DAKSHINA KANNADA
Mangaluru: ರೋಹನ್ ಕಾರ್ಪೊರೇಷನ್ ಸಂಸ್ಥೆ ಮಾಲಕ ರೋಹನ್ ಮೊಂತೆರೊ ಅವರಿಗೆ ‘ನಮ್ಮಕುಡ್ಲ ಪ್ರಶಸ್ತಿ’
ಮಂಗಳೂರು: ನಮ್ಮ ಕುಡ್ಲ ವಾಹಿನಿ ವತಿಯಿಂದ ಆಯೋಜಿಸಲಾದ ನಮ್ಮ ಕುಡ್ಲ ಗೂಡು ದೀಪ ಸ್ಪರ್ಧೆ 2023 ಹಾಗೂ ನಮ್ಮ ಕುಡ್ಲ ಪ್ರಶಸ್ತಿ ಪ್ರದಾನ ಸಮಾರಂಭ ನಿನ್ನೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಅದ್ದೂರಿಯಾಗಿ ನಡೆಯಿತು.
ಸ್ಮಾರ್ಟ್ ಸಿಟಿ ಮಂಗಳೂರಿಗೆ ತಮ್ಮ ವಿನೂತನ ವಿನ್ಯಾಸದ ಕಟ್ಟಡಗಳ ಕೊಡುಗೆಗಳೊಂದಿಗೆ ಇನ್ನಷ್ಟು ಮೆರುಗು ನೀಡಿದ ರೋಹನ್ ಕಾರ್ಪೊರೇಷನ್ ಸಂಸ್ಥೆ ಮಾಲಕ ರೋಹನ್ ಮೊಂತೆರೊ ಅವರಿಗೆ ನಮ್ಮಕುಡ್ಲ ಪ್ರಶಸ್ತಿ, ಕಂಬಳ ಕ್ಷೇತ್ರದ ಸಾಧಕ, ತೀರ್ಪುಗಾರ ಗುಣಪಾಲ ಕಡoಬ ಅವರಿಗೆ ನಮ್ಮ ತುಳುವೆರ್ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಂಕನಾಡಿ ಗರೋಡಿ ಬಿಲ್ಲವ ಸೇವಾ ಸಮಾಜ ಸಂಘಟನೆಗೆ ನಮ್ಮಕುಡ್ಲ ಸ್ಥಾಪಕ ಬಿಪಿ ಕರ್ಕೇರ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ, ನಮ್ಮಕುಡ್ಲ ವಾಹಿನಿಯಲ್ಲಿ ಪ್ರಸಾರವಾಗಿ ಅತ್ಯಂತ ಜನಪ್ರಿಯವಾಗಿರುವ ಯಕ್ಷ ತೆಲಿಕೆ ಕಾರ್ಯಕ್ರಮದ ದಿನೇಶ್ ಕೋಡಪದವು ಅವರಿಗೆ ಸನ್ಮಾನದ ಗೌರವಾರ್ಪಣೆ ನಡೆಯಿತು.
ಕಾರ್ಯಕ್ರಮದಲ್ಲಿ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರ ಪುತ್ರ ಉದ್ಯಮಿ ಸಂತೋಷ್ ಪೂಜಾರಿ, ಎಸ್.ಎಲ್. ಶೇಟ್ ಡೈಮಂಡ್ ಹೌಸ್ ನ ಮಾಲಕ ಪ್ರಶಾಂತ್ ಶೇಟ್, ಟಿ ಆಂಡ್ ಸಿ ಪಾಲುದಾರರಾದ ರಾಜೇಶ್ ಎಮ್ ಕೋಟ್ಯಾನ್ ,ಧರ್ಮದರ್ಶಿ ಹರಿಕೃಷ್ಣ ಪುನರೂರು, ಭಾರತ್ ಕೋ ಆಪರೇಟಿವ್ ಬ್ಯಾಂಕಿನ ಸೂರ್ಯಕಾಂತ್ ಜೆ. ಸುವರ್ಣ, ಕೆಎಂಎಫ್ ಅಧ್ಯಕ್ಷ ಸುಚರಿತ ಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿದ್ದರು. ನಮ್ಮಕುಡ್ಲ ವಾಹಿನಿ ನಿರ್ದೇಶಕರಾದ ಹರೀಶ್ ಕರ್ಕೇರ, ಲೀಲಾಕ್ಷ ಕರ್ಕೇರ, ಸುರೇಶ್ ಬಿ ಕರ್ಕೇರ, ಮೋಹನ್ ಬಿ. ಕರ್ಕೇರ, ಸಂತೋಷ್ ಕರ್ಕೇರ ಅವರು ವೇದಿಕೆಯಲ್ಲಿದ್ದರು. ಪ್ರಶಸ್ತಿ ಸ್ವೀಕರಿಸಿದ ರೋಹನ್ ಮೊಂತೇರೊ, ಪ್ರೊ. ಗುಣಪಾಲ ಕಡಂಬ, ಬಿಲ್ಲವ ಸೇವಾ ಸಮಾಜ ಸಂಘದ ಅಧ್ಯಕ್ಷ ದಿನೇಶ್ ಅಂಚನ್, ದಿನೇಶ್ ಕೋಡಪದವು ಅವರು ಸನ್ಮಾನಕ್ಕೆ ಪ್ರತಿಕ್ರಿಯಿಸಿ ತಮ್ಮ ಸಾಧನೆಯನ್ನು ಗುರುತಿಸಿ ಸನ್ಮಾನಿಸಿದ ನಮ್ಮ ಕುಡ್ಲ ವಾಹಿನಿಗೆ ಕೃತಜ್ಞತೆ ಸಲ್ಲಿಸಿದರು. ಭಾರತ್ ಬ್ಯಾಂಕ್ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ ಅವರನ್ನು ಗೌರವಿಸಲಾಯಿತು. ಕದ್ರಿ ನವನೀತ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.
Ancient Mangaluru
ಕುಂದಾಪುರ: 15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ
ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ.
ಅರಣ್ಯ ಇಲಾಖೆ ವಶದಲ್ಲಿದ್ದ ಆಲೂರಿನ ಆದಿತ್ಯ ಎಂಬವರ ವಾಹನ ಬಿಡುಗಡೆಗಾಗಿ ಮಂಜುನಾಥ್ ಪೂಜಾರಿ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದನು. ಲಂಚ ನೀಡಲು ನಿರಾಕರಿಸಿದ ಆದಿತ್ಯ ಈ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಆದಿತ್ಯ ಅವರಿಂದ 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಮಂಜುನಾಥ್ ಪೂಜಾರಿಯನ್ನು ಬಂಧಿಸಿದರು. ಲೋಕಾಯುಕ್ತ ಎಸ್ಪಿ ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಕೆ.ಸಿ. ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್ ಮತ್ತು ರಫೀಕ್ ಹಾಗೂ ಸಿಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
DAKSHINA KANNADA
ಉಡುಪಿ : ಬೈಕ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಜೀವಾಂತ್ಯ
ಉಡುಪಿ : ಉಡುಪಿಯ ಬ್ರಹ್ಮಾವರದ ಧರ್ಮಾವರಂ ಎಂಬಲ್ಲಿ ಬೈಕಿಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಉಪ್ಪಿನಕೋಟೆಯ 31 ವರ್ಷ ಪ್ರಾಯದ ಪ್ರೀತಮ್ ಡಿ’ ಸಿಲ್ವಾ ಸ್ಥಳದಲ್ಲೇ ಮೃತಪಟ್ಟ ಘಟನೆ ನಿನ್ನೆ ನಡೆದಿದೆ.
ಪ್ರೀತಮ್ ಅವರು ಬೈಕ್ ಚಲಾಯಿಸಿಕೊಂಡು ಬ್ರಹ್ಮಾವರ ಆಕಾಶವಾಣಿ ಪೆಟ್ರೋಲ್ ಪಂಪ್ ಕಡೆಯಿಂದ ಸರ್ವಿಸ್ ರೋಡ್ನಲ್ಲಿ ಆಗಮಿಸಿ ಉಪ್ಪಿನಕೋಟೆಗೆ ತೆರಳಲು ಡಿವೈಡರ್ ಬಳಿ ಸಾಗುತ್ತಿದ್ದಾಗ ಎದುರಿನಿಂದ ಬಂದ ಖಾಸಗಿ ಬಸ್ ಢಿಕ್ಕಿ ಹೊಡೆಯಿತು. ಅವಿವಾಹಿತರಾಗಿದ್ದ ಪ್ರೀತಮ್ ಕೆಟರಿಂಗ್ ಉದ್ಯಮ ನಡೆಸುತ್ತಿದ್ದರು. ಪ್ರೀತಮ್ ಅವರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
DAKSHINA KANNADA
ಮನೆ ಬಿಟ್ಟು ಓಡಿ ಹೋಗಿದ್ದ ಬಂಟ್ವಾಳದ ಪ್ರೇಮಿಗಳು ಕಾಸರಗೋಡಿನಲ್ಲಿ ಪತ್ತೆ
ಬಂಟ್ವಾಳ : 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕು ಸಜೀಪಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿಗಳಾದ ಅಕ್ಕ ಪಕ್ಕದ ಮನೆಗಳ ಯುವಕ ಹಾಗೂ ಯುವತಿಯನ್ನು ಬಂಟ್ವಾಳ ಪೊಲೀಸರು ಕೇರಳದ ಕಾಸರಗೋಡು ಜಿಲ್ಲೆಯ ಕಾಂಞಂಗಾಡಿನಲ್ಲಿ ಪತ್ತೆ ಹಚ್ಚಿ ಊರಿಗೆ ಕರೆ ತಂದಿದ್ದಾರೆ.
ಉದ್ದೊಟ್ಟು ನಿವಾಸಿ ಅಬ್ದುಲ್ಹಮೀದ್ಅವರ ಪುತ್ರಿ ಆಯಿಸತ್ರಸ್ಮಾ(18) ಮತ್ತು ಹೈದರ್ಅವರ ಪುತ್ರ ಮಹಮ್ಮದ್ಸಿನಾನ್ (23) ಅವರು ನ. 23 ರಂದು ತಂತಮ್ಮ ಮನೆಗಳಲ್ಲಿ ಮಲಗಿದ್ದವರು ನ. 24ರಂದು ಬೆಳಗಾಗುವಷ್ಟರಲ್ಲಿ ಕಾಣೆಯಾಗಿದ್ದರು. ಮನೆಯವರ ದೂರಿನಂತೆ ಹುಡುಕಾಟ ನಡೆಸಿದ ಬಂಟ್ವಾಳ ಪೊಲೀಸರು ಅವರಿಬ್ಬರನ್ನೂ ಕಾಂಞಂಗಾಡಿನಲ್ಲಿ ಪತ್ತೆ ಹಚ್ಚಿದ್ದು, ಠಾಣೆಗೆ ತಂದು ವಿಚಾರಿಸಿದಾಗ ತಾವಿಬ್ಬರೂ ಪರಸ್ಪರ ಪ್ರೀತಿಸಿದ್ದು, ಮದುವೆಯಾಗುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.
- bengaluru6 days ago
ಸಿಂಪಲ್ ಆಗಿ ಮದುವೆಯಾದ ಒಳ್ಳೆ ಹುಡುಗ ಪ್ರಥಮ್
- DAKSHINA KANNADA7 days ago
ದ.ಕ ಜಿಲ್ಲೆಯತ್ತ ಗಮನ ನೀಡ್ತೇನೆ, ಮತ್ತೆ ಆಶೀರ್ವಾದ ಮಾಡಿ ಎಂದ ಸಂಸದ ನಳಿನ್
- bangalore6 days ago
ವಿನಯ್ ತರ ದುಷ್ಮಾನ್ ಆದ್ರೂ ಓಕೆ, ಆದ್ರೆ ಸಂಗೀತಾ ತರ ಪ್ರೆಂಡ್ಸ್ ಬೇಡ..!
- bangalore3 days ago
ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ನಲ್ಲಿ ಎಂಟ್ರಿಯಾದ ಈ ಸ್ಪರ್ಧಿಗಳು ಯಾರು..?