Connect with us

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ನೂತನ ಎಸ್ಪಿಯಾಗಿ ಯತೀಶ್ ಎನ್ ನೇಮಕ

    Published

    on

    ಮಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಜುಲೈ 2 ಮಂಗಳವಾರ ತಡರಾತ್ರಿ ಈ ಆದೇಶವನ್ನು ಹೊರಡಿಸಿದ್ದಾರೆ. ಈ ವರ್ಗಾವಣೆಗಳ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಿ ಬಿ ರಿಷ್ಯಂತ್ಅವರನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ಅಲ್ಲಿ ಅವರು ಈಗ ವೈರ್‌ಲೆಸ್ ವಿಭಾಗಕ್ಕೆ ಎಸ್‌ಪಿಯಾಗಿ ಸೇವೆ ಸಲ್ಲಿಸಲಿದ್ದಾರೆ.

    ಮೇ 2023 ರಲ್ಲಿ ರಿಷ್ಯಂತ್ ಅವರು ದ.ಕ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದೀಗ ರಿಶ್ಯಾಂತ್‌ ಅವರಿಂದ ಅಧಿಕಾರ ವಹಿಸಿಕೊಂಡವರು ಈ ಹಿಂದೆ ಮಂಡ್ಯ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಯತೀಶ್ ಎನ್. ಇವರು 2016 ರ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿಯಾಗಿದ್ದರು.

    DAKSHINA KANNADA

    ಕಾರ್ಕಳ: ಅಜೆಕಾರು ಬಳಿ ರಸ್ತೆ ಅಪ*ಘಾತ – ಐವರಿಗೆ ಗಾ*ಯ

    Published

    on

    ಕಾರ್ಕಳ: ಅಜೆಕಾರು ಸಮೀಪದ ಕೈಕಂಬ ಮಥುರಾ ಪಟ್ಲ ಎಂಬಲ್ಲಿ ಸಂಭವಿಸಿದ ರಸ್ತೆ ಅಪ*ಘಾತದಲ್ಲಿ ಐವರು ಗಾ*ಯಗೊಂಡ ಘಟನೆ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.

    ಜೀಪು ಹಾಗೂ ರಿಕ್ಷಾ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮವಾಗಿ ರಿಕ್ಷಾದಲ್ಲಿದ್ದ ಹರೀಶ್(35) ಲಲಿತಾ(62) ಪ್ರೇಮಾ(58) ಶಾರದಾ(52) ಗೀತಾ(39) ಎಂಬವರಿಗೆ ಗಾಯವಾಗಿದೆ.

    ಅಜೆಕಾರು ವಿಭಾಗದ 108 ಅಂಬುಲೆನ್ಸ್ ಘಟನಾ ಸ್ಥಳಕ್ಕೆ ಅಗಮಿಸಿ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

    108 ಅಂಬುಲೆನ್ಸ್ ನ ಪೈಲೆಟ್ ಕಿಶೋರ್ ಹಾಗೂ ಇಎಂಟಿ ದೇವಿಕಾ ಕಾರ್ಯಚರಣೆಯಲ್ಲಿ ಪಾಲ್ಗೊಂಡರು.

    Continue Reading

    DAKSHINA KANNADA

    ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ಹೃದಯಾಘಾ*ತದಿಂದ ನಿ*ಧನ

    Published

    on

    ಮಂಗಳೂರು : ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ಅವರು ಇಂದು(ಜುಲೈ 5) ಹೃದಯಘಾ*ತದಿಂದ ಇಹಲೋಕ ತ್ಯಜಿಸಿದ್ದಾರೆ.
    ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ನಾಯ್ಕಾಪು ಕುಂಬಳೆ ಶ್ರೀಧರ ರಾಯರ ಹುಟ್ಟೂರು. 1948ನೇ ಜುಲೈ 23 ರಂದು ಮಾಲಿಂಗ ಮುಕಾರಿ ಮತ್ತು ಕಾವೇರಿ ಅಮ್ಮ ದಂಪತಿ ಮಗನಾಗಿ ಜನಿಸಿದರು.


    ತೆ೦ಕುತಿಟ್ಟಿನ ಅಪ್ರತಿಮ ಸ್ತ್ರೀವೇಷಧಾರಿಯಾಗಿ ಜನಪ್ರಿಯರಾಗಿದ್ದ ಕುಂಬಳೆ ಶ್ರೀಧರ್ ರಾವ್ ಅವರು ದಮಯಂತಿ, ದಾಕ್ಷಾಯಿಣಿ, ಅಮ್ಮು ಬಲ್ಲಾಳ್ತಿ, ಲಕ್ಷ್ಮಿ, ಸುಭದ್ರೆ, ಸತ್ಯಭಾಮೆ ಅಲ್ಲದೆ ಪ್ರಮೀಳೆ, ಶಶಿಪ್ರಭೆ ಮೊದಲಾದ ಪಾತ್ರಗಳ ಮೂಲಕ ಜನಮನಸೂರೆಗೊಂಡಿದ್ದರು. ಪುರುಷ ವೇಷಧಾರಿಯಾಗಿಯೂ ಪ್ರಸಿದ್ಧರಾಗಿದ್ದರು. ಇರಾ, ಕೂಡ್ಲು, ಮೂಲ್ಕಿ, ಕರ್ನಾಟಕ ಮೇಳ ಮತ್ತು ಧರ್ಮಸ್ಥಳ ಮೇಳದಲ್ಲಿ ಶ್ರೀಧರ್ ರಾವ್ ಸೇವೆ ಸಲ್ಲಿಸಿದ್ದು, ಧರ್ಮಸ್ಥಳ ಮೇಳದಲ್ಲಿ ಸುಮಾರು ನಾಲ್ಕು ದಶಕಗಳ ಕಾಲ ತಿರುಗಾಟ ಮಾಡಿದ್ದರು.

    ಇದನ್ನೂ ಓದಿ : ಸೀಲ್ಡ್​ ತಂಪು ಪಾನೀಯ ಬಾಟಲ್ ಒಳಗಿತ್ತು ಜೇಡರ ಹುಳ!

    ಮೃ*ತರು ಪತ್ನಿ, ನಿವೃತ್ತ ಶಿಕ್ಷಕಿ ಸುಲೋಚನಾ, ಮೂವರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳನ್ನು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

    Continue Reading

    DAKSHINA KANNADA

    ‘HSRP’ ನಂಬರ್ ಪ್ಲೇಟ್ ಅಳವಡಿಸಲು ಸೆ.15 ರವರೆಗೆ ಗಡುವು ವಿಸ್ತರಣೆ

    Published

    on

    ಬೆಂಗಳೂರು: ರಾಜ್ಯದಲ್ಲಿ ಎಚ್​ಎಸ್​ಆರ್​ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಸರ್ಕಾರವು ಹೈಕೋರ್ಟ್​ಗೆ ಮಾಹಿತಿ ನೀಡಿದೆ.

    ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕ್ರಮ್ ಹುಯಿಲಗೋಳ ಅವರು ನ್ಯಾಯಪೀಠದ ಮುಂದೆ ಹಾಜರಾಗಿ, ಎಚ್‌ಎಸ್‌ಆರ್​ಪಿ ಅಳವಡಿಸಿಕೊಳ್ಳಲು ನಿಗದಿಪಡಿಸಲಾಗಿದ್ದ ಅವಧಿಯನ್ನು ಸೆಪ್ಟೆಂಬರ್ 15ರವರೆಗೆ ರಾಜ್ಯ ಸರ್ಕಾರ ವಿಸ್ತರಿಸಿದೆ ಎಂದು ಮಾಹಿತಿ ತಿಳಿಸಿದರು.

    ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿತು.

    ಎಚ್‌ಎಸ್‌ಆರ್‌ಪಿಗಳನ್ನು ಅಳವಡಿಸಲು ಸಾರಿಗೆ ಇಲಾಖೆ ಗಡುವನ್ನು ವಿಸ್ತರಿಸಿರುವುದು ಇದು ನಾಲ್ಕನೇ ಬಾರಿಯಾಗಿದೆ . ಹಿಂದಿನ ಗಡುವು ನವೆಂಬರ್ 17, 2023, ಫೆಬ್ರವರಿ 17, 2024 ಮತ್ತು ಮೇ 17, 2024 ಆಗಿತ್ತು. HSRP ಗಳನ್ನು ಪಡೆಯದ ವಾಹನ ಮಾಲೀಕರು ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ.

    Continue Reading

    LATEST NEWS

    Trending