Connect with us

FILM

 ಪವಿತ್ರಾ ಲೋಕೇಶ್​ ತುಟಿಗೆ ಮುತ್ತಿಟ್ಟು ಮದುವೆ ಸುದ್ದಿ ತಿಳಿಸಿದ ನರೇಶ್​: ವಿಡಿಯೋ ವೈರಲ್​..

Published

on

  ‘ಹೊಸ ವರ್ಷ, ಹೊಸ ಆರಂಭ. ನಿಮ್ಮೆಲ್ಲರ ಹಾರೈಕೆ ಬೇಕು’ ಎಂದು ನರೇಶ್​ ಮತ್ತು ಪವಿತ್ರಾ ಲೋಕೇಶ್​ ಪೋಸ್ಟ್​ ಮಾಡಿದ್ದಾರೆ. ಅವರಿಬ್ಬರಿಗೆ ಸ್ನೇಹಿತರು ಮತ್ತು ಹಿತೈಷಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

ಬೆಂಗಳೂರು : ‘ಹೊಸ ವರ್ಷ, ಹೊಸ ಆರಂಭ. ನಿಮ್ಮೆಲ್ಲರ ಹಾರೈಕೆ ಬೇಕು’ ಎಂದು ನರೇಶ್​ ಮತ್ತು ಪವಿತ್ರಾ ಲೋಕೇಶ್​ ಪೋಸ್ಟ್​ ಮಾಡಿದ್ದಾರೆ. ಅವರಿಬ್ಬರಿಗೆ ಸ್ನೇಹಿತರು ಮತ್ತು ಹಿತೈಷಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

ನಟಿ ಪವಿತ್ರಾ ಲೋಕೇಶ್​ ಮತ್ತು ಟಾಲಿವುಡ್​ ನಟ ನರೇಶ್​ ನಡುವಿನ ಪ್ರೇಮ್​ ಕಹಾನಿ ಭಾರಿ ವಿವಾದ ಸೃಷ್ಟಿಸಿತ್ತು .

ನರೇಶ್​ ಅವರ ಪತ್ನಿ ರಮ್ಯಾ ಸಾಕಷ್ಟು ಆರೋಪ ಮಾಡಿದ್ದರು. ಅವರ ಸಂಸಾರದ ಗಲಾಟೆ ಬೀದಿಗೆ ಬಂದಿತ್ತು.

ಅದಕ್ಕೆಲ್ಲ ಈಗ ಫುಲ್​ ಸ್ಟಾಪ್​ ಹಾಕಲು ನರೇಶ್​ ಮತ್ತು ಪವಿತ್ರಾ ಲೋಕೇಶ್​ (Pavitra Lokesh) ನಿರ್ಧರಿಸಿದ್ದಾರೆ.

ಇಬ್ಬರೂ ಶೀಘ್ರದಲ್ಲೇ ಮದುವೆ (Naresh Pavitra Lokesh Marriage) ಆಗಲಿದ್ದಾರೆ. ಈ ಸುದ್ದಿಯನ್ನು ಅಧಿಕೃತವಾಗಿ ತಿಳಿಸುವ ಸಲುವಾಗಿ ನರೇಶ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಒಂದು ಹೊಸ ವಿಡಿಯೋ ಹಂಚಿಕೊಂಡಿದ್ದಾರೆ.

ಈ ವಿಡಿಯೋದಲ್ಲಿ ಅವರು ಪವಿತ್ರಾ ಲೋಕೇಶ್​ ತುಟಿಗೆ ಮುತ್ತಿಟ್ಟಿದ್ದಾರೆ. ಅವರಿಬ್ಬರಿಗೆ ಸ್ನೇಹಿತರು ಮತ್ತು ಹಿತೈಷಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

‘ಹೊಸ ವರ್ಷ, ಹೊಸ ಆರಂಭ. ನಿಮ್ಮೆಲ್ಲರ ಹಾರೈಕೆ ಬೇಕು’ ಎಂದು ಕ್ಯಾಪ್ಷನ್​ ನೀಡುವ ಮೂಲಕ ನರೇಶ್​ ಅವರು ಈ ವಿಡಿಯೋ ಹಂಚಿಕೊಂಡಿದ್ದಾರೆ.

2023ರ ಹೊಸ ವರ್ಷವನ್ನು ನರೇಶ್​ ಮತ್ತು ಪವಿತ್ರಾ ಲೋಕೇಶ್​ ತುಂಬ ರೊಮ್ಯಾಂಟಿಕ್ ಆಗಿ ಸ್ವಾಗತಿಸುತ್ತಿದ್ದಾರೆ.

ಕ್ಯಾಂಡಲ್​ ಹಚ್ಚಿ, ಕೇಕ್​ ಕತ್ತರಿಸಿ, ಪರಸ್ಪರ ಸಿಹಿ ತಿನಿಸಿ ನಂತರ ತುಟಿಗೆ ಚುಂಬಿಸುತ್ತಿರುವ ವಿಡಿಯೋವನ್ನು ಈ ಜೋಡಿ ಹಂಚಿಕೊಂಡಿದೆ.

ಇದು ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗಿದೆ.ಯಾವುದೋ ಸಿನಿಮಾದ ಟೀಸರ್​ ಇರಬಹುದೇನೋ ಎಂಬ ರೀತಿಯಲ್ಲಿ ಈ ವಿಡಿಯೋ ಮೂಡಿಬಂದಿದೆ.

ಆದ್ರೆ ಇದು ಸಿನಿಮಾ ಅಲ್ಲ, ರಿಯಲ್​. ‘ನಮ್ಮ ಪ್ರಪಂಚಕ್ಕೆ ಸ್ವಾಗತ. ಹೊಸ ವರ್ಷದ ಶುಭಾಶಯಗಳು. ಶೀಘ್ರದಲ್ಲೇ ಮದುವೆ ಆಗುತ್ತಿದ್ದೇವೆ’ ಎಂಬ ಸಾಲುಗಳು ಈ ವಿಡಿಯೋದಲ್ಲಿ ಇದೆ.

ಇದನ್ನು ಕಂಡು ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಹಲವು ತಿಂಗಳುಗಳಿಂದ ನರೇಶ್​ ಮತ್ತು ಪವಿತ್ರಾ ಲೋಕೇಶ್​ ಅವರು ಜೊತೆಯಾಗಿ ವಾಸಿಸುತ್ತಿದ್ದಾರೆ.

ಅವರ ಸಂಬಂಧದ ವಿರುದ್ಧ ನರೇಶ್​ ಪತ್ನಿ ರಮ್ಯಾ ಆಕ್ಷೇಪ ವ್ಯಕ್ತಪಡಿಸಿದ್ದರೂ ಕೂಡ ಈ ಜೋಡಿ ತಲೆ ಕೆಡಿಸಿಕೊಂಡಿಲ್ಲ.

ಆದರೆ ಮದುವೆ ಬಗ್ಗೆ ಸ್ಪಷ್ಟ ಚಿತ್ರಣ ಸಿಕ್ಕಿರಲಿಲ್ಲ. ಈ ವಿಡಿಯೋ ಹಂಚಿಕೊಳ್ಳುವ ಮೂಲಕ ನರೇಶ್​ ಅವರು ಎಲ್ಲ ಅಂತೆ-ಕಂತೆಗಳಿಗೆ ಸ್ಪಷ್ಟನೆ ನೀಡಿದಂತಾಗಿದೆ.

ಸಿನಿಮಾ ಕೆಲಸಗಳಲ್ಲೂ ನರೇಶ್​ ಮತ್ತು ಪವಿತ್ರಾ ಲೋಕೇಶ್​ ಬ್ಯುಸಿ ಆಗಿದ್ದಾರೆ. ಪೋಷಕ ಪಾತ್ರಗಳ ಮೂಲಕ ಪವಿತ್ರಾ ಗಮನ ಸೆಳೆದಿದ್ದಾರೆ.

ಬಹುಭಾಷೆಯಲ್ಲಿ ಅವರು ಜನಪ್ರಿಯತೆ ಪಡೆದಿದ್ದಾರೆ. ಈಗ ಅವರ ಬಾಳಿನಲ್ಲಿ ಹೊಸ ಅಧ್ಯಾಯದ ಆರಂಭಕ್ಕೆ ದಿನಗಣನೆ ಶುರುವಾಗಿದೆ.

 

DAKSHINA KANNADA

ಅನುಷ್ಕಾ ಶೆಟ್ಟಿ ರಾಜಕೀಯಕ್ಕೆ ಎಂಟ್ರಿ…! ಯಾವ ಕ್ಷೇತ್ರದಿಂದ ಸ್ಪರ್ಧೆ..!?

Published

on

ಕ್ಷಿಣ ಕನ್ನಡ ಜಿಲ್ಲೆಯ ಚೆಲುವೆ…ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸದ್ಯ ರಾಜಕೀಯ ವಲಯದಲ್ಲಿ ಸುದ್ದಿಯಾಗಿದ್ದಾರೆ. ಟಾಲಿವುಡ್‌ನ ಬ್ಯೂಟಿ ಕ್ವೀನ್‌ ಆಗಿ ಮೆರೆದಿದ್ದ ಅನುಷ್ಕಾ ಶೆಟ್ಟಿಗೆ ಇರುವ ದೊಡ್ಡ ಅಭಿಮಾನಿ ಬಳಗ ಕೂಡಾ ಇಂತಹ ಒಂದು ಚರ್ಚೆ ನಡೆಸ್ತಾ ಇದೆ. ಆಂಧ್ರ ಹಾಗೂ ತೆಲಂಗಾಣದಲ್ಲಿ ಅನುಷ್ಕಾ ಅವರಿಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ. ಹೀಗಾಗಿ ಈ ಬಾರಿ ಅನುಷ್ಕಾ ಶೆಟ್ಟಿ ರಾಜಕೀಯಕ್ಕೆ ಎಂಟ್ರಿ ಕೊಡ್ತಾರೆ ಅನ್ನೋ ದೊಡ್ಡ ಚರ್ಚೆ ಆರಂಭವಾಗಿದೆ.

ಲೋಕಸಭೆ ಚುನಾವಣೆಯ ಜೊತೆಯಲ್ಲೇ ಆಂಧ್ರ ವಿಧಾನಸಭೆಗೂ ಚುನಾವಣೆ ನಡೆಯುತ್ತಿರುವುದೇ ಈ ಚರ್ಚೆಗೆ ಕಾರಣವಾಗಿದೆ. ಅನುಷ್ಕಾ ಶೆಟ್ಟಿ ಆಂಧ್ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದು ಅಭಿಮಾನಿಗಳು ಮಾತ್ರವಲ್ಲದೆ, ರಾಜಕೀಯ ವಲಯದಲ್ಲೂ ಚರ್ಚೆ ನಡೆದಿದೆ.

ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷದಿಂದ ಅನುಷ್ಕಾ ಶೆಟ್ಟಿ ಚುನಾವಣಾ ಕಣಕ್ಕೆ ಧುಮುಕಲಿದ್ದಾರೆ ಅನ್ನೋ ಸುದ್ದಿ ಹರಡಿದೆ. ಬಿಜೆಪಿ ಹಾಗೂ ಟಿಡಿಪಿ ಪಕ್ಷದ ಬೆಂಬಲ ಹೊಂದಿರುವ ಜನಸೇನಾ ಪಕ್ಷದ ಪ್ರಮುಖ ನಾಯಕರ ಜೊತೆ ಅನುಷ್ಕಾ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ. ಆದ್ರೆ ಅನುಷ್ಕಾ ಜನಸೇನಾ ಪಕ್ಷಕ್ಕೆ ಸ್ಟಾರ್ ಪ್ರಚಾರಕಿಯಾಗಿ ಹೋಗಲಿದ್ದಾರೆ. ಚುನಾವಣೆಗೆ ನಿಲ್ಲೋದು ಸುಳ್ಳು ಸುದ್ದಿ ಎಂದು ಕೆಲ ಅಭಿಮಾನಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅನುಷ್ಕಾ ಶೆಟ್ಟಿ ರಾಜಕೀಯ ಪ್ರವೇಶ ಮಾಡ್ತಾರೆ ಅನ್ನೋದೊಂದು ನಕಲಿ ಸುದ್ದಿ ಎಂದು ಕೆಲ ಸುದ್ದಿ ವಾಹಿನಿಗಳು ಕೂಡಾ ವರದಿ ಮಾಡಿದೆ. ಅನುಷ್ಕಾ ಶೆಟ್ಟಿ ಸಿನಿಮಾಗಳಲ್ಲಿ ತೊಡಗಿಕೊಂಡಿದ್ದು, ರಾಜಕೀಯದಿಂದ ದೂರ ಉಳಿಯಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನು ಓದಿ ಹಿಂದಿಗೆ ರಿಮೇಕ್ ಆಗುತ್ತಿದೆ ಝೀ ಕನ್ನಡದ ಫೇಮಸ್‌ ಸೀರಿಯಲ್‌…! ಪ್ರೋಮೋ ರಿಲೀಸ್‌..! 

ಮಲಯಾಳಂ ಸಿನಿಮಾದಲ್ಲಿ ಬಿಝಿ :

‘ಬಾಹುಬಲಿ’ ಸಿನಿಮಾದ ಬಳಿಕ ಅನುಷ್ಕಾ ಶೆಟ್ಟಿ ಭಾರಿ ದೊಡ್ಡ ಬ್ರೇಕ್ ತೆಗೆದುಕೊಂಡಿದ್ದಾರೆ. ‘ಬಾಹುಬಲಿ 2’ ಸಿನಿಮಾದ ಬಳಿಕ ಕೇವಲ ಎರಡು ಸಿನಿಮಾಗಳಲ್ಲಿ ಮಾತ್ರವೇ ಅನುಷ್ಕಾ ನಟಿಸಿದ್ದಾರೆ. ಅನುಷ್ಕಾ ಶೆಟ್ಟಿ ನಟನೆಯ ‘ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ’ ಸಿನಿಮಾ ಕಳೆದ ವರ್ಷ ಬಿಡುಗಡೆ ಆಗಿ ಸೂಪರ್ ಹಿಟ್ ಎನಿಸಿಕೊಂಡಿದೆ. ಕಾಮಿಡಿ ಹಾಗೂ ಡ್ರಾಮಾ ಕಥೆಯಾಗಿದ್ದ ಇದು ಪ್ರೇಕ್ಷಕರನ್ನು ರಂಜಿಸಿದೆ.ಇದೀಗ ಅನುಷ್ಕಾ ಶೆಟ್ಟಿ ಮಲಯಾಳಂ ಸಿನಿಮಾ ಒಂದನ್ನು ಒಪ್ಪಿಕೊಂಡಿದ್ದಾರೆ.

ಮಲಯಾಳಂನಲ್ಲಿ RIAL 5- ಹಾರ‌ರ್ ಸಿನಿಮಾ ಒಂದರಲ್ಲಿ ಅನುಷ್ಕಾ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಅನುಷ್ಕಾ ಶೆಟ್ಟಿ ರಾಜಕೀಯ ಪ್ರವೇಶ ಮಾಡುವ ಬದಲಿಗೆ ಹೆಚ್ಚು ಹೆಚ್ಚು ಸಿನಿಮಾಗಳಲ್ಲಿ ನಟಿಸುತ್ತಾ ಪ್ರೇಕ್ಷಕರನ್ನು ರಂಜಿಸುತ್ತಿರಲಿ ಎಂಬುದು ಅಭಿಮಾನಿಗಳ ಆಶಯ. ಆದ್ರೆ, ಅನುಷ್ಕಾ ರಾಜಕೀಯ ಎಂಟ್ರಿಯನ್ನೂ ತಳ್ಳಿ ಹಾಕಲು ಸಾದ್ಯವಿಲ್ಲ ಅನ್ನೋದು ಸದ್ಯ ಚಾಲ್ತಿಯಲ್ಲಿರುವ ಚರ್ಚಾ ವಿಷಯ.

Continue Reading

FILM

ಕೊನೆಗೂ ಸಿಕ್ಕೇ ಬಿಡ್ತು “ಸಮಂತಾ-ನಾಗಚೈತನ್ಯ” ಡಿವೋರ್ಸ್ ಗುಟ್ಟು..!! ಇದೇ ಕಾರಣನಾ?

Published

on

ಟಾಲಿವುಡ್ ಟಾಪ್ ನಟಿ ಸಮಂತಾ ಮತ್ತು ನಾಗ ಚೈತನ್ಯ ಡಿವೋರ್ಸ್ ದೇಶದೆಲ್ಲೆಡೆ ಸದ್ದುಮಾಡಿತ್ತು.  ಇದೀಗ ಇವರಿಬ್ಬರ ವಿಚ್ಚೇದನಕ್ಕೆ ಸ್ಪಷ್ಟ ಕಾರಣವೊಂದು ಹೊರಬಿದ್ದಿದೆ. ಹೌದು,  ವಿಚ್ಛೇದನಕ್ಕೆ ಫೋನ್ ಟ್ಯಾಪಿಂಗ್ ಕಾರಣ ಎಂಬ ಮಾತುಗಳು ಕೇಳಿ ಬರುತ್ತಿವೆ.

ಇದನ್ನೂ ಓದಿ.. “ಕೊನೆಗೂ ಈಡೇರಿದ ನನ್ನ ಪುಟ್ಟ ಆಸೆ” ಎಂದ ನಟಿ ಅದಿತಿ ಪ್ರಭುದೇವ; ಏನದು ಗೊತ್ತಾ!?

ಹಲವು ವರ್ಷಗಳ ಹಿಂದೆ ಬಹಳ ಅದ್ಧೂರಿಯಾಗಿ ಕುಟುಂಬ ಸಮ್ಮುಖದಲ್ಲಿ ಮದುವೆಯಾಗಿದ್ದರು. ಸಿನಿ ಇಂಡಸ್ಟ್ರಿಯಲ್ಲಿ ಇರುವ ಅನೇಕರ ಫೇವರೆಟ್ ಕಪಲ್‌ಗಳಲ್ಲಿ ಇವರೂ ಕೂಡಾ ಆಗಿದ್ದರು. ಆದರೆ ವರ್ಷ ಕಳೆದರೂ ಅವರಿಬ್ಬರು ಪ್ರತ್ಯೇಕಗೊಳ್ಳಲು ಕಾರಣ ತಿಳಿದು ಬಂದಿರಲಿಲ್ಲ. ಸಮಂತಾ – ನಾಗಚೈತನ್ಯ ಸ್ಟಾರ್ ನಟರಾಗಿದ್ದು, ಇವರಿಬ್ಬರ ವಿಚ್ಚೇದನಕ್ಕೆ ಹಲವು ಊಹಾಪೋಹಗಳು ಹರಿದಾಡುತ್ತಿತ್ತು. ಸೋಶಿಯಲ್ ಮೀಡಿಯಾದಲ್ಲಂತೂ ಈ ಮುದ್ದಾದ ಜೋಡಿ ಮತ್ತೆ ಒಂದಾಗಬೇಕು ಎಂದು ಬೇಡಿಕೊಂಡವರೆಷ್ಟೋ.

ಫೋನ್ ಟ್ಯಾಪಿಂಗ್ ಇವರಿಬ್ಬರಿಗೆ ಮುಳುವಾಯಿತಾ..!

ಆದರೆ ಇದೀಗ ಮೂರು ವರ್ಷಗಳ ಬಳಿಕ ಇವರಿಬ್ಬರ ವಿಚ್ಚೇದನಕ್ಕೆ ಕಾರಣ ತಿಳಿದು ಬಂದಿದೆ. ತೆಲಂಗಾಣ ರಾಜಕೀಯದಲ್ಲಿ ಭಾರಿ ಅಲೆಗಳನ್ನು ಎಬ್ಬಿಸಿರುವ ಫೋನ್ ಟ್ಯಾಪಿಂಗ್​ನಿಂದಲೇ ನಾಗ ಚೈತನ್ಯ ಹಾಗೂ ಸಮಂತಾ ವಿಚ್ಛೇದನ ಪಡೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.

ಫೋನ್ ಟ್ಯಾಪಿಂಗ್ ಪ್ರಕರಣ ಬೆಳಕಿಗೆ ಬಂದಾಗಿನಿಂದಲೂ ತೆಲುಗು ಚಿತ್ರರಂಗದ ತಾರಾ ಜೋಡಿಯೊಂದರ ವಿಚ್ಛೇದನಕ್ಕೆ ಫೋನ್ ಟ್ಯಾಪಿಂಗ್ ಕಾರಣವಾಗಿದೆ ಎಂಬ ಅಂಶ ಹರಿದಾಡುತ್ತಲೇ ಇತ್ತು. ಆದರೆ ಆ ತಾರಾ ಜೋಡಿ ಯಾರೆಂಬುದು ಬೆಳಕಿಗೆ ಬಂದಿರಲಿಲ್ಲ. ಆ ತಾರಾ ಜೋಡಿ ಸಮಂತಾ ಮತ್ತು ನಾಗ ಚೈತನ್ಯ ಎಂಬ ಮಾತುಗಳು ಈಗ ಕೇಳಿ ಬರುತ್ತಿವೆ.

 

 

 

Continue Reading

FILM

“ಕೊನೆಗೂ ಈಡೇರಿದ ನನ್ನ ಪುಟ್ಟ ಆಸೆ” ಎಂದ ನಟಿ ಅದಿತಿ ಪ್ರಭುದೇವ; ಏನದು ಗೊತ್ತಾ!?

Published

on

ಚಂದನವನದ ಚಂದದ ನಟಿ ಅದಿತಿ ಪ್ರಭುದೇವ ಸಾಂಸಾರಿಕ ಜೀವನದಲ್ಲಿ ಬ್ಯುಸಿ ಆಗಿದ್ದಾರೆ. ಸದ್ಯ ಅವರು ಈಗ ತುಂಬು ಗರ್ಭಿಣಿ. ಇತ್ತೀಚೆಗೆ ಅದ್ಧೂರಿಯಾಗಿ ಸೀಮಂತ ಶಾಸ್ತ್ರ ಮಾಡಿಸಿಕೊಂಡಿದ್ದರು. ಈಗ ಅವರು ತಮ್ಮ ಪುಟ್ಟ ಆಸೆಯೊಂದನ್ನು ನನಸು ಮಾಡಿಕೊಂಡಿದ್ದಾರೆ.


ನಟಿ ಅದಿತಿ ಪ್ರಭುದೇವ ಹಾಗೂ ಯಶಸ್ ಪಟ್ಲ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ತುಂಬು ಗರ್ಭಿಣಿಯಾಗಿರುವ ಅವರು ತಮ್ಮ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಸಾಂಪ್ರದಾಯಿಕ ರೀತಿಯಲ್ಲಿ ಅವರು ಫೋಟೋಶೂಟ್ ಮಾಡಿಕೊಂಡಿರುವುದು ವಿಶೇಷ.


ಆಯಿಲ್ ರೆಡ್​ ಅಂಡ್ ಗ್ರೀನ್ ಕಾಂಬಿನೇಷನ್​ನ ಮೈಸೂರು ಸಿಲ್ಕ್ ಸೀರೆಯುಟ್ಟು ಅದಿತಿ ಮಿಂಚಿದ್ದಾರೆ. ಇದರಲ್ಲಿ ಉತ್ತರ ಕರ್ನಾಟಕದ ಮಹಿಳೆಯಂತೆ ಅವರು ಕಾಣಿಸುತ್ತಿದ್ದಾರೆ. ಕುತ್ತಿಗೆಗೆ ಎರಡು ಸರಗಳು, ಒಂದು ಕಾಸಿನ ಸರ, ದೊಡ್ಡ ಮೂಗುತಿ, ದೊಡ್ಡ ದೊಡ್ಡ ಒಲೆಗಳು, ಕಿರು ಬೆರಳಿಗೆ ದೊಡ್ಡ ಉಂಗುರ ತಲೆಗೆ ಮಲ್ಲಿಗೆ ಮುಡಿದು, ಕೈಯಲ್ಲಿ ಹಣ್ಣೂ ಹಂಪಲು ಹಿಡಿದು ನಿಂತಿರುವ ಅವರ ಚೆಂದದ ನೋಟ ಕಣ್ಮನ ಸೆಳೆಯುತ್ತಿದೆ. ಜೊತೆಗೆ ಪತಿ ಯಶಸ್ ಪಟ್ಲ ಕೂಡ ಚಂದದ ಸಾಂಪ್ರದಾಯಿಕ ಉಡುಗೆ ತೊಟ್ಟು ಕಂಗೊಳಿಸುತ್ತಿದ್ದಾರೆ.

ನಟಿ ಅದಿತಿ ಪ್ರಭುದೇವ ಈ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ “ಕೊನೆಗೂ ಈಡೇರಿದ ನನ್ನ ಪುಟ್ಟ ಆಸೆ” ಎಂದು ಶೀರ್ಷಿಕೆ ಬರೆದುಕೊಂಡಿದ್ದಾರೆ. ಹೀಗಾಗಿ ಇವರು ಈ ರೀತಿಯ ಫೋಟೋಶೂಟ್ ಮಾಡಿಸಿಕೊಳ್ಳುವ ಆಸೆ ಹೊಂದಿದ್ದರು ಎಂಬುದು ಸ್ಪಷ್ಟವಾಗಿದೆ.

ಇನ್ನು ಫೋಟೋ ನೋಡಿದ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಶುಭ ಕೋರುತ್ತಿದ್ದಾರೆ. ಫೋಟೋ ಶೂಟ್ ಅಂದ್ರೆ ಹೀಗೆ ಇರಬೇಕು ಎಂದಿದ್ದಾರೆ. ಇನ್ನು ಕೆಲವರು ದೃಷ್ಠಿ ತೆಗೀಬೇಕು ಎಂದಿದ್ದಾರೆ.

Continue Reading

LATEST NEWS

Trending