತ್ತು ಗದಗ ನರಗುಂದ ನಿವಾಸಿ ಸಿದ್ದು ಯಾನೆ ಸಿದ್ಧಪ್ಪ(೨೮)ಎಂಬಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಮೂಲತಃ ಕೇರಳ ಕಾಞಂಗಾಡಿನ ನಿವಾಸಿ ಸುರೇಂದ್ರನ್ ಕಳೆದ ಹಲವು ವರ್ಷಗಳಿಂದ ಕಾವೂರಿನ ಮಲ್ಲಿ ಲೇಔಟ್‌ನಲ್ಲಿ ಪತ್ನಿ ಜೊತೆಗೆ ವಾಸ ಮಾಡುತ್ತಿದ್ದರು.

ಅಕ್ಟೋಬರ್ ೩ರಂದು ಸುರೇಂದ್ರನ್ ಅವರು ಹೊರಗಡೆ ಹೋಗಿ ವಾಪಾಸು ಬರುತ್ತಿದ್ದಾಗ ಅವರನ್ನು ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಅವರ ರೂಮಿನಲ್ಲಿ ಚೂರಿ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದರು.

ಸಂಜೆ ಮನೆಗೆ ಮರಳಿದ ಪತ್ನಿ ಸುರೇಂದ್ರನ್ ಹತ್ಯೆಯಾಗಿರುವುದರ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು.

ಸುರೇಂದ್ರನ್ ಕೆಲವು ಸಮಯದ ಹಿಂದೆ ಸಂತೋಷ್ ಅವರಲ್ಲಿ ಮನೆಗೆ ಸಂಬಂಧಿಸಿದ ಕೆಲಸ ಮಾಡಿಸಿದ್ದು, ಅದರ ಸುಮಾರು ೨೫,೦೦೦ ರೂಪಾಯಿ ಹಣ ನೀಡಲು ಬಾಕಿ ಇತ್ತು. ಸಂತೋಷ್ ದಿನವೂ ಮನೆಗೆ ಬಂದು ಹಣ ಕೇಳುತ್ತಿದ್ದರು. ಆದರೆ ಹಣ ಕೊಡಲು ನಿರಾಕರಿಸುತ್ತಿದ್ದ ಸುರೇಂದ್ರನ್ ಉಡಾಫೆ ಮಾತನಾಡುತ್ತಿದ್ದರು. ಇದೇ ಕಾರಣಕ್ಕೆ ಆಕ್ರೋಶಗೊಂಡು  ಕೊಲೆ ಕೃತ್ಯ ನಡೆಸಿದ್ದಾರೆ ಎಂದು ವಿಚಾರಣೆ ವೇಳೆ ಆರೋಪಿಗಳು ಬಾಯ್ಬಿಟ್ಟಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಸುಳ್ಯ : ಮನೆ ಕೊಟ್ಟಿಗೆ ಕಾಮಗಾರಿಯ ವೇಳೆ ಘೋರ ದುರಂತ – ಮಣ್ಣು ಕುಸಿದು ಮೂವರು ಕಾರ್ಮಿಕರು ಮೃತ್ಯು..!

ಮನೆ ಕೊಟ್ಟಿಗೆಯ ಕಾಮಗಾರಿಯ ವೇಳೆ ಘೋರ ದುರಂತ ನಡೆದು ಮೂವರು ಕಾರ್ಮಕರು ದಾರುಣವಾಗಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಸಂಭವಿಸಿದೆ.ಸುಳ್ಯ : ಮನೆ ಕೊಟ್ಟಿಗೆಯ ಕಾಮಗಾರಿಯ ವೇಳೆ ಘೋರ...

ಉಡುಪಿ ಪಡುಬಿದ್ರೆಯಲ್ಲಿ ಬೈಕಿಗೆ ಟ್ಯಾಂಕರ್ ಢಿಕ್ಕಿ; ಸವಾರರಿಬ್ಬರು ಮೃತ್ಯು..!

ಉಡುಪಿ : ಬೈಕ್‌ಗೆ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ ಉಚ್ಚಿಲದಲ್ಲಿ ಶನಿವಾರ ಸಂಜೆ ನಡೆದಿದೆ.ಮೃತರನ್ನು ಫಲಿಮಾರು ಅವರಾಲುಮಟ್ಟುವಿನ ಅಡ್ಕ ಸುಬ್ರಹ್ಮಣ್ಯ (30)...

ಬಂಟ್ವಾಳ: ಆಸ್ತಿಗಾಗಿ ಹೆತ್ತ ತಾಯಿಯ ಜುಟ್ಟು ಹಿಡಿದು ಮುಖಚಚ್ಚಿದ ಪಾಪಿ ಮಗ

ಬಂಟ್ವಾಳ: ಆಸ್ತಿಯಲ್ಲಿ ಪಾಲುಕೊಡುವಂತೆ ಹೆತ್ತ ತಾಯಿಗೆ ಬೆದರಿಸಿ ಗಾಯಗೊಳಿಸಿ ಮಗ ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಘಟನೆ ವಿವರ ಮಾ.24 ರಂದು ಇಡ್ಕಿದು ಗ್ರಾಮದ ನಾರಾಯಣ ಗೌಡ ಎಂಬುವವರ...