FILM
ದೈವ, ದೈವ ನರ್ತಕರಿಗೆ ರಾಷ್ಟ್ರಪ್ರಶಸ್ತಿ ಅರ್ಪಣೆ: ರಿಷಬ್ ಶೆಟ್ಟಿ
ಮಂಗಳೂರು: ‘ಕಾಂತಾರ’ ಚಿತ್ರದಲ್ಲಿನ ಅಭಿನಯಕ್ಕಾಗಿ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪಡೆದಿರುವ ರಿಷಬ್ ಶೆಟ್ಟಿ ಅವರು ಈ ಸಿನಿಮಾ ಪ್ರಶಸ್ತಿಯನ್ನು ದೈವಕ್ಕೆ, ದೈವ ನರ್ತಕರಿಗೆ ಹಾಗೂ ಪ್ರೋತ್ಸಾಹಿಸಿದ ಜನರಿಗೆ ಅರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ. ಹೊಸದಿಲ್ಲಿಯಲ್ಲಿ ನಡೆದ 70ನೇ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಶಸ್ತಿ ಸ್ವೀಕರಿಸಿ ಮಂಗಳೂರಿಗೆ ಮರಳಿದ ಅವರಿಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು.
ಈ ಸಂದರ್ಭದಲ್ಲಿ ವಿಮಾನ ನಿಲ್ದಾಣದಲ್ಲಿ ಹಾಜರಿದ್ದ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ ‘ಕಾಂತಾರ’ ಈ ಭಾಗದಲ್ಲಿ ಮಾಡಿದ ಸಿನಿಮಾ. ದೈವದ ಬಗ್ಗೆ ಹಾಗೂ ದೈವ ನರ್ತಕರ ಬಗ್ಗೆ ಹೇಳುವ ಸಿನಿಮಾ ಆಗಿರುವುದರಿಂದ ಆ ಸಮುದಾಯಕ್ಕೆ ಸಿಗ ಬೇಕಾಗಿರುವ ಪ್ರಶಸ್ತಿ. ದೈವದ ಆಶೀರ್ವಾದ ಇಲ್ಲದಿದ್ದರೆ ಇಲ್ಲಿಯವರೆಗೆ ಬರುವುದು ಸಾಧ್ಯವಾಗುತ್ತಿರಲಿಲ್ಲ ಎಂದರು. ರಾಷ್ಟ್ರೀಯ ಪ್ರಶಸ್ತಿ ಬರುವುದಾಗಿ ಅಂದುಕೊಂಡಿರಲಿಲ್ಲ. ಸಿನಿಮಾ ಜನರಿಗೆ ಇಷ್ಟವಾಗಲಿ ಎಂದು ಇಡೀ ತಂಡವಾಗಿ ಕೆಲಸ ಮಾಡಿದ್ದೇವೆ. ಜನರಿಗೆ ಇಷ್ಟವಾಗಿದ್ದೇ ನಮಗೆ ದೊಡ್ಡ ಪ್ರಶಸ್ತಿ. ಅದು ಜ್ಯೂರಿಗಳಿಗೂ ಇಷ್ಟವಾಗಿ, ಚಿತ್ರ ಪ್ರಶಸ್ತಿ ಹಂತಕ್ಕೆ ತಲುಪಿದ್ದು, ತಂಡವಾಗಿ ಕೆಲಸ ಮಾಡಿ ಇನ್ನಷ್ಟು ಉತ್ತಮ ಸಿನಿಮಾ ಮಾಡುವುದಕ್ಕೆ ಪ್ರೇರಣೆಯಾಗಲಿದೆ ಎಂದರು.
ಇನ್ನು ದೈವಾರಾಧನೆಯ ಚಿತ್ರದ ವಸ್ತುವಾಗಿ ಬಳಸಿರುವುದಕ್ಕೆ ಎದುರಾದ ಟೀಕೆಗಳ ಬಗ್ಗೆ ಪ್ರತಿಕ್ರಿಯಿಸಿದ ರಿಷಬ್ ಶೆಟ್ಟಿ, ಹಿಂದೆಯೂ ದೈವಾರಾಧನೆ ವಸ್ತುವಾಗಿರುವ ಚಿತ್ರಗಳು ಬಂದಿವೆ. ತುಳು ಸಿನಿಮಾಗಳಿಗೆ ಪ್ರಶಸ್ತಿ ಕೂಡ ಸಿಕ್ಕಿದೆ. ‘ಕಾಂತಾರ’ ಜನಪ್ರಿಯತೆ ಪಡೆದಾಗ ದೈವಾರಾದನೆ ಅಪಹಾಸ್ಯ ಮಾಡುವ ರೀತಿಯ ಪ್ರಸಂಗಗಳು ವೇದಿಕೆಗಳಲ್ಲಿ ನಡೆದಾಗ ನನಗೂ ಬೇಸರವಾಗಿದೆ, ನಾನೂ ದೈವಾರಾಧನೆ ಮಾಡುವವನಾಗಿ ಶ್ರದ್ಧೆಯಿಂದ ಚಿತ್ರ ನಿರ್ಮಿಸಿದ್ದೇನೆ. ಅದನ್ನು ಚಿತ್ರದ ರೀತಿಯಲ್ಲಿ ನೋಡಿಲ್ಲ ಎಂದು ಸ್ಪಷ್ಟಪಡಿಸಿದರು. ಕಾಂತಾರ-2 ಚಿತ್ರ ಶೂಟಿಂಗ್ ನಡೆಯುತ್ತಿದ್ದು, ಅತಿ ಶೀಘ್ರದಲ್ಲೇ ನಿರ್ಮಾಪಕರು ಸಿನಿಮಾ ಬಿಡುಗಡೆಯ ದಿನಾಂಕ ಪ್ರಕಟಿಸಲಿದ್ದಾರೆ ಎಂದರು.
BIG BOSS
ಬಿಗ್ ಬಾಸ್ ಮನೆಯಲ್ಲಿ ಹುಡುಗಿಯರು ಸಿಗರೇಟ್ ಸೇದ್ತಾರೆ, ಆದರೆ ತೋರಿಸಲ್ಲ!
ಬಿಗ್ ಬಾಸ್ ಮನೆಯಲ್ಲಿ ಹುಡುಗಿಯರು ಸಿಗರೇಟ್ ಸೇದ್ತಾರೆ, ಆದ್ರೆ ಅದನ್ನ ತೋರಿಸಲ್ಲ ಅಂತ ಎಲಿಮಿನೇಟ್ ಆದ ಸ್ಪರ್ಧಿಯೊಬ್ಬರು ಹೇಳಿದ್ದಾರೆ.
ಒಬ್ಬ ಹುಡುಗಿ ಒತ್ತಡದಲ್ಲಿ ಸಿಗರೇಟ್ ಸೇದ್ತೀನಿ ಅಂದಾಗ, ಬೇಡ ಅಂತ ನಾನು ಹೇಳಿದ್ದೆ ಅಂತ ಸೋನಿಯಾ ಹೇಳಿದ್ದಾರೆ. ಬಿಗ್ ಬಾಸ್ ಶೋನಲ್ಲಿ ಸಿಗರೇಟ್ ಸೇದ್ತಾ ಇರೋ ಹುಡುಗಿಯರು ಯಾರು ಅನ್ನೋ ಚರ್ಚೆ ಶುರುವಾಗಿದೆ. ಬಿಗ್ ಬಾಸ್ ತೆಲುಗು ಸೀಸನ್ 8ರ ಸ್ಪರ್ಧಿಗಳಲ್ಲಿ ಸೋನಿಯಾ ಆಕುಲ ಒಬ್ಬರು. ಮೊದಲ ವಾರ ಮನೆಗೆ ಕಾಲಿಟ್ಟಿದ್ರು. ಆದ್ರೆ ನಾಲ್ಕೇ ವಾರಗಳಲ್ಲಿ ಅವರ ಜರ್ನಿ ಮುಗಿದು ಹೋಯ್ತು. ಸೋನಿಯಾ ಆಕುಲ ತುಂಬಾ ನೆಗೆಟಿವಿಟಿ ಹೊತ್ತು ತಂದಿದ್ರು. ಸೋಶಿಯಲ್ ಮೀಡಿಯಾದಲ್ಲಿ ಸೋನಿಯಾ ವರ್ತನೆ ಬಗ್ಗೆ ಟೀಕೆ ವ್ಯಕ್ತವಾಗಿತ್ತು.
ಇತ್ತೀಚೆಗೆ ಸೋನಿಯಾ ಹಲವಾರು ಸಂದರ್ಶನಗಳಲ್ಲಿ ಬ್ಯುಸಿಯಾಗಿದ್ದಾರೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಮತ್ತು ನಿರೂಪಕ ಶಿವ್, ಸೋನಿಯಾ ಅವರನ್ನು ಸಂದರ್ಶಿಸಿದ್ದಾರೆ. ನಾನು ನಿಖಿಲ್ ಗೆ ನೀನು ಸ್ಮೋಕಿಂಗ್ ಬಿಡ್ತಿಯಾ, ನೀನು ಏನು ಕೇಳಿದ್ರೂ ಕೊಡ್ತೀನಿ ಅಂದೆ. ನಿಜಕ್ಕೂ ಅವ್ರು ಸ್ಮೋಕ್ ಬಿಡೋಕೆ ಹೋಗಲಿಲ್ಲ. ಆದ್ರೆ ಸಂಖ್ಯೆ ಕಡಿಮೆ ಮಾಡಬೇಕು ಅಂತ ಅಂದುಕೊಂಡ್ರು. ನಿಖಿಲ್ ಜೊತೆ ನೈನಿಕ ಎಲ್ಲಾ ಹಂಚಿಕೊಳ್ತಿದ್ರು. ಅವ್ರು ನಿಖಿಲ್ ಗೆ ಸಿಗರೇಟ್ ತಂದು ಕೊಡ್ತಿದ್ರು, ಜಾಸ್ತಿ ಸೇದಬೇಡ ಅಂತ ನೋಡ್ಕೊಳ್ತಿದ್ರು. ಆದ್ರೆ ಇದ್ಯಾವುದನ್ನೂ ತೋರಿಸಲಿಲ್ಲ.
ಇನ್ನು ಕೆಲವು ಹುಡುಗಿಯರು ಸ್ಮೋಕ್ ಮಾಡ್ತಾರೆ. ಆದ್ರೆ ಅದನ್ನ ತೋರಿಸಲ್ಲ. ಒಬ್ಬ ಹುಡುಗಿ ಒತ್ತಡದಲ್ಲಿ ಸಿಗರೇಟ್ ಸೇದೋಕೆ ಹೋದ್ರು. ಬೇಡ ಅನಾವಶ್ಯಕವಾಗಿ ಅಭ್ಯಾಸ ಮಾಡ್ಕೋಬೇಡ ಅಂತ ನಾನು ಹೇಳಿದೆ ಅಂತ ಸೋನಿಯಾ ಹೇಳಿದ್ದಾರೆ. ಸಿಗರೇಟ್ ಸೇದ್ತೀನಿ ಅಂದ ಹುಡುಗಿ ಯಾರು ಅಂತ ನಿರೂಪಕ ಕೇಳಿದಾಗ. ಸೋನಿಯಾ ಹೆಸರು ಹೇಳಲಿಲ್ಲ.
ಸೋನಿಯಾಗೆ ಈಗಾಗಲೇ ಮದುವೆ ನಿಶ್ಚಯವಾಗಿದೆಯಂತೆ. ಡಿಸೆಂಬರ್ ನಲ್ಲಿ ಅವರ ಮದುವೆ ನಡೆಯಬೇಕಿತ್ತು. ಅತ್ತೆ ಮಾವ ಮತ್ತು ಗಂಡನ ಅನುಮತಿ ಪಡೆದು ಬಿಗ್ ಬಾಸ್ ಶೋಗೆ ಬಂದಿದ್ದಾಗಿ ಸೋನಿಯಾ ಪೋಷಕರು ಹೇಳಿದ್ದಾರೆ. ಬಿಗ್ ಬಾಸ್ ಶೋ ಹೇಗಿರುತ್ತೆ ಅಂತ ನಮಗೆ ಗೊತ್ತು. ಬಿಗ್ ಬಾಸ್ ಹೇಳಿದ ಹಾಗೆ ಸ್ಪರ್ಧಿಗಳು ಆಟ ಆಡಬೇಕು. ಸೋನಿಯಾ ವರ್ತನೆಯಿಂದ ನಮಗೆ ಯಾವುದೇ ತಕರಾರು ಇಲ್ಲ.
ಆದ್ರೆ ನಮ್ಮ ಸುತ್ತಮುತ್ತಲಿನವರು ತಪ್ಪು ತಿಳಿದುಕೊಳ್ಳುತ್ತಿದ್ದಾರೆ. ಪೃಥ್ವಿ ಮತ್ತು ನಿಖಿಲ್ ಅವರನ್ನ ಸೋನಿಯಾ ಅಣ್ಣ ತಮ್ಮಂದಿರಂತೆ ಭಾವಿಸುತ್ತಾಳೆ. ಆದ್ರೆ ಅವರ ಸಂಬಂಧವನ್ನ ಕೆಟ್ಟದಾಗಿ ಬಿಂಬಿಸುತ್ತಾರೆ. ದಯವಿಟ್ಟು ಸೋನಿಯಾ ಬಗ್ಗೆ ತಪ್ಪು ತಿಳಿದುಕೊಳ್ಳಬೇಡಿ ಅಂತ ಸೋನಿಯಾ ಪೋಷಕರು ಮೊದಲೇ ವಿನಂತಿ ಮಾಡಿದ್ದರು.
BIG BOSS
ಬಿಗ್ ಬಾಸ್ ಮನೆಯಲ್ಲಿ ದೆವ್ವದ ಕಾಟ
ದೆವ್ವ ಇದೆ ಅಥವಾ ಇಲ್ಲ ಎನ್ನುವ ಬಗ್ಗೆ ಚರ್ಚೆಗಳು ಆಗುತ್ತಲೇ ಇರುತ್ತವೆ. ಕೆಲವರು ದೆವ್ವಗಳು ಇವೆ ಎಂದು ನಂಬಿದರೆ ಇನ್ನೂ ಕೆಲವರು ದೆವ್ವ ಇಲ್ಲ ಎಂದು ವಾದಿಸುತ್ತಾರೆ. ಈಗ ಬಿಗ್ ಬಾಸ್ ಮನೆಯಲ್ಲಿ ದೆವ್ವ ಇದೆಯೇ ಎನ್ನುವ ಪ್ರಶ್ನೆ ಮೂಡಿದೆ. ಇದಕ್ಕೆ ಕಾರಣ ಆಗುವಂಥ ಘಟನೆಗಳು ಕೂಡ ನಡೆಯುತ್ತಿವೆ. ಅಷ್ಟಕ್ಕೂ ಅಲ್ಲಿ ಆಗಿದ್ದು ಏನು? ಮನೆ ಮಂದಿಗೆ ಭಯ ಮೂಡಲು ಕಾರಣ ಏನು ಎಂಬ ಪ್ರಶ್ನೆ ಎದುರಾಗಿದೆ.
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಒಂದಷ್ಟು ವಿಚಿತ್ರ ಘಟನೆಗಳು ನಡೆದಿವೆ. ಇದು ಮನೆ ಮಂದಿಯ ಆತಂಕಕ್ಕೆ ಕಾರಣ ಆಗಿದೆ. ದೊಡ್ಮನೆಯಲ್ಲಿ ಇದ್ದಕ್ಕಿದ್ದಂತೆ ಕೆಲವು ಟೀ ಕಪ್ಗಳು ಒಡೆದು ಹೋಗುತ್ತಿವೆ. ಮೇಲೆ ಇಟ್ಟಂಥ ಕಪ್ಗಳು ಏಕಾಏಕಿ ನೆಲಕ್ಕೆ ಬೀಳುತ್ತಿವೆ.
ಅಕ್ಟೋಬರ್ 9ರ ಎಪಿಸೋಡ್ನಲ್ಲೂ ಇದೇ ರೀತಿ ಆಗಿದೆ. ಮೇಲೆ ಇಟ್ಟಂಥ ಕಪ್ ನೆಲಕ್ಕೆ ಬಿದ್ದು ಒಡೆದು ಹೋಗಿದೆ. ಇದರಿಂದ ಮನೆ ಮಂದಿ ಆತಂಕಗೊಂಡಿದ್ದಾರೆ. ‘ಮನೆಯಲ್ಲಿ ದೆವ್ವ ಇದೆಯೇನೋ ಅನಿಸುತ್ತಿದೆ’ ಎಂದು ಕೆಲವರು ಹೇಳಿದ್ದಾರೆ. ಇದನ್ನು ಕೇಳುತ್ತಿದ್ದಂತೆ ಹಂಸ ಅವರು ಆತಂಕಗೊಂಡರು. ‘ಹಾಗೆಲ್ಲ ಹೇಳಬೇಡಿ ಭಯ ಆಗುತ್ತದೆ’ ಎಂದರು.
ಇದಾದ ಬಳಿಕ ಅಲ್ಲಿದ್ದವರು, ‘ವಾತಾವರಣದಲ್ಲಿ ಪ್ಲಸ್ ಹಾಗೂ ಮೈನಸ್ ಎರಡೂ ಇರುತ್ತದೆ’ ಎಂದರು. ಇದರಿಂದ ಹಂಸಾಗೆ ಮತ್ತಷ್ಟು ಭಯ ಆಯಿತು. ಇದನ್ನು ಕೇಳಿ ಮನೆಯಲ್ಲಿ ಆತಂಕದ ವಾತಾವರಣ ಮೂಡಿತು. ಅಲ್ಲಿಯೇ ಇದ್ದ ಮಂಜು ಅವರು ಆ ರೀತಿ ಏನೂ ಇಲ್ಲ ಎಂದು ಸಮಾಧಾನ ಮಾಡಿದರು. ಕಪ್ ಒಡೆಯಲು ಕಾರಣ ಏನು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಕಟ್ಟೆಯ ಅಂಚಲ್ಲಿ ಇಟ್ಟ ಕಾರಣಕ್ಕೂ ಕಪ್ ಒಡೆದಿರಬಹುದು ಎಂದು ಕೆಲವರು ಊಹಿಸಿದ್ದಾರೆ.
FILM
ಹನಿಮೂನ್ ಫೋಟೋ ಶೇರ್ ಮಾಡಿ ಪತಿಗೆ ಸೋನಲ್ ಲವ್ಲಿ ವಿಶ್
ಕಾಟೇರ, ರಾಬರ್ಟ್ ಸಿನಿಮಾಗಳ ನಿರ್ದೇಶಕ ತರುಣ್ ಸುಧೀರ್ಗೆ ಇಂದು ಹುಟ್ಟುಹಬ್ಬದ ಸಂಭ್ರಮವಾಗಿದ್ದು, ಹನಿಮೂನ್ ಫೋಟೋ ಶೇರ್ ಮಾಡಿ ಪತಿಗೆ ಸೋನಲ್ ರೊಮ್ಯಾಂಟಿಕ್ ಆಗಿ ವಿಶ್ ಮಾಡಿದ್ದಾರೆ.
ತರುಣ್ ಜೊತೆಗಿನ ರೊಮ್ಯಾಂಟಿಕ್ ಫೋಟೋ ಶೇರ್ ಮಾಡಿ, ಜಗತ್ತಿನ ಅತೀ ಹೆಚ್ಚು ಪ್ರೀತಿಸುವ, ಕಾಳಜಿ ತೋರಿಸುವ, ಕರುಣೆಯ ಮನಸಿರುವ ಗಂಡನಿಗೆ ಹುಟ್ಟುಹಬ್ಬದ ಶುಭಾಶಯಗಳು. ನನ್ನನ್ನು ಪ್ರತಿದಿನ ಪ್ರೇರೆಪಿಸುವ ಹಾಗೂ ನಾನು ಜೊತೆಯಾಗಿ ನಡೆಯಲು ಬಯಸುವ ವ್ಯಕ್ತಿಗೆ ಜನ್ಮದಿನದ ಶುಭಾಶಯಗಳು. ಐ ಲವ್ ಯೂ ಎಂದು ಸೋನಲ್ ಅವರು ಪತಿಗೆ ಪ್ರೀತಿಯಿಂದ ವಿಶ್ ಮಾಡಿದ್ದಾರೆ. ಅದಕ್ಕೆ ತರುಣ್ ಕೂಡ ಪ್ರತಿಕ್ರಿಯಿಸಿ, ಥ್ಯಾಂಕ್ಯೂ ಲವ್ ಎಂದಿದ್ದಾರೆ.
ಸದ್ಯ ತರುಣ್ ದಂಪತಿ ಮಾಲ್ಡೀವ್ಸ್ನಲ್ಲಿ ಸಮಯ ಕಳೆಯುತ್ತಿದ್ದಾರೆ. ಅಲ್ಲಿನ ಸುಂದರ ತಾಣಗಳಿಗೆ ನಟಿ ಭೇಟಿ ನೀಡಿದ್ದಾರೆ. ಅಂದಹಾಗೆ, ಆಗಸ್ಟ್ 11ರಂದು ತರುಣ್ ಮತ್ತು ಸೋನಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
- BIG BOSS6 days ago
ಕನ್ನಡ ಬಿಗ್ಬಾಸ್ನಿಂದ ಲಾಯರ್ ಜಗದೀಶ್ ಎಲಿಮಿನೇಷನ್..!
- LATEST NEWS7 days ago
ಗರ್ಲ್ಫ್ರೆಂಡ್ ಜೊತೆ ಜಾಲಿ ರೈಡಿಂಗ್; ಹೆಂಡತಿ ಎದುರು ಬಂದ್ರೆ …!?
- LATEST NEWS4 days ago
ಶಿಕ್ಷಕಿಯ ಅ*ಶ್ಲೀಲ ವಿಡಿಯೋ ಹಂಚಿಕೆ; ನಾಲ್ವರು ವಿದ್ಯಾರ್ಥಿಗಳ ಬಂಧನ
- BIG BOSS6 days ago
BBK11: ಬಿಗ್ಬಾಸ್ ಮನೆಯಲ್ಲಿರೋ ಮಹಿಳಾ ಸ್ಪರ್ಧಿಗಳ ಖಾಸಗಿತನಕ್ಕೆ ಧಕ್ಕೆ; ಶೋ ವಿರುದ್ಧ ದೂರು ದಾಖಲು