Connect with us

bengaluru

ಅಪ್ಪು ನಟನೆಯ ‘ಗಂಧದ ಗುಡಿ’ ಟ್ರೇಲರ್ ರಿಲೀಸ್: ಅಶ್ವಿನಿ ಪುನೀತ್‌ ರಾಜ್‌ಕುಮಾರ್ ಟ್ವೀಟ್‌ಗೆ ಪ್ರಧಾನಿ ಮೋದಿ ರಿಟ್ವೀಟ್..!

Published

on

ಬೆಂಗಳೂರು: ಕರ್ನಾಟಕದ ವನ್ಯ ಜಗತ್ತು, ಹಸಿರು ಸಂಪನ್ಮೂಲ, ನಾಡಿನ ಸೊಗಡು ಇವೆಲ್ಲವನ್ನು ಎಳೆ ಎಳೆಯಾಗಿ ಬಿಚ್ಚಿಡುವ, ಎಲ್ಲಕ್ಕಿಂತ ಮಿಗಿಲಾಗಿ ಫವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯಿಸಿರುವ ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಟ್ರೇಲರ್ ಇಂದು ರಿಲೀಸ್ ಆಗಿದೆ. ಈ ಬಗ್ಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಟ್ವಿಟರ್ ಮೂಲಕ ಪ್ರಧಾನಿ ಮೋದಿಗೆ ತಿಳಿಸಿದ್ದು ಅದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.


ನರೇಂದ್ರ ಮೋದಿ ಅವರಿಗೆ ಟ್ವೀಟ್ ಮಾಡಿದ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು “ನರೇಂದ್ರ ಮೋದಿ ಅವರೇ, ಗಂಧದ ಗುಡಿ ಟ್ರೇಲರ್ ರಿಲೀಸ್ ಮಾಡುತ್ತಿದ್ದೇವೆ, ಇಂದು ನಮಗೆ ತುಂಬ ಭಾವುಕವಾದ ದಿನ. ಈ ಪ್ರಾಜೆಕ್ಟ್ ಅಪ್ಪು ಅವರಿಗೆ ತುಂಬ ಹತ್ತಿರವಾಗಿತ್ತು. ನಿಮ್ಮ ಜೊತೆ ಮಾತನಾಡಲು ಅಪ್ಪು ತುಂಬ ಇಷ್ಟಪಡುತ್ತಿದ್ದರು” ಎಂದು ಟ್ವೀಟ್ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, “ಮಿಲಿಯನ್‌ಗಟ್ಟಲೇ ಜನರ ಮಧ್ಯೆ ಅಪ್ಪು ವಾಸಿಸುತ್ತಿದ್ದಾರೆ.

ಅದ್ಭುತವಾದ ಪ್ರತಿಭೆ, ತೇಜಸ್ಸಿನಿಂದ ಕೂಡಿದ ವ್ಯಕ್ತಿತ್ವ ಹೊಂದಿದ್ದರು. ಪ್ರಕೃತಿಮಾತೆಗೆ ಗಂಧದ ಗುಡಿ ಒಂದು ಕೊಡುಗೆಯಾಗಿದೆ. ಕರ್ನಾಟಕದ ನೈಜ ಸೌಂದರ್ಯ, ಪರಿಸರ ಸಂರಕ್ಷಣೆ ಕುರಿತಂತೆ ಈ ಸಾಕ್ಷ್ಯಚಿತ್ರವಿದೆ. ಈ ಪ್ರಯತ್ನಕ್ಕೆ ಅಭಿನಂದನೆಗಳು” ಎಂದು ಹೇಳಿದ್ದಾರೆ.

ಪವರ್ ಸ್ಟಾರ್’ ಪುನೀತ್ ರಾಜ್‌ಕುಮಾರ್ ಅವರ ಕನಸಿನ ಪ್ರಾಜೆಕ್ಟ್ ‘ಗಂಧದಗುಡಿ’ ಟ್ರೇಲರ್ ಇಂದು ಅಭಿಮಾನಿಗಳ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ರಿಲೀಸ್ ಆಗಿದೆ.

ಅಕ್ಟೋಬರ್ 28ಕ್ಕೆ ಈ ಚಿತ್ರ ತೆರೆಕಾಣಲಿದೆ.

 

bengaluru

ಬೆಂಗಳೂರಿನ ಖ್ಯಾತ ಯೂಟ್ಯೂಬರ್ ಬಂಧನ; ಮುಳುವಾಯ್ತು ಆ ಒಂದು ವೀಡಿಯೋ!

Published

on

ಬೆಂಗಳೂರು : ಬೆಂಗಳೂರಿನ ಖ್ಯಾತ ಯೂಟ್ಯೂಬರ್ ನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಯಲಹಂಕ ಮೂಲದ ವಿಕಾಸ್ ಗೌಡ ಬಂಧಿತ ಯೂಟ್ಯೂಬರ್. ಅನುಮತಿ ಇಲ್ಲದ ಸ್ಥಳದಲ್ಲಿ ವಿಡೀಯೋ ಚಿತ್ರೀಕರಣ ಮಾಡಿದ್ದೇ ವಿಕಾಸ್ ಪಾಲಿಗೆ ಮುಳುವಾಗಿದೆ.

ವಿಕಾಸ್ ಮಾಡಿದ ತಪ್ಪೇನು?

ವಿಕಾಸ್ ಗೌಡ ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ನಲ್ಲಿ ವೀಡಿಯೋ ಚಿತ್ರೀಕರಿಸಿದ್ದರು. ಈ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ‘ಟಿಕೆಟ್ ಇಲ್ಲದೆ ಒಳಗಡೆ ಬಂದಿದ್ದೇನೆ. 24 ಗಂಟೆ ರನ್ ವೇ ಬಳಿಯೇ ಇದ್ದೆ. ಎಲ್ಲ ಅಧಿಕಾರಿಗಳ ಸಿಬ್ಬಂದಿ ಕಣ್ಣು ತಪ್ಪಿಸಿ ವಿಮಾನ ನಿಲ್ದಾಣದ ಒಳಗೆ ಪ್ರವೇಶ ಮಾಡಿ, ವಿಡಿಯೋ ಮಾಡಿದ್ದೇನೆ ಎಂದಿದ್ದರು.

ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಈ ವೀಡಿಯೋ ಗಮನಿಸಿದ ಸಿಐಎಸ್ ಎಫ್ ಅಧಿಕಾರಿಗಳು ವಿಕಾಸ್ ಗೌಡ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಟಿಕೆಟ್ ಪಡೆದಿದ್ದ ವಿಕಾಸ್ :

ವಿಕಾಸ್ ಗೌಡ ವಿಮಾನದಲ್ಲಿ ಪ್ರಯಾಣಿಸಲು ಟಿಕೆಟ್ ಪಡೆದಿದ್ದರು. ಟಿಕೆಟ್ ಪಡೆದು ಪ್ರಯಾಣ ಬೆಳೆಸದೆ ರನ್ ವೇ ಯಲ್ಲಿ ಉಳಿದುಕೊಂಡಿದ್ದರು. ಸುಮಾರು ನಾಲ್ಕೈದು ಗಂಟೆ ಉಳಿದುಕೊಂಡು, ವೀಡಿಯೋ ಮಾಡಿ ತೆರಳಿದ್ದರು ಎನ್ನಲಾಗಿದೆ. ಈ ಬಗ್ಗೆ ಸ್ವತಃ ವಿಕಾಸ್ ಗೌಡ ವಿಚಾರಣೆಯಲ್ಲಿ ಬಾಯ್ಬಿಟ್ಟಿದ್ದಾರೆ.

ವಿಕಾಸ್ ಗೌಡ ಯೂಟ್ಯೂಬ್ ಮೂಲಕ ಖ್ಯಾತರಾಗಿದ್ದಾರೆ. ಟ್ರಾವೆಲ್, ಫುಡ್ ಹೀಗೆ ವಿವಿಧ ರೀತಿಯ ವಿಚಾರಗಳನ್ನು ಯೂಟ್ಯೂಬ್ ನಲ್ಲಿ ಹಂಚಿಕೊಳ್ಳುತ್ತಿದ್ದರು. ಅವರು 113k Subscribers ಹೊಂದಿದ್ದಾರೆ. ಅವರ ವೀಡಿಯೋಗಳು ಸಾವಿರಗಟ್ಟಲೆ ವೀಕ್ಷಣೆ ಪಡೆಯುತ್ತವೆ. ಆದರೆ, ಈ ಬಾರಿ ಅವರು ಮಾಡಿರುವ ಎಡವಟ್ಟಿಂದ ಜೈಲು ಸೇರುವಂತಾಗಿದೆ.

Continue Reading

bengaluru

ರಾಮೇಶ್ವರಂ ಕೆಫೆ ಸ್ಫೋ*ಟ ಪ್ರಕರಣ : ಪ.ಬಂಗಾಳದಲ್ಲಿ ಮಾಸ್ಟರ್ ಮೈಂಡ್ ಅರೆಸ್ಟ್

Published

on

ಬೆಂಗಳೂರು : ಕರ್ನಾಟಕವನ್ನು ಬೆಚ್ಚಿ ಬೀಳಿಸಿದ್ದ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋ*ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಶಂಕಿತ ಮುಸಾವಿರ್ ಹುಸೇನ್ ಶಾಜಿಬ್, ಅಬ್ದುಲ್ ಮತೀನ್ ಅಹಮದ್ ತಾಹಾರನ್ನು ಬಂಧಿಸಲಾಗಿದೆ. ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದಲ್ಲಿ ಬಂಧಿಸಲಾಗಿದೆ.

ಮುಸಾವೀರ್ ಐಇಡಿ ತಂದಿದ್ದ ಹಾಗೂ ಅಬ್ದುಲ್ ಮತೀನ್ ತಾಹ ಸ್ಫೋ*ಟಕ್ಕೆ ರೂಪುರೇಷೆ ಸಿದ್ಧಪಡಿಸಿದ್ದ ಎನ್ನಲಾಗಿದೆ. ಇಬ್ಬರು ತೀರ್ಥಹಳ್ಳಿಯವರು ಎಂದು ಹೇಳಲಾಗಿದೆ. ಈ ಹಿಂದೆ ಇದೇ ಪ್ರಕರಣದಲ್ಲಿ ಇವರಿಗೆ ಸಹಾಯ ಮಾಡಿದ್ದ ಮುಜಾಮೀಲ್ ಷರೀಫ್ ಎಂಬಾತನನ್ನು ಕೂಡ ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದ ಎನ್ ಐ ಎ :

ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಬಲೆ ಬೀಸಿದ್ದ ಎನ್‍ಐಎ ಕರ್ನಾಟಕ, ತಮಿಳುನಾಡು ಮತ್ತು ಉತ್ತರ ಪ್ರದೇಶದ 18 ಸ್ಥಳಗಳಲ್ಲಿ ಎನ್‍ಐಎ ಶೋಧ ನಡೆಸಿತ್ತು. ರಾಮೇಶ್ವರಂ ಕೆಫೆ ಬಾಂ*ಬ್ ಸ್ಫೋ*ಟ ಪ್ರಕರಣ ಬ್ಲಾಸ್ಟ್ ನ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹ ಹಾಗೂ ಮಸಾವೀರ್ ಬಗ್ಗೆ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ಘೋಷಿಸಿತ್ತು. ಇಬ್ಬರ ಫೋಟೋ ರಿಲೀಸ್ ಮಾಡಿದ್ದ ಎನ್‌ಐಎ ಅಧಿಕಾರಿಗಳು, ಈ ಇಬ್ಬರ ಬಗ್ಗೆಯೂ ಸುಳಿವು ನೀಡುವಂತೆ ಮನವಿ ಮಾಡಿದ್ದರು. ಅಲ್ಲದೇ,  ಇವರಿಬ್ಬರ ಸುಳಿವು ನೀಡಿದವರಿಗೆ ತಲಾ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದರು.

ಇಬ್ಬರೂ ಶಂಕಿತ ಉ*ಗ್ರರು ಅಸ್ಸಾಂ ಮತ್ತು ಬಂಗಾಳದಲ್ಲಿ ತಲೆಮರೆಸಿಕೊಂಡು ಓಡಾಡುತ್ತಿದ್ದರು ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ್ದ ಎನ್ಐಎ ತಂಡ ಇದೀಗ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಮಾರ್ಚ್ 1 ರಂದು ವೈಟ್‍ಫೀಲ್ಡ್ ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂ*ಬ್ ಸ್ಫೋ*ಟಗೊಂಡಿತ್ತು. ಇದು ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಈ ಘಟನೆಯಲ್ಲಿ ಕೆಲವರು ಗಾ*ಯಗೊಂಡಿದ್ದರು. ಬಳಿಕ ಪ್ರಕರಣವನ್ನು ಎನ್‍ಐಎ ತನಿಖೆಗೆ ವಹಿಸಲಾಗಿತ್ತು.

Continue Reading

bengaluru

ಸಿಎಂಗೆ ಹಾರ ಹಾಕಲು ಸೊಂಟದಲ್ಲಿ ಗನ್ ಸಿಕ್ಕಿಸಿಕೊಂಡು ಬಂದಿದ್ದ ಯುವಕ! ಒಳ್ಳೆ ಹುಡುಗ ಅಂದ ಮಾಜಿ ಶಾಸಕ

Published

on

ಬೆಂಗಳೂರು : ಬೆಂಗಳೂರು ಕೇಂದ್ರ ಮತ್ತು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಭದ್ರತಾ ಲೋಪ ಕಂಡು ಬಂದಿತ್ತು. ಸಿದ್ದಾಪುರದ ಕಾಂಗ್ರೆಸ್ ಕಾರ್ಯಕರ್ತ ಸಿಎಂಗೆ ಮಾಲಾರ್ಪಣೆ ಮಾಡಿದ್ದ. ಈ ಸಂದರ್ಭ ಆತನ ಸೊಂಟದಲ್ಲಿ ಗನ್ ಇದ್ದಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ಈ ನಡುವೆ ಯುವಕನನ್ನು ವಶಪಡಿಸಿಕೊಂಡಿರುವ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಒಳ್ಳೆ ಹುಡುಗ ಎಂದ ಮಾಜಿ ಶಾಸಕ!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಲಾರ್ಪಣೆ ಮಾಡಿದ ರಿಯಾಜ್ ಸಿದ್ದಾಪುರ ರ್ಯಾಲಿ ಉಸ್ತುವಾರಿ ವಹಿಸಿಕೊಂಡಿದ್ದ. ಆತ ತುಂಬಾ ಒಳ್ಳೇ ಹುಡುಗ, ಅವನಿಗೆ ಗನ್ ಲೈಸೆನ್ಸ್ ಇದೆ ಎಂದು ಕಾಂಗ್ರೆಸ್ ಮಾಜಿ ಶಾಸಕ ಆರ್.ವಿ.ದೇವರಾಜ್ ಅವರು ಹೇಳಿದ್ದಾರೆ.

ಭದ್ರತಾ ವೈಫಲ್ಯ ಆಗಿಲ್ಲ ಎಂದ ಡಿಕೆಶಿ
ಇಲ್ಲಿ ಭದ್ರತಾ ವೈಫಲ್ಯ ಯಾವುದೂ ಆಗಿಲ್ಲ. ಅವರವರ ರಕ್ಷಣೆಗೆ ಅವರು ಗನ್​ ಇಟ್ಟುಕೊಂಡಿರುತ್ತಾರೆ. ನನ್ನ ಜೊತೆನೂ ಗನ್ ಮ್ಯಾನ್​ಗಳು ಇದ್ದಾರೆ. ವಿಪಕ್ಷಗಳು ಒಳ್ಳೆಯ ವಿಷಯ ಇದ್ದರೆ ಮಾತನಾಡಬೇಕು ಎಂದು ಡಿಕೆಶಿ ಕಾರ್ಯಕರ್ತನ ಪರ ಬ್ಯಾಟ್ ಬೀಸಿದ್ದಾರೆ.

ಸಿಎಂ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ
ಇನ್ನು ಘಟನೆಯನ್ನು ಬಿಜೆಪಿ ಟೀಕಿಸಿದೆ. ಅಲ್ಲದೇ ಸಿಎಂ ವಿರುದ್ಧ ಕ್ರಮಕ್ಕೆ ಆಗ್ರಹಿಸಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಹಾರ ಹಾಕುವವರು ಸನ್ಮಾನ ಮಾಡುವವರು ಗೂಂಡಾಗಳು, ರೌಡಿಗಳು, ಬೀದಿ ಪುಂಡರು ಎನ್ನುವುದು ಸಾಬೀತಾಗಿದೆ. ಇಷ್ಟುದಿನ ಹುಟ್ಟುಹಬ್ಬದ ಫ್ಲೆಕ್ಸ್‌ಗಳಲ್ಲಿ ಕಾಣಿಸುತ್ತಿದ್ದ ಗನ್ ಹಿಡಿದ ರೌಡಿಗಳು, ಇದೀಗ ಸಿಎಂ, ಡಿಸಿಎಂ ಅವರ ರ್‍ಯಾಲಿಗಳಲ್ಲಿ ರಾಜಾರೋಷವಾಗಿ ಗನ್ ಹಿಡಿದು ಹಾರ ಹಾಕಿ ಸಮಾಜದ ಮುಂದೆ ಪೋಸ್ ಕೊಡುತ್ತಿದ್ದಾರೆ. ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಗನ್ ಹಿಡಿದು ಈ ರೀತಿ ಪ್ರದರ್ಶನ ಮಾಡುತ್ತಿರುವುದು ಮತದಾರರನ್ನು ಏರಿಯಾದಲ್ಲಿ ಬೆದರಿಸುವುದಕ್ಕೆ. ಕೂಡಲೇ ECISVEEP ಆಯೋಗವು ಸಿಎಂ ವಿರುದ್ಧ ಕ್ರಮಕೈಗೊಳ್ಳಬೇಕಿದೆ ಎಂದು ಟ್ವೀಟ್ ಮಾಡಿದೆ.

ಗನ್ ಜಮೆ ಮಾಡಿಲ್ವ ಯಾಕೆ?

ಈಗಾಗಲೇ ಲೋಕಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಹೀಗಾಗಿ ನಾಗರೀಕರು, ರಾಜಕಾರಣಿಗಳು, ಪ್ರಭಾವಿಗಳು, ರೌಡಿಶೀಟರ್ ಗಳು ತಮ್ಮ ಬಳಿ ಇರುವ ಗನ್ ಗಳನ್ನು , ರೈಫಲ್ , ಪಿಸ್ತೂಲ್ ಇತರೆ ಶಸ್ತ್ರಾಸ್ತ್ರಗಳನ್ನು ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗೆ ಜಮೆ ಮಾಡಬೇಕು. ಆದ್ರೆ, ಇಲ್ಲಿ ಕಾರ್ಯಕರ್ತ ಮಾತ್ರ ಯಾಕೆ ತನ್ನ ಬಳಿ ಇರುವ ಗನ್ ಜಮೆ ಮಾಡಿಲ್ಲ ಎಂಬ ಪ್ರಶ್ನೆ ಕೇಳಿ ಬರುತ್ತಿದೆ. ಸಾರ್ವಜನಿಕರಿಗೊಂದು ನ್ಯಾಯ..ಪ್ರಭಾವಿಗಳಿಗೆ ಒಂದು ನ್ಯಾಯನಾ? ಎಂಬ ಅನುಮಾನವೂ ಹುಟ್ಟಿಕೊಂಡಿದೆ.

Continue Reading

LATEST NEWS

Trending