Connect with us

    ಯಕ್ಷಲೋಕದಲ್ಲಿ ಮಿಂಚು ಹರಿಸುತ್ತಿರುವ ಮುಸ್ಲಿಂ ಹುಡುಗಿ ಅರ್ಷಿಯಾ ಅಲಿಯಾಸ್ ‘ತನು ವಿಟ್ಲ’

    Published

    on

    ಯಕ್ಷಗಾನದಲ್ಲಿ ಮಹಿಷಾಸುರ ಪಾತ್ರಕ್ಕಾಗಿ ಕಾಯುತ್ತಿರುವ ಅರ್ಷಿಯಾ

    ವಿಟ್ಲ: ಯಕ್ಷಗಾನ ಇದು ಕರಾವಳಿಯ ಗಂಡು ಕಲೆ. ಆದರೆ ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳು ಕೂಡ ಯಕ್ಷಗಾನ ವೇಷ ಹಾಕಿಕೊಂಡು ರಂಗಸಜ್ಜಿಕೆಯಲ್ಲಿ ತಾಳಕ್ಕೆ ತಕ್ಕಂತೆ ಕುಣಿಯೋದು, ಭಾಗವತಿಕೆ ಮಾಡುವುದು ಸಾಮಾನ್ಯವಾಗಿ ಎಲ್ಲೆಡೆ ಕಾಣಿಸಿಕೊಳ್ಳುತ್ತಿರುವ ವಿಚಾರ.

    ಆದರೆ ಇತರ ಸಮುದಾಯದ ಹೆಣ್ಣು ಮಕ್ಕಳು ಯಕ್ಷಗಾನ ವೇಷಹಾಕಿಕೊಂಡು ವೇದಿಕೆಯಲ್ಲಿ ಕುಣಿಯುವುದು ಮಾಮೂಲಿ ವಿಚಾರವಲ್ಲ. ಹೌದು ಇದೀಗ ಯಕ್ಷಗಾನ ಪ್ರಿಯರು ಹುಬ್ಬೇರಿಸುವಂತೆ ಮಾಡಿದ್ದು, ಮುಸ್ಲಿಂ ಸಮುದಾಯದ ಹುಡುಗಿ ಅರ್ಷಿಯಾ ಅವರು.

    ಇವರು ಮೂಲತಃ ಬಂಟ್ವಾಳ ತಾಲೂಕಿನ ವಿಟ್ಲದವರು. ಇತ್ತೀಚೆಗಷ್ಟೇ ಯಕ್ಷಗಾನಕ್ಕೆ ಸೇರಿರುವ ಈ ಕಲಾವಿದೆ ಹಲವೆಡೆ ಸಾಕಷ್ಟು ಪ್ರದರ್ಶನಗಳನ್ನು ನೀಡಿದ್ದಲ್ಲದೆ, ಜನಪ್ರಿಯ ಕಲಾವಿದರೆಂದು ಕೂಡ ಹೆಸರುವಾಸಿಯಾಗಿದ್ದಾರೆ.

    ‘ತನು ವಿಟ್ಲ’ ಎಂಬ ಹೆಸರಿನಲ್ಲಿ ಗುರುತಿಸಿಕೊಳ್ಳುತ್ತಿರುವ ಅರ್ಷಿಯಾ ಮಂಗಳೂರಿನ ಪಡೀಲ್ ನಲ್ಲಿರುವ ಟೊಯೋಟಾ ಶೋ ರೂಮ್ ನಲ್ಲಿ ಉದ್ಯೋಗಿಯಾಗಿದ್ದಾರೆ.

    ತನ್ನ 10ನೇ ವಯಸ್ಸಿನಲ್ಲೇ ಯಕ್ಷಗಾನದತ್ತ ಒಲವು ತೋರಿದ್ದ ಅರ್ಷಿಯಾ, ತನ್ನೂರಿಗೆ ಬಂದಿದ್ದ ಯಕ್ಷಗಾನ ಮೇಳ, ‘ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರಸಂಗ’ದಲ್ಲಿ ಬರುವ ಮಹಿಷಾಸುರ ಪಾತ್ರ ನೋಡಿ ಮಂತ್ರಮುಗ್ದರಾಗಿದ್ದರಂತೆ.

    ಹೆಚ್ಚಾಗಿ ಅಸುರ ಪಾತ್ರವನ್ನೇ ಇಷ್ಟಪಡುವ ಅರ್ಷಿಯಾಗೆ, ಜೀವನದಲ್ಲಿ ಒಮ್ಮೆಯಾದ್ರೂ ಮಹಿಷಾಸುರನ ವೇಷ ಹಾಕಿ, ಗೆಜ್ಜೆ ಕಟ್ಟಿ ಕುಣಿಯಬೇಕೆಂಬ ಮಹದಾಸೆ ಇದೆಯಂತೆ.

    ಚಿಕ್ಕಂದಿನಿಂದಲೇ ಯಕ್ಷಗಾನ ತರಗತಿ ಎಲ್ಲಿದೆ, ಅವಕಾಶ ಎಲ್ಲಿರುತ್ತೆ ಅಂತ ಹುಡುಕಾಡುತ್ತಿದ್ದ ಅರ್ಷಿಯಾಗೆ, ಮರುಭೂಮಿಯಲ್ಲಿ ಓಯಸಿಸ್ ಸಿಕ್ಕಂತೆ, ತಾನು ನಾಲ್ಕನೇ ತರಗತಿಯಲ್ಲಿರುವಾಗ ಸ್ಕೂಲ್ ಗೆ ಹೊಸದಾಗಿ ಬಂದ ಮೇಷ್ಟ್ರು ಯಕ್ಷಗಾನ ಕಲಿಸಲಾರಂಭಿಸಿದರಂತೆ.

    ಅವರಲ್ಲಿ ಬೇಸಿಕ್ ಯಕ್ಷಗಾನ ಕಲಿತ ಅರ್ಷಿಯಾ, ತಮ್ಮ ಗ್ರಾಮೀಣ ಪ್ರದೇಶದಲ್ಲಿ ಸಣ್ಣ-ಸಣ್ಣ ಕಾರ್ಯಕ್ರಮ ನೀಡಲಾರಂಭಿಸುತ್ತಾರೆ. ಬಳಿಕ ಅದ್ಯಾಕೋ ಬೇಡವೆನಿಸಿ, ಯಕ್ಷಗಾನ ಬಿಟ್ಟು ಕಲಿಕೆಯತ್ತ ಗಮನ ನೀಡಿ ಕಾಲೇಜು ಮುಗಿಸುತ್ತಾರೆ.

    ಬಳಿಕ ಅರ್ಷಿಯಾರ ಸ್ನೇಹಿತರ ಮಾತಿನ ಮೇರೆಗೆ, ಮಂಗಳೂರಿನ ಕದಳಿ ಕೇಂದ್ರದಲ್ಲಿ ಯಕ್ಷಗಾನ ತರಗತಿ ಸೇರಿಕೊಳ್ಳುತ್ತಾರೆ.

    ಅಲ್ಲಿಂದ ಅರ್ಷಿಯಾರ ಯಕ್ಷಗಾನ ಜರ್ನಿ ಆರಂಭವಾಗುತ್ತೆ. ಉಡುಪಿಯಲ್ಲಿ ನಡೆದ ‘ಶಾಂಭವಿ ವಿಜಯ’ ಎಂಬ ಪ್ರಸಂಗದಲ್ಲಿ ಅರ್ಷಿಯಾ ನಿಶುಂಭ’ ಎಂಬ ಅಸುರನ ಪಾತ್ರ ವಹಿಸುತ್ತಾರೆ. ಅದು ಅವರ ಮೊದಲ ಯಕ್ಷಗಾನ ಪ್ರದರ್ಶನವಾಗಿರುತ್ತೆ.

    ಆ ಮೊದಲ ಪ್ರದರ್ಶನವೇ ಎಲ್ಲರ ಮೆಚ್ಚುಗೆ ಗಳಿಸಿ, ಸಾಕಷ್ಟು ಅವಕಾಶಗಳು ಹುಡುಕಿ ಬರುತ್ತವೆ. ಸದ್ಯ ಅರ್ಷಿಯಾ ಅವರ ನೃತ್ಯ, ಹಾವ-ಭಾವ, ಸಂಭಾಷಣೆಗೆ ಮನಸೋಲದವರಿಲ್ಲ.

    ಇದೀಗ ಯಕ್ಷಗಾನ ವೇಷ ಹಾಕಿ ಕುಣಿಯುವ ಜೊತೆಗೆ ಒಂದು ಹೆಜ್ಜೆ ಮುಂದಿಟ್ಟಿರುವ ಅರ್ಷಿಯಾ ಚೆಂಡೆ, ಮದ್ದಳೆ ಸೇರಿದಂತೆ ಕೆಲವಾರು ಸಂಗೀತ ವಾದ್ಯಗಳ ನುಡಿಸುವಿಕೆಯನ್ನು ಕೂಡ ಕಲಿಯುತ್ತಿದ್ದಾರಂತೆ.

    ‘ನಾನು ಈ ಮಟ್ಟಕ್ಕೇರಲು ನನ್ನ ಕುಟುಂಬಸ್ಥರು ತುಂಬಾನೇ ಸಹಾಯ ಮಾಡುತ್ತಾರೆ. ಮುಂದಿನ ದಿನಗಳಲ್ಲಿ ನನಗೆ ಮಹಿಷಾಸುರ ಪಾತ್ರ ಖಂಡಿತಾ ಸಿಗುತ್ತದೆ ಅನ್ನೋ ನಂಬಿಕೆ ಇದೆ. ಅಂತ ನಗುತ್ತಾರೆ ಅರ್ಷಿಯಾ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಕೋಟಿ ಗಾಯತ್ರಿ ಯಾಗ: ಸೆ. 29ರಂದು ಚಿತ್ರಾಪುರ ಮಠದಲ್ಲಿ ಸಂಕಲ್ಪ ದಿನ

    Published

    on

    ಮಂಗಳೂರು : ಅಖಿಲ ಭಾರತ ಬ್ರಾಹ್ಮಣ ಮಹಾಸಭಾ ವತಿಯಿಂದ ಅಕ್ಟೋಬರ್ 26 ಮತ್ತು 27ರಂದು ನಡೆಯಲಿರುವ ಕೋಟಿ ಗಾಯತ್ರಿ ಯಾಗದ ಪೂರ್ವಭಾವಿಯಾಗಿ ಸೆ. 29ರ ಭಾನುವಾರ ಮುಂಜಾನೆ ಸಂಕಲ್ಪ ದಿನವನ್ನು ಮಂಗಳೂರಿನ ಚಿತ್ರಾಪುರ ಮಠದಲ್ಲಿ ನಡೆಲು ಉದ್ದೇಶಿಸಲಾಗಿದೆ ಎಂದು ಪ್ರಧಾನ ಸಂಚಾಲಕ ಶ್ರೀಧರ ಹೊಳ್ಳ ಹೇಳಿದರು. ಚಿತ್ರಾಪುರ ಮಠದಲ್ಲಿ ನಡೆದ ಬ್ರಾಹ್ಮಣ ಸಮುದಾಯದ ಸಮಸ್ತರ ಸಭೆಯಲ್ಲಿ ಕೋಟಿ ಗಾಯತ್ರಿ ಯಾಗದ ಯಶಸ್ವಿಗಾಗಿ ನಾನಾ ಸಮಿತಿಗಳನ್ನು ರಚನೆಯ ಬಗ್ಗೆ ಚರ್ಚಿಸಿ ನಿರ್ಣಯಿದ ಬಳಿಕ ನಡೆದ ಸಭೆಯಲ್ಲಿ ಮಾತನಾಡಿದರು.

    ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಬ್ರಾಹ್ಮಣ ಸಮುದಾಯವು ಈಗಾಗಲೇ ಗಾಯತ್ರಿ ಯಜ್ಞದ ಪೂರ್ವಭಾವಿಯಾಗಿ ಜಪದ ಸಂಕಲ್ಪ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಹೊರಭಾಗದಲ್ಲಿರುವ ಜಿಲ್ಲೆಯ ಬ್ರಾಹ್ಮಣರು ಕೂಡಾ ಹೆಸರು ನೋಂದಾಯಿಸಿಕೊಳ್ಳುತ್ತಿದ್ದಾರೆ. ಇನ್ನೂ ಹೆಚ್ಚಿನ ಮಂದಿ ಹೆಸರು ನೋಂದಾಯಿಸುವ ನಿಟ್ಟಿನಲ್ಲಿ ಪ್ರೇರೇಪಿಸುವ ಕೆಲಸವಾಗಬೇಕು ಎಂದರು. ಬ್ರಾಹ್ಮಣ ಸಮಾಜದ ಎಲ್ಲಾ ಬಾಂಧವರು ಒಂದೇ ಸೂರಿನಡಿ ಸೇರಿಸಿ, ಹೊರ ಜಗತ್ತಿಗೆ ಬ್ರಾಹ್ಮಣ ಎಂಬ ಸಂದೇಶ ಮುಟ್ಟಿಸುವಂತಾಗಬೇಕು. ಇದೊಂದು ವಿಶೇಷ ಕಾರ್ಯಕ್ರಮ ಈ ಕಾರ್ಯಕ್ರಮವು ಗಾಯತ್ರಿ ಸಂಗಮವಾಗಿದೆ. ’ಸಾಮರಸ್ಯದಿ ಜಗವ ಬೆಳಗುವ ಬ್ರಹ್ಮ ತೇಜದ ಬೆಳಕಲಿ’ ಶೀರ್ಷಿಕೆಯಡಿ ಜರಗಲಿದೆ. ಆದುದರಿಂದ ರಚನೆಯಾದ ಸಮಿತಿಯ ಸದಸ್ಯರು ಎಲ್ಲರೂ ಒಂದಾಗಿ ತಮ್ಮ ಮನೆ ಕಾರ್ಯಕ್ರಮ ಎಂಬ ರೀತಿಯಲ್ಲಿ ದುಡಿಯಬೇಕು. ಆ ಮೂಲಕ ಸಮಾಜಕ್ಕೆ ನಮ್ಮ ಒಗ್ಗಟ್ಟನ್ನು ತೋರಿಸಿಕೊಡಬೇಕು ಎಂದು ಸಮಿತಿಯ ಕಾರ್ಯಾಧ್ಯಕ್ಷ ನ್ಯಾಯವಾದಿ ಶ್ರೀ ಮಹೇಶ್ ಕಜೆ ಹೇಳಿದರು.

    ನಾನಾ ಸಮಿತಿಗಳ ಜವಾಬ್ದಾರಿ, ಹೋಮದ ರೂಪು ರೇಶೆ, ಹೋಮದ ಉದ್ದೇಶ, ಕಾರ್ಯಯೋಜನೆಯ ಕುರಿತು ಮಾಹಿತಿ ನೀಡಿದ ವಿದ್ವಾನ್ ಕಶೆಕೋಡಿ ಸೂರ್ಯನಾರಾಯಣ ಭಟ್ ಸಾಂದರ್ಭಿಕವಾಗಿ ಮಾತನಾಡಿದರು. ಅ. 26ರಂದು ಮಹಿಳೆಯರಿಗಾಗಿ ಮಾತೃ ಸಂಗಮ ಕಾರ್ಯಕ್ರಮ ಆಯೋಜಿಸಲಾಗಿದೆ. ಎಲ್ಲ ಮಾತೆಯರು ಈ ಸಂಗಮದಲ್ಲಿ ಭಾಗವಹಿಸಬೇಕು. ಮುಂದಿನ ದಿನಗಳಲ್ಲಿ ಈ ವೇದಿಕೆಯೇ ಇಡೀ ಸಮಾಜದ ಮುಖವಾಗಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು. ಈ ಹಿಂದೆ ಗಾಯತ್ರಿ ಯಾಗ ಮಾಡಿ ಅನುಭವ ಇರುವ ವಿದ್ವಾನ್ ಬಂದಗದ್ದೆ ನಾಗರಾಜ್ ಮಾತನಾಡಿ, ಗಾಯತ್ರಿ ಮಂತ್ರ ಅನುಷ್ಠಾನ ಮಾಡುವುದರಿಂದ ಸಿಗುವ ಲಾಭ, ಮಾನಸಿಕ ವಿಕಸನದ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಂಡರು.

    ವಿದ್ವಾನ್ ಕಟೀಲಿನ ಶ್ರೀಹರಿ ನಾರಾಯಣದಾಸ ಆಸ್ರಣ್ಣ ಮಾತನಾಡಿ, ಎಲ್ಲಾ ವಿಪ್ರ ಸಮಾಜ ಬಾಂಧವರು ಒಟ್ಟು ಸೇರಿ ಈ ಯಜ್ಞ ಕಾರ್ಯದಲ್ಲಿ ಭಾಗಿಗಳಾಗೋಣ, ಪ್ರತಿಯೊಬ್ಬ ಬ್ರಾಹ್ಮಣನು ಸಹ ಕುಟುಂಬ ಸಹಿತ ಪಾಲ್ಗೊಳ್ಳಬೇಕು ಹಾಗೂ ಸೆ.೨೯ರ ಸಂಕಲ್ಪ ಕಾರ್ಯದಲ್ಲಿ ಕನಿಷ್ಠ ೫೦೦ ಜನ ಬಾಂಧವರು ಸೇರಬೇಕು ಎಂದರು. ಬ್ರಾಹ್ಮಣ ಮಹಾಸಭಾ ಸುರತ್ಕಲ್‌ನ ಗೌರವಾಧ್ಯಕ್ಷ ಪಿ. ಪುರುಷೋತ್ತಮ ರಾವ್ ಇದು ನಮ್ಮೆಲ್ಲರ ಕಾರ್ಯಕ್ರಮ ಪ್ರತಿಯೊಬ್ಬರು ತಾನು ಮನ ಧನಗಳಿಂದ ಸಾಹಕರಿಸೋಣ ಎಂದರು.

    ವಿವಿಧ ಬ್ರಾಹ್ಮಣ ಸಮಾಜದ ಪ್ರಮುಖರಾದ ಕರ್ಗಿ ಶ್ರೀನಿವಾಸ ಅಚಾರ್, ಶ್ರೀನಿವಾಸ್ ಚಿತ್ರಾಪುರ, ಸುರೇಶ್ ರಾವ್ ಚಿತ್ರಾಪುರ, ಶ್ರೀಕರ ದಾಮ್ಲೆ, ಎಂ.ಟಿ. ಭಟ್, ಉದಯ ಕುಮಾರ್, ಉದಯ ಕುಮಾರ್ ಸುರತ್ಕಲ್, ಕಾತ್ಯಾಯಿನಿ ರಾವ್, ಶೋಭಾ ಚಿತ್ರಾಪುರ, ಸಾವಿತ್ರಿ ಹೆಚ್ ಭಟ್, ಹೊಸಬೆಟ್ಟು, ರಮಾ.ವಿ ರಾವ್, ಯಮುನಾ ಪಿ ರಾವ್, ಎಂ ಸದಾಶಿವ ಕುಳಾಯಿ, ಪ್ರಕಾಶ್ ಕೋಟೆಕಾರ್, ಜಯಪ್ರಕಾಶ್ ಹೆಬ್ಬಾರ್, ಜಯರಾಮ್ ಭಟ್, ಸುಬ್ರಹ್ಮಣ್ಯ ವಿ ಭಟ್, ಗೋಪಾಲಕೃಷ್ಣ ಮಯ್ಯ, ಜ್ಯೋತಿಷಿ ರಂಗ ಐತಾಳ್ ಕದ್ರಿ, ವಿದ್ವಾನ್ ಸತ್ಯಕೃಷ್ಣ ಭಟ್ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.

    Continue Reading

    LATEST NEWS

    ಪೋಕ್ಸೋ ಪ್ರಕರಣ: ಖ್ಯಾತ ಜ್ಯೋತಿಷಿ ಬಂಧನ

    Published

    on

    ಸುಳ್ಯ: ತಾಲೂಕಿನ ಬೆಳ್ಳಾರೆಯ ಪೊಲೀಸರು ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಜ್ಯೋತಿಷಿಯೊಬ್ಬನನ್ನು ಬಂಧಿಸಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಯಲ್ಲಿ ಧಾರ್ಮಿಕ ಉಪನ್ಯಾಸದ ಜೊತೆಗೆ ಜ್ಯೋತಿಷ್ಯ ಶಾಸ್ತ್ರದ ಮೂಲಕ ಫೇಮಸ್ ಆಗಿದ್ದ ನರಸಿಂಹ ಪ್ರಸಾದ್ ಪಾಂಗಣೇಯ ಬಂಧಿತ ಆರೋಪಿ.

    ಕಾಣಿಯೂರಿನ ಬೆಳಂದೂರು ನಿವಾಸಿಯಾಗಿರುವ ಈತನ ಮನೆಗೆ ಮುಂಜಾನೆಯ ವೇಳೆ ದಾಳಿ ಮಾಡಿದ ಪೊಲೀಸರು ಪ್ರಸಾದ್ ಪಾಂಗಣೇಯನನ್ನು ಬಂಧಿಸಿದ್ದಾರೆ. ಮಂಗಳೂರಿನಲ್ಲಿ ಬಾಲಕಿಯೊಬ್ಬಳ ಕೌನ್ಸಿಲಿಂಗ್ ವೇಳೆ ಸಿಕ್ಕ ಮಾಹಿತಿಯ ಆಧಾರದಲ್ಲಿ ಈ ಬಂಧನ ಆಗಿದೆ ಎಂಬ ಮಾಹಿತಿ ದೊರೆತಿದೆ.

    Continue Reading

    LATEST NEWS

    ಗೌರವಧನ ಸರಿಯಾಗಿ ನೀಡದೇ ಇದ್ದಲ್ಲಿ ಕೆಲಸ ಸ್ಥಗಿತ: ಅಂಗನವಾಡಿ ಕಾರ್ಯಕರ್ತೆಯರಿಂದ ಎಚ್ಚರಿಕೆ

    Published

    on

    ಉಡುಪಿ: ವಿವಿಧ ಬೇಡಿಕೆಗಳನ್ನು ಈಡೇರಿಸಿ ಅಂತ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆ ನಡೆಸಿದ್ದಾರೆ.

    ಉಡುಪಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತರೆಯರು ಹಾಗೂ ಸಹಾಯಕಿಯರು ಈ ಪ್ರತಿಭಟನೆ ನಡೆಸಿದ್ದಾರೆ. ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ.

    ಪ್ರಮುಖವಾಗಿ ಗೌರವಧನವನ್ನು ಪ್ರತಿ ತಿಂಗಳ ಸರಿಯಾಗಿ ಪಾವತಿ ಮಾಡಬೇಕು ಹಾಗೂ ಮೊಟ್ಟೆ ವಿತರಣೆಗೆ ತಗಲುವ ಖರ್ಚನ್ನು ಮುಂಚಿತವಾಗಿ ನೀಡಬೇಕು ಮತ್ತು ಮಾರುಕಟ್ಟೆ ದರದಲ್ಲಿ ಏರಿಳಿತಕ್ಕೆ ತಕ್ಕಂತೆ ಮೊಟ್ಟದರವನ್ನು ನಿಗದಿ ಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

    ನಮ್ಮನ್ನು ದುಡಿಸಿಕೊಳ್ಳೂತ್ತಿರುವ ಸರ್ಕಾರ ನಮಗೆ ಸಾಮಾಜಿಕ ಮತ್ತು ಆರ್ಥಿಕ ಭದ್ರತೆಯನ್ನು ನೀಡದೆ ಶೋಷಣೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಈ ವೇಳೆ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್ ಸರ್ಕಾರ ಸೂಕ್ತವಾಗಿ ಸ್ಪಂಧಿಸದೇ ಇದ್ದಲ್ಲಿ ಕೆಲಸ ಸ್ಥಗಿತಗೊಳಿಸುವುದಾಗಿ ಎಚ್ಚರಿಸಿದ್ದಾರೆ.

    Continue Reading

    LATEST NEWS

    Trending