ಬಾಲಿವುಡ್ ನ ಜನಪ್ರಿಯ ಸಂಗೀತ ನಿರ್ದೇಶಕ ವಾಜಿದ್ ಖಾನ್ ರನ್ನ ಬಲಿ ತೆಗೆದುಕೊಂಡ ಕೊರೊನಾ..!
ಬಾಲಿವುಡ್ ನ ಜನಪ್ರಿಯ ಸಂಗೀತ ನಿರ್ದೇಶಕ ವಾಜಿದ್ ಖಾನ್ ರನ್ನ ಬಲಿ ತೆಗೆದುಕೊಂಡ ಕೊರೊನಾ..!
ಮುಂಬೈ: ಕೊರೊನಾ ಮಹಾಮಾರಿಗೆ ಬಾಲಿವುಡ್ ನಿರ್ದೇಶಕ, ಸಂಗೀತ ನಿರ್ದೇಶಕ, ಹಾಡುಗಾರ ವಾಜೀದ್ ಖಾನ್ ಮೃತಪಟ್ಟಿದ್ದಾರೆ.
ಕೆಲದಿನಗಳ ಹಿಂದೆ ಕೋವಿಡ್ 19 ಪಾಸಿಟಿವ್ ಕಂಡು ಬಂದಿದ್ದ ಅವರು, ನಿನ್ನೆ (ಮೇ 31) ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಕೆಲವೇ ಕೆಲವು ದಿನಗಳ ಹಿಂದೆಯಷ್ಟೇ ವಾಜಿದ್ ಖಾನ್ ಗೆ ನೋವೆಲ್ ಕೊರೊನಾ ವೈರಸ್ ಸೋಂಕು ತಗುಲಿತ್ತು.
ಕಿಡ್ನಿ ಸಂಬಂಧಿ ಖಾಯಿಲೆಯಿಂದಲೂ ಬಳಲುತ್ತಿದ್ದ ವಾಜಿದ್ ಖಾನ್, ಕೆಲವೇ ತಿಂಗಳುಗಳ ಹಿಂದೆಯಷ್ಟೇ ಕಿಡ್ನಿ ಟ್ರಾನ್ಸ್ ಪ್ಲಾಂಟ್ ಗೆ ಒಳಗಾಗಿದ್ದರು.
ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾದ ಕಾರಣ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಲ್ಲಿದ್ದ ವಾಜಿದ್ ಖಾನ್ ನಿನ್ನೆ ತಡರಾತ್ರಿ ಇಹಲೋಕ ತ್ಯಜಿಸಿದ್ದಾರೆ.
1998 ರಲ್ಲಿ ಬಿಡುಗಡೆಗೊಂಡ ಸಲ್ಮಾನ್ ಖಾನ್ ಅಭಿನಯದ ‘ಪ್ಯಾರ್ ಕಿಯಾ ತೋ ಡರ್ನಾ ಕ್ಯಾ’ ಸಿನಿಮಾದ ಮೂಲಕ ವಾಜಿದ್ ಖಾನ್ ಬಾಲಿವುಡ್ ಪ್ರವೇಶಿಸಿದರು.
‘ಚೋರಿ ಚೋರಿ’, ‘ಹಲೋ ಬ್ರದರ್’, ‘ಮುಜ್ಸೆ ಶಾದಿ ಕರೋಗಿ’, ‘ಪಾರ್ಟ್ನರ್’, ‘ವಾಂಟೆಡ್’, ‘ದಬಾಂಗ್’ ಮುಂತಾದ ಚಲನಚಿತ್ರಗಳಿಗೆ ಸಹೋದರ ಸಾಜಿದ್ ಖಾನ್ ಜೊತೆಗೆ ಸೇರಿ ವಾಜಿದ್ ಖಾನ್ ಸಂಗೀತ ಸಂಯೋಜಿಸಿದ್ದರು.
ಸಾಜಿದ್-ವಾಜಿದ್ ಬ್ರದರ್ಸ್ ಕಾಂಬಿನೇಷನ್ ನಿಂದ ಬಾಲಿವುಡ್ ಗೆ ಹಲವು ಸೂಪರ್ ಹಿಟ್ ಹಾಡುಗಳು ಲಭಿಸಿವೆ.
2008ರಲ್ಲಿ ಬಿಡುಗಡೆಯಾದ ‘ಪಾರ್ಟ್ನರ್’ ಚಿತ್ರದ ಮೂಲಕ ವಾಜಿದ್ ಖಾನ್ ಗಾಯಕರಾಗಿ ಗುರುತಿಸಿಕೊಂಡರು.
‘ಹುಡ್ ಹುಡ್ ದಬಾಂಗ್’, ‘ಜಲ್ವಾ’, ‘ಚಿಂತಾ ತ..’ ಮುಂತಾದ ಹಿಟ್ ಸಾಂಗ್ಸ್ ಗೆ ವಾಜಿದ್ ಖಾನ್ ದನಿಯಾಗಿದ್ದರು.
LATEST NEWS
ಪ್ರಧಾನಿ ಕಾರಿನ ನೋಂದಣಿಯನ್ನು ವಿಸ್ತರಿಸಲು ಅಸಾಧ್ಯ ಎಂದ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ; ಕಾರಣ ಏನು?
ನವದೆಹಲಿ : ಪ್ರಧಾನಿ ಕಾರಿನ ನೋಂದಣಿಯನ್ನು ವಿಸ್ತರಿಸಲು ಅಸಾಧ್ಯ ಎಂದು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ( NGT ) ಹೇಳಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಿದ್ದ ಮೂರು ಡಿಸೇಲ್ ಕಾರುಗಳ ನೋಂದಣಿ ವಿಸ್ತರಿಸುವಂತೆ ಎಸ್ಪಿಜಿ (SPG) ಮನವಿ ಸಲ್ಲಿಸಿತ್ತು.
ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಹೇಳಿದ್ದೇನು?
“ಈ ಮೂರು ಕಾರುಗಳು ಸಾಮಾನ್ಯವಾಗಿ ಬಳಸಲ್ಪಡದ ವಿಶೇಷ ಉದ್ದೇಶದ ವಾಹನಗಳಾಗಿವೆ. ಈ ವಾಹನಗಳು ಹತ್ತು ವರ್ಷಗಳಲ್ಲಿ ಬಹಳ ಕಡಿಮೆ ಚಲಿಸಿವೆ ಮತ್ತು ಪ್ರಧಾನಿ ಅವರ ಭದ್ರತೆಯ ನಿರ್ದಿಷ್ಟ ಉದ್ದೇಶಕ್ಕಾಗಿ ಅಗತ್ಯವಾಗಿವೆ. ಆದರೆ ಸುಪ್ರೀಂ ಕೋರ್ಟ್ 2018ರ ಅಕ್ಟೋಬರ್ 29ರಂದು ನೀಡಿದ ಆದೇಶದಂತೆ ಆ ವಾಹನಗಳಿಗೆ ಅನುಮತಿ ನೀಡಲು ಸಾಧ್ಯವಿಲ್ಲ. ಹೀಗಾಗಿ ಮನವಿಯನ್ನು ತಿರಸ್ಕರಿಸಲಾಗಿದೆ” ಎಂದು ಎನ್ಜಿಟಿ ಹೇಳಿದೆ.
ಎಸ್ಪಿಜಿ ಈ ಕಾರುಗಳಿಗೆ ಅನುಮತಿ ಕೇಳಿದ್ಯಾಕೆ?
ಈ ವಾಹನಗಳ ವಿನ್ಯಾಸ ಮತ್ತು ತಾಂತ್ರಿಕ ಹಾಗೂ ಕಾರ್ಯತಂತ್ರಗಳು ಬಹಳಷ್ಟು ವಿಶೇಷವಾಗಿದೆ. ಇಂತಹ ವಾಹನಗಳು ಮಾರುಕಟ್ಟೆಯಲ್ಲಿ ಸುಲಭವಾಗಿ ಲಭ್ಯವಾಗುವುದಿಲ್ಲ. ಭದ್ರತೆಯ ದೃಷ್ಟಿಯಲ್ಲಿ ವಿಶೇಷವಾಗಿ ವಿನ್ಯಾಸ ಮಾಡಿರುವ ಕಾರಣ ಈ ಕಾರುಗಳಿಗೆ ಇನ್ನೂ ಐದು ವರ್ಷಗಳ ಕಾಲ ನೊಂದಣಿಯನ್ನು ವಿಸ್ತರಿಸಿ ಎಂದು ಎಸ್ಪಿಜಿ ಕೋರಿಕೆ ಸಲ್ಲಿಸಿತ್ತು.
ದೆಹಲಿ ಎನ್ಸಿಆರ್ನಲ್ಲಿನ ಗಾಳಿಯ ಗುಣಮಟ್ಟವನ್ನು ಸುಧಾರಿಸುವ ಕ್ರಮವಾಗಿ ಎನ್ಜಿಟಿ ಮತ್ತು ಸುಪ್ರೀಂ ಕೋರ್ಟ್ ಈ ಆದೇಶಗಳನ್ನು ಹೊರಡಿಸಿದ್ದವು. ಎನ್ಜಿಟಿ 2015ರ ಏಪ್ರಿಲ್ನಲ್ಲಿ ದೆಹಲಿ ಎನ್ಸಿಆರ್ ರಸ್ತೆಗಳಲ್ಲಿ 10 ವರ್ಷಕ್ಕಿಂತ ಹಳೆಯದಾದ ಎಲ್ಲ ಡೀಸೆಲ್ ವಾಹನಗಳನ್ನು ಓಡಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು. 10 ವರ್ಷಕ್ಕಿಂತ ಹಳೆಯದಾದ ಯಾವುದೇ ಡೀಸೆಲ್ ವಾಹನವನ್ನು ನೋಂದಾಯಿಸದಂತೆ ದೆಹಲಿ, ಹರಿಯಾಣ ಮತ್ತು ಉತ್ತರ ಪ್ರದೇಶ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು.
2013ರಲ್ಲಿ ತಯಾರಿಸಿದ ಮತ್ತು 2014ರ ಡಿಸೆಂಬರ್ನಲ್ಲಿ ನೋಂದಾಯಿಸಲಾದ ಮೂರು ರೆನಾಲ್ಟ್ ಎಂಡಿ -5 (Renault MD-5) ವಿಶೇಷ ಶಸ್ತ್ರಸಜ್ಜಿತ ವಾಹನಗಳು 9 ವರ್ಷಗಳಲ್ಲಿ ಕ್ರಮವಾಗಿ ಸುಮಾರು 6,000 ಕಿ.ಮೀ., 9,500 ಕಿ.ಮೀ. ಮತ್ತು 15,000 ಕಿ.ಮೀ. ಕ್ರಮಿಸಿವೆ.
bengaluru
ಚುನಾವಣೆ ಗೆಲ್ಲೋಕೆ ನನ್ನ ಹೆ*ಣ ಬೀಳಿಸೋಕು ಬಿಜೆಪಿಯವ್ರು ಸಿದ್ಧರಿದ್ದಾರೆ; ಜೀವ ಬೆದರಿಕೆ ಪತ್ರ ಹಿಡಿದು ಕಿಡಿಕಾರಿದ ಪ್ರಿಯಾಂಕ್ ಖರ್ಗೆ
ಬೆಂಗಳೂರು : ಸದ್ಯ ಲೋಕಸಭಾ ಚುನಾವಣೆ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಈ ನಡುವೆ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆ*ದರಿಕೆ ಪತ್ರ ಬಂದಿದೆ. ಸ್ವತ: ಈ ಬಗ್ಗೆ ಪ್ರಿಯಾಂಕ ಖರ್ಗೆ ಅವರೇ ಹೇಳಿದ್ದಾರೆ.
ಎನ್ ಕೌಂಟರ್ ಬೆ*ದರಿಕೆ:
ಭಾರತೀಯ ಜನತಾ ಪಾರ್ಟಿಯವರು ಗಲಭೆ ಸೃಷ್ಟಿ ಮಾಡಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆ*ಣ ಬೀಳಿಸಿಯಾದರೂ ಚುನಾವಣೆ ಗೆಲ್ಲುವ ಯೋಜನೆಯಲ್ಲಿದ್ದಾರೆ. ಅಲ್ಲದೆ, ತನಗೆ ಮತ್ತೊಂದು ಜೀವ ಬೆ*ದರಿಕೆ ಪತ್ರ ಬಂದಿದೆ. ಅದರಲ್ಲಿ ತನ್ನನ್ನು ಎನ್ಕೌಂಟರ್ ಮಾಡುವುದಾಗಿ ಬೆ*ದರಿಕೆ ಹಾಕಲಾಗಿದೆ. ಫಿನ್ಲ್ಯಾಂಡ್ನಿಂದ ಪತ್ರ ಬಂದಿದೆ ಎಂದು ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತಮಗೆ ಬಂದಿರುವ ಜೀವ ಬೆದರಿಕೆ ಪತ್ರ ಓದಿದರು.
“ಪಂಚಾಮೃತದಿಂದ ಪೂಜೆ ಮಾಡಿದರೂ ನಿನ್ನ ಜಾತಿ ಬೇರೆಯಾಗುವುದಿಲ್ಲ. ಎಂತ ವೇಷ ಭೂಷಣ ಹಾಕಿದರೂ ನಿನ್ನ ಜಾತಿ ಬದಲಾಗುವುದಿಲ್ಲ. ಮಂತ್ರಿಯಾಗು, ರಾಜನಾಗೂ, ನಿನ್ನ ಸೊಕ್ಕು ಹೊಲೆಯ-ಮಾದಿಗ ಓಣಿಯಲ್ಲಿ ನಡೆಯುತ್ತೆ” ಎಂದು ಪತ್ರದಲ್ಲಿ ಅಶ್ಲೀಲ ಪದ ಬಳಸಿದ್ದಾರೆ. ಖಾಕಿಯಾದರೂ, ಖಾದಿಯಾದರೂ, ಯಾರಿಂದಲಾದರೂ ನಿನ್ನನ್ನು ಎನ್ಕೌಂ*ಟರ್ ಮಾಡುವುದು ಸತ್ಯ ಎಂದು ಪತ್ರದಲ್ಲಿ ಬರೆಯಲಾಗಿದೆ ಎಂದರು.
ಬೆದರಿಕೆ ಸಂಬಂಧ ಮಾರ್ಚ್ 13 ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದೇನೆ. ವಿಕಾಸೌಧದಲ್ಲಿರುವ ನನ್ನ ಕಚೇರಿಗೆ ಕಲಬುರಗಿಯಿಂದಲೇ ಪತ್ರ ಬಂದಿದೆ. ಹೆದರಿಸುವುದು ಅಥವಾ ಬೆದರಿಸಲು ಬಂದರೆ ಅದಕ್ಕೆಲ್ಲ ನಾವು ಹೆದರುವುದಿಲ್ಲ ಎಂದು ಅವರು ಕಿಡಿಕಾರಿದ್ದಾರೆ.
LATEST NEWS
ಹಿಂದಿಗೆ ರಿಮೇಕ್ ಆಗುತ್ತಿದೆ ಝೀ ಕನ್ನಡದ ಫೇಮಸ್ ಸೀರಿಯಲ್…! ಪ್ರೋಮೋ ರಿಲೀಸ್..!
ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಸೀತಾ ರಾಮ’ ಧಾರಾವಾಹಿ ಪ್ರೇಕ್ಷಕರ ಮನ ಗೆದ್ದಿದೆ. ಈ ಧಾರಾವಾಹಿಗೆ ಒಳ್ಳೆಯ ಟಿಆರ್ಪಿ ಸಿಗುತ್ತಿದೆ. ಗಗನ್ ಚಿನ್ನಪ್ಪ, ವೈಷ್ಣವಿ ಗೌಡ, ರೀತು ಸಿಂಗ್, ಪೂಜಾ ಲೋಕೇಶ್, ಅಶೋಕ್, ಮುಖ್ಯಮಂತ್ರಿ ಚಂದ್ರು ಮೊದಲಾದವರು ಈ ಧಾರಾವಾಹಿಯಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಈಗ ಈ ಧಾರಾವಾಹಿ ಹಿಂದಿಗೆ ರಿಮೇಕ್ ಆಗುತ್ತಿದೆ. ಇದಕ್ಕೆ ‘ಮೇ ಹೂ ಸಾತ್ ತೆರೆ’ ಎನ್ನುವ ಶೀರ್ಷಿಕೆ ಇಡಲಾಗಿದೆ.
‘ಸೀತಾ ರಾಮ’ ಧಾರಾವಾಹಿ ಮರಾಠಿಯ ‘ಮಜಿ ತುಜಿ ರೆಶಿಮಗತ್’ ಧಾರಾವಾಹಿಯ ಕಥೆಯನ್ನು ಆಧರಿಸಿದೆ. ಜೀ ಮರಾಠಿಯಲ್ಲಿ 2021 ಆಗಸ್ಟ್ ತಿಂಗಳಿಂದ 2023 ಜನವರಿವರೆಗೆ ಈ ಧಾರಾವಾಹಿ ಪ್ರಸಾರ ಕಂಡಿತ್ತು. ಈ ಧಾರಾವಾಹಿ ಒಟ್ಟೂ 458 ಎಪಿಸೋಡ್ಗಳನ್ನು ಹೊಂದಿತ್ತು. ಪ್ರಾರ್ಥನಾ ಬೆಹೆರೆ ಹಾಗೂ ಶ್ರೇಯಸ್ ತಲ್ಪಡೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಧಾರಾವಾಹಿಯನ್ನು ಕನ್ನಡಕ್ಕೆ ‘ಸೀತಾ ರಾಮ’ ಹೆಸರಲ್ಲಿ ರಿಮೇಕ್ ಮಾಡಲಾಯಿತು. ಈಗ ಧಾರಾವಾಹಿ ಹಿಂದಿಗೂ ರಿಮೇಕ್ ಆಗುತ್ತಿದೆ.
ಜೀ ಟಿವಿಯಲ್ಲಿ ‘ಮೇ ಹೂ ಸಾತ್ ತೆರೆ’ ಧಾರಾವಾಹಿ ಪ್ರಸಾರ ಕಾಣಲಿದೆ. ಸದ್ಯ ಪ್ರೋಮೋಗಳ ಮೂಲಕ ಧಾರಾವಾಹಿ ಗಮನ ಸೆಳೆಯುತ್ತಿದೆ. ಕನ್ನಡದಲ್ಲಿ ಗಗನ್ ಚಿನ್ನಪ್ಪ ಮಾಡಿರೋ ಪಾತ್ರವನ್ನು ಹಿಂದಿಯಲ್ಲಿ ಕರಣ್ ವೋಹ್ರಾ ಮಾಡುತ್ತಿದ್ದಾರೆ. ವೈಷ್ಣವಿ ಗೌಡ ಅವರ ಪಾತ್ರವನ್ನು ಉಲ್ಕಾ ಗುಪ್ತಾ ಮಾಡುತ್ತಿದ್ದಾರೆ. ಉಲ್ಕಾ ಗುಪ್ತಾ ಅವರು ‘ಜಾನ್ಸಿ ಕಿ ರಾಣಿ’ ಧಾರಾವಾಹಿ ಮೂಲಕ ಪ್ರಸಿದ್ಧರಾಗಿದ್ದಾರೆ.
ಕಥೆಯಲ್ಲಿ ಬದಲಾವಣೆ :
ಕನ್ನಡದಲ್ಲಿ ಕಥಾ ನಾಯಕ ಉದ್ಯಮಿ. ಹಿಂದಿಯಲ್ಲಿ ಕರಣ್ ಅವರು ಉದ್ಯಮಿಯ ಪಾತ್ರವನ್ನೇ ಮಾಡುತ್ತಿದ್ದಾರೆ. ಕನ್ನಡದಲ್ಲಿ ಕಥಾ ನಾಯಕಿ ಮಧ್ಯಮ ವರ್ಗದ ಹುಡುಗಿ. ಹಿಂದಿಯಲ್ಲಿ ಕಥಾ ನಾಯಕಿ ಸಿಂಗರ್ ಆಗಬೇಕು ಎಂದು ಕನಸು ಕಾಣುವ ಸಿಂಗಲ್ ಪೇರೇಂಟ್ ಆಗಿ ತೋರಿಸಲಾಗಿದೆ. ಹಿಂದಿಯಲ್ಲಿ ಕಥಾ ನಾಯಕಿಗೆ ಮಗ ಇರುವುದಾಗಿ ತೋರಿಸಲಾಗಿದೆ ಆದರೆ ಕನ್ನಡದಲ್ಲಿ ಕಥಾ ನಾಯಕಿಗೆ ಮಗಳಿದ್ದಾಳೆ. ಏಪ್ರಿಲ್ನಿಂದ ಈ ಧಾರಾವಾಹಿ ಪ್ರಸಾರ ಆಗೋ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ‘ಫುಲ್ ಹೌಸ್ ಮೀಡಿಯಾ’ ಈ ಧಾರಾವಾಹಿಯನ್ನು ನಿರ್ಮಾಣ ಮಾಡುತ್ತಿದೆ.