DAKSHINA KANNADA
‘ಸುಳ್ಳುಗಳ ಮೂಲಕ ನಾರಾಯಣಗುರುವಿಗೆ ಮಾಡಿದ ಅಪಚಾರವನ್ನು ಮುಚ್ಚಿಟ್ಟುಕೊಳ್ಳಲಾಗದು’
ಮಂಗಳೂರು: ಸುಳ್ಳುಗಳ ಮೂಲಕ ಸಾಮಾಜಿಕ ಸುಧಾರಣೆಯ ಹರಿಕಾರ ನಾರಾಯಣ ಗುರು ಅವರಿಗೆ ಮಾಡಿದ ಅಪಚಾರವನ್ನು ಬಿಜೆಪಿ ಮುಚ್ಚಿಟ್ಟುಕೊಳ್ಳಲಾಗದು ಎಂದು ಸಿಪಿಐಎಂ ಹೇಳಿದೆ.
ಕೇರಳ ರಾಜ್ಯ ಸರಕಾರ ಸೂಚಿಸಿದ ನಾರಾಯಣಗುರು ಇರುವ ಸ್ಥಬ್ದ ಚಿತ್ರವನ್ನು ಪರಿಗಣಿಸದೇ ಕೇಂದ್ರ ಸರಕಾರ, ಸಾಮಾಜಿಕ ಬದಲಾವಣೆಯ ಹರಿಕಾರ ನಾರಾಯಣ ಗುರುಗಳಿಗೆ ಅಪಚಾರವೆಸಗಿದೆ. ಆ ಮೂಲಕ ಹಿಂದುಳಿದ ಹಾಗೂ ಶೋಷಿತ ಜನ ಸಮುದಾಯಗಳನ್ನು ಅಪಮಾನಿಸಿದೆ.
ಇದು ದೇಶ ಮಟ್ಟದಲ್ಲಿ ವ್ಯಾಪಕವಾಗಿ ಖಂಡನೆಗೆ ಹಾಗೂ ಠೀಕೆಗೊಳಗಾಗಿದೆ. ಕೇಂದ್ರ ಸರಕಾರ ಮತ್ತು ಬಿಜೆಪಿಯು ಆ ಕುರಿತು ಸಮರ್ಪಕ ಕಾರಣ ನೀಡಿ ತಮ್ಮನ್ನು ಸಮರ್ಥಿಸಿಕೊಳ್ಳುವಲ್ಲಿ ಘೋರವಾಗಿ ವಿಫಲವಾಗಿವೆ.
ಇದರಿಂದಾಗಿ, ಹಿಂದುಳಿದ ಹಾಗೂ ಶೋಷಿತ ಜನ ಸಮುದಾಯಗಳ ನಡುವೆ ತನಗೆ ರಾಜಕೀಯವಾಗಿ ಹಿನ್ನಡೆಯಾಗಬಹುದೆಂದು ಬೆದರಿದ ಬಿಜೆಪಿ ತನ್ನ ತಪ್ಪನ್ನು ಜನತೆಯ ನಡುವೆ ಮುಚ್ಚಿಕೊಳ್ಳಲು
ಮತ್ತು ಆ ವಿಚಾರವನ್ನು ಮರೆ ಮಾಚಲು ಹಲವು ಸುಳ್ಳುಗಳನ್ನು ಮತ್ತು ಆ ಕುರಿತು ಪ್ರಶ್ನಿಸಿದವರ ಹಾಗೂ ಪಕ್ಷಗಳ ಮೇಲೆ ಆಧಾರ ರಹಿತ ಆಪಾದನೆಗಳನ್ನು ಮಾಡುತ್ತಿದೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷ ( ಮಾರ್ಕ್ಸವಾದಿ ) ಕರ್ನಾಟಕ ರಾಜ್ಯ ಸಮಿತಿ ಬಿಜೆಪಿಯ ಜನ ವಿರೋಧಿ ನಡೆಯನ್ನು ಬಲವಾಗಿ ಖಂಡಿಸಿದೆ.
ಪ್ರಧಾನ ಮಂತ್ರಿಗಳು ಮತ್ತು ಬಿಜೆಪಿಗೆ, ನಾರಾಯಣ ಗುರುಗಳ ಕುರಿತು ಅಪಾರ ಗೌರವವಿದೆಯೆಂದು ಅದರ ಮುಖಂಡತ್ವ ಬಡಾಯಿ ಕೊಚ್ಚಿಕೊಳ್ಳುತ್ತಿದೆ.
ನಿಜವಾಗಲು ತಮ್ಮ ಪಕ್ಷಕ್ಕೆ ಹಾಗೂ ಸರಕಾರಗಳಿಗೆ ಗೌರವವಿದ್ದರೆ ಯಾಕೆ ಕೇರಳ ಸರಕಾರದ ಸ್ಥಬ್ದ ಚಿತ್ರವನ್ನು ನಿರಾಕರಿಸಲಾಯಿತು ?
ಯಾಕೆ ನಾರಾಯಣ ಗುರುಗಳ ಪ್ರತಿಮೆಯ ಜಾಗದಲ್ಲಿ ಬದಲಿ ಪ್ರತಿಮೆ ಇಡಲು ಸೂಚಿಸಲಾಯಿತು ? ಎಂಬ ಕುರಿತು ಸ್ಪಷ್ಠನೆ ನೀಡಬೇಕಲ್ಲವೇ ?
ಅದು ಬಿಟ್ಟು, ಪ್ರಗತಿಪರರ ಹಾಗೂ ಸಾಮಾಜಿಕ ಬದಲಾವಣೆಯ ಹರಿಕಾರರ ಕುರಿತ ಕೇಂದ್ರ ಸರಕಾರದ ಮಲಿನ ಜನವಿರೋಧಿ ನಿಲುಮೆಯನ್ನು ಪ್ರಶ್ನಿಸಿದವರ ಮೇಲೆ ಆಧಾರ ರಹಿತ ಸುಳ್ಳು ಅಪಾದನೆಗಳನ್ನು ಮಾಡುವ ಮೂಲಕ,
ವಿಷಯಾಂತರ ಕೆಲಸದಲ್ಲಿ ತೊಡಗಿರುವುದು ಸರಿಯೇ ? ಆ ಮೂಲಕ ತನ್ನ ತಪ್ಪನ್ನು ಬಿಜೆಪಿ ಅಪ್ರತ್ಯಕ್ಷವಾಗಿ ಒಪ್ಪಿಕೊಂಡಂತಲ್ಲವೇ ? ಎಂದು ಸಿಪಿಐಎಂ ಪ್ರಶ್ನಿಸಿದೆ.
ಹಿಂದುಳಿದವರು, ಶೋಷಿತ ಜನ ಸಮುದಾಯಗಳು ಎಚ್ಚೆತ್ತುಕೊಂಡಿವೆ. ಜಾತಿತಾರತಮ್ಯ ,ಅಸ್ಪೃಶ್ಯಾಚರಣೆ ಹಾಗೂ ಲಿಂಗ ತಾರತಮ್ಯಗಳಿಂದ ನಲುಗುವ ಶೋಷಿತ ಜನ ಸಮುದಾಯಗಳನ್ನು ಇಂತಹ ಆಧಾರ ರಹಿತ ಸುಳ್ಳುಗಳ ಮೂಲಕ ಇನ್ನೆಷ್ಟು ದಿನ ವಂಚಿಸಲು ಸಾಧ್ಯ ?! ಎಂದಿದೆ
ಮತ್ತು ಇದು ಬಿಜೆಪಿ ಮತ್ತು ಅದರ ನಾಯಕ ಆರ್ ಎಸ್ ಎಸ್ ಗಳು ಹಿಡಿದಿರುವ ಅದಃಪತನದ ಹಾದಿಯನ್ನು ತೆರೆದು ತೋರುತ್ತದೆ ಎಂದು ಸ್ಪಷ್ಟ ಪಡಿಸಿದೆ.
ಸ್ವತಃ ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಸಚಿವರು ಮೂರುವರ್ಷಗಳಿಗೊಮ್ಮೆ ಸ್ಥಬ್ದ ಚಿತ್ರ ಆಯ್ಕೆ ಮಾಡುತ್ತಾರೆ ಎಂದು ರಾಜ್ಯದ ಜನತೆಗೆ ಸುಳ್ಳು ಹೇಳುತ್ತಾರೆ.
ಆದರೆ ಮುಖ್ಯಮಂತ್ರಿಗಳು ಕಳೆದ ಒಂದು ದಶಕದಿಂದ ನಿರಂತರವಾಗಿ ಪ್ರತಿವರ್ಷ ಕರ್ನಾಟಕದ ಸ್ಥಬ್ದ ಚಿತ್ರ ಆಯ್ಕೆಯಾಗುತ್ತಿದೆ ಎನ್ನುವ ಮೂಲಕ ತಮ್ಮ ಸಂಪುಟದ ಸಚಿವರ ಮಾತನ್ನು ಅಲ್ಲಗಳೆಯುತ್ತಾರೆ.
ಕೇರಳದಲ್ಲಿ ನಾರಾಯಣ ಗುರುಗಳ ಪ್ರತಿಮೆಗೆ ಅಪಮಾನ ಮಾಡಿದ ಕೇಸಿನಲ್ಲಿ ಬಂಧನಕ್ಕೊಳಗಾದವರು ಯಾರು? ಹಿಂದೂ ಮತಾಂಧರೇ ಹೊರತು ಬೇರೆಯವರಲ್ಲಾ ಎಂಬುದನ್ನು ನೆನಪಿಸಿದೆ.
ದೇಶದ ರೈತರು – ಕಾರ್ಮಿಕರ ನಿರಂತರವಾದ ಸಮರ ಶೀಲ ಹೋರಾಟಕ್ಕೆ ಮಣಿದು, ರೈತರು, ಕೂಲಿಕಾರರು ಹಾಗೂ ಕಸುಬುದಾರರ ಕೈನಿಂದ ವ್ಯವಸಾಯವನ್ನು ಕಿತ್ತುಕೊಂಡು,
ಲೂಟಿಕೋರ ಕಾರ್ಪೋರೇಟ್ ಕಂಪನಿಗಳಿಗೆ ವರ್ಗಾಯಿಸುವ ರೈತ ವಿರೋಧಿ ಕಾಯ್ದೆಗಳನ್ನು, ಪ್ರಧಾನ ಮಂತ್ರಿಗಳು ದೇಶದ ಮುಂದೆ ಮಂಡಿಯೂರಿ ಕೈ ಮುಗಿದು ಕ್ಷಮೆ ಕೇಳಿ ವಾಪಾಸು ಪಡೆಯಲಿಲ್ಲವೇ ?
ಅದೇ ರೀತಿ, ಅದಕ್ಕೂ ಮುನ್ನ ಚಳುವಳಿಗಳನ್ನು ದಮನ ಮಾಡಲು ಮತ್ತು ಆಧಾರ ರಹಿತವಾಗಿ ಚಳುವಳಿಕಾರರನ್ನು ನಿಂದಿಸುವ ಮೂಲಕ ದೇಶದ ಜನತೆಯ ದಾರಿ ತಪ್ಪಿಸುವ ಕೆಲಸ ಮಾಡಲಿಲ್ಲವೇ ?
ಪ್ರಧಾನ ಮಂತ್ರಿಗಳೇ ತಪ್ಪೆಂದು ಒಪ್ಪಿಕೊಂಡು ರೈತ ವಿರೋಧಿ ಕಾಯ್ದೆಗಳನ್ನು ವಾಪಾಸು ಪಡೆದಿರುವಾಗ, ನಮ್ಮ ರಾಜ್ಯ ಸರಕಾರ ಅವುಗಳ ಜಾರಿಯ ಮೂರು ಕಾಯ್ದೆಗಳನ್ನು ಹಾಗೆ ಉಳಿಸಿಕೊಂಡು ವಂಚಿಸುತ್ತಿಲ್ಲವೇ ?
ಮತ್ತು ಅದು ಕರ್ನಾಟಕದ ರೈತ- ಕಾರ್ಮಿಕರು ಮೂತಿಗೆ ಇಕ್ಕುವುದನ್ನು ನಿರ್ಲಜ್ಜತನದಿಂದ ಕಾಯುತ್ತಿಲ್ಲವೇ ?! ಎಂದು ಸಿಪಿಐಎಂ ಛೇಡಿಸಿದೆ.
ಹೀಗಾಗಿ ಬಿಜೆಪಿ ತಪ್ಪು ಮಾಡುವುದು ಮತ್ತು ಅದನ್ನು ಸಮರ್ಥಿಸಿಕೊಳ್ಳುವುದು ಮತ್ತು ವಿಷಾಯಾಂತರ ಮಾಡಿ ಜನತೆಯ ದಾರಿ ತಪ್ಪಿಸಲು ಯತ್ನಿಸುವುದು ಅದರ ಜಾಯಮಾನವಾಗಿದೆ.
ಈಗಲಾದರೂ, ಕೇಂದ್ರ ಸರಕಾರ ಹಾಗೂ ಬಿಜೆಪಿ ತನ್ನ ತಪ್ಪನ್ನು ತಿದ್ದಿಕೊಂಡು ಕೇರಳ ಸರಕಾರದ ಶ್ರೀ ನಾರಾಯಣ ಗುರು ಸ್ಥಬ್ದ ಚಿತ್ರವನ್ನು ಒಪ್ಪಿಕೊಳ್ಳಬೇಕೆಂದು
ಸಿಪಿಐಎಂ ಕರ್ನಾಟಕ ರಾಜ್ಯ ಸಮಿತಿ ಒತ್ತಾಯಿಸಿದೆ ಎಂದು ಸಿಪಿಐಎಂ ಕಾರ್ಯದರ್ಶಿ ಯು.ಬಸವರಾಜ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BANTWAL
ಅನಾರೋಗ್ಯದ ನಡುವೆಯೂ ಮತ ಚಲಾಯಿಸಿ ಕೊ*ನೆಯುಸಿರೆಳೆದ ನಿವೃತ್ತ ಯೋಧ
ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಅಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.
ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು (83) ಅನಾರೋಗ್ಯದ ನಡುವೆಯೂ ಪವಿತ್ರ ಮತದಾನ ಕರ್ತವ್ಯ ಪೂರೈಸಿದವರು.
ಮಾಧವ ಪ್ರಭುಗಳು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭುಗಳು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಪಿ ಏ.15 ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದರು. ಮಾಧವ ಪ್ರಭುಗಳು ಆಸ್ಪತ್ರೆಯಲ್ಲಿ ಬುಧವಾರ ಮೃ*ತಪಟ್ಟಿದ್ದಾರೆ.
ಸೈನ್ಯಕ್ಕೆ ಸೇರುವ ಮೊದಲು ಮಲೇರಿಯಾ ನಿರ್ಮೂಲನಾ ವಿಭಾಗದ ಇನ್ಸ್ಪೆಕ್ಟರ್ ಆಗಿದ್ದರು. ಸೈನ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ಇವರು ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃ*ತರು ಪತ್ನಿ ಹಾಗೂ ಇಬ್ಬರು ಪುತ್ರಿ ಮತ್ತು ಪುತ್ರರನ್ನು ಅ*ಗಲಿದ್ದಾರೆ.
DAKSHINA KANNADA
ಕೇರಳದ ಹಕ್ಕಿ ಜ್ವರ…ದಕ್ಷಿಣ ಕನ್ನಡದ ಗಡಿಯಲ್ಲಿ ಕಟ್ಟೆಚ್ಚರ..!
ಮಂಗಳೂರು: ಕೇರಳದ ಅಲಪ್ಪುಳ ಜಿಲ್ಲೆಯ ಎರಡು ಗ್ರಾಮ ಪಂಚಾಯಿತಿಗಳಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವ ಕೇರಳದ ಗಡಿ ಭಾಗಗಳಲ್ಲಿ ವಿಸೇಷ ನಿಗಾ ವಹಿಸಲಾಗಿದೆ.
ಇಂದಿನಿಂದ ತಲಪಾಡಿ, ಜಾಲ್ಸೂರು ಮತ್ತು ಸಾರಡ್ಕದಲ್ಲಿ ವಿಶೇಷ ಚೆಕ್ ಪೋಸ್ಟ್ಗಳನ್ನು ಸ್ಥಾಪಿಸಲಾಗುವುದು. ಈ ಚೆಕ್ ಪೋಸ್ಟ್ಗಳಲ್ಲಿ ಕೋಳಿ ಉತ್ಪನ್ನಗಳನ್ನು ಕೇರಳಕ್ಕೆ ತಲುಪಿಸಿದ ನಂತರ ದಕ್ಷಿಣ ಕನ್ನಡಕ್ಕೆ ಹಿಂದಿರುಗುವ ವಾಹನಗಳನ್ನು ಸ್ಯಾನಿಟೈಸ್ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.
ಮಂಗಳೂರಿನಿಂದ ಸುಮಾರು 400 ಕಿಲೋಮೀಟರ್ ದೂರದಲ್ಲಿರುವ ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಆ ಜಿಲ್ಲೆಯಲ್ಲಿ ಇದು ಎರಡನೇ ಪ್ರಕರಣವಾಗಿದೆ. ಇದುವರೆಗೆ ದಕ್ಷಿಣ ಕನ್ನಡದಲ್ಲಿ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ನಾವು ಜಾಗರೂಕರಾಗಿರುತ್ತೇವೆ ಮತ್ತು ಮೂರು ಆಯಕಟ್ಟಿನ ಸ್ಥಳಗಳಲ್ಲಿ ಚೆಕ್ ಪೋಸ್ಟ್ಗಳನ್ನು ಸ್ಥಾಪಿಸುತ್ತೇವೆ ಎಂದು ಕರ್ನಾಟಕ ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ ಇದು ಕೋವಿಡ್ಗಿಂತ ಭೀಕರ ಸೋಂಕು…ಜಗತ್ತಿಗೆ ಹರಡುವ ಆತಂಕದಲ್ಲಿ ತಜ್ಞರು..!
ಏನಿದು ಹಕ್ಕಿ ಜ್ವರ?
ಹೆಚ್5ಎನ್1 ವೈರಸ್ನಿಂದ ಹರಡುವ ಸೋಂಕನ್ನು ಹಕ್ಕಿ ಜ್ವರ ಎಂದು ಕರೆಯಲಾಗುತ್ತದೆ. ಈ ವೈರಸ್ ಹೆಚ್ಚಿನ ಮರಣ ಪ್ರಮಾಣದೊಂದಿಗೆ ತೀವ್ರವಾದ ಜ್ವರವನ್ನು ಉಂಟುಮಾಡಬಲ್ಲದ್ದಾಗಿದೆ. ಆದರೆ, ಮನುಷ್ಯರಲ್ಲಿ ಈ ರೋಗದ ಹರಡುವಿಕೆ ಬಹಳ ಅಪರೂಪ. ಇಲ್ಲಿಯವರೆಗೆ, ಈ ವೈರಸ್ ಮಾನವರಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಹರಡಿದ ಬಗ್ಗೆ ವರದಿಯಾಗಿಲ್ಲ. ಆದರೂ ಈ ಬಗ್ಗೆ ನಿರ್ಲಕ್ಷ್ಯ ತೋರುವಂತಿಲ್ಲ.
ಹಕ್ಕಿ ಜ್ವರ ವಿಶಿಷ್ಟವಾಗಿ ವಲಸೆ ಹಕ್ಕಿಗಳ ಮೇಲೆ ಪರಿಣಾಮ ಬೀರುತ್ತದೆ. ಆದರೆ ಪ್ರಸ್ತುತ ಬೇಸಿಗೆಯಲ್ಲಿ ಹಕ್ಕಿಗಳ ವಲಸೆ ಸಾಮಾನ್ಯವಾಗಿ ಕಡಿಮೆ ಇರುತ್ತದೆ. ವೈರಸ್ ಸೋಂಕಿತ ಕೋಳಿಗಳಿಂದ ಇತರ ಪಕ್ಷಿಗಳಿಗೆ ಮತ್ತು ಮನುಷ್ಯರಿಗೆ, ವಿಶೇಷವಾಗಿ ಕೋಳಿ ಸಾಕಣೆ ಕೇಂದ್ರಗಳು ಮತ್ತು ಮಾಂಸ ಸಂಸ್ಕರಣಾ ಘಟಕಗಳಲ್ಲಿ ಕೆಲಸ ಮಾಡುವವರಿಗೆ ಹರಡಬಹುದು. ಆದಾಗ್ಯೂ, ಇದು ವ್ಯಕ್ತಿಯಿಂದ ವ್ಯಕ್ತಿಗೆ ಹರಡುವುದಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.
DAKSHINA KANNADA
ಮತದಾರರ ಚೀಟಿಯಲ್ಲಿ ಕ್ಯೂಆರ್ ಕೋಡ್! ಮಂಗಳೂರು ದಕ್ಷಿಣ ಉತ್ತರದಲ್ಲಿ ಅನುಷ್ಠಾನ
ಮಂಗಳೂರು: ನಗರದಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಚುನಾವಣ ಆಯೋಗ ಕೊನೇ ಹಂತದ ಕಸರತ್ತು ಮುಂದುವರಿಸಿದೆ. ನಗರದ ಜನತೆಗೆ ಮತಗಟ್ಟೆಗಳ ಮಾಹಿತಿ ನೀಡಲು ಚುನಾವಣೆ ಸ್ಲಿಪ್ಗಳಲ್ಲಿ ಕ್ಯೂಆರ್ ಓಡ್ ನೀಡಲಾಗಿದ್ದು, ಆ ಮೂಲಕ ಮತದಾನ ಕೇಂದ್ರದ ಮಾಹಿತಿ ನೀಡಲು ಮುಂದಾಗಿದೆ.
ಕರ್ನಾಟಕದಲ್ಲಿ ಇದು ಮೊದಲ ಪ್ರಯೋಗವಾಗಿದ್ದು, ದ.ಕ. ಜಿಲ್ಲೆಯ ನಗರಕ್ಕೆ ಹೊಂದಿಕೊಂಡಿರುವ ಎರಡು ಕ್ಷೇತ್ರಗಳಲ್ಲಿ ಮಾತ್ರ ಜಾರಿಗೊಳಿಸಲಾಗಿದೆ. ಇದರಂತೆ ಮಂಗಳೂರು ದಕ್ಷಿಣ ಹಾಗೂ ಉತ್ತರ ಕ್ಷೇತ್ರದಲ್ಲಿ ಸ್ಲಿಪ್ ಮೂಲಕ ಮತದಾರರಿಗೆ ಮತಗಟ್ಟೆಯ ವಿವರ ಒದಗಿಸಲಾಗುತ್ತಿದ್ದು, ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತ ಚಲಾವಣೆಯಾಗುವ ನಿರೀಕ್ಷೆ ಹೊಂದಲಾಗಿದೆ.
ಮತದಾರರ ಸ್ಲಿಪ್ನಲ್ಲಿ ಮತಗಟ್ಟೆಯ ವಿವರ ನಗರದಲ್ಲಿನ ಅನೇಕರಿಗೆ ಮತಗಟ್ಟೆಯ ಬಗ್ಗೆ ಮಾಹಿತಿ ಇರುವುದಿಲ್ಲ. ಮತದಾನಕ್ಕಾಗಿ ಮತಗಟ್ಟೆಗಳನ್ನು ಅರಸಿಕೊಂಡು ಹೋಗಬೇಕಾಗುತ್ತದೆ. ಇದನ್ನು ನೀಗಿಸಲು ಕ್ಯೂಆರ್ ಕೋಡ್ ನೀಡಲಾಗಿದ್ದು, ಸ್ಕ್ಯಾನ್ ಮಾಡಿದ ವೇಳೆ ಮಯಗಟ್ಟೆಯ ಲೊಕೇಷನ್ ಪಡೆಯಬಹುದು. ಈ ಮೂಲಕ ಮತಗಟ್ಟೆ ಹುಡುಕಿ ತೆರಳುವುದನ್ನು ತಪ್ಪಿಸಲು ಸಾಧ್ಯವಾಗಲಿದೆ.
- DAKSHINA KANNADA7 days ago
“ಸೆಕ್ಸ್” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್..!
- DAKSHINA KANNADA7 days ago
ಕೊರಗಜ್ಜನ ಫೋಟೋವನ್ನು ಮನೆಯಲ್ಲಿ ಇಟ್ಟು ಆರಾಧಿಸಬಹುದಾ?
- FILM3 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- LATEST NEWS6 days ago
ಆಲದ ಮರದ ಪೊಟರೆಯಲ್ಲಿ ಪತ್ತೆಯಾಯ್ತು 64 ಲಕ್ಷ ರೂ.!