LATEST NEWS
ಮೈಸೂರು ದಸರಾ ಮಹೋತ್ಸವ: ನಂದಿ ಧ್ವಜಕ್ಕೆ ಸಿಎಂ ಸಿದ್ಧರಾಮಯ್ಯ ಪೂಜೆ ಸಲ್ಲಿಕೆ, ಜಂಬೂಸವಾರಿ ಮೆರವಣಿಗೆಗೆ ಚಾಲನೆ
ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಇನ್ನೇನು ಕೆಲವೇ ಕ್ಷಣಗಳಲ್ಲಿ ಆರಂಭಗೊಳ್ಳಲಿದೆ. ಇದಕ್ಕೂ ಮುನ್ನಾ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು. ಈ ಮೂಲಕ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು.
ಇಂದು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಮೈಸೂರಲ್ಲಿ ಕಳೆಗಟ್ಟಿದೆ. ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಮಧ್ಯಾಹ್ನ 1:55ರ ಸುಮಾರಿಗೆ ನಡೆದ ನಂದಿ ಧ್ವಜಕ್ಕೆ ಸಿಎಂ ಸಿದ್ಧರಾಮಯ್ಯ ಅವರು ಪೂಜೆ ನೆರವೇರಿಸಿದರು. ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದಂತೆ ಆಗಿದೆ.
ಸಿಎಂ ಸಿದ್ದರಾಮಯ್ಯಗೆ ಸಾತ್ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಮಹದೇವಪ್ಪ, ಶಿವರಾಜ ತಂಗಡಗಿ, ಲಕ್ಷ್ಮಿ ಹೆಬ್ಬಾಳ್ಕರ್ ಹಾಗು ಕೆಲ ಶಾಸಕರು.
ಪೂಜೆ ಸಲ್ಲಿಸಿದ ಬಳಿಕ ಮಾತನಾಡಿ ನಾಡಿನ ಜನತೆಗೆ ಶುಭಾಶಯವನ್ನು ಸಿಎಂ ಸಿದ್ಧರಾಮಯ್ಯ ಕೋರಿದರು.
LATEST NEWS
ಅನೈತಿಕ ಫೋಟೋ ವೈರಲ್; ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ
ಮಂಗಳೂರು/ಕೊಪ್ಪ: ಸಾಮಾಜಿಕ ಜಾಲತಾಣದಲ್ಲಿ ಅನೈತಿಕ ಫೋಟೋಗಳು ವೈರಲ್ ಆಗುತ್ತಿದ್ದ ಅವಮಾನ ತಾಳಲಾರದೆ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದಿದೆ. ಸದ್ಯ ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಏನಿದು ಪ್ರಕರಣ?
ಕಳೆದ ಮೂರು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಕೊಪ್ಪ ಕಾಲೇಜೊಂದರ ವಿದ್ಯಾರ್ಥಿನಿ ಕೆಲ ಅನ್ಯಧರ್ಮೀಯ ಯುವಕರ ಜೊತೆ ಕಾಡೊಂದರಲ್ಲಿ ಸಿಕ್ಕಿಬಿದ್ದಳೆಂದು ಫೋಟೋಗಳು ರಾಜ್ಯಾದ್ಯಂತ ದಿಢೀರ್ ವೈರಲ್ ಆಗಿದ್ದವು. ಘಟನೆ ಕುರಿತಂತೆ ಮಾಹಿತಿ ನೀಡಿದ್ದ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾಟೆ ವಿಕ್ರಂ ‘ಈ ಘಟನೆ ನಡೆದು ವಾರಗಳು ಕಳೆದಿವೆ. ಸಾಮಾಜಿಕ ಜಾಲತಾಣದಲ್ಲಿ ಹರಡತ್ತಿರುವಂತೆ ಯಾವುದೇ ಘಟನೆ ಸಂಭವಿಸಿರಲಿಲ್ಲ’ ಎಂದಿದ್ದರು.
ಅಸಲಿ ಕಥೆ ಏನು?
ಕೊಪ್ಪ ತಾಲ್ಲೂಕಿನ ಕಪಿನ ಎಂಬಲ್ಲಿ 15 ದಿನದ ಹಿಂದೆ ಈ ಘಟನೆ ನಡೆದಿತ್ತು. ಮೂವರು ಮುಸ್ಲಿಂ ಯುವಕರ ಜೊತೆ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿನಿ ಹಾಗೂ ಯುವಕರ ಮೇಲೆ ಸ್ಥಳೀಯ ಸಂಘಟನೆಯವರು ಎನ್ನಲಾದ ಕೆಲವರು ನೈತಿಕ ಪೊಲೀಸ್ ಗಿರಿ ನಡೆಸಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಎಚ್ಚರಿಕೆ ನೀಡಿ ಕಳುಹಿಸಿದ್ದರು. ಇದಾದ ಬಳಿಕ ಕಳೆದ ಮೂರು ದಿನಗಳಿಂದ ಆಕೆ ಯುವಕರ ಜೊತೆಗಿರುವ ಫೋಟೋಗಳು ರಾಜ್ಯಾದ್ಯಂತ ವೈರಲ್ ಆಗಿತ್ತು. ಈ ಹಿನ್ನಲೆ ಅವಮಾನ ತಾಳಲಾರದೆ ವಿದ್ಯಾರ್ಥಿನಿ ಕಾಲೇಜು ಆವರಣದಲ್ಲೇ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದಂತೆ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ಬಳಿಕ ಎಚ್ಚೆತ್ತ ಪೊಲೀಸರು ಇದೀಗ ನೈತಿಕ ಪೊಲೀಸ್ ಗಿರಿ ನಡೆಸಿದವರ ವಿರುದ್ಧ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
LATEST NEWS
ಗೋಕರ್ಣ ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕರಿಬ್ಬರ ರಕ್ಷಣೆ
ಕಾರವಾರ: ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರು ಪ್ರವಾಸಿಗರನ್ನು ರಕ್ಷಿಸಿದ ಘಟನೆ ಗೋಕರ್ಣದ ಮುಖ್ಯ ಕಡಲ ತೀರದಲ್ಲಿ ನಡೆದಿದೆ.
ಮೈಸೂರು ಮೂಲದ ಅಭಿ ಹಾಗೂ ಇನ್ನೋರ್ವ ಪ್ರವಾಸಿಗನನ್ನು ಇಲ್ಲಿನ ಲೈಫ್ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
ಇವರಿಬ್ಬರು ರಜೆಯ ಹಿನ್ನಲೆ ಗೋಕರ್ಣ ಪ್ರವಾಸಕ್ಕೆಂದು ಬಂದಿದ್ದರು. ಸಮುದ್ರದಲ್ಲಿ ಈಜಾಡುವ ವೇಳೆ ಅಲೆಗಳಿಗೆ ಸಿಲುಕಿ ಮುಳುಗುವ ಹಂತದಲ್ಲಿದ್ದರು. ಇದನ್ನು ಗಮನಿಸಿದ ಲೈಫ್ಗಾರ್ಡ್ ಸಿಬ್ಬಂದಿಗಳಾದ ಶಿವಪ್ರಸಾದ್, ಮೋಹನ್, ಶಿವಪ್ರಸಾದ್ ಅಂಬಿಗ ಎನ್ನುವವರು ಯುವಕರನ್ನು ರಕ್ಷಿಸಿದ್ದಾರೆ.
ಇನ್ನು ರಕ್ಷಿಸಲ್ಪಟ್ಟ ಇನ್ನೊರ್ವ ಪ್ರವಾಸಿಗ ಲೈಫ್ಗಾರ್ಡ್ ಸಿಬ್ಬಂದಿಗೆ ಮಾಹಿತಿ ನೀಡದೇ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಈ ಕುರಿತು ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
ಪ್ರಿಯಕರನೊಂದಿಗೆ ಪತ್ನಿಯ ಕಳ್ಳಾಟ; ಪತಿಯನ್ನೇ ಇ*ಹಲೋಕಕ್ಕೆ ಕಳುಹಿಸಿದ ಪತ್ನಿ..!
ಮಂಗಳೂರು/ಕಡೂರು: ಪತಿಯಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ, ಆಕೆಯ ಕಳ್ಳಾಟಕ್ಕೆ ಅಡ್ಡಗಾಲಾಗುತ್ತಿದ್ದ ಪತಿಯನ್ನು ಪ್ರೇಮಿ ಜೊತೆ ಸೇರಿ ಕೊ*ಲೆ ಮಾಡಿದ ಧಾರುಳ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹನುಮನಹಳ್ಳಿಯಲ್ಲಿ ನಡೆದಿದೆ.
ನವೀನ್ (28) ಪತ್ನಿಯ ಕಳ್ಳಾಟಕ್ಕೆ ಬ*ಲಿಯಾದ ಪತಿ. ಪತ್ನಿ ಪಾವನ ಹಾಗೂ ಆಕೆಯ ಪ್ರೇಮಿ ಸಂಜಯ್ ಕೊಲೆ ಮಾಡಿದ ಆರೋಪಿಗಳು ಎಂದು ತಿಳಿದು ಬಂದಿದೆ.
ನವೀನ್ ಅವರ ಮೃತದೇಹ ಆಗಸ್ಟ್ 6ರಂದು ಯಗಟಿ ಕೆರೆ ಬಳಿ ಪ*ತ್ತೆಯಾಗಿತ್ತು. ಇದು ಸಹಜ ಸಾವಲ್ಲ, ಕೊಲೆ ಎಂದು ನವೀನ್ ಪೋಷಕರು ಯಗಟಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಪ್ರಿಯಕರನೊಂದಿಗೆ ಖತರ್ನಾಕ್ ಪ್ಲಾನ್ ಮಾಡಿದ್ದ ಪತ್ನಿ:
ಪ್ರೇಮಿ ಜೊತೆ ಇರಲು ಅಡ್ಡಗಾಲಾಗುತ್ತಿದ್ದ ಪತಿಗೆ ಪಾವನ ಪ್ಲಾನ್ ಒಂದನ್ನು ರೆಡಿ ಮಾಡಿದ್ದು, ಊಟದಲ್ಲಿ ನಿದ್ರೆ ಮಾತ್ರೆ ಹಾಕಿ ಪತಿಯ ಜ್ಞಾನ ತಪ್ಪಿಸಿದ್ದಾಳೆ. ಬಳಿಕ ಪತಿಯನ್ನು ಪ್ರೇಮಿಯ ಜೊತೆ ಸೇರಿ ಬೈಕ್ ನಲ್ಲಿ ತಂದು ಕೆರೆಗೆ ಎಸೆದಿದ್ದರು ಎನ್ನಲಾಗಿದೆ.
ನವೀನ್ ಪೋಷಕರು ನೀಡಿದ ದೂರಿನ ಹಿನ್ನೆಲೆ ತನಿಖೆ ಕೈಗೊಂಡ ಪೊಲೀಸರಿಗೆ ಪತ್ನಿಯೇ ಪತಿಯನ್ನು ಕೊಂದಿರುವುದಾಗಿ ತನಿಖೆಯಲ್ಲಿ ಖಚಿತವಾಗಿದೆ. ಪಾವನ ಹಾಗೂ ಸಂಜಯ್ ಸತ್ಯಾಂಶ ಒಪ್ಪಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ. ಸದ್ಯ, ಆರೋಪಿಗಳಿಬ್ಬರೂ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.
- LATEST NEWS6 days ago
ಶಿಕ್ಷಕಿಯ ಅ*ಶ್ಲೀಲ ವಿಡಿಯೋ ಹಂಚಿಕೆ; ನಾಲ್ವರು ವಿದ್ಯಾರ್ಥಿಗಳ ಬಂಧನ
- FILM4 days ago
ಎರಡನೇ ಮದುವೆಯಾಗುತ್ತಿರುವ ಬಿಗ್ಬಾಸ್ ಕಂಟೆಸ್ಟೆಂಟ್
- LATEST NEWS4 days ago
ನ.8 ಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ ನಿವೃತ್ತಿ..! 15 ದಿನದಲ್ಲಿ 8 ಪ್ರಮುಖ ತೀರ್ಪು ಸಾಧ್ಯತೆ..!
- DAKSHINA KANNADA5 days ago
ಮಂಗಳೂರು : ರಾತ್ರಿ ಹೊತ್ತಲ್ಲಿ ಯುವಕನ ಬೆತ್ತಲೆ ಓಡಾಟ; ಭಯದಲ್ಲಿ ಹಾಸ್ಟೆಲ್ ವಿದ್ಯಾರ್ಥಿನಿಯರು