Connect with us

    BANTWAL

    ಬಂಟ್ವಾಳ: ವಿಷಜಂತು ಕಡಿತದಿಂದ ಹಾಸಿಗೆ ಹಿಡಿದ ಬಾಲಕಿ ಕುಟುಂಬಕ್ಕೆ ‘ನವಚೇತನ ಸೇವಾ ಬಳಗ (ರಿ) ತೋಡಾರು’ ಸಂಘದಿಂದ ನೆರವಿನ ಹಸ್ತ

    Published

    on

    ಬಂಟ್ವಾಳ: ವಿಷಜಂತು ಕಡಿತಕ್ಕೊಳಗಾಗಿ ಹಾಸಿಗೆ ಹಿಡಿದ,ನಾಲ್ಕನೇ ತರಗತಿಯ ವಿದ್ಯಾರ್ಥಿನಿ ಕುಟುಂಬಕ್ಕೆ ನವಚೇತನ ಸೇವಾ ಬಳಗ (ರಿ) ತೋಡಾರು ಸಂಘವು ನೆರವಿನ ಹಸ್ತ ಚಾಚಿದೆ.


    ನವಚೇತನ ಸೇವಾ ಬಳಗ (ರಿ.) ತೋಡಾರು ಬಡವರ ಸೇವೆಯೇ ದೇವರ ಸೇವೆ ಇವರ ತಂಡದ 29ನೇ ಸೇವಾ ಯೋಜನೆಯನ್ನು ಬಂಟ್ವಾಳ ತಾಲೂಕಿನ ಅಮ್ಮುಂಜೆ ನಿವಾಸಿ ಸರಸ್ವತಿ ಹಾಗೂ ಗಣೇಶ್ ದಂಪತಿಯ ಮಗಳು ಸಿಂಚನಾ ಚಿಕಿತ್ಸಾ ವೆಚ್ಚಕ್ಕಾಗಿ 65,487 ರೂಪಾಯಿಯನ್ನು ತಂಡದ ಮುಖಾಂತರ ಇಂದು ಈ ಬಾಲಕಿಯ ಮನೆಗೆ ತೆರಳಿ ಚೆಕ್‌ ಹಸ್ತಾಂತರ ಮಾಡಲಾಯಿತು.


    ಈ ಸಂದರ್ಭ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್. ಆರ್‌ ಹಾಗೂ ಬಿಲ್ಲವ ಮಹಾ ಮಂಡಲದ ಉಪಾಧ್ಯಕ್ಷ ಸೂರ್ಯಕಾಂತ್ ಸುವರ್ಣ ಮತ್ತು ಪ್ರಸಾದ್ ಹಾಗೂ ತಂಡದ ಉಪಾಧ್ಯಕ್ಷ ಸಂತೋಷ್ ಪೂಜಾರಿ ಹೊಕ್ಕಾಡಿಗೋಳಿ, ಪ್ರಧಾನ ಕಾರ್ಯದರ್ಶಿ ರಕ್ಷಿತ್ ಬಂಗೇರ ಅಂಡಿಂಜೆ ಹಾಗೂ ಸದಸ್ಯರಾದ ದಿನಕರ್ ಪೂಜಾರಿ ಮಿಜಾರ್,

    ಕೃಷ್ಣ ಸುವರ್ಣ ವೇಣೂರು, ಶಿವರಾಜ್ ಬಿರ್ವ ಬಿಸಿರೋಡ್, ಲೋಕೇಶ್ ಅಮೀನ್ ಬಿಸಿರೋಡ್, ವಿನಯ್ ಕುಲಾಲ್ ಮಡಂತ್ಯಾರ್, ನವೀನ್ ಕುಲಾಲ್ ಮಡಂತ್ಯಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    ವಿಷಜಂತು ಕಡಿದು ನರಳುತ್ತಿರುವ ಬಂಟ್ವಾಳದ ಬಾಲೆಗೆ ಬೇಕಿದೆ ನೆರವಿನ ಹಸ್ತ

    BANTWAL

    ಬಂಟ್ವಾಳ: ವೇಷ ಹಾಕಲು ಇದೆ ಎಂದು ಮನೆಯಿಂದ ತೆರಳಿದ ವ್ಯಕ್ತಿ ನಾಪತ್ತೆ

    Published

    on

    ಬಂಟ್ವಾಳ: ವೇಷ ಹಾಕಲು ಇದೆ ಎಂದು ಮನೆಯಲ್ಲಿ ಹೇಳಿ ಹೋದ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ವಿಟ್ಲ ಕಸಬಾ ಗ್ರಾಮದ ಪಳಿಕೆ ಅಣ್ಣಮೂಲೆ ನಿವಾಸಿ ಸುಂದರ ನಾಯ್ಕ್‌ (55) ನಾಪತ್ತೆಯಾದವರು.ಸುಂದರ ನಾಯ್ಕ್‌ ರವರು ಕೂಲಿ ಕೆಲಸ ಮಾಡಿಕೊಂಡಿದ್ದು, ದಸರಾ ಹಬ್ಬದ ಪ್ರಯುಕ್ತ ವೇಷ ಹಾಕುತ್ತಿದ್ದರು. ಅದೇ ರೀತಿ ಅ.1 ರಂದು ಬೆಳಿಗ್ಗೆ ಪತ್ನಿಯಲ್ಲಿ ,ನಾಳೆ ನಾನು ದಸರಾ ಹಬ್ಬದ ವೇಷ ಹಾಕಲು ಇದೆ ನಾನು ವಿಟ್ಲ ಠಾಣೆಗೆ ಹೋಗಿ ಅನುಮತಿ ಪಡೆಯಲು ಇದೆಯಂದು ಹೇಳಿದ್ದರು. ಸುಂದರ ನಾಯ್ಕ ಅವರ ಪತ್ನಿ ಸಂಜೆ ಮನೆಗೆ ಬಂದಾಗ ಪತಿ ಇರಲಿಲ್ಲ.

    ದಸರಾ ಹಬ್ಬ ಇರುವುದರಿಂದ ಹಬ್ಬದಲ್ಲಿ ವೇಷ ಹಾಕಿ ಹಬ್ಬ ಮುಗಿದ ನಂತರ ಮನೆಗೆ ಬರಬಹುದೆಂದು ಭಾವಿಸಿದ್ದು ಆದರೆ ಈವರೆಗೂ ಗಂಡ ಮನೆಗೆ ಬಾರದೇ ಇರುವುದರಿಂದ ಸಂಭಂದಿಕರಲ್ಲಿ, ನೆರೆಕರೆಯವರಲ್ಲಿ ವಿಚಾರಿಸಲಾಗಿ ಎಲ್ಲಿಯೂ ಪತ್ತೆಯಾಗದೆ ಕಾಣೆಯಾಗಿದ್ದಾರೆ ಎಂದು ಪತ್ನಿ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

    Continue Reading

    BANTWAL

    ಬಂಟ್ವಾಳ : ರೈಲ್ವೇ ಹಳಿ ಬದಿ ರುಂ*ಡ – ಮುಂ*ಡ ಬೇರ್ಪಟ್ಟ ಸ್ಥಿತಿಯಲ್ಲಿ ಮೃ*ತದೇಹ ಪ*ತ್ತೆ

    Published

    on

    ಬಂಟ್ವಾಳ: ರೈಲು ಡಿಕ್ಕಿಯಾಗಿ ಸಾ*ವನ್ನಪ್ಪಿದ ಸ್ಥಿತಿಯಲ್ಲಿ ವ್ಯಕ್ತಿಯೋರ್ವನ ಮೃತದೇಹ ಬಿಸಿರೋಡಿನ ರೈಲ್ವೇ ಹಳಿಯಲ್ಲಿ ಪ*ತ್ತೆಯಾಗಿದೆ. ಬಂಟ್ವಾಳ ಕಾಮಾಜೆ ನಿವಾಸಿ ಕರುಣಾಕರ (35) ಸಾ*ವನ್ನಪ್ಪಿದ ವ್ಯಕ್ತಿ ಎಂದು ಗುರುತಿಸಲಾಗಿದೆ.


    ಕಳೆದ 2 ವರ್ಷಗಳ ಹಿಂದೆಯಷ್ಟೇ ಇವರಿಗೆ ಮದುವೆಯಾಗಿದ್ದು, ಒಂದು ವರ್ಷದ ಹೆಣ್ಣು ಮಗುವಿದೆ.

    ಸುಮಾರು 11 ಗಂಟೆಯ ವೇಳೆ ಬಿಜಾಪುರದಿಂದ ಮಂಗಳೂರಿಗೆ ಆಗಮಿಸುವ ರೈಲು ಡಿ*ಕ್ಕಿಯಾಗಿದೆ. ಬಿಸಿರೋಡಿನ ರೈಲ್ವೇ ಸ್ಟೇಷನ್‌ನ ಸಮೀಪದಲ್ಲಿ ಕುತ್ತಿಗೆ ಹಾಗೂ ದೇಹ ಎರಡು ಮಾರ್ಪಾಡು ಆಗಿರುವ ಸ್ಥಿತಿಯಲ್ಲಿ ಮೃ*ತದೇಹ ಪತ್ತೆಯಾಗಿದೆ. ಸಾ*ವಿನ ಕಾರಣ ಇನ್ನೂ ನಿಗೂಢವಾಗಿದ್ದು ನಿಖರ ಮಾಹಿತಿ ಲಭ್ಯಯವಾಗಿಲ್ಲ.

    ಕಾಮಾಜೆಯಿಂದ ಬಿಸಿರೋಡಿಗೆ ಕೆಲಸಕ್ಕೆ ಹೋಗುವ ವೇಳೆ ಇದೇ ರೈಲ್ವೇ ಹಳಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಎಂಬ ವಿಚಾರವನ್ನು ಕುಟುಂಬಿಕರು ತಿಳಿಸಿದ್ದಾರೆ. ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸ್ ಹಾಗೂ ರೈಲ್ವೇ ಇಲಾಖೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Continue Reading

    BANTWAL

    ಚಾಲಕನಿಗೆ ಮೂರ್ಛೆ ರೋಗ..! ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್‌ : ವಿದ್ಯಾರ್ಥಿಗಳು ಪಾರು

    Published

    on

    ಬಂಟ್ವಾಳ : ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ, ಬಸ್ ಚಾಲಕನಿಗೆ ಮೂರ್ಛೆ ರೋಗ ಕಾಣಿಸಿಕೊಂಡು ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಪೊಳಲಿ ಸಮೀಪದ ಬಡಕಬೈಲಿನಲ್ಲಿ ಇಂದು (ಅ.14) ಬೆಳಿಗ್ಗೆ ನಡೆದಿದೆ.


    ಬಡಕಬೈಲು ಸೈಂಟ್ ಡೊಮಿನಿಕ್ ಆಂಗ್ಲ ಮಾಧ್ಯಮ ಶಾಲೆಯ ಬಸ್ ಚಾಲಕ ಅಡ್ಡೂರು ನಿವಾಸಿ ಸುರೇಶ್ ಎಂಬುವವರಿಗೆ ಮೂರ್ಛೆ ರೋಗ ಬಾಧಿಸಿದ ಪರಿಣಾಮ ಬಸ್ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಹೊಡೆದಿದೆ.

     

    ಇದನ್ನೂ ಓದಿ : ಸಂಪಾಜೆ : ಕಾರು ನಿಯಂತ್ರಣ ತಪ್ಪಿ ತೋಟಕ್ಕೆ ಪಲ್ಟಿ

     

    ಘಟನೆಯಲ್ಲಿ ಯಾವುದೇ ಅಪಾಯವಿಲ್ಲದೆ ಚಾಲಕ ಸಹಿತ ವಿದ್ಯಾರ್ಥಿಗಳು ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

    Continue Reading

    LATEST NEWS

    Trending