HomeLATEST NEWSದೇವಸ್ಥಾನಕ್ಕಾಗಿ ಸ್ವಂತ ಜಾಗ ಬಿಟ್ಟು ಕೊಟ್ಟ ಮುಸ್ಲಿಂ ಕುಟುಂಬ..!

ದೇವಸ್ಥಾನಕ್ಕಾಗಿ ಸ್ವಂತ ಜಾಗ ಬಿಟ್ಟು ಕೊಟ್ಟ ಮುಸ್ಲಿಂ ಕುಟುಂಬ..!

ಮಲ್ಲಪ್ಪುರಂ: 500 ವರ್ಷಗಳಷ್ಟು ಹಿಂದಿನ ದೇವಾಲಯಕ್ಕೆ ರಸ್ತೆ ನಿರ್ಮಾಣ ಮಾಡಲು ಇಬ್ಬರು ಮುಸ್ಲಿಮರು ಭೂಮಿ ದಾನ ನೀಡುವ ಮೂಲಕ ಧಾರ್ಮಿಕ ಸಾಮರಸ್ಯ ಮರೆದ ಘಟನೆ ಕೇರಳದ ಮಲ್ಲಪ್ಪುರಂನಲ್ಲಿ ನಡೆದಿದೆ.

ಧರ್ಮ-ಧರ್ಮಗಳ ನಡುವೆ ಕೋಮುವಾದ ಸೃಷ್ಠಿಯಾಗುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಕೂಡಿಲಂಗಡಿ ಕಡುಂಗೂತ್ ಮಹಾದೇವ ದೇವಸ್ಥಾನಕ್ಕೆ 10 ಅಡಿ ಅಗಲದ 60 ಮೀಟರ್ ರಸ್ತೆಯನ್ನು ನಿರ್ಮಿಸಲು ಅಲ್ಲಿಯ ಸ್ಥಳೀಯ ನಿವಾಸಿಗಳಾದ ಸಿ ಎಚ್ ಅಬೂಬಕರ್ ಹಾಜಿ ಮತ್ತು ಎಂ ಉಸ್ಮಾನ್ ಅವರು ನಾಲ್ಕು ಸೆಂಟ್ಸ್ ಜಾಗವನ್ನು ಪಂಚಾಯಿತಿಗೆ ಹಸ್ತಾಂತರಿಸಿದ್ದಾರೆ.

ಈ ಹಿನ್ನೆಲೆ ಮಾತನಾಡಿದ ಮಾಜಿ ಪಂಚಾಯತ್ ಸದಸ್ಯ ರಹೂಫ್ ಕೂಟ್ಟಿಲಂಗಡಿ “ಇತ್ತೀಚೆಗೆ ರಸ್ತೆ ಸಮಸ್ಯೆಯನ್ನು ಮುಂದಿಟ್ಟುಕೊಂಡು ಕೆಲವರು ಸಮಾಜದಲ್ಲಿ ಬಿರುಕು ಮೂಡಿಸಲು ಪ್ರಯತ್ನಿಸುತ್ತಿದ್ದಾರೆ.

ದೇವಸ್ಥಾನಕ್ಕೆ ಹೋಗುವ ರಸ್ತೆ ಅನೇಕ ಸಮಯದಿಂದ ಸರಿಯಿರಲಿಲ್ಲ, ಈ ಸಂಬಂಧ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷದ ಪ್ರಚಾರವನ್ನೂ ನಡೆಸಿದ್ದರು.

ಈ ಹಿನ್ನೆಲೆ ಸಾಮರಸ್ಯ ಕಾಪಾಡುವ ನಿಟ್ಟಿನಲ್ಲಿ ಮಂಕಡ ಶಾಸಕ ಮಂಜಳಂಕುಳಿ ಅಲಿ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಅಧಿಕಾರಿಗಳು, ಕಂದಾಯ ಅಧಿಕಾರಿಗಳು, ಮಲಬಾರ್ ದೇವಸ್ವಂ ಮಂಡಳಿ ಅಧಿಕಾರಿಗಳು ಹಾಗೂ ನಿವಾಸಿಗಳ ಸಭೆ ಇತ್ತೀಚೆಗೆ ನಡೆಯಿತು.

ಸಭೆಯಲ್ಲಿ, ಭೂಮಾಲೀಕ ಅಬೂಬಕರ್ ಮತ್ತು ಉಸ್ಮಾನ್ ಅವರು ತಮ್ಮ ಜಮೀನಿನ ಕೆಲವು ಭಾಗವನ್ನು ರಸ್ತೆಗಾಗಿ ಹಸ್ತಾಂತರಿಸಲು ಒಪ್ಪಿಕೊಂಡರು” ಎಂದು ರಹೂಫ್ ಹೇಳಿದರು.

ಪಂಚಾಯಿತಿ ಹಾಗೂ ಶಾಸಕರ ನಿಧಿ ಬಳಸಿ ಶೀಘ್ರವೇ ರಸ್ತೆ ನಿರ್ಮಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇವಾಲಯದ ಜೀರ್ಣೋದ್ಧಾರದ ಬಗ್ಗೆ ಮಾತನಾಡಿರುವ ದೇವಸ್ವಂ ಇನ್ಸ್‌ಪೆಕ್ಟರ್ ದಿನೇಶ್ ಸಿ ಸಿ “ದೇವಾಲಯದ ಜೀರ್ಣೋದ್ಧಾರಕ್ಕೆ 1 ಕೋಟಿ ರೂ. ವೆಚ್ಚ ಭರಿಸಲಾಗಿದೆ.

ಈ ಪ್ರದೇಶದಲ್ಲಿ ದೇವಾಲಯವು ಇನ್ನೂ ಕೆಲವು ಭೂಮಿಯನ್ನು ಹೊಂದಿದೆ. ಜಮೀನಿಗೆ ಸಂಬಂಧಿಸಿದ ವಿಷಯವನ್ನು ಮಲಪ್ಪುರಂ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ” ಎಂದು ತಿಳಿಸಿದ್ದಾರೆ.

 

 

Latest articles

ಕೆಲಸ ಇಲ್ಲದವನು ಎಂದು ಬೈಯುತ್ತಿದ್ದ ಅಜ್ಜಿಯನ್ನು ಕೊಂದು ಸುಟ್ಟು ಹಾಕಿದ ಕಿರಾತಕ ಮೊಮ್ಮಗ

ಮೈಸೂರು: ದುಡಿಯುವ ವಯಸ್ಸಿನಲ್ಲಿ ಪುಂಡ ಪೋಕರಿಯಂತೆ ಅಲೆಯುತ್ತಿದ್ದುದಕ್ಕೆ ಬೈಯುತ್ತಿದ್ದ ಅಜ್ಜಿಯನ್ನು ಸ್ವಂತ ಮೊಮ್ಮಗನೇ ಕೊಂದು ಸುಟ್ಟು ಹಾಕಿ ಶವವನ್ನು...

ಚಿತ್ರದುರ್ಗ : ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ಅಕ್ರಮ ಗೋಸಾಗಾಟ- ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ..!

ಚಿತ್ರದುರ್ಗದಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ಬದಿಯ ಗೋವುಗಳನ್ನು ಕಳ್ಳತನ ಮಾಡಿ ಟೆಂಪೋದಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ...

ಕೇರಳಕ್ಕೆಮುಂಗಾರು ಪ್ರವೇಶ- ಮಂಗಳೂರಿನಲ್ಲಿ ಸಂಜೆ ಬಿರುಸಿನ ಮಳೆ..!

ಕೇರಳದಲ್ಲಿ ಇಂದು ಮುಂಗಾರು ಪ್ರವೇಶಿಸಿದ್ದು ಈ ಹಿನ್ನೆಲೆಯಲ್ಲಿ ಕರಾವಳಿಯ ಬಂದರು ನಗರ ಮಂಗಳೂರಿನಲ್ಲಿ ಇಂದು ಸಂಜೆ ಬಿರುಸಿನ ಮಳೆಯಾಗಿದೆ.ಮಂಗಳೂರು...

ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ರನ್ನು ಭೇಟಿಯಾದ ಸ್ಪೀಕರ್ ಯು.ಟಿ.ಖಾದರ್

ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಸ್ಪೀಕರ್ ಯು.ಟಿ.ಖಾದರ್ ಅವರು ಮೊದಲ ಬಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು...