LATEST NEWS
ನಗರ ಸಭೆ ಉಪಾಧ್ಯಕ್ಷೆ ಮಗ ಸೇರಿ ನಾಲ್ವರ ಹ*ತ್ಯೆ! ಹಂ*ತಕರ ಪತ್ತೆಗೆ ವಿಶೇಷ ತಂಡ ರಚನೆ
ಗದಗ : ಗದಗ ಬೆಟಗೇರಿ ಅವಳಿ ನಗರದಲ್ಲಿ ಒಂದೇ ಕುಟುಂಬದ ನಾಲ್ಕು ಜನರನ್ನು ಬರ್ಬರ ಹ*ತ್ಯೆ ಮಾಡಲಾಗಿದೆ. ನಗರಸಭೆ ಉಪಾಧ್ಯಕ್ಷೆಯ ಮಗ ಸೇರಿದಂತೆ ನಾಲ್ವರನ್ನು ರಾತೋರಾತ್ರಿ ಹತ್ಯೆ ಮಾಡಲಾಗಿದೆ. ಗದಗ ನಗರದ ದಾಸರ್ ಓಣಿಯ ನಿವಾಸಿಯಾದ ಪ್ರಕಾಶ ಬಾಕಳೆ ಅವರ ಮನೆಯಲ್ಲಿ ಈ ಹ*ತ್ಯಾಕಾಂಡ ನಡೆದಿದೆ.
ಗದಗ ಬೆಟಗೇರಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ 27 ವರ್ಷದ ಕಾರ್ತಿಕ್ ಬಾಕಳೆ, ಸಂಬಂಧಿಕರಾದ 66 ವರ್ಷದ ಪರಶುರಾಮ, 45 ವರ್ಷದ ಲಕ್ಷ್ಮಿ ಹಾಗೂ 16 ವರ್ಷದ ಆಕಾಂಕ್ಷಾ ಎನ್ನುವವರ ಕೊ*ಲೆಯಾಗಿದೆ.
ಚರಂಡಿಯಲ್ಲಿ ಮಾರಕಾಸ್ತ್ರ ಪತ್ತೆ :
ಮಧ್ಯರಾತ್ರಿ 1 ಗಂಟೆಯಿಂದ 2 ಗಂಟೆಯ ಅವಧಿಯಲ್ಲಿ ಮನೆಯ ಹಿಂದಿನ ಕಿಟಕಿ ಮೂಲಕ ಎಂಟ್ರಿ ಹೊಡೆದ ದುಷ್ಕರ್ಮಿಗಳು ಮೊದಲು ಒಂದನೇಯ ಮಹಡಿಯಲ್ಲಿ ಮಲಗಿಕೊಂಡಿದ್ದ ಕಾರ್ತಿಕ ಹಾಗೂ ಪರಶುರಾಮ ಅವರನ್ನು ಹ*ತ್ಯೆ ಮಾಡಿದ್ದಾರೆ. ಬಳಿಕ ತಳ ಮಹಡಿಯಲ್ಲಿ ಮಲಗಿಕೊಂಡಿದ್ದ ತಾಯಿ ಲಕ್ಷ್ಮಿ ಹಾಗೂ ಮಗಳು ಆಕಾಂಕ್ಷಾ ಅವರನ್ನು ಮಾರಕಾಸ್ತ್ರಗಳಿಂದ ಕೊ*ಚ್ಚಿ ಕೊ*ಲೆ ಮಾಡಿದ್ದಾರೆ.
ಈ ವೇಳೆ ಪಕ್ಕದ ರೂಮಿನಲ್ಲಿದ್ದ ಪ್ರಕಾಶ ಬಾಕಳೆ ಹಾಗೂ ಸುನಂದಾ ಬಾಕಳೆ ಎಂಬವರು ರೂಮ್ ಬಾಗಿಲು ತೆರೆಯದೆ ಪೊಲೀಸರಿಗೆ ಫೋನ್ ಮಾಡಿದ್ದಾರೆ. ಪೊಲೀಸರು ಬರುತ್ತಾ ಇದ್ದಂತೆ, ಹಂ*ತಕರು ಮನೆಯ ಹಿಂದಿನ ಕಿಟಕಿ ಮೂಲಕ ಎಸ್ಕೇಪಾಗಿದ್ದಾರೆ. ಈ ವೇಳೆ ಹಂ*ತಕರು ಉಪಯೋಗ ಮಾಡಿದ್ದ ಮಾರಕಾಸ್ತ್ರಗಳನ್ನು ಚರಂಡಿಯಲ್ಲಿ ಎಸೆದು ಎಸ್ಕೇಪ್ ಆಗಿದ್ದಾರೆ.
ಇದನ್ನೂ ಓದಿ : ಚುನಾವಣಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಬಸ್ ಪಲ್ಟಿ.. 40 ಮಂದಿಗೆ ಗಾಯ
ಬಿಜೆಪಿ ಮುಖಂಡ ಹಾಗೂ ನಗರಸಭೆ ಉಪಾಧ್ಯಕ್ಷೆಯ ಪತಿಯಾದ ಪ್ರಕಾಶ ಬಾಕಳೆಗೆ ಇಬ್ಬರು ಪತ್ನಿಯರು. ಮೊದಲ ಪತ್ನಿ ಈ ಹಿಂದಿಯೇ ಸಾವನ್ನಪ್ಪಿದ್ದಾಳೆ. ಎರಡನೇಯ ಪತ್ನಿಯಾದ ಸುನಂದಾಳ ಜೊತೆಗೆ ಇದೇ ಮನೆಯಲ್ಲಿ ಜೀವನ ನಡೆಸುತ್ತಿದ್ದ. ಏಪ್ರಿಲ್ 17 ರಂದು ಎರಡನೇಯ ಪತ್ನಿ ಸುನಂದಾ ಬಾಕಳೆ ಅವ್ರ ಪುತ್ರ ಕಾರ್ತಿಕ್ ಎಂಗೇಜ್ಮೆಂಟ್ ಸಮಾರಂಭ ನಡೆಸಲಾಗಿತ್ತು.
ಮೊದಲ ಪತ್ನಿಯ ಸಹೋದರ ಪರಶುರಾಮ ಅವರ ಪತ್ನಿ ಲಕ್ಷ್ಮಿ, ಅವರ ಪುತ್ರಿ ಆಕಾಂಕ್ಷಾ ಕೊಪ್ಪಳ ಜಿಲ್ಲೆಯಿಂದ ಎಂಗೇಜ್ಮೆಂಟ್ ಕಾರ್ಯಕ್ಕೆ ಬಂದಿದ್ದರು. ಆದ್ರೆ, ಎಂಗೇಜ್ಮೆಂಟ್ ಮುಗಿಸಿ ವಾಪಾಸಾಗಬೇಕಾದವರು ಕಾರಣಾಂತರದಿಂದ ಇಲ್ಲೇ ಉಳಿದುಕೊಂಡಿದ್ದರು.
ತನಿಖೆಗೆ 4 ತಂಡ ರಚನೆ :
ಉತ್ತರ ವಲಯ ಐಜಿಪಿ ವಿಕಾಸಕುಮಾರ ಅವರು ಘಟನಾ ಸ್ಥಳವನ್ನು ಪರಿಶೀಲನೆ ಮಾಡಿದರು. ಈಗಾಗಲೇ ಗದಗ ಎಸ್ಪಿ ಬಿ.ಎಸ್.ನೇಮಗೌಡ ಅವರ ನೇತೃತ್ವದಲ್ಲಿ 4 ತಂಡವನ್ನು ರಚನೆ ಮಾಡಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಕೊ*ಲೆ ಮಾಡಿರೋದು ದರೋಡೆಕೋರರ ಅಲ್ಲಾ ಅಥವಾ ಇನ್ಯಾರು ಎಂಬ ಬಗ್ಗೆ ಎಲ್ಲಾ ಆಯಾಮಗಳಲ್ಲಿ ತನಿಖೆ ಮಾಡ್ತಾಯಿದ್ದೇವೆ, ಆದಷ್ಟು ಬೇಗ ಹಂತಕರನ್ನು ಪತ್ತೆ ಮಾಡುವ ಭರವಸೆ ನೀಡಿದ್ದಾರೆ.
ರಾಜಕೀಯ ಹಿನ್ನೆಲೆ, ರಿಯಲ್ ಎಸ್ಟೇಟ್, ಕೌಟುಂಬಿಕ ಕಲಹ ಸೇರಿದಂತೆ ಎಲ್ಲಾ ಆ್ಯಂಗಲ್ ಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ, ಒಂದು ಕುಟುಂಬದ ನಾಲ್ಕು ಜನರ ಹತ್ಯೆ ಮಾಡುವಷ್ಟು ದ್ವೇಷ ಏನೂ ಎನ್ನುವುದು ಪೊಲೀಸರ ಸಮಗ್ರ ತನಿಖೆಯಿಂದಲೇ ಬಯಲಾಗಬೇಕಾಗಿದೆ.
BELTHANGADY
ಮುಂದಿನ ನಾಲ್ಕು ದಿನ ಕರಾವಳಿಯಲ್ಲಿ ಮಳೆಯ ಸಿಂಚನ..! ಹವಾಮಾನ ಇಲಾಖೆ ಮುನ್ಸೂಚನೆ
ಮಂಗಳೂರು: ಕಳೆದ ಕೆಲವು ದಿನಗಳಿಂದ ಸುಡು ಬಿಸಿಲಿಗೆ ಬಸವಳಿದು ಜನರು ಕಂಗಾಲಾಗಿದ್ದು, ಕೆಲವೊಂದು ಕಡೆ ವರುಣನ ಕೃಪೆಗಾಗಿ ಜನರು ದೇವರಿಗೆ ಪ್ರಾರ್ಥನೆ ಸಲ್ಲಿಸಿ ಪೂಜಾ ಕಾರ್ಯಗಳನ್ನು ನೆರವೇರಿಸುತ್ತಿದ್ದಾರೆ.
ಈ ನಡುವೆ ಬಿಸಿ ಶಾಖದಿಂದ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿನ ಜನರು ನಿನ್ನೆ ಕೆಲವೆಡೆ ಸುರಿದ ಮಳೆಯಿಂದಾಗಿ ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಇನ್ನು ಬೆಂಗಳೂರಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಅಲ್ಲಲ್ಲಿ ಅಲ್ಪಾ ಸ್ವಲ್ಪ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಇದೇ ವೇಳೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ.
ಮುಂದೆ ಓದಿ..; ಈ ಸರ್ವಾಧಿಕಾರಿಗೆ ಬೇಕಂತೆ ವರ್ಷಕ್ಕೆ 25 ಕನ್ಯೆಯರು..!! ಏನಿದು ಕಾಮಕಾಂಡ?
ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಹಗುರ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ. ಅದರಲ್ಲೂ ಬೆಂಗಳೂರಿನಲ್ಲಿ ಗುಡುಗು, ಮಿಂಚಿನ ಜತೆಗೆ ಅಲ್ಲಲ್ಲಿ ಚದುರಿದ ಮಳೆ ಬೀಳುವ ಸಂಭವವಿದೆ. ಮೇ 6 ಮತ್ತು 7 ರಂದು ಸಾಧಾರಣ ಅಥವಾ ಅದಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಿಜಾಪುರ, ಬಾಗಲಕೋಟೆ, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ಬಿಸಿಗಾಳಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
DAKSHINA KANNADA
ಕೋಸ್ಟಲ್ ವುಡ್ ಅಂಗಳದಲ್ಲಿ ‘ಗಬ್ಬರ್ ಸಿಂಗ್’ ಹವಾ ಶುರು
ಮಂಗಳೂರು : ಬಹುನಿರೀಕ್ಷಿತ ಚಿತ್ರ ‘ಗಬ್ಬರ್ ಸಿಂಗ್’ ಇಂದು (ಮೇ 3) ತೆರೆಗಪ್ಪಳಿಸಿದೆ. ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ಚಂದ್ರಶೇಖರ ನಾನಿಲ್, ನಾಗೇಶ್ ಪೂಜಾರಿ ಅರ್ಪಿಸುವ ಸತೀಶ್ ಪೂಜಾರಿ ಬಾರ್ಕೂರು ನಿರ್ಮಾಣದ “ಗಬ್ಬರ್ ಸಿಂಗ್” ಮಂಗಳೂರಿನ ಭಾರತ್ ಸಿನಿಮಾಸ್ ಚಿತ್ರಮಂದಿರದಲ್ಲಿ ತೆರೆಕಂಡಿದೆ.
ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಟ್ರಸ್ಟಿ ಎಂ.ಶೇಖರ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಚಲನಚಿತ್ರಕ್ಕೆ ಶುಭ ಹಾರೈಸಿದರು. ಮುಖ್ಯ ಅತಿಥಿ ನಿರ್ಮಾಪಕ ನಿರ್ದೇಶಕ ಪ್ರಕಾಶ್ ಪಾಂಡೇಶ್ವರ್ ಮಾತನಾಡಿ, ತುಳು ಸಿನಿಮಾ ತೆರೆಕಾಣದೆ ಕೆಲವು ಸಮಯ ಆಗಿದೆ. ಬೇಸಿಗೆ ಕಾಲದಲ್ಲಿ ತರೆಕಾಣುತ್ತಿರುವ ಗಬ್ಬರ್ ಸಿಂಗ್ ಸಿನಿಮಾ ಹಾಸ್ಯಭರಿತವಾಗಿದ್ದು, ಪ್ರೇಕ್ಷಕರಿಗೆ ಸಂಪೂರ್ಣ ಮನರಂಜನೆ ಒದಗಿಸಿದೆ. ಭೋಜರಾಜ್ ವಾಮಂಜೂರು ಅವರ ಹಾಸ್ಯಕ್ಕೆ ಒತ್ತು ಕೊಟ್ಟ ಪಾತ್ರ ಜೊತೆಗೆ ಗಿರೀಶ್ ಶೆಟ್ಟಿಯವರ ಖಡಕ್ ವಿಲನ್ ಪಾತ್ರ, ನಾಯಕ ಶರಣ್ ಶೆಟ್ಟಿ, ನಾಯಕಿ ವೆನ್ಸಿಟಾ ಡಯಾಸ್ ಪಾತ್ರಗಳು ಗಮನ ಸೆಳೆಯುತ್ತದೆ ಎಂದರು.
ಸಮಾರಂಭದಲ್ಲಿ ಡಾ ಮೆಲ್ವಿನ್ ಡಿ ಸೋಜಾ, ರಂಜಿತಾ ಹೇಮನಾಥ ಶೆಟ್ಟಿ ಕಾವು, ಭೋಜರಾಜ ವಾಮಂಜೂರು, ತುಳು ಚಲನ ಚಿತ್ರನಿರ್ಮಾಪಕರ ಸಂಘದ ಅಧ್ಯಕ್ಷ ಆರ್ ಧನರಾಜ್, ಉದ್ಯಮಿ ಗಿರೀಶ್ ಎಂ ಶೆಟ್ಟಿಕಟೀಲ್, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಮೋಹನ್ ಕೊಪ್ಪಲ, ತಮ್ಮಲಕ್ಷ್ಮಣ, ಮಧು ಸುರತ್ಕಲ್, ಚಂದ್ರಶೇಖರ ನಾನಿಲ್ ಹಳೆಯಂಗಡಿ, ಜಯಾನಂದ ಅಮೀನ್, ನಿರ್ಮಾಪಕ ಸತೀಶ್ ಪೂಜಾರಿ ಬಾರ್ಕೂರು, ನಟ ಶರಣ್ ಶೆಟ್ಟಿ, ನಟಿ ವೆನ್ಸಿಟಾ ಡಯಾಸ್, ರಾಹುಲ್ ಅಮೀನ್ ಮೊದಲಾದವರು ಉಪಸ್ಥಿತರಿದ್ದರು.
ಎಲ್ಲೆಲ್ಲಿ ತೆರೆಗೆ?
ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಸಿನಿಪೊಲೀಸ್, ಪಿವಿಆರ್, ಉಡುಪಿಯಲ್ಲಿ ಕಲ್ಪನಾ ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್, ಬೆಳ್ತಂಗಡಿಯಲ್ಲಿ ಭಾರತ್ ಚಿತ್ರ ಮಂದಿರಗಳಲ್ಲಿ “ಗಬ್ಬರ್ ಸಿಂಗ್” ಸಿನಿಮಾ ತೆರೆ ಕಂಡಿದೆ.
ನೈಜಘಟನೆಯಾಧಾರಿತ ಚಿತ್ರ :
‘ಗಬ್ಬರ್ ಸಿಂಗ್’ ಸಿನಿಮಾ ವಿಭಿನ್ನ ಕತೆಯನ್ನೊಳಗೊಂಡಿದ್ದು, ಉತ್ತರ ಪ್ರದೇಶದಲ್ಲಿ ನಡೆದ ಘಟನೆಯೊಂದನ್ನು ಆಧರಿಸಿ ಪ್ರೇಕ್ಷಕರಿಗೆ ಇಷ್ಟವಾಗುವ ರೀತಿಯಲ್ಲಿ ಕತೆಯನ್ನು ಹೆಣೆಯಲಾಗಿದೆ. ಉತ್ತಮ ಕತೆ, ನವಿರಾದ ಹಾಸ್ಯದೊಂದಿಗೆ ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ಸಿನಿಮಾದಲ್ಲಿ ಆರು ಹಾಡು, ನಾಲ್ಕು ಫೈಟ್ಸ್ ಇದೆ. ಸಿನಿಮಾಕ್ಕೆ ಸುರತ್ಕಲ್, ಚಿತ್ರಾಪುರ, ಬೈಕಂಪಾಡಿ ಮೊದಲಾದ ಪ್ರದೇಶಗಳಲ್ಲಿ ಸಿನಿಮಾಕ್ಕೆ ಮೂರು ಹಂತಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.
ಇದನ್ನೂ ಓದಿ : ಅಜೆಕಾರು : ಮನೆ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಸಾ*ವು
ತಾರಾಂಗಣ :
ನಾಯಕ ನಟನಾಗಿ ಶರಣ್ ಶೆಟ್ಟಿ, ನಾಯಕಿಯಾಗಿ ವೆನ್ಸಿಟಾ ಅಭಿನಯಿಸಿದ್ದಾರೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಯಾದಾಗ ಮತ್ತೆ ಶಾಂತಿ ನೆಲೆಸುವಂತೆ ಮಾಡುವ ಖಡಕ್ ಅಧಿಕಾರಿ ಪಾತ್ರದಲ್ಲಿ ಶರಣ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. “ಗಬ್ಬರ್ ಸಿಂಗ್” ಆ್ಯಕ್ಷನ್ ಥ್ರಿಲ್ಲರ್ ಫ್ಯಾಮಿಲಿ ಓರಿಯೆಂಟೆಡ್ ಫಿಲ್ಮ್ ಆಗಿದೆ.
ಸಿನಿಮಾ ಕತೆ, ಚಿತ್ರಕತೆ, ಸತೀಶ್ ಪೂಜಾರಿ ಬಾರ್ಕೂರ್, ಮಧು ಸುರತ್ಕಲ್ ಸಂಭಾಷಣೆ, ಮುಖ್ಯ ಪಾತ್ರದಲ್ಲಿ ಕುಸೇಲ್ದರಸೆ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಾಯಿಕೃಷ್ಣ, ಉಮೇಶ್ ಮಿಜಾರ್, ರವಿರಾಮ ಕುಂಜ, ಗಿರೀಶ್ ಎಂ. ಶೆಟ್ಟಿ ಕಟೀಲ್, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್, ಉದಯ ಆಳ್ವ ಇಡ್ಯಾ, ಸಂದೀಪ್ ಭಕ್ತ, ಕಿರಣ್ ಮಲ್ಪೆ, ಪೂರ್ಣಿಮಾ ಶೆಟ್ಟಿ, ಪವಿತ್ರ ಶೆಟ್ಟಿ,ಚಂದ್ರಹಾಸ ಶೆಟ್ಟಿ ಮಾಣಿ, ಸಂಪತ್ ಲೋಬೋ, ಆಶಾ ಶೆಟ್ಟಿ ಶಿಬರೂರು, ಲಹರಿ ಶೆಟ್ಟಿ ಪಡ್ರೆ, ಶಿಲ್ಪಾ ಶೆಟ್ಟಿ, ಭವ್ಯಾ ಶೆಟ್ಟಿ ಸುರತ್ಕಲ್ ಸಂತೋಷ್, ಚಂದ್ರಹಾಸ ಶೆಟ್ಟಿ ಕಪ್ಪೆಟ್ಟು, ಫ್ರಾಂಕಿ ಕೊಳಲಗಿರಿ, ಉಮೇಶ್ ಶೆಟ್ಟಿ ಹಾವಂಜೆ, ಬೇಬಿ ಆಧ್ಯಾ ಉಡುಪಿ ಮೊದಲಾದವರಿದ್ದಾರೆ.
LATEST NEWS
ಈ ಸರ್ವಾಧಿಕಾರಿಗೆ ಬೇಕಂತೆ ವರ್ಷಕ್ಕೆ 25 ಕನ್ಯೆಯರು..!! ಏನಿದು ಕಾಮಕಾಂಡ?
ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ನ ಕರ್ಮಕಾಂಡವನ್ನು ಅಲ್ಲಿನ ಯುವತಿಯೊಬ್ಬಳು ಬಯಲಿಗೆಳೆದಿದ್ದಾಳೆ. ಉತ್ತರ ಕೊರಿಯಾದಿಂದ ಪರಾರಿಯಾಗಿ ತನ್ನ ದೇಶದ ಸರ್ವಾಧಿಕಾರಿಯ ಕರಾಳ ಮುಖವನ್ನು ಬಿಚ್ಚಿಟ್ಟಿದ್ದಾಳೆ. ಇಯೋನ್ಮಿ ಪಾರ್ಕ್ ಎಂಬ ಯುವತಿ ದೇಶದ ನಾಯಕ ಕಿಮ್ ಜಾಂಗ್ ಉನ್ ಬಗ್ಗೆ ಸಂವೇದನಾಶೀಲ ವಿಷಯಗಳನ್ನು ಬಹಿರಂಗಪಡಿಸಿದ್ದಾರೆ. ಕಿಮ್ ಜೊಂಗ್-ಉನ್ ತನ್ನ “ಸಂತೋಷದ ತಂಡ(Pleasure Squad)” ಗಾಗಿ ಪ್ರತಿ ವರ್ಷ 25 ಕನ್ಯೆಯರನ್ನು ಆರಿಸಿಕೊಳ್ಳುತ್ತಾನಂತೆ.
ಇನ್ನು ಕನ್ಯೆಯರನ್ನು ಅವರ ನೋಟ ಮತ್ತು ರಾಜಕೀಯ ನಿಷ್ಠೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಕಿಮ್ನ “ಪ್ಲೆಶರ್ ಸ್ಕ್ವಾಡ್” ಗಾಗಿ ತಾನು ಎರಡು ಬಾರಿ ಸ್ಕೌಟ್ ಮಾಡಲ್ಪಟ್ಟಿದ್ದೇನೆ ಆದರೆ ತನ್ನ ಕುಟುಂಬದ ಸ್ಥಾನಮಾನದ ಕಾರಣದಿಂದ ಆಯ್ಕೆಯಾಗಲಿಲ್ಲ ಎಂದು ಪಾರ್ಕ್ ಬಹಿರಂಗಪಡಿಸಿದ್ದಾರೆ.
ಹುಡುಗಿಯರ ಆಯ್ಕೆ ಹೇಗಾಗುತ್ತೆ ಗೊತ್ತಾ?
ಇನ್ನು ಕನ್ಯೆಯರನ್ನು ಅವರ ಸೌಂದರ್ಯ ನೋಡಿ ಆಯ್ಕೆ ಮಾಡಲಾಗುತ್ತದೆ. ಅಧಿಕಾರಿಗಳ ತಂಡ ಶಾಲಾ ಮೈದಾನಕ್ಕೆ, ಶಾಲೆಗಳಿಗೆ ಭೇಟಿ ಕೊಡ್ತಾರೆ. ಈ ವೇಳೆ ಸುಂದರವಾದ ಹುಡುಗಿಯರು ಕಂಡರೆ ಮೊದಲು ಹುಡುಗಿಯ ಮನೆಯ ಬ್ಯಾಕ್ಗ್ರೌಂಡ್ ವಿಚಾರಣೆ ಮಾಡ್ತಾರೆ. ನಂತರ ಕುಟುಂಬದ ಸ್ಥಿತಿ ಹಾಗೂ ರಾಜಕೀಯ ಸ್ಥಿತಿಯನ್ನು ಪರಿಶೀಲನೆ ಮಾಡ್ತಾರೆ. ಬಳಿಕ ಇದರಲ್ಲಿ ಆಯ್ಕೆ ಆದ ಹುಡುಗಿಯರನ್ನು ಕಿಮ್ ಜಾಂಗ್ ಉನ್ ತಂಡ ಬಳಸಿಕೊಳ್ಳುತ್ತದೆ. ಇದಕ್ಕೂ ಮೊದಲು ಕನ್ಯೆಯರನ್ನು ಕನ್ಯತ್ವ ಪರೀಕ್ಷೆಗೆ ವೈದ್ಯಕೀಯ ಪರಿಕ್ಷೆಯನ್ನು ಮಾಡಲಾಗುತ್ತದೆ. ಪರೀಕ್ಷೆಯ ಸಮಯದಲ್ಲಿ ಹುಡುಗಿಯರ ಮೈ ಮೇಲೆ ಸಣ್ಣ ಗಾಯದಂತಹ ಸಣ್ಣ ದೋಷ ಕಂಡ ಬಂದರೂ ರಿಜೆಕ್ಟ್ ಮಾಡಲಾಗುತ್ತೆ. ಇನ್ನೂ ಕಠಿಣ ಪರೀಕ್ಷೆ ಬಳಿಕ ಆಯ್ಕೆ ಆದ ಹುಡುಗಿಯರನ್ನು ಪೊಂಗ್ಯಾಂಗ್ಗೆ ಕಳುಹಿಸಲಾಗುತ್ತದೆ. ಅವರ ಏಕೈಕ ಉದ್ದೇಶ ಅಲ್ಲಿನ ಸರ್ವಾಧಿಕಾರಿಯ ಆಸೆಗಳನ್ನು ಪೂರೈಸುವುದಾಗಿದೆ ಎಂದು ಪಾರ್ಕ್ ಹೇಳಿದ್ದಾರೆ.
ಮುಂದೆ ಓದಿ..; ಎರಡು ಬಾರಿ ಅಕ್ರಮವಾಗಿ ಗರ್ಭಿಣಿಯಾದ ಅಪ್ರಾಪ್ತೆ..! ಪೋಷಕರ ವಿರುದ್ಧ ದೂರು.!!ಮುಂದೇನಾಯ್ತು?
ಮೂರು ತಂಡಗಳಾಗಿ ವಿಂಗಡಣೆ:
ಹುಡುಗಿಯರನ್ನು ಮೂರು ತಂಡಗಳಾಗಿ ವಿಂಗಡಿಸಲಾಗುತ್ತದೆ. ಒಂದು ತಂಡದಲ್ಲಿ ಮಸಾಜ್ ತರಬೇತಿ ನೀಡಿದರೆ ಇನ್ನೊಂದು ತಂಡದಲ್ಲಿ ಹಾಡುಗಳನ್ನು ಹಾಗೂ ನೃತ್ಯಗಳನ್ನು ಮಾಡಲು ಇವರನ್ನು ತಯಾರು ಮಾಡ್ತಾರೆ. ಇನ್ನೊಂದು ತಂಡದಲ್ಲಿ ಸರ್ವಾಧಿಕಾರಿ ಹಾಗೂ ಇತರ ಪುರುಷರಿಗೆ ಲೈಂಗಿಕವಾಗಿ ಖುಷಿ ನೀಡುವುದನ್ನು ಕಲಿಸಲಾಗುವುದು. ಈ ಕುರಿತಾಗಿ ಅವರಿಗೆ ಟ್ರೈನ್ ಮಾಡಲಾಗುತ್ತದೆ ಎಂದು ಪಾರ್ಕ್ ಹೇಳಿದ್ದಾರೆ.
ಇದರಲ್ಲಿ ಅತ್ಯಂತ ಅಕರ್ಷಕ ಕನ್ಯೆಯರನ್ನು ಸರ್ವಾಧಿಕಾರಿಯ ಸೇವೆ ಮಾಡಲು ನೇಮಿಸಿದರೆ, ಇನ್ನೂ ಕೆಳ ಶ್ರೇಣಿಯ ಹುಡುಗಿಯರನ್ನು ರಾಜಕಾರಣಿಗಳು, ಕೆಲ ಜನರನ್ನು ತೃಪ್ತಿ ಪಡಿಸಲು ನಿಯೋಜನೆ ಮಾಡಲಾಗುತ್ತದೆ. ಇನ್ನು ಹುಡುಗಿಯರಿಗೆ 20 ವರ್ಷ ದಾಟಿದ ಬಳಿಕ ಅವರನ್ನು ಈ ತಂಡದಲ್ಲಿ ಉಳಿಸಿಕೊಳ್ಳುವುದಿಲ್ಲ. ಇದರಲ್ಲಿ ಕೆಲವು ಹುಡುಗಿಯರು ನಾಯಕರ ಅಂಗರಕ್ಷರನ್ನು ಮದುವೆಯಾಗುತ್ತಾರೆ. ಈ ‘ಪ್ಲೆಶರ್ ಸ್ಕ್ವಾಡ್’ ಅನ್ನೋದು ಕಿಮ್ ಜಾಂಗ್-ಉನ್ ತಂದೆಯ ಕಾಲದಿಂದಲೂ ಹೀನ ಕೃತ್ಯ ನಡೆದುಕೊಂಡು ಬಂದಿದೆ ಎಂದು ಪಾರ್ಕ್ ಉತ್ತರ ಕೊರಿಯಾ ಸರ್ವಾಧಿಕಾರಿಯ ಕರ್ಮಕಾಂಡವನ್ನು ಎಳೆ ಎಳೆಯಾಗಿ ವಿವರಿಸಿದ್ದಾರೆ.
- FILM7 days ago
ಮತ್ತೆ ಬಾಯ್ ಫ್ರೆಂಡ್ ಬದಲಾಯಿಸಿದ ಶೃತಿ ಹಾಸನ್..!
- FILM6 days ago
PHOTOS : ಗೀತಾ ‘ವಿಜಯ್’ ಅದ್ದೂರಿ ಮದುವೆ; ಮೆಚ್ಚುಗೆ ಪಡೆದ ಧನುಷ್ ಮಾಡಿದ ಆ ಒಂದು ಕಾರ್ಯ!
- LATEST NEWS7 days ago
ವಧು ಕೇಳಿದ ಆ ಒಂದು ಪ್ರಶ್ನೆ; ತಬ್ಬಿಬ್ಬಾದ ವರ..ಮದುವೆ ಕ್ಯಾನ್ಸಲ್!
- DAKSHINA KANNADA6 days ago
ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!
Pingback: ನೇಹಾ ಹ*ತ್ಯೆ ಪ್ರಕರಣ : ಆಕ್ರೋಶ ಹೊರ ಹಾಕಿದ ತಾರೆಯರು - NAMMAKUDLA NEWS - ನಮ್ಮಕುಡ್ಲ ನ್ಯೂಸ್
Pingback: ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..! - NAMMAKUDLA NEWS - ನಮ್ಮಕುಡ್ಲ ನ್ಯೂಸ್