Connect with us

DAKSHINA KANNADA

ರಾಜಕೀಯ ಜಂಜಾಟ ಬಿಟ್ಟು ಪಂಚೆ ಉಟ್ಟು ಗದ್ದೆಗಿಳಿದ ಬಿಜೆಪಿ ರಾಜ್ಯಾಧ್ಯಕ್ಷ

Published

on

ಮಂಗಳೂರು: ರಾಜಕೀಯ ಜಂಜಾಟ ಬಿಟ್ಟು, ಪಂಚೆ ಉಟ್ಟು ಗದ್ದೆಗಿಳಿದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‍ ಅವರು ಕೃಷಿ ಮಾಡಿದ್ದಾರೆ.

ಜಿಲ್ಲೆಯಾದ್ಯಂತ ನೂರಾರು ಎಕರೆ ಭತ್ತ ಬೆಳೆಯೋ ಭೂಮಿಗಳು ಪಾಳು ಬಿದ್ದಿದೆ. ಹತ್ತಾರು ವರ್ಷಗಳಿಂದ ಕೃಷಿ ಕಾರ್ಯವನ್ನೇ ಮಾಡದ ಪರಿಣಾಮ ಸಂಪೂರ್ಣ ಹಡೀಲು ಬಿದ್ದಿವೆ. ಹೀಗಾಗಿ ಇಂಥಹ ಭೂಮಿಗಳಲ್ಲಿ ಮತ್ತೆ ಬಂಗಾರದ ಬೆಳೆ ತೆಗೆಯೋ ಯೋಜನೆಯೊಂದನ್ನ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ರೂಪಿಸಿದ್ದಾರೆ.

ಜಿಲ್ಲೆಯ ಜನಪ್ರತಿನಿಧಿಗಳ ಮೂಲಕ ಹಡೀಲು ಗದ್ದೆಗಳಲ್ಲಿ ಭತ್ತ ಬೆಳೆಯೋ ವಿನೂತನ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಹೀಗಾಗಿ ಈ ಯೋಜನೆಯ ಭಾಗವಾಗಿ ಇಂದು ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ನೈತಾಡಿ ಗ್ರಾಮದ ಎರಡು ಹಡೀಲು ಗದ್ದೆಗಳಲ್ಲೂ ಭತ್ತ ಬೆಳೆಯೋ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಆದ್ರೆ ಈ ಎರಡೂ ಗದ್ದೆಯಲ್ಲಿ ಸ್ವತಃ ದ.ಕ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೇ ಕೃಷಿ ಕಾರ್ಯ ಮಾಡುವ ಮೂಲಕ ಪ್ರೇರಣೆಯ ಹೆಜ್ಜೆ ಇಟ್ಟಿದ್ದಾರೆ.

ಶಾಸ್ತ್ರೋಕ್ತವಾಗಿ ಗದ್ದೆಯ ಬಳಿ ದೀಪ ಬೆಳಗಿಸಿದ ಬಳಿಕ ಸ್ಥಳೀಯರ ಜೊತೆ ಸೇರಿ ತಾವೇ ನೈತಾಡಿಯ ಗದ್ದೆಯಲ್ಲಿ ನೇಗಿಲ ಕೋಣಗಳ ಸಹಿತ ಗದ್ದೆಯ ಉಳುಮೆ ಮಾಡಿದರು. ಅಲ್ಲದೇ ಪಕ್ಕದಲ್ಲೇ ಇದ್ದ ಮತ್ತೊಂದು ಗದ್ದೆಯನ್ನ ಟ್ರಾಕ್ಟರ್ ಏರಿ ಹದ ಮಾಡಿದ್ರು. ಜಿಲ್ಲೆಯಾದ್ಯಂತ ಮಳೆರಾಯನ ಅಬ್ಬರ ಜೋರಾಗಿದ್ದರೂ ನಳಿನ್ ಕುಮಾರ್ ಕಟೀಲ್ ಮಾತ್ರ ನೇಗಿಲು ಮತ್ತು ಟ್ರಾಕ್ಟರ್ ಮೂಲಕ ನೈತಾಡಿಯಲ್ಲಿ ಗದ್ದೆ ಕೆಲಸ ಮಾಡಿದ್ದಾರೆ. ಇದಾದ ನಳಿಕ ಮುಳಿಯ ಫಾರ್ಮ್‍ಗೆ ತೆರಳಿ ಅಲ್ಲಿ ಉಳುಮೆ ಮಾಡಿ ತಯಾರಾಗಿದ್ದ ಗದ್ದೆಯಲ್ಲಿ ಸ್ಥಳೀಯರ ಜೊತೆ ಸೇರಿಕೊಂಡು ಕೈಯ್ತಲ್ಲೇ ಪೈರು ನಾಟಿ ಮಾಡೋ ಮೂಲಕ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಂಡರು.

ರಾಜಕೀಯದ ಜಂಜಾಟ ಮರೆತು ನಳಿನ್ ಇವತ್ತು ಕೃಷಿಕರಾಗಿ ಬದಲಾಗಿದ್ದರು. ಮೂಲತಃ ಪುತ್ತೂರಿನ ಕೃಷಿ ಕುಟುಂಬದಿಂದಲೇ ಬಂದಿರೋ ನಳಿನ್ ಸಣ್ಣ ವಯಸ್ಸಲ್ಲಿ ಕೃಷಿ ಕೆಲಸ ಮಾಡಿಕೊಂಡೇ ಬೆಳೆದವ್ರು ಆದ್ರೆ ರಾಜಕಾರಣ ಸೇರಿದ ಮೇಲೆ ಅದರಿಂದ ದೂರವಾಗಿದ್ದ ನಳಿನ್ ಕಟೀಲ್ ಗೆ ಮತ್ತೆ ಕೃಷಿಯ ಸ್ಪರ್ಶ ಸಿಕ್ಕಿದೆ. ಇವತ್ತಿನ ಕಾರ್ಯ ಯುವಜನರಿಗೆ ಪ್ರೇರಣೆ ನೀಡೋ ಉದ್ದೇಶದಿಂದ ಮಾಡಲಾಗಿದೆ. ಹೀಗಾಗಿ ಮುಂದೆ ಹಡೀಲು ಗದ್ದೆಯಲ್ಲಿ ಭತ್ತ ಬೆಳೆಯೋ ಪಕಾರ್ಯವನ್ನ ಎಲ್ಲರೂ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಶಯ ವ್ಯಕ್ತಪಡಿಸಿದ್ದಾರೆ. ಪಾಳು ಬಿಟ್ಟ ಭೂಮಿಯಲ್ಲಿ ಭತ್ತ ಬೆಳೆಯೋಣ ಅನ್ನೋ ಯೋಜನೆ ಮುಜುರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರ ಕನಸಿನ ಯೋಜನೆ. ಇನ್ನು ಈ ಯೋಜನೆಯ ಹಿಂದೆ ಎರಡು ಉದ್ದೇಶಗಳಿವೆ. ಒಂದು ಪಾಳು ಬಿದ್ದ ಗದ್ದೆಗೆ ಮತ್ತೆ ಪುನರ್ಜೀವನ ನೀಡೋದು ಮತ್ತು ಹೆಚ್ಚಿನ ಕೆಂಪು ಕುಚುಲಕ್ಕಿ ಬೆಳೆಯೋದು.

ಇಡೀ ರಾಜ್ಯದಲ್ಲಿ ಕರಾವಳಿ ಭಾಗದ ಜನರು ಮಾತ್ರ ಅನ್ನಕ್ಕೆ ಕೆಂಪು ಕುಚುಲಕ್ಕಿ ಬಳಕೆ ಮಾಡ್ತಾರೆ. ಆದರೆ ಪಡಿತರ ಅಂಗಡಿಗಳಲ್ಲಿ ಬಿಳಿ ಅಕ್ಕಿಯೇ ಸಿಗೋ ಕಾರಣ ಕರಾವಳಿ ಜಿಲ್ಕೆಗಳಿಗೆ ಕೆಂಪು ಕುಚುಲಕ್ಕಿ ಪೂರೈಕೆಗೆ ಸಚಿವ ಕೋಟಾ ಆಹಾರ ಸಚಿವರಿಗೆ ಮನವಿ ಸಲ್ಲಿಸಿದ್ದರು. ಆದರೆ ಅಷ್ಟರ ಪ್ರಮಾಣದಲ್ಲಿ ಕೆಂಪು ಕುಚುಲಕ್ಕಿ ಪೂರೈಕೆ ಅಸಾಧ್ಯ. ಈ ಕಾರಣದಿಂದಲೂ ಜಿಲ್ಲೆಯ ಹಡೀಲು ಗದ್ದೆಗೆ ಹೊಸ ಸ್ಪರ್ಶ ನೀಡೋ ಯೋಜನೆ ಹುಟ್ಟಿಕೊಂಡಿದೆ. ಜೊತೆಗೆ ಜಿಲ್ಲೆಯ ಹಡೀಲು ಗದ್ದೆಗಳನ್ನ ಬೆಳೆಸೋ ಉದ್ದೇಶವೂ ಇದೆ. ನಳಿನ್ ಕುಮಾರ್ ಕಟೀಲ್ ಕೃಷಿ ಮಾಡಿದ ಎರಡೂ ಗದ್ದೆಗಳು ಹಡೀಲು ಗದ್ದೆಗಳಾಗಿದ್ದು, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಮುರಳಿಕೃಷ್ಣ ಹಸಂತಡ್ಕ ಮತ್ತು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅದ್ಯಕ್ಷ ಮುಳಿಯ ಕೇಶವ ಪ್ರಸಾದ್ ಮುತುವರ್ಜಿಯಲ್ಲಿ ಈ ಕೃಷಿ ಕಾರ್ಯ ನಡೆದಿದೆ. ಇವೆರಡೂ ಗದ್ದೆಗಳಲ್ಲಿ ಬೆಳೆದ ಅಕ್ಕಿಯನ್ನ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಸೇರಿ ಪುತ್ತೂರಿನ ಇತರೆ ದೇವಸ್ಥಾನಗಳ ಅನ್ನದಾನ ಕಾರ್ಯಕ್ಕೆ ಬಳಕೆ ಮಾಡಲು ನಿರ್ಧರಿಸಲಾಗಿದೆ. ಇದರ ಜೊತೆಗೆ ಜಿಲ್ಲೆಯ ಇತರೆ ದೇವಸ್ಥಾನಗಳ ಮೂಲಕ ಊರಿನ ಹಡೀಲು ಗದ್ದೆಗಳಲ್ಲಿ ಭತ್ತ ಕೃಷಿ ಮಾಡಲು ಮಾದರಿ ಹೆಜ್ಜೆ ಇಡಲಾಗಿದೆ. ಒಟ್ಟಾರೆ ಹೊಸ ಕೃಷಿ ಕ್ರಾಂತಿ ಸದ್ಯ ಜಿಲ್ಲೆಯಲ್ಲಿ ಸದ್ದು ಮಾಡ್ತಿದೆ. ರಾಜಕೀಯ ನಾಯಕರೇ ಕೃಷಿ ಕಾರ್ಯಕ್ಕೆ ಮುನ್ನುಡಿ ಇಟ್ಡಿದ್ದಾರೆ.

bangalore

“ಎಂಚ ಉಲ್ಲಾರ್ ಮರ್ರೆ”…. ಎಂದು ತುಳುವಿನಲ್ಲಿ ಮಾತನಾಡಿದ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್

Published

on

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಸಮೂಹ ಶಿಕ್ಷಣ ಸಂಸ್ಥೆಗಳ ಅಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯುತ್ತಿರುವ ಭ್ರಮರ ಇಂಚರ ನುಡಿಹಬ್ಬ ಕಾರ್ಯಕ್ರಮಕ್ಕೆ ಅತಿಥಿಯಾಗಿ ಭಾಗವಹಿಸಿದ ಸ್ಯಾಂಡಲ್ ವುಡ್  ನ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ಭಾಗವಹಿಸಿ ಮಕ್ಕಳ ಜೊತೆಗೆ ಮಕ್ಕಳಂತೆ ಬೆರೆತು ಮಕ್ಕಳನ್ನು ಕೊಂಡಾಡಿದರು.

ಈ ವೇದಿಕೆಯಲ್ಲಿ ವಿದ್ಯಾಥಿಗಳು ನಟಿ ರಚಿತಾ ರಾಮ್ ಅವರ ಡ್ರಾಯಿಂಗ್ ಮಾಡಿ ಕೊಡುಗೆಯಾಗಿ ನೀಡಿದಾಗ ಖುಷಿ ಪಟ್ಟ ನಟಿ ಆ ವಿದ್ಯಾರ್ಥಿಗಳನ್ನು ವೇದಿಕೆಗೆ ತಾವೇ ಕರೆಸಿ ಅಭಿನಂದಿಸದರು.

ಹಾಗೂ ಕೆಲವು ವಿದ್ಯಾರ್ಥಿಗಳ ಜೊತೆ ವೇದಿಕೆಗೆ ಕರೆಸಿ ಹಾಡಿಸಿದರು. ಅದರಲ್ಲಿ ತಾನೇ ಬಂದು ವೇದಿಕೆಯಲ್ಲಿ ಒಂದು ಪುಟಾಣಿ ‘ಬಾಳ ಒಳ್ಳೇರು ನಮ್ಮ ಮಿಸ್ ಎನ ಹೇಳಿದ್ರು ಎಸ್ ಎಸ್ಸು’ ಎಂದು ಹಾಡಿದಾಗ ನಟಿ ಬಹಳ ಖುಷಿ ಪಟ್ಟರು.

ಈ ಸಂದರ್ಭ ರಚಿತರಾಮ್ ಜೊತೆ ಹಾಡಲು ಹೇಳಿದಾಗ ಅವರು ಕೂಡ “ಬಾಳ ಒಳ್ಳೇರು ನಮ್ಮ ಮಿಸ್ ಎನ ಹೇಳಿದ್ರು ಎಸ್ ಎಸ್ಸು” ಎಂದು ನಗ್ತಾ ನಗ್ತಾ ಹಾಡಿದರು.


ಬಳಿಕ ಮಾತನಾಡಿದ ನಟಿ ವಿದ್ಯಾರ್ಥಿಗಳು ಇಂತಹ ವೇದಿಕೆ ಸಿಕ್ಕಾಗ ಬಳಸಿಕೊಳ್ಳಬೇಕು. ಮತ್ತೇ ಇಂತಹ ವೇದಿಕೆ ಸಿಗುವುದಿಲ್ಲ. ನಮ್ಮ ಪ್ರತಿಭೆಯನ್ನು ನಾವೇ ಪ್ರದರ್ಶನ ಮಾಡಬೇಕು. ಬೇರೆ ಯಾರೂ ಕೂಡ ನಮಗೆ ಹೇಳಲು ಬರುವುದಿಲ್ಲ.

ಯಾರೂ ಕೂಡ ಸಪೋರ್ಟ್ ಮಾಡುವುದಿಲ್ಲ. ಸ್ವಾಯತ್ತತೆಯಿಂದ ನಾವು ಗೆಲ್ಲಬೇಕು. ಒಳ್ಳೆ ಒಳ್ಳೆ ವೇದಿಕೆ ಸಿಕ್ಕಾಗ ಬಿಡಬಾರದು. ಅದರ ಜೊತೆಗೆ ನಮ್ಮ ಗುರುಗುಳಿಗೆ ಹಾಗೂ ತಮ್ಮ ಪೋಷಕರಿಗೆ ಗೌರವ ಕೊಡಿ, ಮರ್ಯಾದೆ ಕೊಡಿ ಜೊತೆಗೆ ಅವರನ್ನು ಪ್ರೀತಿಸಿ ಎಂದರು.

ಈ ವೇಳೆ ರಚಿತರಾಮ್ ಕನ್ನಡದಲ್ಲಿ ಮಾತನಾಡಿದಾಗ ವಿದ್ಯಾರ್ಥಿಗಳು ತುಳುವಿನಲ್ಲಿ ಮಾತನಾಡಿ ಎಂದು ಕೂಗಾಡಿದರು. ಆಗ ಅವರು ಎಂಚ ವುಲ್ಲರ್ ಮರ್ರೆ…ಹುಷಾರ್ ವುಲ್ಲರಾ…ಎಂದು ತುಳುವಿನಲ್ಲಿ ಮಾತನಾಡಿದರು.

Continue Reading

BELTHANGADY

Belthangady: ರಸ್ತೆ ಪಕ್ಕದ ಗೂಡಂಗಡಿಯನ್ನು ಧ್ವಂಸಗೊಳಿಸಿದ ಕಿಡಿಗೇಡಿಗಳು..!

Published

on

ಬೆಳ್ತಂಗಡಿ: ಬೆಳ್ತಂಗಡಿ ನಿಡ್ಲೆ ಗ್ರಾಮದ ಬೂಡುಜಾಲು ಎಂಬಲ್ಲಿ ರಸ್ತೆ ಬದಿಯಲ್ಲಿದ್ದ ಗೂಡಂಗಡಿಯನ್ನು ಕಿಡಿಗೇಡಿಗಳು ರಾತ್ರಿಯ ವೇಳೆ ಧ್ವಂಸಗೊಳಿಸಿದ ಘಟನೆ ಸಂಭವಿಸಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ನಿವಾಸಿ ಅಬ್ದುಲ್ ಅಝೀಝ್ ಎಂಬವರು ತಮ್ಮ ಜೀವನೋಪಾಯಕ್ಕಾಗಿ ರಾಜ್ಯ ಹೆದ್ದಾರಿಯ ಬದಿಯಲ್ಲಿ ಗೂಡಂಗಡಿಯನ್ನು ಹಾಕಿ ವ್ಯಾಪಾರ ನಡೆಸುತ್ತಿದ್ದರು.

ಕಳೆದ ಮೂರು ವರ್ಷಗಳಿಂದ ಈ ಗೂಡಂಗಡಿ ಕಾರ್ಯ‌ ನಿರ್ವಹಿಸುತ್ತಿತ್ತು. ರಸ್ತೆ ಸಂಚಾರಕ್ಕೆ ಯಾವುದೇ ಅಡಚಣೆಯಾಗದಂತೆ ಗೂಡಂಗಡಿಯನ್ನು ನಿರ್ಮಿಸಲಾಗಿತ್ತು. ಎಂದಿನಂತೆ ಶುಕ್ರವಾರ ರಾತ್ರಿಯ ವೇಳೆ ಅಂಗಡಿಯನ್ನು ಮುಚ್ಚಿ ಹೋಗಿದ್ದ ಅಬ್ದುಲ್ ಅಝೀಝ್ ಶನಿವಾರ ಬೆಳಗ್ಗೆ ಬಂದು ನೋಡಿದಾಗ ಅಂಗಡಿಯನ್ನು ಧ್ವಂಸಗೊಳಿಸಿರುವುದು ಕಂಡು ಬಂದಿದೆ. ಅಂಗಡಿಯಲ್ಲಿದ್ದ ವಸ್ತುಗಳೆಲ್ಲವನ್ನು ಹೊರಗೆಳೆದು ನಾಶಗೊಳಿಸಲಾಗಿದೆ. ತಂಪು ಪಾನೀಯಗಳ ಬಾಟ್ಲಿಗಳನ್ನು ಒಡೆದು ಹಾಕಲಾಗಿದೆ. ಅಂಗಡಿಯನ್ನು ಬಹುತೇಕ ಧ್ವಂಸಗೊಳಿಸಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ.

Continue Reading

DAKSHINA KANNADA

Mangaluru: 4 ತಿಂಗಳ ಮಗುವನ್ನು ಉಸಿರುಕಟ್ಟಿಸಿ ಕೊಂದ ತಾಯಿ ಕೂಡ ಜೀವಾಂತ್ಯ..!

Published

on

ಮಂಗಳೂರು:  ತನ್ನ ಪುಟ್ಟ ಕಂದಮ್ಮನನ್ನು ನೀರಿನ ಟಬ್‌ ಒಳಗೆ ಮುಳುಗಿಸಿ ತಾನೂ ನೇಣು ಬಿಗಿದುಕೊಂಡು ಹೆತ್ತಬ್ಬೆಯೊಬ್ಬಾಕೆಯ ಕೃತ್ಯ ಮನಕಲಕಿದ ಘಟನೆ ಮಂಗಳೂರಿನ ಗುಜ್ಜರಕರೆ ಬಳಿ ನಡೆದಿದೆ.

ಅಪಾರ್ಟ್‌ಮೆಂಟ್‌ ಒಂದರಲ್ಲಿ ವಾಸ ಮಾಡುವ ಫಾತಿಮಾ ರುಕಿಯಾ(23) ಎಂಬಾಕೆ ತನ್ನ ನಾಲ್ಕೂವರೆ ತಿಂಗಳ ಮಗು ಅಬ್ದುಲ್ಲಾ ಹೂದ್‌ ಎಂಬಾತನನ್ನು ನೀರಿನ ಟಬ್‌ನೊಳಗೆ ಮುಳುಗಿಸಿ ಉಸಿರುಕಟ್ಟಿ ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಫಾತಿಮಾಗೆ ಸುಮಾರು ಒಂದೂವರೆ ವರ್ಷದ ಹಿಂದೆ ಮುಹಮ್ಮದ್ ಉನೈಸ್ ಎಂಬವರ ಜೊತೆ ಮದುವೆಯಾಗಿತ್ತು. 2023 ಜು. 7 ರಂದು ಹೆರಿಗೆಯಾಗಿತ್ತು. ಅಬ್ದುಲ್ಲಾ ಹೂದ್ ಎಂಬ ಸುಮಾರು 4ವರೆ ತಿಂಗಳ ಗಂಡು ಮಗು ಇತ್ತು. ಹೆರಿಗೆಯಾದ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಫಾತಿಮಾಗೆ ಚಿಕಿತ್ಸೆಯನ್ನು ಕೂಡಾ ನೀಡಲಾಗುತ್ತಿತ್ತು. ಈ ನಡುವೆ ಫಾತಿಮಾ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತನ್ನ ತಾಯಿ ಬಳಿ ಹೇಳುತ್ತಿದ್ದರು ಎನ್ನಲಾಗಿದೆ. ನಿನ್ನೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1-30 ಗಂಟೆಯ ಮಧ್ಯೆ ಮನೆಯಲ್ಲಿ ಯಾರೂ ಇಲ್ಲದ ಸಮಯ ಫಾತಿಮಾ ರುಕಿಯಾ ತಾನು ವಾಸವಾಗಿದ್ದ ಮಂಗಳೂರು ನಗರದ ಗುಜ್ಜರಕೆರೆ ಲೇಕ್ ವ್ಯೂ ಅಪಾರ್ಟ್ಮೆಂಟ್​ನ ಬೆಡ್ ರೂಮ್​ನ ಗ್ಯಾಲರಿಯಲ್ಲಿ ಪ್ಲಾಸ್ಟಿಕ್ ಟಬ್​ನಲ್ಲಿ ನೀರು ತುಂಬಿಸಿ ಮಗುವನ್ನು ನೀರಿನಲ್ಲಿ ಮುಳುಗಿಸಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾಳೆ. ಬಳಿಕ ತಾನೂ ಕೂಡ ರೂಮಿನ ಕಿಟಕಿಯ ಕಬ್ಬಿಣದ ಸರಳಿಗೆ ಸೀರೆಯಿಂದ ಕಟ್ಟಿ ಮತ್ತೊಂದು ತುದಿಯಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Continue Reading

LATEST NEWS

Trending