Connect with us

    BANTWAL

    ವಿಟ್ಲ ಪುಣಚದಲ್ಲಿ ತಲೆ ಎತ್ತಿದ ಮುಸ್ಲಿಂ ವ್ಯಕ್ತಿಯ ಅಕ್ರಮ ಗೋ ಫಾರ್ಮ್ -ಪಿಡಿಓ – ಅಧಿಕಾರಿಗಳ ವಿರುದ್ಧ ಲೋಕಯುಕ್ತಕ್ಕೆದೂರು..!

    Published

    on

    ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಸಮೀಪದ ಪುಣಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಡಂಚಡ್ಕ ಬೈರಿಕಟ್ಟೆ ಎಂಬಲ್ಲಿ ಗೋ ಫಾರ್ಮ್ ಎಂಬ ನೆಪದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು ಅಕ್ರಮ ಕಟ್ಟಡವೊಂದು ನಿರ್ಮಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

    ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಸಮೀಪದ ಪುಣಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಡಂಚಡ್ಕ ಬೈರಿಕಟ್ಟೆ ಎಂಬಲ್ಲಿ ಗೋ ಫಾರ್ಮ್ ಎಂಬ ನೆಪದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು ಅಕ್ರಮ ಕಟ್ಟಡವೊಂದು ನಿರ್ಮಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

    ಸ್ಥಳೀಯರ ವ್ಯಾಪಕ ವಿರೋಧದ ನಡುವೆಯೂ ಕಟ್ಟಡದ ಶೇಕಡಾ 70 ರಷ್ಟು ಕೆಲಸ ಪೂರ್ತಿಗೊಂಡಿದೆ.

    ಇದು ಕೇರಳ ಗಡಿಗೆ ಹೊಂದಿಕೊಂಡು ಇದ್ದುದರಿಂದ ಇಲ್ಲಿನ ಪರವಾನಿಗೆಯ ಮೂಲಕ ಕೇರಳ ಕಸಾಯಿಖಾನೆಗೆ ಅಕ್ರಮ ಗೋ ಸಾಗಾಟ ನಡೆಸುವ ಸಾಧ್ಯತೆ ಹೆಚ್ಚಿದ್ದು, ಇದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿ ಪುಣಚ ಗ್ರಾಮ ಪಂಚಾಯತ್ ಹಾಗೂ ಪಿ ಡಿ ಓ ಗೆ ದೂರು ನೀಡಿದರೂ ಸಹ ಯಾವುದೇ ಕ್ರಮ ಕೈಗೊಳ್ಳದೆ ಇರುವುದು ಸ್ಥಳೀಯರನ್ನು ಮತ್ತಷ್ಟು ಕೆರಳಿಸಿದೆ.

    ಸದ್ಯ ಪಿಡಿಓ ರವಿ ವಿರುದ್ಧ ಹಾಗೂ ಇದಕ್ಕೆ ಸಹಕರಿಸಿದ ಅಧಿಕಾರಿಗಳ ವಿರುದ್ಧ ಲೋಕಾಯುಕ್ತರಿಗೆ ದೂರು ನೀಡಲಾಗಿದೆ.

    ಕಟ್ಟಡದ ಎಲ್ಲಾ ಕೆಲಸ ಪೂರ್ತಿಗೊಂಡ ನಂತರ ಪುಣಚ ಗ್ರಾಮ ಪಂಚಾಯತ್ ವಾಣಿಜ್ಯ ಕಟ್ಟಡದ ಪರವಾನಿಗೆ ನೀಡಿದೆ.

    ಅಲ್ಲದೆ ಕಟ್ಟಡದ ಕಂಪೌಂಡ್ ಮತ್ತು ರಸ್ತೆಗೆ ಮಧ್ಯೆ ಕೇವಲ 2 ಫೀಟ್ ಜಾಗ ಬಿಟ್ಟಿದ್ದಾರೆ.

    ಹೈನುಗಾರಿಕೆ ಹೆಸರಲ್ಲಿ ವಾಣಿಜ್ಯ ಉದ್ದೇಶಕ್ಕಾಗಿ ಅಕ್ರಮವಾಗಿ ನಿರ್ಮಿಸುತ್ತಿರುವ ಈ ಕಟ್ಟಡದಲ್ಲಿ ಗ್ರೀನ್ ಗ್ಯಾಸ್ ಉತ್ಪಾದನೆಯಾಗುವ ಸಂಭವವು ಇದೆ.

    9 /11 ರ ಪರವಾನಿಗೆ ಪಡೆಯುವುದಕ್ಕೆ ಮುಂಚೆನೇ ಕಟ್ಟಡ ನಿರ್ಮಾಣ ಪೂರ್ತಿಗೊಂಡಿದ್ದು, ಇದರಲ್ಲಿ ಪಂಚಾಯತ್ ಅಧಿಕಾರಿಗಳು ಶಾಮಿಲಾಗಿರುವ ಸಾಧ್ಯತೆ ಇದ್ದು ಇದರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಲೋಕಾಯುಕ್ತರನ್ನು ಆಗ್ರಹಿಸಿದ್ದಾರೆ.

    BANTWAL

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃ*ತ್ಯು

    Published

    on

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃ*ತಪಟ್ಟಿದ್ದಾರೆ.

    ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಮೃ*ತಪಟ್ಟವರು.

    ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃ*ತಪಟ್ಟಿದ್ದಾರೆ

    Continue Reading

    BANTWAL

    ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ

    Published

    on

    ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.

    ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

    ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.

    ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.

    Continue Reading

    BANTWAL

    ವಿಟ್ಲ: ಯುವಕ ನೇಣು ಬಿಗಿದು ಆತ್ಮಹ*ತ್ಯೆ..!

    Published

    on

    ವಿಟ್ಲ: ವಿಟ್ಲ ಬುಡೋಳಿ ಮಡಲ ನಿವಾಸಿ ಸುಶಾಂತ್(25 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ರವರು ಇತ್ತೀಚೆಗೆ ಮಿನಿ ಬಸ್‌ ಖರೀದಿಸಿದ್ದು ಬಸ್ಸನ್ನು ತಾನೇ ಚಾಲನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಈತ ಸಂಘಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಗಳನ್ನು ಮಾಡಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

    ಸುರತ್ಕಲ್: ಖಾಸಗಿ ಬಸ್ ಢಿ*ಕ್ಕಿ; ದ್ವಿಚಕ್ರ ಸವಾರನಿಗೆ ಗಾ*ಯ

    Continue Reading

    LATEST NEWS

    Trending