DAKSHINA KANNADA
ಮುತಾಲಿಕ್ ಐಸಿಸ್ ಮುಖ್ಯಸ್ಥನ ಹುದ್ದೆಗೆ ಅರ್ಜಿ ಹಾಕಿ ಬರಲಿ: ಕೆ.ಅಶ್ರಫ್
ಮಂಗಳೂರು: ‘ಆರ್ಯ ಸಂತತಿಯ ಮುತಾಲಿಕ್, ಈಗಾಗಲೇ ಕೃಪಾ ಅಣತಿಯಂತೆ, ಲವ್ ಜಿಹಾದ್, ಹಲಾಲ್, ಆಝಾನ್ ಮೂಲಕ, ಹಿಂದುತ್ವದ ದ್ವೇಷ ಹೇಳಿಕೆಯ ಮೂಲಕ ಈ ರಾಜ್ಯದ ಜನತೆಯನ್ನು ಗಲಭೆಯಲ್ಲಿ ಹುಟ್ಟು ಹಾಕಿ, ಹಿಂದುತ್ವದ ಅಮಲಿನಲ್ಲಿ ಇರಿಸಿ,ಈಗ ಆಝಾನ್ ನಿಲ್ಲಿಸದಿದ್ದರೆ ಸರಕಾರ ಅಧಿಕಾರ ನೀಡಲಿ ಗುಂಡು ಹೊಡೆದು ಸಾಯಿಸುತ್ತೇನೆ ಎಂಬಿತ್ಯಾದಿಯಾಗಿ ಬಹಿರಂಗ ಹತ್ಯಾ ಕರೆ ನೀಡುವುದು ಎಷ್ಟು ಸರಿ’ ಎಂದು ದ.ಕ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಕೆ.ಅಶ್ರಫ್ ಹೇಳಿದರು.
ಸಮಾಜದಲ್ಲಿ ಶಾಂತಿ ಕದಡಿಸುವ ವಿಚಾರವಾಗಿ ಪ್ರಮೋದ್ ಮುತಾಲಿಕ್ನ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಇವರು ‘ಮುತಾಲಿಕ್ ಕರ್ನಾಟಕದಲ್ಲಿ, ಆಡಳಿತ, ಪೊಲೀಸು, ಕಾನೂನು ಅಸ್ತಿತ್ವದಲ್ಲಿಯೇ ಇಲ್ಲದ ರೀತಿಯಲ್ಲಿ ಭಾಸವಾಗುವ, ಘನ ಘೋರ ಅಪರಾಧ ಕೃತ್ಯ ಎಸಗಿದ್ದಾನೆ ಮತ್ತು ಬಹಿರಂಗ ಜನಾಂಗೀಯ ಹತ್ಯಾ ಹೇಳಿಕೆ ನೀಡಿದ್ದಾನೆ’ ಎಂದು ಕಿಡಿಕಾರಿದರು.
ಈ ರಾಜ್ಯದಲ್ಲಿ ಪೊಲೀಸು ವ್ಯವಸ್ಥೆ ಇದೆಯೇ ಇಲ್ಲವೇ ಎಂದು ಖಾಕಿ ಬಣ್ಣದ ವಸ್ತ್ರ ಧರಿಸಿದ ಕೆಲವು ವ್ಯಕ್ತಿಗಳಾದರೂ ಜನರಿಗೆ ಮಾಹಿತಿ ನೀಡುವುದು ಒಳಿತು.
ಮುತಾಲಿಕ್ ಬಹುಷಮುಕ್ತವಾಗಿ ರಂಗಕ್ಕೆ ಇಳಿದಂತೆ ಭಾಸವಾಗುತ್ತದೆ. ಈ ಹಿಂದಿನ ಕೇಂದ್ರ ಸರಕಾರಗಳು ಪೊಲೀಸು ಮತ್ತು ಮಿಲಿಟರಿ ಯೇತರ ಶಸ್ತ್ರ ಸಂಘಟನೆಗಳನ್ನು ಉಗ್ರ ಸಂಘಟನೆಗಳು ಎಂದು ಪಟ್ಟಿ ಮಾಡಿದ್ದವು.
ಮುತಾಲಿಕ್ ನಂತಹ ನೀಚನು ಮುಕ್ತವಾಗಿ ಪೊಲೀಸು,ಆಡಳಿತ,ಕಾನೂನು ಸಂಸ್ಥೆಯ ಮಧ್ಯದಲ್ಲಿಯೇ ನಿಂತು ತಾನು ಈ ದೇಶದ ಜನರಿಗೆ ಗುಂಡು ಹೊಡೆದು ಸಾಯಿಸುತ್ತೇನೆ ಎಂದು ಐಸಿಸ್ ನಂತಹ ಸಂಘಟನೆಗಳ ಕರೆಯನ್ನು ಮೀರಿಸುವ ಹೇಳಿಕೆ ನೀಡಿದ್ದಾನೆ.
ಈ ರಾಜ್ಯದ ಪೊಲೀಸು, ಕಾನೂನು ಮತ್ತು ಆಡಳಿತಕ್ಕೆ ಮುತಾಲಿಕ್ ಎಂಬ ಆರ್ಯ, ಸವರ್ಣೀಯ ಉಗ್ರನನ್ನು ನಿಯಂತ್ರಿಸಲು ಅಗತ್ಯವಿರುವ ಸಾಕ್ಷ್ಯಾಧಾರಗಳು ಬಹುಶ ಕಳೆದ ಮೂರು ದಿನಗಳಿಂದ ಲಭ್ಯವಾಗಲಿಲ್ಲ ಎಂದು ಕಾಣಿಸುತ್ತದೆ.
ಜನರ ತೆರಿಗೆ ಹಣದಿಂದ ಬದುಕುವ ಕರ್ನಾಟಕ ರಾಜ್ಯ ಆಡಳಿತ,ಪೊಲೀಸು ಮತ್ತು ಕಾನೂನು ಒಂದು ವೇಳೆ ಈ ಆರ್ಯ, ಸವರ್ಣೀಯ,ವೈದಿಕ ಮುತಾಲಿಕ್ನನ್ನು ನಿಯಂತ್ರಿಸಲು ಪರ್ಯಾಯ ವ್ಯವಸ್ಥೆ ಮಾಡಿ ಕೊಳ್ಳುವ ಸಂದರ್ಭವನ್ನು ಕೈ ಚೆಲ್ಲಿದರೆ, ಮುತಾಲಿಕ್ನಿಗೆ ಮಾಹಿತಿಯಾದರೂ ನೀಡಿ, ಮುತಾಲಿಕ್ನಿಂದ ಐಸಿಸ್ ಮುಖ್ಯಸ್ಥನ ಹುದ್ದೆಗೆ ಅರ್ಜಿ ಸಲ್ಲಿಸಿ ಬರಲಿ.
ಈ ದೇಶದ, ನಾಡಿನ ಮುಸ್ಲಿಮರು, ದಲಿತರು, ಪರಿಶಿಷ್ಟರು, ಅಂದು ಬ್ರಿಟಿಷರನ್ನು ಈ ದೇಶದಿಂದ ಓಡಿಸಿದಂತೆ, ಟಿಪ್ಪು,ರಾಣಿ ಅಬ್ಬಕ್ಕನ ಸಂತತಿಯಾದ ನಾವು ಈ ದೇಶದ್ರೋಹಿ ಆರ್ಯ, ಸವರ್ಣೀಯ, ವೈದಿಕ ಮುತಾಲಿಕ್ನನ್ನು ಅವನ ಮೂಲ ಸ್ಥಾನವಾದ ಮಧ್ಯ ಏಶಿಯಾಕೆ ಓಡಿಸಲಿದ್ದೇವೆ.
ಈ ದೇಶದ ಬಹುಸಂಖ್ಯಾತ ಜನರಾದ, ಮುಸ್ಲಿಮರು, ಕ್ರೈಸ್ತರು, ಹಿಂದುಳಿದ ವರ್ಗ, ಪರಿಶಿಷ್ಟರು, ಬುಡಕಟ್ಟು ಜನಾಂಗದ ಈ ನಾಡಿನಲ್ಲಿ ಸಾಮರಸ್ಯದ ಜೀವನ ನಡೆಸುತ್ತಿರುವಾಗ, ತಾಕತ್ತಿದ್ದರೆ ಐಸಿಸ್ ಮುಖ್ಯಸ್ಥನ ಪಟ್ಟ ಹಿಡಿದುಕೊಂಡು ಬರಲಿ, ತಕ್ಕ ಉತ್ತರ ಸಿದ್ದವಾಗಿಯೆ ಇದೆ, ಯಾಕೆ ನೀಡಿಯೇ ಬಿಡಬಾರದು, ಮುತಾಲಿಕ್ನಿಗೆ ಮುಲ್ಲಾ ದೀಕ್ಷೆ ನೀಡಲಿದ್ದೇವೆ.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
DAKSHINA KANNADA
ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು
ಮಂಗಳೂರು: ಗುಜರಾತ್ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.
ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್ ಗಾರ್ಡ್ ತಂಡ ಹೆಲಿಕಾಪ್ಟರ್ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.
ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್ ಗಾರ್ಡ್ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್ ಗಾರ್ಡ್ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.
DAKSHINA KANNADA
ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!
ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.
ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.
ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.
ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.
ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.
- LATEST NEWS4 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ