Connect with us

BANTWAL

ಬಂಟ್ವಾಳದ ಪುರುಷೋತ್ತಮ ಪೂಜಾರಿಯ ಚಿಕಿತ್ಸೆಗೆ ಬೇಕಾಗಿದ್ದಾರೆ ಹೃದಯವಂತರು

Published

on

ಮಂಗಳೂರು: ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮ ಪಂಚಾಯತ್‌ನ ಕರ್ಪೆ ಗ್ರಾಮದ ಕೊಡು ಮನೆಯ ಪುರುಷೋತ್ತಮ ಪೂಜಾರಿ ಅವರು ಕಳೆದ 25 ವರ್ಷಗಳಿಂದ ಹೃದಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ.

1992ರಲ್ಲಿ ಮತ್ತು 2000ರಲ್ಲಿ ಇವರಿಗೆ ಈಗಾಗಲೇ ಶಸ್ತ್ರ ಚಿಕಿತ್ಸೆಯನ್ನು ಮಾಡಲಾಗಿದೆ. ಇದೀಗ ಮತ್ತೆ ಇವರಿಗೆ ಹೃದಯದ ವಾಲ್‌ಟ್ರಿಟ್‌ ಮೆಂಟ್‌ ಮಾಡಬೇಕೆಂದು ಮಂಗಳೂರಿನ ವೈದ್ಯ ಸುರೇಶ್‌ ಪೈ ತಿಳಿಸಿದ್ದು,

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಬೇಕಾಗಿದೆ. ಇದಕ್ಕೆ ಸುಮಾರು 6.50 ಲಕ್ಷ ರೂಪಾಯಿ ಬೇಕಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ಆದರೆ ತೀರಾ ಆರ್ಥಿಕವಾಗಿ ಬಡತನದಲ್ಲಿರುವ ಇವರ ಕುಟುಂಬಕ್ಕೆ ಈ ಚಿಕಿತ್ಸಾ ವೆಚ್ಚವನ್ನು ಭರಿಸುವುದು ಕಷ್ಟ ಸಾಧ್ಯವಾಗಿದೆ.

ಈಗಾಗಲೇ ಇವರ ವೈದ್ಯಕೀಯ ಚಿಕಿತ್ಸೆಗೆ 2 ಲಕ್ಷದವರೆಗೆ ವೆಚ್ಚ ತಗುಲಿದೆ. ಅಲ್ಲದೆ ಪ್ರತಿ ತಿಂಗಳು ಆಸ್ಪತ್ರೆಯಲ್ಲಿ ಹೃದಯದ ಪರೀಕ್ಷೆ ಸೇರಿದಂತೆ ಎಲ್ಲಾ ಚಿಕಿತ್ಸೆಗಳನ್ನು ಮಾಡಬೇಕಾಗಿದೆ.

ಇವರಿಗೆ ತನ್ನ ಚಿಕಿತ್ಸೆ ಜೊತೆಗೆ ಸಂಸಾರವನ್ನು ನಿಭಾಯಿಸುವ ಹೊಣೆಗಾರಿಕೆ ಇದ್ದು, ಒಂದು ತುತ್ತಿನ ಊಟಕ್ಕೂ ಕಷ್ಟವಾಗಿದೆ.

ಹೀಗಾಗಿ ದಾನಿಗಳ ನೆರವು ಕೋರಿರುವ ಅವರು ತನ್ನ ವೈದ್ಯಕೀಯ ಚಿಕಿತ್ಸೆಗೆ ನೆರವಾಗುವಂತೆ ಮನವಿ ಮಾಡಿದ್ದಾರೆ.

ದಾನಿಗಳು ತಮ್ಮ ಮಗನ ಗೂಗಲ್‌ ಪೇ ಇಲ್ಲವೇ ಬ್ಯಾಂಕ್‌ ಅಕೌಂಟ್‌ಗೆ ಹಣ ಕಳುಹಿಸುವಂತೆ ಮನವಿ ಮಾಡಿದ್ದಾರೆ.

ದಾನಿಗಳು ಆರ್ಥಿಕ ನೆರವು ನೀಡಬೇಕಾದ ವಿಳಾಸ : 

ಪುನೀತ್‌(ಪುತ್ರ)

ಸಿದ್ಧಕಟ್ಟೆ, ಮಂಜರ ಕಾಂಪ್ಲೆಕ್ಸ್‌

ಮೂಡುಬಿದಿರೆ ಬಂಟ್ವಾಳ ರಸ್ತೆ,

ಬಂಟ್ವಾಳ ತಾಲ್ಲೂಕು- ಸಿದ್ಧಕಟ್ಟೆ

ಖಾತೆ ಸಂಖ್ಯೆ : 713101000000672

ಐಎಫ್‌ಎಸ್‌ಸಿ ಕೋಡ್‌ : BARBOVJSIDA MICR CODE : 575012062

ಫೋನ್‌ ಪೇ ನಂಬರ್ : 9686939378

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

BANTWAL

ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು

Published

on

ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್‌ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.


ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು

ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.

Continue Reading

BANTWAL

ಪುತ್ತೂರು ಜಾತ್ರೆಯಿಂದ ಹಿಂದಿರುಗುವ ವೇಳೆ ಜವರಾಯನ ಅಟ್ಟಹಾಸ; ಜೀಪ್ ಡಿಕ್ಕಿ; ಬೈಕ್ ಸವಾರ ಸಾ*ವು

Published

on

ಪುತ್ತೂರು : ಜೀಪೊಂದು ಬೈಕ್ ಗೆ ಡಿ*ಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟು, ಅವರ ಇಬ್ಬರು ಮಕ್ಕಳು ಗಂಭೀ*ರ ಗಾ*ಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯಲ್ಲಿನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ (48) ಮೃ*ತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀ*ರ ಗಾಯಗೊಂಡಿದ್ದು, ಗಾ*ಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಲೋಕೇಶ್ ಅವರು  ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿ*ಕ್ಕಿಯಾಗಿತ್ತು.

ಇದನ್ನೂ ಓದಿ : ಕರಡಿಗೂ ಕ್ಯಾಪ್ಟನ್ ಗೂ ಫೈಟ್; ಮನೆಯಂಗಳದಲ್ಲೇ ಕಾದಾಟ! ವೀಡಿಯೋ ವೈರಲ್

ಡಿ*ಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್‌ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾ*ವನ್ನಪ್ಪಿದ್ದಾರೆ. ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

Trending