LATEST NEWS
ಈ ‘ನಾಟಿ’ ವೈದ್ಯನ ಕೊಲೆ ಪಕ್ಕಾ ಫಿಲ್ಮಿ ಸ್ಟೈಲ್: ಹಿಂದಿದೆ ರೋಚಕ ಕಹಾನಿ..!
ಮೈಸೂರು: ಪೈಲ್ಸ್ ರೋಗಕ್ಕೆ ನಾಟಿ ಮದ್ದು ಮಾಡುತ್ತಿದ್ದ ವೈದ್ಯನನ್ನು ಫಿಲ್ಮಿ ಸ್ಟೈಲ್ನಲ್ಲಿ ಕಿಡ್ನಾಪ್ ಮಾಡಿ ಒಂದು ವರ್ಷ ಚಿತ್ರಹಿಂಸೆ ನೀಡಿ ದೇಹವನ್ನು ತುಂಡು ತುಂಡು ಮಾಡಿ ನದಿಯೊಂದಕ್ಕೆ
ಬಿಸಾಡಿದ ಪ್ರಕರಣ ಮೂರು ವರ್ಷದ ನಂತರ ಕಳ್ಳತನದ ತನಿಖೆ ನಡೆಸುವ ವೇಳೆ ಬೆಳಕಿಗೆ ಬಂದಿದೆ. ಕೊಂದ ಆರೋಪಿಗಳ ಮಧ್ಯೆ ಗಲಾಟೆ ನಡೆದ ಕಾರಣ ಈ ಕೃತ್ಯ ಬೆಳಕಿಗೆ ಬಂದಿದೆ.
ಶಾಬಾ ಷರೀಫ್ (60) ಮೃತ ವ್ಯಕ್ತಿ.
ಪೈಲ್ಸ್ (ಮೂಲವ್ಯಾಧಿ) ರೋಗಕ್ಕೆ ನಾಟಿ ಚಿಕಿತ್ಸೆ ನೀಡುತ್ತಿದ್ದ ಷರೀಫ್ ಎಂಬುವವರನ್ನು 2019ರ ಆಗಸ್ಟ್ನಲ್ಲಿ ಕೇರಳದಿಂದ ಬಂದ ಯುವಕರಿಬ್ಬರು ‘ನಮ್ಮ ಮನೆಯಲ್ಲಿ ಒಬ್ಬರಿಗೆ ಪೈಲ್ಸ್ ಕಾಯಿಲೆ ಇದೆ ಎಂದು ಕೇಳಿ’ ವೈದ್ಯರನ್ನು ಬೈಕ್ನಲ್ಲಿ ಕರೆದುಕೊಂಡು ಹೋಗುತ್ತಾರೆ.
ಕೇರಳ ಗಡಿ ತಲುಪಿದ ನಂತರ ಕಾರಿನಲ್ಲಿ ಅವರನ್ನು ಅಪಹರಿಸಿ ಅಲ್ಲಿಂದ ನೀಲಂಬೂರಿಗೆ ಕರೆದೊಯ್ದು ಬಳಿಕ ಷರೀಫ್ ಅವರನ್ನು ಶೈಬೀನ್ ಅಶ್ರಫ್ ಎಂಬಾತನ ಮನೆಗೆ ಕರೆತಂದರು.
ಅಲ್ಲಿ ತನಗೆ ‘ಪೈಲ್ಸ್ ಚಿಕಿತ್ಸೆಯ ವಿಧಾನ’ ಹೇಳಿ ಕೊಡುವಂತೆ ಅಶ್ರಫ್ ಒತ್ತಡ ಹೇರುತ್ತಾನೆ.
ಆದರೆ ಪೂರ್ವಜರಿಂದ ಕಲಿತ ವಿದ್ಯೆಯನ್ನು ಹೇಳಿಕೊಡುವುದಿಲ್ಲ ಎಂದು ಶಾಬಾ ಷರೀಫ್ ನಿರಾಕರಿಸುತ್ತಾರೆ. ಇದರಿಂದ ಕೋಪಗೊಂಡ ಅಶ್ರಫ್,
ಅವರನ್ನು ತನ್ನ ಮನೆಯ ಎರಡನೇ ಮಹಡಿಯಲ್ಲಿರುವ ಕೊಠಡಿಯೊಂದರಲ್ಲಿ ಸರಪಳಿ ಬಿಗಿದು ಕೂಡಿ ಹಾಕುತ್ತಾನೆ. ಸತತ ಒಂದು ವರ್ಷ ಅವರಿಗೆ ದೈಹಿಕವಾಗಿ ಚಿತ್ರಹಿಂಸೆ ನೀಡುತ್ತಾರೆ.
ಆರೋಪಿ
ಹಿಂಸೆ ತಾಳಲಾರದೆ ಶಾಬಾ ಷರೀಫ್ 2020ರ ಅಕ್ಟೋಬರ್ನಲ್ಲಿ ಸಾವನ್ನಪ್ಪುತ್ತಾರೆ. ಏಳು ಮಂದಿ ಸೇರಿ ಶಾಬಾ ಷರೀಫ್ ದೇಹವನ್ನು ಮಚ್ಚಿನಿಂದ ತುಂಡು, ತುಂಡು ಮಾಡಿ ಚೀಲದಲ್ಲಿ ತುಂಬಿಕೊಂಡು ಕೇರಳದ ನದಿಯೊಂದರಲ್ಲಿ ಬಿಸಾಡುತ್ತಾರೆ.
ಈ ಕೃತ್ಯಕ್ಕೆ ಅಶ್ರಫ್ ತನ್ನ ಸಹಚರರಿಗೆ ಕೊಡಬೇಕಾದ ಹಣವನ್ನು ನೀಡಿರಲಿಲ್ಲ. ಹೀಗಾಗಿ, ಕೊಲೆಗೈದ ಆರೋಪಿಗಳು ಏ. 24 ರಂದು ಆಶ್ರಫ್ ಮನೆಗೆ ನುಗ್ಗಿ 7 ಲಕ್ಷ ರೂ. ನಗದು ಹಾಗೂ ಚಿನ್ನಾಭರಣವನ್ನು ದರೋಡೆ ಮಾಡಿದ್ದಾರೆ.
ಈ ಸಂಬಂಧ ಅಶ್ರಫ್ ದೂರು ದಾಖಲಿಸಿದ್ದಾರೆ. ಇದರ ತನಿಖೆಯ ವೇಳೆ ಮೂವರನ್ನು ವಶಕ್ಕೆ ಪಡೆದಿದ್ದರು. ಆಗ ಆರೋಪಿಗಳ ಬಳಿಯಿದ್ದ ಪೆನ್ ಡ್ರೈವ್ವೊಂದನ್ನು ಪೊಲೀಸರಿಗೆ ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾಗ
ಅದರಲ್ಲಿ ಶಾಬಾ ಷರೀಫ್ ಅವರ ಕೊಲೆಗೆ ಸಂಬಂಧಿಸಿದ ವಿಚಾರಗಳಿದ್ದವು. ಅವುಗಳನ್ನು ಕಂಡು ಪೊಲೀಸರು ಗಾಬರಿಯಾಗಿದ್ದರು. ಆಗ ದೂರು ನೀಡಿದವನನ್ನೇ ಪೊಲೀಸರು ಕಂಬಿ ಹಿಂದೆ ತಳ್ಳಿದ್ದಾರೆ.
LATEST NEWS
ಕಂಬಳ ಕ್ಷೇತ್ರಕ್ಕೆ ಮತ್ತೊಂದು ಅಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ
ಮಣಿಪಾಲ: ಕೆಲವು ದಿನಗಳ ಹಿಂದಷ್ಟೇ ಕಂಬಳ ಕ್ಷೇತ್ರದ ಉದಯೋನ್ಮುಖ ತಾರೆ ‘ಲಕ್ಕಿ’ಯ ಅಗಲುವಿಕೆಯಿಂದ ಬೇಸರಗೊಂಡಿದ್ದ ಕಂಬಳಾಭಿಮಾನಿಗಳಿಗೆ ಮತ್ತೊಂದು ಅಘಾ*ತ ಎದುರಾಗಿದೆ. ಉಭಯ ಜಿಲ್ಲೆಯ ಕೂಟಗಳಲ್ಲಿ ಹೆಸರು ಮಾಡಿದ್ದ ‘ನಾಗು’ ಎಂಬ ಕೋಣ ಹೃದಯಾಘಾ*ತದಿಂದ ಕೊನೆ*ಯುಸಿರೆಳೆದಿದೆ.
‘ನಾಗು’ ಕೋಣವು ಜಪ್ಪು ಮಂಕು ತೋಟ ಅನಿಲ್ ಶೆಟ್ಟಿಯವರ ಯಜಮಾನಿಕೆಯಲ್ಲಿ ಹಲವು ಕಂಬಳಗಳಲ್ಲಿ ಭಾಗವಹಿಸಿ ಪ್ರಶಸ್ತಿ ಗೆದ್ದುಕೊಂಡಿತ್ತು.
ಬೈಂದೂರಿನಿಂದ ಬಂಢಾರಮನೆ ಸೇರಿದ್ದ ನಾಗು, ಬಳಿಕ ಚಿತ್ಪಾಡಿ ಅಪ್ಪು ಶೆಟ್ಟಿ ಅವರ ಹಟ್ಟಿ ಸೇರಿದ್ದ. ಎರಡು ವರ್ಷಗಳ ಹಿಂದೆ ನಾಗು ಕೋಣವನ್ನು ಜಪ್ಪು ಮಂಕುತೋಟ ಅನಿಲ್ ಶೆಟ್ಟಿ ಅವರು ಖರೀದಿ ಮಾಡಿದ್ದರು.
ಕೂಟಗಳಲ್ಲಿ ಸಕ್ರಿಯವಾಗಿದ್ದ ಎರಡು ಕೋಣಗಳನ್ನು ಎರಡು ವಾರಗಳ ಅಂತರದಲ್ಲಿ ಕಂಬಳ ಕ್ಷೇತ್ರ ಕಳೆದುಕೊಂಡಿದೆ.
LATEST NEWS
WATCH : UDUPI : ಮನೆಯಂಗಳದಲ್ಲಿ ಚಿರತೆ ಪ್ರತ್ಯಕ್ಷ; ರಾತ್ರಿ ಇಡೀ ಕಣ್ಮರೆಯಾಗಿದ್ದ ಸಾಕು ನಾಯಿ ಬದುಕುಳಿದಿದ್ದು ಹೇಗೆ?
ಉಡುಪಿ : ಮನೆಯೊಂದರ ಅಂಗಳದಲ್ಲಿ ಚಿರತೆಯೊಂದು ಕಾಣಿಸಿಕೊಂಡ ಘಟನೆ ಉಡುಪಿ ಪೆರಂಪಳ್ಳಿಯಲ್ಲಿ ಶುಕ್ರವಾರ(ಜು.27) ತಡರಾತ್ರಿ ನಡೆದಿದೆ. ಚಿರತೆ ಓಡಾಟದ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮನೆಯಂಗಳದಲ್ಲಿ ಮಲಗಿದ್ದ ನಾಯಿಯ ಬೇಟೆಗಾಗಿ ಚಿರತೆ ಬಂದಿದ್ದು, ನಾಯಿಯನ್ನು ಅಟ್ಟಿಸಿಕೊಂಡು ಹೋಗುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.
ನಾಯಿ ಬೊಗಳಿದರೂ ಮನೆಯವರು ಹೊರಬಂದಿಲ್ಲ. ಕೆಲವು ದಿನಗಳಿಂದ ಮಣಿಪಾಲ ಆಸುಪಾಸಿನಲ್ಲಿ ಚಿರತೆ ಓಡಾಟದ ಮಾಹಿತಿ ತಿಳಿದಿದ್ದ ಮನೆಯವರು ಸುಮ್ಮನಿದ್ದರು ಎನ್ನಲಾಗಿದೆ. ಸ್ವಲ್ಪ ಹೊತ್ತಿನಲ್ಲಿ ನಾಯಿಯ ಶಬ್ದ ಕೂಡ ಕೇಳಿರಲಿಲ್ಲ. ಬೆಳಿಗ್ಗೆ ಮನೆಯ ಸಿಸಿಟಿವಿ ದ್ರಶ್ಯಾವಳಿ ಗಮನಿಸಿದಾಗ ಚಿರತೆ ನಾಯಿಯ ಹಿಂದೆ ಹೋಗುತ್ತಿರುವ ದೃಶ್ಯ ಕಂಡು ಭಯಭೀತರಾಗಿದ್ದಾರೆ.
ಇದನ್ನೂ ಓದಿ : ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾ*ವು
ಆದರೆ ಅಚ್ಚರಿ ಎಂಬಂತೆ ರಾತ್ರಿ ಇಡೀ ಕಣ್ಮರೆಯಾಗಿದ್ದ ಸಾಕು ನಾಯಿ ಬೆಳಿಗ್ಗೆ ಪ್ರತ್ಯಕ್ಷವಾಗಿದೆ. ಚಿರತೆಯ ಬಾಯಿಯಿಂದ ತಪ್ಪಿಸಿಕೊಂಡು ಪ್ರಾ*ಣ ಉಳಿಸಿಕೊಂಡಿದೆ. ಈ ಘಟನೆ ಮಣಿಪಾಲ, ಪೆರಂಪಳ್ಳಿ ಭಾಗದಲ್ಲಿ ಆತಂಕ ಸೃಷ್ಟಿಸಿದೆ. ಕೂಡಲೇ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು, ಚಿರತೆಯನ್ನು ಸೆರೆ ಹಿಡಿಯುವಂತೆ ಆಗ್ರಹಿಸಿದ್ದಾರೆ.
DAKSHINA KANNADA
ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾ*ವು
ತೆಲಂಗಾಣ: ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾ*ವನ್ನಪ್ಪಿರುವ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯ ಚಿಂತಕಣಿಲ್ಲಿ ಶುಕ್ರವಾರ ನಡೆದಿದೆ.
ಅಂಜಲಿ ಕಾರ್ತಿಕಾ (9) ಮೃ*ತ ಬಾಲಕಿ. ಮೊಬೈಲ್ನಲ್ಲಿ ಆಟವಾಡುತ್ತಿರುವ ವೇಳೆ ಚಾರ್ಜ್ ಖಾಲಿಯಾಗಿದ್ದು, ಅಂಜಲಿ ಮೊಬೈಲ್ ಚಾರ್ಜ್ ಮಾಡಲು ಹೋಗಿದ್ದಾಳೆ. ಈ ವೇಳೆ ವಿದ್ಯುತ್ ಸ್ಪರ್ಶಿಸಿದ್ದು, ಬಾಲಕಿ ಕುಸಿದು ಬಿದ್ದಿದ್ದಾಳೆ.
ಕುಸಿದು ಬಿದ್ದು ಒದ್ದಾಡುತ್ತಿರುವ ಬಾಲಕಿಯನ್ನು ಗಮನಿಸಿದ ಆಕೆಯ ಪೋಷಕರು ತಕ್ಷಣ ಗ್ರಾಮದ ಖಾಸಗಿ ವೈದ್ಯರ ಬಳಿ ಕರೆದೊಯ್ದಿದ್ದಾರೆ. ಆದರೆ ಬಾಲಕಿ ಅದಾಗಲೇ ಮೃ*ತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಬಾಲಕಿ ಆಟವಾಡುತ್ತಿದ್ದಂತೆ ಒದ್ದೆ ಕೈಯಲ್ಲಿ ಹೋಗಿ ವಿದ್ಯುತ್ ಸ್ಪರ್ಶಿಸಿರುವುದೇ ಸಾವಿಗೆ ಕಾರಣ ಎಂದು ತಿಳಿದುಬಂದಿದೆ. ಕೆಲ ಹೊತ್ತಿನ ಹಿಂದೆ ಮನೆಯಲ್ಲಿ ಕುಣಿದು ಕುಪ್ಪಳಿಸುತ್ತಾ ಆಟವಾಡುತ್ತಿದ್ದ ಬಾಲಕಿ ಏಕಾಏಕಿ ಪ್ರಾ*ಣ ಕಳೆದುಕೊಂಡಿರುವುದನ್ನು ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಮೃ*ತ ಬಾಲಕಿ ಅಂಜಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾಲ್ಕನೇ ತರಗತಿ ವಿದ್ಯಾರ್ಥಿನಿ. ತಂದೆ ರಾಮಕೃಷ್ಣ ದೂರಿನ ಮೇರೆಗೆ ಎಸ್ಎಸ್ಐ ನಾಗುಲ್ಮೀರ ಪ್ರಕರಣ ದಾಖಲಿಸಿಕೊಂಡಿದ್ದಾರೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ
- DAKSHINA KANNADA6 days ago
PUTTUR : ನಾಪತ್ತೆಯಾಗಿದ್ದ ಯುವಕನ ಮೃ*ತದೇಹ ಗೌರಿ ಹೊಳೆಯಲ್ಲಿ ಪತ್ತೆ