LATEST NEWS
ಇಂಧನ ಸಚಿವರನ್ನು ಭೇಟಿಯಾದ ನಯಾರಾ ಬಂಕ್ ಮಾಲೀಕರ ನಿಯೋಗ
ನವದೆಹಲಿ: ಅಖಿಲ ಭಾರತ ನಯಾರ ಹಿತರಕ್ಷಣಾ ಸಂಘ ಹಾಗೂ ಕರ್ನಾಟಕ ಪೆಟ್ರೋ ಡೀಲರ್ಸ್ ವೆಲ್ಫೇರ್ ಅಸೋಷಿಯೇಷನ್ನ ನಿಯೋಗ
ನಿನ್ನೆ ಕೇಂದ್ರ ಇಂಧನ ಸಚಿವರಾದ ಹರ್ದೀಪ್ ಸಿಂಗ್ ಪುರಿ ಇವರನ್ನು ಭೇಟಿ ಮಾಡಿ ಭಾರತದ ನಯಾರ/ಎಸ್ಸಾರ್ ಪೆಟ್ರೋಲ್ ಬಂಕ್ ಮಾಲೀಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಕುರಿತು ಚರ್ಚಿಸಿದರು. ಈ ವೇಳೆ ಮಾಲೀಕರ ಬೇಡಿಕೆಗಳನ್ನು ಸಚಿವರು ಈಡೇರಿಸುವ ಭರವಸೆ ನೀಡಿದ್ದಾರೆ.
ದೇಶದೆಲ್ಲೆಡೆ ಇರುವ ಪೆಟ್ರೋಲ್ ಬಂಕ್ಗಳಿಗೆ ನಯಾರ ಕಂಪನಿ ಇಂಧನ ಪೂರ್ಣ ಪ್ರಮಾಣದಲ್ಲಿ ಪೂರೈಸದೇ ಇರುವುದರಿಂದ ಸರಬರಾಜಿನ ವ್ಯತ್ಯಯದಿಂದಾಗಿ ಎಲ್ಲ ಔಟ್ ಲೆಟ್ಗಳಲ್ಲೂ ‘ನೋ ಸ್ಟಾಕ್‘ ಬೋರ್ಡ್ ಹಾಕುವಂತಾಗಿದೆ. ಅಲ್ಲದೇ ಸರ್ಕಾರಿ ಸ್ವಾಮ್ಯದ ಪೆಟ್ರೋಲ್/ಡಿಸೆಲ್ ಬೆಲೆ 5 ರೂ ಹೆಚ್ಚಿದೆ. ನಮ್ಮ ಪೆಟ್ರೋಲ್ ಬಂಕ್ ಗಳು ಹೆಚ್ಚು ಗ್ರಾಮೀಣ ಭಾಗದಲ್ಲಿದ್ದು, ಆದ್ದರಿಂದ ಇದು ಸಾಧ್ಯವಿಲ್ಲದ ಮಾತು.
ಪ್ರತಿ ಪೆಟ್ರೋಲ್ ಬಂಕ್ನಲ್ಲಿ 2 ಸಾವಿರ ಇಂಧನ ಸ್ಟಾಕ್ ಇಡಲೇಬೇಕೆಂಬ ನಿಯಮ ವಿಧಿಸಿದ್ದಾರೆ. ನೀವು ನಮ್ಮ ಸಹಾಯಕ್ಕೆ ಬರದೇ ಹೋದರೆ ದೇಶಾದ್ಯಂತ 6500 ಪೆಟ್ರೋಲ್
ಬಂಕ್ ಮಾಲೀಕರು ಸಂಕಷ್ಟಕ್ಕೆ ಸಿಲುಕಿ ಹಾಕಿಕೊಳ್ಳುತ್ತಾರೆ ಎಂದು ಸಮಸ್ಯೆ ತೋಡಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ನಿಮ್ಮ ಸಮಸ್ಯೆಗಳ ಪೂರ್ಣ ಅರಿವು ನನಗಿದೆ.
ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಜೊತೆಯಲ್ಲಿ ನಯಾರ ಕಂಪನಿಯವರನ್ನು ಕರೆಸಿ ಮಾತನಾಡಿ ನಿಮ್ಮ ಬೇಡಿಕೆಗಳನ್ನು ಆದಷ್ಟು ಶೀಘ್ರ ಬಗೆಹರಿಸುವುದಾಗಿ ನಿಯೋಗಕ್ಕೆ ಭರವಸೆ ನೀಡಿದ್ದಾರೆಂದು ಕರ್ನಾಟಕ ಪೆಟ್ರೋ ಡೀಲರ್ಸ್ ವೆಲ್ಫೇರ್ ಅಸೋಷಿಯೇಷನ್ನ ಅಧ್ಯಕ್ಷ ಕೊಟ್ರೇಶ್ ನಾಯಕ್ ತಿಳಿಸಿದ್ದಾರೆ.
ಈ ನಿಯೋಗದಲ್ಲಿ ಕೇಂದ್ರ ಸಂಘದ ಅಧ್ಯಕ್ಷ ರಾಜವೀರ್ ಚವಾಣ್, ರಾಮಸಿಂಗ್, ರೋಹಿತ್ ಜಾಮಟಾನಿ, ರಾಜ್ಯ ಸಂಘದ ಅಧ್ಯಕ್ಷರು, ಕೇಂದ್ರ ಸಂಘದ ಉಪಾಧ್ಯಕ್ಷಕೊಟ್ರೇಶ್ ನಾಯಕ್,
ಉಪಾಧ್ಯಕ್ಷ ಚಂದ್ರಶೇಖರ ಪಾಟೀಲ್, ಕಾರ್ಯದರ್ಶಿ ಜಾಹೀರ್ ಶಾ ಮನಿಪಾಡಿ, ಖಚಾಂಚಿ ಸುನಿಲ್ ಮಾರ್ಕುಂಬಿ ಮೊದಲಾದವರು ಇದ್ದರು.
LATEST NEWS
ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಉಡುಪಿ : ಪ್ರಧಾನಿ ಮೋದಿ ಚಿಕ್ಕಬಳ್ಳಾಪುರ ಬೆಂಗಳೂರು ಪ್ರವಾಸ ಮಾಡ್ತಿದ್ದಾರೆ. ಮೂರು ಬಾರಿ ಕಾರಣಾಂತರದಿಂದ ಉಡುಪಿಗೆ ಬರಲು ಸಾಧ್ಯವಾಗಿರಲಿಲ್ಲ. ಪ್ರಧಾನಮಂತ್ರಿ ಕಚೇರಿಯಿಂದ ಅನುಮತಿ ಪಡೆದು ಉಡುಪಿ ಬಂದಿದ್ದೇನೆ. ಕರಾವಳಿ ಜನರ ರಕ್ತದಲ್ಲಿ ಹಿಂದುತ್ವ ಇದೆ. ಮೋದಿಯ 10 ವರ್ಷದ ಆಡಳಿತವನ್ನು ಜಗತ್ತು ಕೊಂಡಾಡಿದೆ. ಎಲ್ಲಾ ಅಸಾಧ್ಯಗಳನ್ನು ಪ್ರಧಾನಿ ಮೋದಿ ಸಾಧ್ಯ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಹೇಳಿದ್ದಾರೆ.
ಉಡುಪಿಯಲ್ಲಿ ನಡೆದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಡೀ ದೇಶದ ಜನರಲ್ಲಿ ವಿಶ್ವಾಸ -ಭರವಸೆ ಮೂಡಿಸಿದ್ದು ಮೋದಿ. ರಾಮಮಂದಿರ, ಆರ್ಟಿಕಲ್ 370 ರದ್ದು, ಅಭಿವೃದ್ಧಿ ಎಲ್ಲವೂ ಮೋದಿ ಕಾಲದಲ್ಲಿ ಆಗಿದೆ. ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತೆ. ನಾವು ರಕ್ಷಣೆ ಮಾಡ್ತೇವೆ ಎಂದು ಖರ್ಗೆ ಹೇಳ್ತಾರೆ. ಮೋದಿ ಮತ್ತೆ ಪ್ರಧಾನಿ ಆಗಬಾರದು ಅಂತ ಖರ್ಗೆ ಕರೆ ಕೊಡ್ತಾರೆ. ಕಾಂಗ್ರೆಸ್ಸಿಗರು ಅಂಬೇಡ್ಕರ್ ಅವರನ್ನು ಬದುಕಿದ್ದಾಗಲೇ ಕಗ್ಗೊ*ಲೆ ಮಾಡಿದ್ದಾರೆ. ಅಂಬೇಡ್ಕರ್ ರನ್ನು ಸೋಲಿಸಿದ್ದು ಕಾಂಗ್ರೆಸ್ ಪಕ್ಷ. ಬಾಬಾ ಸಾಹೇಬರ ಅಂತ್ಯ ಸಂಸ್ಕಾರಕ್ಕೂ ಅವಕಾಶ ಕೊಟ್ಟಿಲ್ಲ. ಅಂಬೇಡ್ಕರ್ ರ ಪಂಚ ತೀರ್ಥಕ್ಷೇತ್ರ ಅಭಿವೃದ್ಧಿ ಮಾಡಿದ್ದು ಮೋದಿ – ಬಿಜೆಪಿ ಸರಕಾರ ಎಂದರು.
ಇದನ್ನೂ ಓದಿ : ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್
DAKSHINA KANNADA
ಕಡಬ: ಬಿಳಿನೆಲೆ ಕಾಡಿನಲ್ಲಿ ಅಸ್ಥಿಪಂಜರ ಪತ್ತೆ ..!
ಕಡಬ: ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿಯಿರುವ ಕಾಡಿನಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಬಗ್ಗೆ ಎ.19ರಂದು ವರದಿಯಾಗಿದೆ. ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದ ಪಕ್ಕದಲ್ಲಿ ಅಸ್ಥಿಪಂಜರ ದೊರಕಿದೆ.
ಬಿಳಿನೆಲೆಯ ಚಂದ್ರಶೇಖರ್ ಎಂವರು ಕಾಡಿಗೆ ಸೌದೆ ತರಲು ಹೋಗಿದ್ದಾಗ ಕೊಳೆತ ವಾಸನೆ ಬಂದಿದೆ. ಈ ಬಗ್ಗೆ ಹುಡುಕಾಡಿದಾಗ ಮೃತ ವ್ಯಕ್ತಿಯ ಅಸ್ಥಿಪಂಜರ ಕಂಡುಬಂದಿದೆ. ದೂರದದಲ್ಲಿದ್ದ ಮರದ ಕೊಂಬೆಯಲ್ಲಿ ಬಟ್ಟೆಯೊಂದು ನೇತಾಡುವುದು ಕಂಡು ಬಂದಿದೆ.
Read More..;ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!
ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿ ಆರ್:12/2024 ಕಲಂ:174(3),(iv) CrPC ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
DAKSHINA KANNADA
ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್
ಬಂಟ್ವಾಳ : ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಪೋರೇಟರ್ ಆಗಿ ಮೇಯರ್ ಆಗಿದ್ದ ಕವಿತಾ ಸನಿಲ್ ಇದೀಗ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮುಂಚೂಣಿಯಲ್ಲಿದ್ದ ಕವಿತಾ ಸನಿಲ್ ವಿಧಾನ ಸಭಾ ಚುನಾವಣೆಯಲ್ಲೂ ಸಾಕಷ್ಟು ಪ್ರಚಾರ ಮಾಡಿದ್ರು. ಸಿಎಂ ಸಿದ್ದರಾಮಯ್ಯ ಅವರಿಗೂ ಉತ್ತಮ ಒಡನಾಟ ಇಟ್ಟುಕೊಂಡಿದ್ದ ಕವಿತಾ ಸನಿಲ್ ಸದ್ಯ ಪಕ್ಷದ ನಾಯಕರ ಬಗ್ಗೆ ಅಸಮಾಧಾನಗೊಂಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೂ ತನಗೆ ಸೂಕ್ತ ಸ್ಥಾನಮಾನ ನೀಡಿಲ್ಲ ಎಂದು ಪಕ್ಷ ಚಟುವಟಿಕೆಯಿಂದ ದೂರ ಉಳಿದಿದ್ದರು. ಯಾವುದಾದರು ಒಂದು ನಿಗಮ ಸಿಗಬಹುದು ಎಂಬ ಅವರ ನಿರೀಕ್ಷೆ ಹುಸಿಯಾದ ಹಿನ್ನಲೆಯಲ್ಲಿ ಇದೀಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಂಟ್ವಾಳಕ್ಕೆ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಂದ ಬಿಜೆಪಿ ಬಾವುಟ ಪಡೆದು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಇದನ್ನೂ ಓದಿ : ಸೂಪರ್ ಹಿಟ್ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್ ಡೇಟ್ ಫಿಕ್ಸ್!